Homeಕರ್ನಾಟಕಲಿಂಗಾಯತರನ್ನು ಕಳ್ಳರೆಂದು ಬಿಜೆಪಿ ನಿಂದಿಸಿದೆ: ಮೋದಿ ಹೇಳಿರುವುದಾಗಿ ರಾಜ್ಯ ಬಿಜೆಪಿ ಟ್ವೀಟ್!

ಲಿಂಗಾಯತರನ್ನು ಕಳ್ಳರೆಂದು ಬಿಜೆಪಿ ನಿಂದಿಸಿದೆ: ಮೋದಿ ಹೇಳಿರುವುದಾಗಿ ರಾಜ್ಯ ಬಿಜೆಪಿ ಟ್ವೀಟ್!

- Advertisement -
- Advertisement -

“ನನ್ನನ್ನಷ್ಟೇ ಅಲ್ಲ, ಲಿಂಗಾಯತ ಸಮುದಾಯವನ್ನೂ ಬಿಜೆಪಿ ನಿಂದಿಸಿದೆ. ಅವರನ್ನು (ಲಿಂಗಾಯತರನ್ನು) ಕಳ್ಳರೆಂದು ನಿಂದಿಸಿದ್ದಾರೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿರುವುದಾಗಿ ರಾಜ್ಯ ಬಿಜೆಪಿ ಟ್ವಿಟರ್‌ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.

ಮುಂದಿನ ಸಾಲಿನಲ್ಲಿ, “ಈ ದುರುಪಯೋಗಕ್ಕೆ ಕರ್ನಾಟಕವು ಮತಗಳ ಮೂಲಕ ಉತ್ತರಿಸುತ್ತದೆ ಎಂಬುದನ್ನು ಕಾಂಗ್ರೆಸ್ ನೆನಪಿನಲ್ಲಿಟ್ಟುಕೊಳ್ಳಬೇಕು” ಎಂದು ಮೋದಿ ಹೇಳಿದ್ದಾರೆಂದು ಬರೆಯಲಾಗಿದೆ.

ಟ್ವೀಟ್‌ ಮಾಡಿದ ಬಳಿಕ ತಕ್ಷಣ ಡಿಲೀಟ್ ಮಾಡಲಾಗಿದೆ. ಆದರೆ ಟ್ವೀಟ್ ಡಿಲೀಟ್ ಮಾಡುವಷ್ಟರೊಳಗೆ ಅದನ್ನು ಅರ್ಕೈವ್ ಮಾಡಿರುವುದು ಕಂಡು ಬಂದಿದೆ. (ಅರ್ಕ್ವೈವ್‌ ಲಿಂಕ್‌ ನೋಡಲು ‘ಇಲ್ಲಿ ಕ್ಲಿಕ್ ಮಾಡಿ’)

ಇದನ್ನು ಎಡಿಟ್ ಮಾಡಿ ಅಥವಾ ಡಿಲೀಟ್ ಮಾಡಿ ಎಂದು ಕೆಲವು ಬಿಜೆಪಿ ಕಾರ್ಯಕರ್ತರು ಬಿಜೆಪಿಗೆ ಮನವಿ ಮಾಡಿರುವುದನ್ನೂ ಇಲ್ಲಿ ಕಾಣಬಹುದು.

“ಕಾಂಗ್ರೆಸ್ ಎಂದು ಟೈಪ್‌ ಮಾಡ್ರೋ” ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ತಕ್ಷಣ ಎಚ್ಚೆತ್ತುಕೊಂಡ ಬಿಜೆಪಿ ಟ್ವೀಟ್ ಡಿಲೀಟ್ ಮಾಡಿದರೂ ಅರ್ಕ್ವೈವ್‌ನಲ್ಲಿ ಅದು ದಾಖಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಉದ್ದೇಶಿಸಿ ಸಿದ್ದರಾಮಯ್ಯನವರು ಹೇಳಿದ ಮಾತನ್ನು ಇಡೀ ಲಿಂಗಾಯತ ಸಮುದಾಯಕ್ಕೆ ಅನ್ವಯಿಸಿ ರಾಜ್ಯ ಬಿಜೆಪಿ ರಾಜಕಾರಣ ಮಾಡುತ್ತಿದೆ. ಮೋದಿಯವರೇ ಈಗ ಇಂತಹ ತಪ್ಪನ್ನು ಮಾಡಿರುವಾಗಿ ಟ್ವೀಟ್‌ನಲ್ಲಿ ಬರೆದಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಸಿದ್ದರಾಮಯ್ಯನವರು ತಮ್ಮ ಮಾತಿಗೆ ಈಗಾಗಲೇ ಸ್ಪಷ್ಟನೆಯನ್ನು ನೀಡಿದ್ದಾರೆ. ಆದರೂ ಬಿಜೆಪಿ ಈ ಕುರಿತು ರಾಜಕಾರಣವನ್ನು ಮುಂದುವರಿಸುತ್ತಿದೆ.

“ಬಿಜೆಪಿಯವರು ನನ್ನ ಹೇಳಿಕೆಯ ವೀಡಿಯೋವನ್ನು ಕಟ್ ಮಾಡಿ ತಮಗೆ ಬೇಕಾದಂತೆ ಎಡಿಟ್ ಮಾಡಿಕೊಂಡು ಲಿಂಗಾಯತರೆಲ್ಲ ಭ್ರಷ್ಟರೆಂದು ಹೇಳಿದ್ದೇನೆ ಎಂಬಂತೆ ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಷ್ಟಪಡಿಸಿದ್ದಾರೆ.

ವಿಡಿಯೊವೊಂದನ್ನು ಹಂಚಿಕೊಂಡಿದ್ದ ರಾಜ್ಯ ಬಿಜೆಪಿ, “ಈ ಹಿಂದೆ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಯತ್ನಿಸಿದ ಸಿದ್ದರಾಮಯ್ಯ, ಈಗ ಆ ಸಮುದಾಯದವರೆಲ್ಲ ಭ್ರಷ್ಟರು, ರಾಜ್ಯವನ್ನು ಹಾಳುಗೆಡವುವವರು ಎಂಬ ಸಂವೇದನಾರಹಿತ ದ್ವೇಷಪೂರಿತ ಹೇಳಿಕೆ ನೀಡಿರುವುದು ಅಕ್ಷಮ್ಯ. ಜಗದ್ಗುರು ಬಸವಣ್ಣನ ಆದರ್ಶ ಪಾಲಿಸುವ 7 ಕೋಟಿ ಕನ್ನಡಿಗರು, ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ” ಎಂದು ಆರೋಪಿಸಿತ್ತು.

ಇದಕ್ಕೆ ಸ್ಪಷ್ಟನೆಯನ್ನು ನೀಡಿದ್ದ ಸಿದ್ದರಾಮಯ್ಯನವರು, “ಚುನಾವಣಾ ಲಾಭ ಪಡೆಯುವ ಇಂಥ ಷಡ್ಯಂತ್ರಗಳಿಗೆ ನಾಡಿನ ಲಿಂಗಾಯತ ಸಮುದಾಯ ಕಿವಿಗೊಡುವುದಿಲ್ಲ ಎಂಬ ನಂಬಿಕೆ ನನಗಿದೆ” ಎಂದು ಭರವಸೆ ವ್ಯಕ್ತಪಡಿಸಿದ್ದರು.

“ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸುವಾಗ ಬಿಜೆಪಿಯವರು ಲಿಂಗಾಯತ ಅಸ್ತ್ರವನ್ನು ಪ್ರಯೋಗ ಮಾಡುತ್ತಿದ್ದಾರೆ, ಬಸವರಾಜ ಬೊಮ್ಮಾಯಿ ಅವರೊಬ್ಬ ಭ್ರಷ್ಟ ಮುಖ್ಯಮಂತ್ರಿ ಎಂದು ಹೇಳಿದ್ದೆ. ಲಿಂಗಾಯತರೆಲ್ಲ ಭ್ರಷ್ಟರು ಎಂದು ನಾನು ಹೇಳಿಯೇ ಇಲ್ಲ. ಅದೆಲ್ಲ ಬಿಜೆಪಿಯವರ ಸೃಷ್ಟಿಸಿದ ಸುಳ್ಳುಗಳಷ್ಟೆ” ಎಂದು ತಿಳಿಸಿದ್ದರು.

“ವೀರೇಂದ್ರ ಪಾಟೀಲರು, ನಿಜಲಿಂಗಪ್ಪನವರು, ಜೆ.ಹೆಚ್ ಪಟೇಲರು, ಬಿ.ಡಿ ಜತ್ತಿ, ಎಸ್.ಆರ್ ಕಂಠಿ ಇಂಥ ಅನೇಕ ಪ್ರಾಮಾಣಿಕ ಮುಖ್ಯಮಂತ್ರಿಗಳನ್ನು ಲಿಂಗಾಯತ ಸಮುದಾಯ ಈ ನಾಡಿಗೆ ನೀಡಿದೆ. ಈ ಎಲ್ಲಾ ನಾಯಕರ ಬಗೆಗೆ ನನಗೆ ವಿಶೇಷ ಪ್ರೀತಿ, ಅಭಿಮಾನವಿದೆ” ಎಂದು ಹೇಳಿದ್ದರು.

“ವೀರಶೈವ – ಲಿಂಗಾಯತರ ಬಗ್ಗೆ ನಮಗೆ ಗೌರವ ಇರುವುದರಿಂದಲೇ ಹೆಚ್ಚು ಟಿಕೇಟನ್ನು ಅವರಿಗೆ ನೀಡಿದ್ದೇವೆ. ಕಳೆದ ಬಾರಿ 47 ಲಿಂಗಾಯತ ಅಭ್ಯರ್ಥಿಗಳಿಗೆ ಪಕ್ಷದ ಟಿಕೆಟ್ ನೀಡಿದ್ದರೆ, ಈ ಬಾರಿ ಅದಕ್ಕಿಂತ ಹೆಚ್ಚು ಅಂದರೆ ಸುಮಾರು 52 – 53 ಕ್ಷೇತ್ರಗಳಲ್ಲಿ ಟಿಕೆಟ್ ನೀಡಿದ್ದೇವೆ” ಎಂದಿದ್ದರು.

“ನಮ್ಮಲ್ಲಿ ಜಾತಿ ಆಧಾರದ ಮೇಲೆ ಮುಖ್ಯಮಂತ್ರಿ ಯಾರಾಗಬೇಕೆಂದು ತೀರ್ಮಾನ ಮಾಡುವುದಿಲ್ಲ, ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇದು ನಮ್ಮಲ್ಲಿ ನಡೆದುಕೊಂಡುಬಂದ ಪದ್ಧತಿ. ಬಿಜೆಪಿಯವರು ಜಾತಿ ಮೇಲೆ ಮಾಡಿದರೆ ಅದು ಅವರ ಪಕ್ಷದ ವಿಚಾರ. ಅದಕ್ಕೆ ನಮ್ಮ ತಕರಾರಿಲ್ಲ” ಎಂದು ಸ್ಪಷ್ಟನೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...