Homeಮುಖಪುಟಪ್ರಧಾನಿ ಸಮ್ಮುಖದಲ್ಲೇ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಬಿಜೆಪಿ

ಪ್ರಧಾನಿ ಸಮ್ಮುಖದಲ್ಲೇ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಬಿಜೆಪಿ

- Advertisement -
- Advertisement -

ಶನಿವಾರ ನಿಧನರಾದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಗಿದೆ. ಆದರೆ, ಅಂತಿಮ ನಮನದ ವೇಳೆ ಪ್ರಧಾನಿ ಮೋದಿ ಸಮ್ಮುಖದಲ್ಲೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿದೆ ಎಂದು ಇದೀಗ ವಿವಾದವೊಂದು ಎದ್ದಿದೆ. ಕಲ್ಯಾಣ್ ಸಿಂಗ್ ಅವರ ಪಾರ್ಥೀವ ಶರೀರದ ಮೇಲೆ ಹೊದಿಸಲಾಗಿದ್ದ ರಾಷ್ಟ್ರಧ್ವಜದ ಮೇಲೆ ಬಿಜೆಪಿ ಪಕ್ಷದ ಧ್ವಜವನ್ನು ಹಾಕಿದ್ದು ಇದೀಗ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಹಲವಾರು ಜನರು ಇದನ್ನು ಸಾಮಾಜಿಕ ಜಾಲತಾಣದಲ್ಲಿ ಖಂಡಿಸಿದ್ದಾರೆ.

ಕಲ್ಯಾಣ್ ಸಿಂಗ್ ಅವರ ಅಂತಿಮ ದರ್ಶನಕ್ಕೆ ಪ್ರಧಾನಿ ಮೋದಿ ಕೂಡಾ ಆಗಮಿಸಿದ್ದರು. ಈ ವೇಳೆಯೇ, ಅವರ ಎದುರಲ್ಲೇ ಕಲ್ಯಾಣ್‌ ಸಿಂಗ್‌ ಪಾರ್ಥಿವ ಶರೀರದ ಮೇಲೆ ಇದ್ದ ಭಾರತದ ತ್ರಿವರ್ಣ ಧ್ವಜದ ಮೇಲೆ ಬಿಜೆಪಿ ಪಕ್ಷದ ಧ್ವಜವನ್ನು ಹೊದಿಸಲಾಗಿದೆ. ಇದರ ನಂತರ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡ, ಯುಪಿ ಮುಖ್ಯಮಂತ್ರಿ ಆದಿತ್ಯನಾಥ್‌ ಸೇರಿದಂತೆ ಹಲವರು ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಿದ್ದರು. ಇದು ಭಾರತದ ತ್ರಿವರ್ಣ ಧ್ವಜಕ್ಕೆ ಮಾಡಿದ ಅಪಮಾನವಾಗಿದೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣ : ಕಲ್ಯಾಣ್‍ಸಿಂಗ್‍ಗೆ ಸಮನ್ಸ್ ನೀಡಲು ಸಿಬಿಐ ಸಿದ್ದತೆ

ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿರುವ ಚಿತ್ರವೊಂದನ್ನು ಟ್ವೀಟ್ ಮಾಡಿರುವ ಡಾ. ಆಶಿಶ್‌ ದಿಕ್ಷಿತ್‌, “ದೇಶದ ಪ್ರಧಾನಿಯ ಮುಂದೆಯೆ ಬಿಜೆಪಿಯ ಧ್ವಜವನ್ನು ತ್ರಿವರ್ಣ ಧ್ವಜದ ಮೇಲೆ ಹಾಕಲಾಯಿತು. ಇದು ತ್ರಿವರ್ಣ ಧ್ವಜಕ್ಕೆ ಮಾಡಿದ ಅವಮಾನವಲ್ಲವೇ? ಬಿಜೆಪಿ ಕಾರ್ಯಕ್ರರ ಜೊತೆ ದೇಶಪ್ರೇಮಿ ಮತ್ತು ದೇಶದ್ರೋಹಿ ಸರ್ಟಿಫಿಕೇಟ್‌ ಹಂಚುವ ಲೈಸನ್ಸ್‌ ಹೊಂದಿದ್ದಾರೆ. ಅವರು ಈ ಬಗ್ಗೆ ಏನು ಹೇಳುತ್ತಾರೆ?” ಎಂದು ಪ್ರಶ್ನಿಸಿದ್ದಾರೆ.

ಯೂತ್ ಕಾಂಗ್ರೆಸ್ ನಾಯಕ ಬಿವಿ ಶ್ರೀನಿವಾಸ್, “ಹೊಸ ಭಾರತದಲ್ಲಿ ಪಕ್ಷದ ಧ್ವಜವನ್ನು ಭಾರತದ ಧ್ವಜದ ಮೇಲೆ ಇಡುವುದು ಸರಿಯೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹೆಚ್ಚು ಪಡಿತರಕ್ಕಾಗಿ 20 ಮಕ್ಕಳನ್ನು ಹೆರಬಾರದೆ..? ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ತಿರತ್ ಸಿಂಗ್ ರಾವತ್

ಟ್ರೈಬಲ್ ಆರ್ಮಿ ಎಂಬ ಅಧೀಕೃತ ಟ್ವಿಟರ್‌ ಖಾತೆ, “ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ರಾಷ್ಟ್ರಧ್ವಜದ ಮೇಲೆ ಬಿಜೆಪಿ ಪಕ್ಷದ ಧ್ವಜವನ್ನು ಇರಿಸಿದರು. ಇದು ನಮ್ಮ ರಾಷ್ಟ್ರಧ್ವಜಕ್ಕೆ ಮಾಡಿದ ಅವಮಾನ. ಈ ನಾಚಿಕೆಗೇಡಿನ ಕೃತ್ಯಕ್ಕಾಗಿ ನಡ್ಡಾ ಕ್ಷಮೆ ಕೇಳಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಪತ್ರಕರ್ತ ಶ್ಯಾಮ್ ಮೀರಾ ಸಿಂಗ್‌ ಅವರು ರಾಷ್ಟ್ರಧ್ವಜದ ಧ್ವಜ ಸಂಹಿತೆ ಏನು ಹೇಳುತ್ತದೆ ಎಂದು ತಮ್ಮ ಟ್ವಿಟ್‌ನಲ್ಲಿ ತಿಳಿಸಿದ್ದಾರೆ. ಅವರ ಟ್ವೀಟ್‌‌ನಂತೆ, “ ಭಾರತದ ಧ್ವಜ ಸಂಹಿತೆಯ ಪ್ರಕಾರ, ‘ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜಕ್ಕಿಂತ ಎತ್ತರ ಅಥವಾ ರಾಷ್ಟ್ರಧ್ವಜಕ್ಕಿಂತ ಮೇಲೆ ಹಾಗೂ ರಾಷ್ಟ್ರಧ್ವಜಕ್ಕೆ ಸರಿಸಮಾನವಾರಿ ಇಡಬಾರದು’ ಎಂದು ಹೇಳುತ್ತದೆ. ಬಿಜೆಪಿಗೆ ನಾಚಿಕೆಯಾಗಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹೆಸರು ಬದಲಾವಣೆ ಮುಂದುವರೆಸಿದ ಬಿಜೆಪಿ: ಉತ್ತರ ಪ್ರದೇಶದ ಅಲಿಗಢ ಮರುನಾಮಕರಣಕ್ಕೆ ಪ್ರಸ್ತಾಪ

 

 

 

 

ಚಿತ್ರವೊಂದನ್ನು ರೀಟ್ವಿಟ್‌ ಮಾಡಿರುವ ಮತ್ತೊಬ್ಬರು, “ಈ ಚಿತ್ರದ ಅರ್ಥ ಕಲ್ಯಾಣ್‌ ಸಿಂಗ್‌ ತಮ್ಮ ದೇಶಕ್ಕಿಂತ ಪಕ್ಷವನ್ನೇ ಅತಿಯಾಗಿ ನೆಚ್ಚಿಕೊಂಡಿದ್ದರು ಎಂದಾಗಿದೆ. ನಿಮಗೆ ಸಂಶಯವಿದ್ದರೆ ಬಾಬರಿ ಮಸೀದಿ ಒಡೆದ ಘಟನೆಯನ್ನು ಒಮ್ಮೆ ನೋಡಿ” ಎಂದು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಬಾಬರಿ ಮಸೀದಿ ಒಡೆದ ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದ್ದ ನ್ಯಾಯಾಧೀಶ ಯುಪಿ ಉಪಲೋಕಾಯುಕ್ತರಾಗಿ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...