Homeಕರ್ನಾಟಕವಿಪಕ್ಷ ನಾಯಕರನ್ನು ಆಯ್ಕೆ ಮಾಡದ ಶೋಚನಿಯ ಸ್ಥಿತಿಯಲ್ಲಿ ಬಿಜೆಪಿ: ಜಗದೀಶ್ ಶೆಟ್ಟರ್

ವಿಪಕ್ಷ ನಾಯಕರನ್ನು ಆಯ್ಕೆ ಮಾಡದ ಶೋಚನಿಯ ಸ್ಥಿತಿಯಲ್ಲಿ ಬಿಜೆಪಿ: ಜಗದೀಶ್ ಶೆಟ್ಟರ್

- Advertisement -
- Advertisement -

ವಿಪಕ್ಷ ನಾಯಕರನ್ನು ಆಯ್ಕೆ ಮಾಡದ ಶೋಚನಿಯ ಪರಿಸ್ಥಿತಿ ಬಿಜೆಪಿಗೆ ಬಂದಿದೆ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು. ಒಂದು ರಾಷ್ಟ್ರೀಯ ಪಕ್ಷದ ವೈಫಲ್ಯಕ್ಕೆ ರಾಜ್ಯ ಬಿಜೆಪಿ ಸ್ಪಷ್ಟ ಉದಾಹರಣೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಈ ಕುರಿತು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬರೀ‌ ಹೆಸರು ಕೇಳಿ ಬರುತ್ತಿದ್ದು, ಯಾರು ಅಧ್ಯಕ್ಷರು ಎನ್ನುವುದು ಬಹಿರಂಗವಾಗಿ ಹೇಳುತ್ತಿಲ್ಲ. ದೆಹಲಿ ವರಿಷ್ಠರು ಒಂದು ಹೆಸರು ತೇಲಿಬಿಟ್ಟರು ಅದರ ಪ್ರತಿಕ್ರಿಯೆಗಳನ್ನು ನೋಡಿ ಅದು ಫೇಲ್ ಆಯಿತು. ಹಾಗಾಗಿ ಈಗ ಮತ್ತೆ ಬೇರೆ ಹೆಸರಿನ ಪ್ರಯೋಗ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ಶೋಭಾ ಕರಂದ್ಲಾಜೆ ಊಹಾಪೋಹ ಅಂತ ಹೇಳಿದ್ದಾರೆ. ರಾಜ್ಯಧ್ಯಕ್ಷರನ್ನು, ವಿಪಕ್ಷ ನಾಯಕರನ್ನು ಆಯ್ಕೆ ಮಾಡದ ಶೋಚನಿಯ ಪರಿಸ್ಥಿತಿ ಬಿಜೆಪಿಗೆ ಬಂದಿದೆ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು” ಎಂದರು

”ಕಾಂಗ್ರೆಸ್ ಸರ್ಕಾರಕ್ಕೆ ಏನು ಆಗುವುದಿಲ್ಲ. ಪಕ್ಷ ಬಿಟ್ಟು ಹೋಗುತ್ತಿರುವ ನಾಯಕರನ್ನು, ಕಾರ್ಯಕರ್ತರನ್ನು ಹಿಡಿದಿಟ್ಟುಕೊಳ್ಳುವ ಪ್ರಯತ್ನದ ಭಾಗವಾಗಿ, ಸಂಕ್ರಾಂತಿ ನಂತರ ಅಲ್ಲೋಲ ಕಲ್ಲೋಲ ಆಗುತ್ತೆ ಎಂದು ಹೇಳುತ್ತಾ ಅವರಲ್ಲಿ ಆಶಾಭಾವನೆ ಮೂಡಿಸಸುವ ಪ್ರಯತ್ನ ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಗಟ್ಟಿಮುಟ್ಟಾಗಿ ಐದು ವರ್ಷ ಇರುತ್ತದೆ. 104 ಇದ್ದಾಗಾಲೇ ಏನು ಮಾಡಲು ಆಗಿಲ್ಲ ಈಗ ಏನು ಮಾಡಲು ಸಾಧ್ಯ? ಎಂದು ಶೆಟ್ಟರ್ ಸವಾಲು ಹಾಕಿದ್ದಾರೆ.

ಡಿಕೆಶಿ-ಹೆಚ್‌ಡಿಕೆ ನಡುವಿನ ಕಿತ್ತಾಡದ ಕುರಿತು ಪ್ರತಿಕ್ರಿಯಿಸಿದ ಶೆಟ್ಟರ್, ”ಬೆಂಗಳೂರು ಸಾಕಷ್ಟು ಬೆಳವಣಿಗೆ ಆಗಿದೆ. ನೂರಾರು ಹಳ್ಳಿಗಳು ಬೆಂಗಳೂರಿಗೆ ಸೇರುತ್ತಿವೆ. ಇದಕ್ಕೆ ಕನಕಪುರ ಹೊರತಾಗಿಲ್ಲ. ಕನಕಪುರ ಬೆಂಗಳೂರು ಗ್ರಾಮೀಣದ ಒಂದು ಭಾಗ. ಸಹಜವಾಗಿ ಕನಕಪುರ ಬೆಂಗಳೂರು ನಗರಕ್ಕೆ ಸೇರಿದೆ ಎನ್ನುವುದರಲ್ಲಿ ಆಶ್ಚರ್ಯಪಡುವಂತಹ ವಿಚಾರ ಏನಿದೆ. ಇದಕ್ಕೆ ವಿಶೇಷ ಕಾಮೆಂಟ್ ಮಾಡುವ ಅವಶ್ಯಕತೆ ಇಲ್ಲ. ಡಿಕೆಶಿ ಕನಕಪುರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದಾರೆ ಹೊರತು ಜಿಲ್ಲೆಯ ಬಗ್ಗೆ ಹೇಳಿಲ್ಲ” ಎಂದರು.

”ಡಿಕೆಶಿ ತಮ್ಮ ಕ್ಷೇತ್ರದ ಬಗ್ಗೆ ಮಾತನಾಡಿದ್ದಾರೆ. ಈ ಮೂಲಕ ಅವರು ಅಭಿವೃದ್ಧಿಗೆ ಒತ್ತು ನೀಡುವ ಕಾರ್ಯ ಮಾಡುತ್ತಿದ್ದಾರೆ. ಆದರೆ ಎಲ್ಲವನ್ನೂ ರಾಜಕೀಯ ಮಾಡಲಾಗುತ್ತಿದೆ. ಇದನ್ನು ಬಿಟ್ಟು ಇಡೀ ವ್ಯವಸ್ಥೆಗೆ ಅನುಕೂಲ ಆಗುವುದನ್ನು ನೋಡಬೇಕು” ಎಂದು ಹೇಳಿದರು.

”ಕುಮಾರಸ್ವಾಮಿ ಏನೇ ಟಿಕೆ ಮಾಡಿದರು ಅದಕ್ಕೆ ಪುರಾವೆ ಇರಬೇಕು. ಜಾರ್ಜ್ ಮನೆಯಲ್ಲಿ ಸಿದ್ದರಾಮಯ್ಯ ಏನು ಮಾಡಿದರು ಅಂತ ಪ್ರಶ್ನೆ ಮಾಡಿದರೆ, ಅದು ಪ್ರಶ್ನೆಯಾಗಿಯೇ ಉಳಿಯಲಿದೆ. ಪೆನ್ ಡ್ರೈವ್ ವಿಚಾರದಲ್ಲಿಯೂ‌ ಇದೆ ಆಯಿತು. ಟೀಕೆ ಮಾಡುವ ಸಲುವಾಗಿ ಟ್ವೀಟ್ ಮಾಡಿದರೆ ಅದರಿಂದ ಏನು ಉಪಯೋಗ ಆಗುವುದಿಲ್ಲ. ಮಾಧ್ಯಮದಲ್ಲಿ ಚರ್ಚೆ ಆಗುತ್ತೆ ಹೊರೆತು ವಾಸ್ತವವಾಗಿ ಏನು ಗೊತ್ತಾಗುವುದಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ದೇವಾಲಯದ ಆವರಣದಲ್ಲಿ RSS ಚಟುವಟಿಕೆಗೆ ನಿಷೇಧ: ಕೇರಳ ಸರ್ಕಾರದ ಸುತ್ತೋಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...