Homeಕರ್ನಾಟಕಲಿಂಗಾಯತರನ್ನು ಕಳ್ಳರೆಂದು ಬಿಜೆಪಿ ನಿಂದಿಸಿದೆ: ಮೋದಿ ಹೇಳಿರುವುದಾಗಿ ರಾಜ್ಯ ಬಿಜೆಪಿ ಟ್ವೀಟ್!

ಲಿಂಗಾಯತರನ್ನು ಕಳ್ಳರೆಂದು ಬಿಜೆಪಿ ನಿಂದಿಸಿದೆ: ಮೋದಿ ಹೇಳಿರುವುದಾಗಿ ರಾಜ್ಯ ಬಿಜೆಪಿ ಟ್ವೀಟ್!

- Advertisement -
- Advertisement -

“ನನ್ನನ್ನಷ್ಟೇ ಅಲ್ಲ, ಲಿಂಗಾಯತ ಸಮುದಾಯವನ್ನೂ ಬಿಜೆಪಿ ನಿಂದಿಸಿದೆ. ಅವರನ್ನು (ಲಿಂಗಾಯತರನ್ನು) ಕಳ್ಳರೆಂದು ನಿಂದಿಸಿದ್ದಾರೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿರುವುದಾಗಿ ರಾಜ್ಯ ಬಿಜೆಪಿ ಟ್ವಿಟರ್‌ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.

ಮುಂದಿನ ಸಾಲಿನಲ್ಲಿ, “ಈ ದುರುಪಯೋಗಕ್ಕೆ ಕರ್ನಾಟಕವು ಮತಗಳ ಮೂಲಕ ಉತ್ತರಿಸುತ್ತದೆ ಎಂಬುದನ್ನು ಕಾಂಗ್ರೆಸ್ ನೆನಪಿನಲ್ಲಿಟ್ಟುಕೊಳ್ಳಬೇಕು” ಎಂದು ಮೋದಿ ಹೇಳಿದ್ದಾರೆಂದು ಬರೆಯಲಾಗಿದೆ.

ಟ್ವೀಟ್‌ ಮಾಡಿದ ಬಳಿಕ ತಕ್ಷಣ ಡಿಲೀಟ್ ಮಾಡಲಾಗಿದೆ. ಆದರೆ ಟ್ವೀಟ್ ಡಿಲೀಟ್ ಮಾಡುವಷ್ಟರೊಳಗೆ ಅದನ್ನು ಅರ್ಕೈವ್ ಮಾಡಿರುವುದು ಕಂಡು ಬಂದಿದೆ. (ಅರ್ಕ್ವೈವ್‌ ಲಿಂಕ್‌ ನೋಡಲು ‘ಇಲ್ಲಿ ಕ್ಲಿಕ್ ಮಾಡಿ’)

ಇದನ್ನು ಎಡಿಟ್ ಮಾಡಿ ಅಥವಾ ಡಿಲೀಟ್ ಮಾಡಿ ಎಂದು ಕೆಲವು ಬಿಜೆಪಿ ಕಾರ್ಯಕರ್ತರು ಬಿಜೆಪಿಗೆ ಮನವಿ ಮಾಡಿರುವುದನ್ನೂ ಇಲ್ಲಿ ಕಾಣಬಹುದು.

“ಕಾಂಗ್ರೆಸ್ ಎಂದು ಟೈಪ್‌ ಮಾಡ್ರೋ” ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ತಕ್ಷಣ ಎಚ್ಚೆತ್ತುಕೊಂಡ ಬಿಜೆಪಿ ಟ್ವೀಟ್ ಡಿಲೀಟ್ ಮಾಡಿದರೂ ಅರ್ಕ್ವೈವ್‌ನಲ್ಲಿ ಅದು ದಾಖಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಉದ್ದೇಶಿಸಿ ಸಿದ್ದರಾಮಯ್ಯನವರು ಹೇಳಿದ ಮಾತನ್ನು ಇಡೀ ಲಿಂಗಾಯತ ಸಮುದಾಯಕ್ಕೆ ಅನ್ವಯಿಸಿ ರಾಜ್ಯ ಬಿಜೆಪಿ ರಾಜಕಾರಣ ಮಾಡುತ್ತಿದೆ. ಮೋದಿಯವರೇ ಈಗ ಇಂತಹ ತಪ್ಪನ್ನು ಮಾಡಿರುವಾಗಿ ಟ್ವೀಟ್‌ನಲ್ಲಿ ಬರೆದಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಸಿದ್ದರಾಮಯ್ಯನವರು ತಮ್ಮ ಮಾತಿಗೆ ಈಗಾಗಲೇ ಸ್ಪಷ್ಟನೆಯನ್ನು ನೀಡಿದ್ದಾರೆ. ಆದರೂ ಬಿಜೆಪಿ ಈ ಕುರಿತು ರಾಜಕಾರಣವನ್ನು ಮುಂದುವರಿಸುತ್ತಿದೆ.

“ಬಿಜೆಪಿಯವರು ನನ್ನ ಹೇಳಿಕೆಯ ವೀಡಿಯೋವನ್ನು ಕಟ್ ಮಾಡಿ ತಮಗೆ ಬೇಕಾದಂತೆ ಎಡಿಟ್ ಮಾಡಿಕೊಂಡು ಲಿಂಗಾಯತರೆಲ್ಲ ಭ್ರಷ್ಟರೆಂದು ಹೇಳಿದ್ದೇನೆ ಎಂಬಂತೆ ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಷ್ಟಪಡಿಸಿದ್ದಾರೆ.

ವಿಡಿಯೊವೊಂದನ್ನು ಹಂಚಿಕೊಂಡಿದ್ದ ರಾಜ್ಯ ಬಿಜೆಪಿ, “ಈ ಹಿಂದೆ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಯತ್ನಿಸಿದ ಸಿದ್ದರಾಮಯ್ಯ, ಈಗ ಆ ಸಮುದಾಯದವರೆಲ್ಲ ಭ್ರಷ್ಟರು, ರಾಜ್ಯವನ್ನು ಹಾಳುಗೆಡವುವವರು ಎಂಬ ಸಂವೇದನಾರಹಿತ ದ್ವೇಷಪೂರಿತ ಹೇಳಿಕೆ ನೀಡಿರುವುದು ಅಕ್ಷಮ್ಯ. ಜಗದ್ಗುರು ಬಸವಣ್ಣನ ಆದರ್ಶ ಪಾಲಿಸುವ 7 ಕೋಟಿ ಕನ್ನಡಿಗರು, ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ” ಎಂದು ಆರೋಪಿಸಿತ್ತು.

ಇದಕ್ಕೆ ಸ್ಪಷ್ಟನೆಯನ್ನು ನೀಡಿದ್ದ ಸಿದ್ದರಾಮಯ್ಯನವರು, “ಚುನಾವಣಾ ಲಾಭ ಪಡೆಯುವ ಇಂಥ ಷಡ್ಯಂತ್ರಗಳಿಗೆ ನಾಡಿನ ಲಿಂಗಾಯತ ಸಮುದಾಯ ಕಿವಿಗೊಡುವುದಿಲ್ಲ ಎಂಬ ನಂಬಿಕೆ ನನಗಿದೆ” ಎಂದು ಭರವಸೆ ವ್ಯಕ್ತಪಡಿಸಿದ್ದರು.

“ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸುವಾಗ ಬಿಜೆಪಿಯವರು ಲಿಂಗಾಯತ ಅಸ್ತ್ರವನ್ನು ಪ್ರಯೋಗ ಮಾಡುತ್ತಿದ್ದಾರೆ, ಬಸವರಾಜ ಬೊಮ್ಮಾಯಿ ಅವರೊಬ್ಬ ಭ್ರಷ್ಟ ಮುಖ್ಯಮಂತ್ರಿ ಎಂದು ಹೇಳಿದ್ದೆ. ಲಿಂಗಾಯತರೆಲ್ಲ ಭ್ರಷ್ಟರು ಎಂದು ನಾನು ಹೇಳಿಯೇ ಇಲ್ಲ. ಅದೆಲ್ಲ ಬಿಜೆಪಿಯವರ ಸೃಷ್ಟಿಸಿದ ಸುಳ್ಳುಗಳಷ್ಟೆ” ಎಂದು ತಿಳಿಸಿದ್ದರು.

“ವೀರೇಂದ್ರ ಪಾಟೀಲರು, ನಿಜಲಿಂಗಪ್ಪನವರು, ಜೆ.ಹೆಚ್ ಪಟೇಲರು, ಬಿ.ಡಿ ಜತ್ತಿ, ಎಸ್.ಆರ್ ಕಂಠಿ ಇಂಥ ಅನೇಕ ಪ್ರಾಮಾಣಿಕ ಮುಖ್ಯಮಂತ್ರಿಗಳನ್ನು ಲಿಂಗಾಯತ ಸಮುದಾಯ ಈ ನಾಡಿಗೆ ನೀಡಿದೆ. ಈ ಎಲ್ಲಾ ನಾಯಕರ ಬಗೆಗೆ ನನಗೆ ವಿಶೇಷ ಪ್ರೀತಿ, ಅಭಿಮಾನವಿದೆ” ಎಂದು ಹೇಳಿದ್ದರು.

“ವೀರಶೈವ – ಲಿಂಗಾಯತರ ಬಗ್ಗೆ ನಮಗೆ ಗೌರವ ಇರುವುದರಿಂದಲೇ ಹೆಚ್ಚು ಟಿಕೇಟನ್ನು ಅವರಿಗೆ ನೀಡಿದ್ದೇವೆ. ಕಳೆದ ಬಾರಿ 47 ಲಿಂಗಾಯತ ಅಭ್ಯರ್ಥಿಗಳಿಗೆ ಪಕ್ಷದ ಟಿಕೆಟ್ ನೀಡಿದ್ದರೆ, ಈ ಬಾರಿ ಅದಕ್ಕಿಂತ ಹೆಚ್ಚು ಅಂದರೆ ಸುಮಾರು 52 – 53 ಕ್ಷೇತ್ರಗಳಲ್ಲಿ ಟಿಕೆಟ್ ನೀಡಿದ್ದೇವೆ” ಎಂದಿದ್ದರು.

“ನಮ್ಮಲ್ಲಿ ಜಾತಿ ಆಧಾರದ ಮೇಲೆ ಮುಖ್ಯಮಂತ್ರಿ ಯಾರಾಗಬೇಕೆಂದು ತೀರ್ಮಾನ ಮಾಡುವುದಿಲ್ಲ, ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇದು ನಮ್ಮಲ್ಲಿ ನಡೆದುಕೊಂಡುಬಂದ ಪದ್ಧತಿ. ಬಿಜೆಪಿಯವರು ಜಾತಿ ಮೇಲೆ ಮಾಡಿದರೆ ಅದು ಅವರ ಪಕ್ಷದ ವಿಚಾರ. ಅದಕ್ಕೆ ನಮ್ಮ ತಕರಾರಿಲ್ಲ” ಎಂದು ಸ್ಪಷ್ಟನೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....