Homeಕರ್ನಾಟಕಲಿಂಗಾಯತರನ್ನು ಕಳ್ಳರೆಂದು ಬಿಜೆಪಿ ನಿಂದಿಸಿದೆ: ಮೋದಿ ಹೇಳಿರುವುದಾಗಿ ರಾಜ್ಯ ಬಿಜೆಪಿ ಟ್ವೀಟ್!

ಲಿಂಗಾಯತರನ್ನು ಕಳ್ಳರೆಂದು ಬಿಜೆಪಿ ನಿಂದಿಸಿದೆ: ಮೋದಿ ಹೇಳಿರುವುದಾಗಿ ರಾಜ್ಯ ಬಿಜೆಪಿ ಟ್ವೀಟ್!

- Advertisement -
- Advertisement -

“ನನ್ನನ್ನಷ್ಟೇ ಅಲ್ಲ, ಲಿಂಗಾಯತ ಸಮುದಾಯವನ್ನೂ ಬಿಜೆಪಿ ನಿಂದಿಸಿದೆ. ಅವರನ್ನು (ಲಿಂಗಾಯತರನ್ನು) ಕಳ್ಳರೆಂದು ನಿಂದಿಸಿದ್ದಾರೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿರುವುದಾಗಿ ರಾಜ್ಯ ಬಿಜೆಪಿ ಟ್ವಿಟರ್‌ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.

ಮುಂದಿನ ಸಾಲಿನಲ್ಲಿ, “ಈ ದುರುಪಯೋಗಕ್ಕೆ ಕರ್ನಾಟಕವು ಮತಗಳ ಮೂಲಕ ಉತ್ತರಿಸುತ್ತದೆ ಎಂಬುದನ್ನು ಕಾಂಗ್ರೆಸ್ ನೆನಪಿನಲ್ಲಿಟ್ಟುಕೊಳ್ಳಬೇಕು” ಎಂದು ಮೋದಿ ಹೇಳಿದ್ದಾರೆಂದು ಬರೆಯಲಾಗಿದೆ.

ಟ್ವೀಟ್‌ ಮಾಡಿದ ಬಳಿಕ ತಕ್ಷಣ ಡಿಲೀಟ್ ಮಾಡಲಾಗಿದೆ. ಆದರೆ ಟ್ವೀಟ್ ಡಿಲೀಟ್ ಮಾಡುವಷ್ಟರೊಳಗೆ ಅದನ್ನು ಅರ್ಕೈವ್ ಮಾಡಿರುವುದು ಕಂಡು ಬಂದಿದೆ. (ಅರ್ಕ್ವೈವ್‌ ಲಿಂಕ್‌ ನೋಡಲು ‘ಇಲ್ಲಿ ಕ್ಲಿಕ್ ಮಾಡಿ’)

ಇದನ್ನು ಎಡಿಟ್ ಮಾಡಿ ಅಥವಾ ಡಿಲೀಟ್ ಮಾಡಿ ಎಂದು ಕೆಲವು ಬಿಜೆಪಿ ಕಾರ್ಯಕರ್ತರು ಬಿಜೆಪಿಗೆ ಮನವಿ ಮಾಡಿರುವುದನ್ನೂ ಇಲ್ಲಿ ಕಾಣಬಹುದು.

“ಕಾಂಗ್ರೆಸ್ ಎಂದು ಟೈಪ್‌ ಮಾಡ್ರೋ” ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ತಕ್ಷಣ ಎಚ್ಚೆತ್ತುಕೊಂಡ ಬಿಜೆಪಿ ಟ್ವೀಟ್ ಡಿಲೀಟ್ ಮಾಡಿದರೂ ಅರ್ಕ್ವೈವ್‌ನಲ್ಲಿ ಅದು ದಾಖಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಉದ್ದೇಶಿಸಿ ಸಿದ್ದರಾಮಯ್ಯನವರು ಹೇಳಿದ ಮಾತನ್ನು ಇಡೀ ಲಿಂಗಾಯತ ಸಮುದಾಯಕ್ಕೆ ಅನ್ವಯಿಸಿ ರಾಜ್ಯ ಬಿಜೆಪಿ ರಾಜಕಾರಣ ಮಾಡುತ್ತಿದೆ. ಮೋದಿಯವರೇ ಈಗ ಇಂತಹ ತಪ್ಪನ್ನು ಮಾಡಿರುವಾಗಿ ಟ್ವೀಟ್‌ನಲ್ಲಿ ಬರೆದಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಸಿದ್ದರಾಮಯ್ಯನವರು ತಮ್ಮ ಮಾತಿಗೆ ಈಗಾಗಲೇ ಸ್ಪಷ್ಟನೆಯನ್ನು ನೀಡಿದ್ದಾರೆ. ಆದರೂ ಬಿಜೆಪಿ ಈ ಕುರಿತು ರಾಜಕಾರಣವನ್ನು ಮುಂದುವರಿಸುತ್ತಿದೆ.

“ಬಿಜೆಪಿಯವರು ನನ್ನ ಹೇಳಿಕೆಯ ವೀಡಿಯೋವನ್ನು ಕಟ್ ಮಾಡಿ ತಮಗೆ ಬೇಕಾದಂತೆ ಎಡಿಟ್ ಮಾಡಿಕೊಂಡು ಲಿಂಗಾಯತರೆಲ್ಲ ಭ್ರಷ್ಟರೆಂದು ಹೇಳಿದ್ದೇನೆ ಎಂಬಂತೆ ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಷ್ಟಪಡಿಸಿದ್ದಾರೆ.

ವಿಡಿಯೊವೊಂದನ್ನು ಹಂಚಿಕೊಂಡಿದ್ದ ರಾಜ್ಯ ಬಿಜೆಪಿ, “ಈ ಹಿಂದೆ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಯತ್ನಿಸಿದ ಸಿದ್ದರಾಮಯ್ಯ, ಈಗ ಆ ಸಮುದಾಯದವರೆಲ್ಲ ಭ್ರಷ್ಟರು, ರಾಜ್ಯವನ್ನು ಹಾಳುಗೆಡವುವವರು ಎಂಬ ಸಂವೇದನಾರಹಿತ ದ್ವೇಷಪೂರಿತ ಹೇಳಿಕೆ ನೀಡಿರುವುದು ಅಕ್ಷಮ್ಯ. ಜಗದ್ಗುರು ಬಸವಣ್ಣನ ಆದರ್ಶ ಪಾಲಿಸುವ 7 ಕೋಟಿ ಕನ್ನಡಿಗರು, ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ” ಎಂದು ಆರೋಪಿಸಿತ್ತು.

ಇದಕ್ಕೆ ಸ್ಪಷ್ಟನೆಯನ್ನು ನೀಡಿದ್ದ ಸಿದ್ದರಾಮಯ್ಯನವರು, “ಚುನಾವಣಾ ಲಾಭ ಪಡೆಯುವ ಇಂಥ ಷಡ್ಯಂತ್ರಗಳಿಗೆ ನಾಡಿನ ಲಿಂಗಾಯತ ಸಮುದಾಯ ಕಿವಿಗೊಡುವುದಿಲ್ಲ ಎಂಬ ನಂಬಿಕೆ ನನಗಿದೆ” ಎಂದು ಭರವಸೆ ವ್ಯಕ್ತಪಡಿಸಿದ್ದರು.

“ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸುವಾಗ ಬಿಜೆಪಿಯವರು ಲಿಂಗಾಯತ ಅಸ್ತ್ರವನ್ನು ಪ್ರಯೋಗ ಮಾಡುತ್ತಿದ್ದಾರೆ, ಬಸವರಾಜ ಬೊಮ್ಮಾಯಿ ಅವರೊಬ್ಬ ಭ್ರಷ್ಟ ಮುಖ್ಯಮಂತ್ರಿ ಎಂದು ಹೇಳಿದ್ದೆ. ಲಿಂಗಾಯತರೆಲ್ಲ ಭ್ರಷ್ಟರು ಎಂದು ನಾನು ಹೇಳಿಯೇ ಇಲ್ಲ. ಅದೆಲ್ಲ ಬಿಜೆಪಿಯವರ ಸೃಷ್ಟಿಸಿದ ಸುಳ್ಳುಗಳಷ್ಟೆ” ಎಂದು ತಿಳಿಸಿದ್ದರು.

“ವೀರೇಂದ್ರ ಪಾಟೀಲರು, ನಿಜಲಿಂಗಪ್ಪನವರು, ಜೆ.ಹೆಚ್ ಪಟೇಲರು, ಬಿ.ಡಿ ಜತ್ತಿ, ಎಸ್.ಆರ್ ಕಂಠಿ ಇಂಥ ಅನೇಕ ಪ್ರಾಮಾಣಿಕ ಮುಖ್ಯಮಂತ್ರಿಗಳನ್ನು ಲಿಂಗಾಯತ ಸಮುದಾಯ ಈ ನಾಡಿಗೆ ನೀಡಿದೆ. ಈ ಎಲ್ಲಾ ನಾಯಕರ ಬಗೆಗೆ ನನಗೆ ವಿಶೇಷ ಪ್ರೀತಿ, ಅಭಿಮಾನವಿದೆ” ಎಂದು ಹೇಳಿದ್ದರು.

“ವೀರಶೈವ – ಲಿಂಗಾಯತರ ಬಗ್ಗೆ ನಮಗೆ ಗೌರವ ಇರುವುದರಿಂದಲೇ ಹೆಚ್ಚು ಟಿಕೇಟನ್ನು ಅವರಿಗೆ ನೀಡಿದ್ದೇವೆ. ಕಳೆದ ಬಾರಿ 47 ಲಿಂಗಾಯತ ಅಭ್ಯರ್ಥಿಗಳಿಗೆ ಪಕ್ಷದ ಟಿಕೆಟ್ ನೀಡಿದ್ದರೆ, ಈ ಬಾರಿ ಅದಕ್ಕಿಂತ ಹೆಚ್ಚು ಅಂದರೆ ಸುಮಾರು 52 – 53 ಕ್ಷೇತ್ರಗಳಲ್ಲಿ ಟಿಕೆಟ್ ನೀಡಿದ್ದೇವೆ” ಎಂದಿದ್ದರು.

“ನಮ್ಮಲ್ಲಿ ಜಾತಿ ಆಧಾರದ ಮೇಲೆ ಮುಖ್ಯಮಂತ್ರಿ ಯಾರಾಗಬೇಕೆಂದು ತೀರ್ಮಾನ ಮಾಡುವುದಿಲ್ಲ, ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇದು ನಮ್ಮಲ್ಲಿ ನಡೆದುಕೊಂಡುಬಂದ ಪದ್ಧತಿ. ಬಿಜೆಪಿಯವರು ಜಾತಿ ಮೇಲೆ ಮಾಡಿದರೆ ಅದು ಅವರ ಪಕ್ಷದ ವಿಚಾರ. ಅದಕ್ಕೆ ನಮ್ಮ ತಕರಾರಿಲ್ಲ” ಎಂದು ಸ್ಪಷ್ಟನೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...