Homeಮುಖಪುಟಪ್ರಧಾನಿ ಸಮ್ಮುಖದಲ್ಲೇ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಬಿಜೆಪಿ

ಪ್ರಧಾನಿ ಸಮ್ಮುಖದಲ್ಲೇ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಬಿಜೆಪಿ

- Advertisement -
- Advertisement -

ಶನಿವಾರ ನಿಧನರಾದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಗಿದೆ. ಆದರೆ, ಅಂತಿಮ ನಮನದ ವೇಳೆ ಪ್ರಧಾನಿ ಮೋದಿ ಸಮ್ಮುಖದಲ್ಲೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿದೆ ಎಂದು ಇದೀಗ ವಿವಾದವೊಂದು ಎದ್ದಿದೆ. ಕಲ್ಯಾಣ್ ಸಿಂಗ್ ಅವರ ಪಾರ್ಥೀವ ಶರೀರದ ಮೇಲೆ ಹೊದಿಸಲಾಗಿದ್ದ ರಾಷ್ಟ್ರಧ್ವಜದ ಮೇಲೆ ಬಿಜೆಪಿ ಪಕ್ಷದ ಧ್ವಜವನ್ನು ಹಾಕಿದ್ದು ಇದೀಗ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಹಲವಾರು ಜನರು ಇದನ್ನು ಸಾಮಾಜಿಕ ಜಾಲತಾಣದಲ್ಲಿ ಖಂಡಿಸಿದ್ದಾರೆ.

ಕಲ್ಯಾಣ್ ಸಿಂಗ್ ಅವರ ಅಂತಿಮ ದರ್ಶನಕ್ಕೆ ಪ್ರಧಾನಿ ಮೋದಿ ಕೂಡಾ ಆಗಮಿಸಿದ್ದರು. ಈ ವೇಳೆಯೇ, ಅವರ ಎದುರಲ್ಲೇ ಕಲ್ಯಾಣ್‌ ಸಿಂಗ್‌ ಪಾರ್ಥಿವ ಶರೀರದ ಮೇಲೆ ಇದ್ದ ಭಾರತದ ತ್ರಿವರ್ಣ ಧ್ವಜದ ಮೇಲೆ ಬಿಜೆಪಿ ಪಕ್ಷದ ಧ್ವಜವನ್ನು ಹೊದಿಸಲಾಗಿದೆ. ಇದರ ನಂತರ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡ, ಯುಪಿ ಮುಖ್ಯಮಂತ್ರಿ ಆದಿತ್ಯನಾಥ್‌ ಸೇರಿದಂತೆ ಹಲವರು ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಿದ್ದರು. ಇದು ಭಾರತದ ತ್ರಿವರ್ಣ ಧ್ವಜಕ್ಕೆ ಮಾಡಿದ ಅಪಮಾನವಾಗಿದೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣ : ಕಲ್ಯಾಣ್‍ಸಿಂಗ್‍ಗೆ ಸಮನ್ಸ್ ನೀಡಲು ಸಿಬಿಐ ಸಿದ್ದತೆ

ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿರುವ ಚಿತ್ರವೊಂದನ್ನು ಟ್ವೀಟ್ ಮಾಡಿರುವ ಡಾ. ಆಶಿಶ್‌ ದಿಕ್ಷಿತ್‌, “ದೇಶದ ಪ್ರಧಾನಿಯ ಮುಂದೆಯೆ ಬಿಜೆಪಿಯ ಧ್ವಜವನ್ನು ತ್ರಿವರ್ಣ ಧ್ವಜದ ಮೇಲೆ ಹಾಕಲಾಯಿತು. ಇದು ತ್ರಿವರ್ಣ ಧ್ವಜಕ್ಕೆ ಮಾಡಿದ ಅವಮಾನವಲ್ಲವೇ? ಬಿಜೆಪಿ ಕಾರ್ಯಕ್ರರ ಜೊತೆ ದೇಶಪ್ರೇಮಿ ಮತ್ತು ದೇಶದ್ರೋಹಿ ಸರ್ಟಿಫಿಕೇಟ್‌ ಹಂಚುವ ಲೈಸನ್ಸ್‌ ಹೊಂದಿದ್ದಾರೆ. ಅವರು ಈ ಬಗ್ಗೆ ಏನು ಹೇಳುತ್ತಾರೆ?” ಎಂದು ಪ್ರಶ್ನಿಸಿದ್ದಾರೆ.

ಯೂತ್ ಕಾಂಗ್ರೆಸ್ ನಾಯಕ ಬಿವಿ ಶ್ರೀನಿವಾಸ್, “ಹೊಸ ಭಾರತದಲ್ಲಿ ಪಕ್ಷದ ಧ್ವಜವನ್ನು ಭಾರತದ ಧ್ವಜದ ಮೇಲೆ ಇಡುವುದು ಸರಿಯೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹೆಚ್ಚು ಪಡಿತರಕ್ಕಾಗಿ 20 ಮಕ್ಕಳನ್ನು ಹೆರಬಾರದೆ..? ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ತಿರತ್ ಸಿಂಗ್ ರಾವತ್

ಟ್ರೈಬಲ್ ಆರ್ಮಿ ಎಂಬ ಅಧೀಕೃತ ಟ್ವಿಟರ್‌ ಖಾತೆ, “ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ರಾಷ್ಟ್ರಧ್ವಜದ ಮೇಲೆ ಬಿಜೆಪಿ ಪಕ್ಷದ ಧ್ವಜವನ್ನು ಇರಿಸಿದರು. ಇದು ನಮ್ಮ ರಾಷ್ಟ್ರಧ್ವಜಕ್ಕೆ ಮಾಡಿದ ಅವಮಾನ. ಈ ನಾಚಿಕೆಗೇಡಿನ ಕೃತ್ಯಕ್ಕಾಗಿ ನಡ್ಡಾ ಕ್ಷಮೆ ಕೇಳಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಪತ್ರಕರ್ತ ಶ್ಯಾಮ್ ಮೀರಾ ಸಿಂಗ್‌ ಅವರು ರಾಷ್ಟ್ರಧ್ವಜದ ಧ್ವಜ ಸಂಹಿತೆ ಏನು ಹೇಳುತ್ತದೆ ಎಂದು ತಮ್ಮ ಟ್ವಿಟ್‌ನಲ್ಲಿ ತಿಳಿಸಿದ್ದಾರೆ. ಅವರ ಟ್ವೀಟ್‌‌ನಂತೆ, “ ಭಾರತದ ಧ್ವಜ ಸಂಹಿತೆಯ ಪ್ರಕಾರ, ‘ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜಕ್ಕಿಂತ ಎತ್ತರ ಅಥವಾ ರಾಷ್ಟ್ರಧ್ವಜಕ್ಕಿಂತ ಮೇಲೆ ಹಾಗೂ ರಾಷ್ಟ್ರಧ್ವಜಕ್ಕೆ ಸರಿಸಮಾನವಾರಿ ಇಡಬಾರದು’ ಎಂದು ಹೇಳುತ್ತದೆ. ಬಿಜೆಪಿಗೆ ನಾಚಿಕೆಯಾಗಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹೆಸರು ಬದಲಾವಣೆ ಮುಂದುವರೆಸಿದ ಬಿಜೆಪಿ: ಉತ್ತರ ಪ್ರದೇಶದ ಅಲಿಗಢ ಮರುನಾಮಕರಣಕ್ಕೆ ಪ್ರಸ್ತಾಪ

 

 

 

 

ಚಿತ್ರವೊಂದನ್ನು ರೀಟ್ವಿಟ್‌ ಮಾಡಿರುವ ಮತ್ತೊಬ್ಬರು, “ಈ ಚಿತ್ರದ ಅರ್ಥ ಕಲ್ಯಾಣ್‌ ಸಿಂಗ್‌ ತಮ್ಮ ದೇಶಕ್ಕಿಂತ ಪಕ್ಷವನ್ನೇ ಅತಿಯಾಗಿ ನೆಚ್ಚಿಕೊಂಡಿದ್ದರು ಎಂದಾಗಿದೆ. ನಿಮಗೆ ಸಂಶಯವಿದ್ದರೆ ಬಾಬರಿ ಮಸೀದಿ ಒಡೆದ ಘಟನೆಯನ್ನು ಒಮ್ಮೆ ನೋಡಿ” ಎಂದು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಬಾಬರಿ ಮಸೀದಿ ಒಡೆದ ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದ್ದ ನ್ಯಾಯಾಧೀಶ ಯುಪಿ ಉಪಲೋಕಾಯುಕ್ತರಾಗಿ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....