Homeಮುಖಪುಟತಮಿಳುನಾಡಿನಲ್ಲಿ ಕೋಮು ರಾಜಕೀಯ ಮಾಡಲೋಗಿ ಮತ್ತೆ ಕೈಸುಟ್ಟುಕೊಂಡ ಬಿಜೆಪಿ..

ತಮಿಳುನಾಡಿನಲ್ಲಿ ಕೋಮು ರಾಜಕೀಯ ಮಾಡಲೋಗಿ ಮತ್ತೆ ಕೈಸುಟ್ಟುಕೊಂಡ ಬಿಜೆಪಿ..

- Advertisement -
- Advertisement -

ಶತಾಯಗತಾಯ ತಮಿಳುನಾಡಿನಲ್ಲಿ ನೆಲೆ ಕಂಡುಕೊಳ್ಳಲು ಯತ್ನಿಸುತ್ತಿರುವ ಬಿಜೆಪಿಗೆ ಸೋಲಿನ ಮೇಲೆ ಸೋಲುಗಳು ಎದುರಾಗಿವೆ. ದೇಶದಲ್ಲಿಯೇ ಭಾರೀ ಬಹುಮತವನ್ನು ಹೊಂದಿರುವ ಬಿಜೆಪಿ ದಕ್ಷಿಣದ ತಮಿಳುನಾಡಿನಲ್ಲಿ ಒಂದೂ ಸ್ಥಾನ ಗೆದ್ದಿಲ್ಲ.

ಅಷ್ಟು ಮಾತ್ರವಲ್ಲ ಪ್ರತಿ ಭಾರೀ ಮೋದಿ ತಮಿಳುನಾಡಿಗೆ ಭೇಟಿ ನೀಡಿದಾಗಲೆಲ್ಲಾ ಗೋಬ್ಯಾಕ್‌ ಮೋದಿ ಎಂಬ ಹ್ಯಾಷ್‌ಟ್ಯಾಗ್‌ಗಳು ಟ್ವಿಟ್ಟರ್‌ನಲ್ಲಿ ಸದ್ದು ಮಾಡುತ್ತವೆ. ಆದರೂ ಛಲಬಿಡದ ಬಿಜೆಪಿ ಏನಾದರೂ ಮಾಡಿ ನೆಲೆ ಕಂಡುಕೊಳ್ಳಲು ಸಾಧ್ಯವಿರುವ ಎಲ್ಲಾ ಮಾರ್ಗಗಳನ್ನು ಬಳಸುತ್ತಿದೆ. ಕಳೆದ ತಿಂಗಳು ಚೀನಾದ ಅಧ್ಯಕ್ಷರನ್ನು ತಮಿಳುನಾಡಿನ ಮಾಮಲ್ಲಪುರಂಗೆ ಕರೆದುಕೊಂಡು ಹೋಗಿ ಪುಸಿ ಹೊಡೆದಿದ್ದ ಮೋದಿಪಡೆ ಈ ಬಾರಿ ತಮಿಳಿನ ಸಾಂಸ್ಕೃತಿಕ ಸಾಹಿತ್ಯಕ ಲೋಕಕ್ಕೆ ಪ್ರವೇಶಿಸಲು ನೋಡಿ ಕೈಸುಟ್ಟುಕೊಂಡಿದೆ.

ತಮಿಳಿನ ಪ್ರಖಾತ್ಯ ಕವಿ ತಿರುವಳ್ಳುವರ್‌ ಎಂದರೆ ಎಲ್ಲರಿಗೂ ಪ್ರೀತಿ. ತಮಿಳರಿಗೆ ಮಾತ್ರವಲ್ಲದೇ ಕರ್ನಾಟಕದಲ್ಲಿಯೂ ಕೂಡ ತಿರುವಳ್ಳುವರ್‌ ಪ್ರತಿಮೆ ನಿರ್ಮಿಸಿ ಗೌರವಿಸಲಾಗಿದೆ. ಇಂತಹ ತಿರುವಳ್ಳುವರ್‌ರವರ ಭಾವಚಿತ್ರವನ್ನು ಬಿಜೆಪಿ ತಿರುಚಲು ಹೋಗಿ ಸಿಕ್ಕಿಬಿದ್ದಿದೆ. ಬಿಳಿ ಬಣ್ಣದ ವಸ್ತ್ರ ಧರಿಸಿರುವ ತಿರುವಳ್ಳುವರ್‌ರವರ ಭಾವಚಿತ್ರಗಳು ತಮಿಳುನಾಡಿನ ಎಲ್ಲಾ ಮನೆಗಳಲ್ಲೂ ಮನೆಮಾತಾಗಿರುವುದು ಎಲ್ಲರಿಗೂ ತಿಳಿದ ವಿಚಾರ. ಆದರೆ ಬಿಜೆಪಿಗರೂ ತಿರುವಳ್ಳುವರ್‌ ಹಿಂದೂ ಧರ್ಮದವರಾದ್ದರಿಂದ ಅವರ ಭಾವಚಿತ್ರ ಕೇಸರಿ ಬಣ್ಣದಲ್ಲಿರಬೇಕೆಂದು ಬಯಸಿ ಕೇಸರಿ ಬಣ್ಣದ ಭಾವಚಿತ್ರಗಳನ್ನು ಟ್ವೀಟ್‌ ಮಾಡಿದ್ದಾರೆ.

ಇದು ತಮಿಳರ ಸ್ವಾಭಿಮಾನವನ್ನು ಬಡಿದೆಬ್ಬಿಸಿದೆ. ಕೂಡಲೇ ’ಬಿಜೆಪಿ ತಿರುವಳ್ಳುವರ್‌ಗೆ ಅವಮಾನಿಸಿದ” #BJPInsultsThiruvalluvar ಎಂದು ಆರೋಪಿಸಿ ಟ್ವಿಟ್ಟರ್‌ನಲ್ಲಿ ಟ್ರೆಂಡ್‌ ಮಾಡಿದ್ದಾರೆ.

ತಮಿಳುನಾಡಿನಲ್ಲಿ 1000 ಸಂಘಟನೆಗಳು, ರಾಜಕೀಯ ಪಕ್ಷಗಳು ಮತ್ತು ಸಾಮಾಜಿಕ ಚಳುವಳಿಗಳು ನಡೆದಿವೆ. ಎಡ ಅಥವಾ ಬಲವಾಗಿರಲಿ ಅವರಲ್ಲಿ ಯಾರೂ ಕೂಡ ತಿರುವಳ್ಳುವರ್‌ರವರಿಗೆ ಕೋಮು ಬಣ್ಣವನ್ನು ನೀಡಿರಲಿಲ್ಲ ಅಥವಾ  ಅವರ ಸಿದ್ಧಾಂತಕ್ಕೆ ಬಣ್ಣ ಕೊಟ್ಟಿರಲಿಲ್ಲ. ಆದರೀಗ ಬಿಜೆಪಿಯ ಕೋಮುರಾಜಕೀಯಕ್ಕೆ ತಿರುವಳ್ಳುವರ್ ಸಹ ಉಳಿದಿಲ್ಲ ಎಂಬುದು ಬೇಸರದ ಸಂಗತಿ ಎಂದು ಹಲವು ಜನ ಅಭಿಪ್ರಾಯಪಟ್ಟಿದ್ದಾರೆ.

ಮಹಾನ್ ಕವಿ ತಿರುವಳ್ಳುವರ್ ಅವರಿಗೆ ಕೇಸರಿ ಬಣ್ಣ ನೀಡಿ ಬಿಜೆಪಿ ಅವಮಾನಿಸಿದೆ. ತಿರುವಳ್ಳುವರ್ ಅವರ ಕೆಲಸವನ್ನು ವಿಶ್ವದಾದ್ಯಂತ ಜಾತ್ಯತೀತ ಮನೋಭಾವದಿಂದ ಸ್ವೀಕರಿಸಲಾಗಿದೆ. ಈ ವಿವಾದವನ್ನು ಸೃಷ್ಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಆಶೀಸ್‌ ವಿವೇಕ್‌ ಎಂಬುವವರು ಆಗ್ರಹಿಸಿದ್ದಾರೆ.

ಇಂದು ನಾನು ತುಂಬಾ ದುಃಖಿತನಾಗಿದ್ದೇನೆ. ನನ್ನ ಸಂಸ್ಕೃತಿ, ಸಾಹಿತ್ಯ, ಜನರು ಮತ್ತು ಸ್ಥಳಗಳೆಲ್ಲವೂ ಹಿಂದುತ್ವದಿಂದ ಅಪಾಯದಲ್ಲಿದೆ ಎಂದು ನಾವೆಲ್ಲರೂ ಸ್ಪಷ್ಟವಾಗಿ ನೋಡಬಹುದು.

ಬ್ರಿಟಿಷರಂತೆಯೇ ಬಿಜೆಪಿಯು ಸಹ ವಿಭಜನೆಯ ನಿಯಮವನ್ನು ಬಳಸಿಕೊಂಡು ತಮಿಳುನಾಡು ಪ್ರವೇಶಿಸಲು ಪ್ರಯತ್ನಿಸುತ್ತಿದೆ. ನಾನು ಇದನ್ನು ಕ್ಷಮಿಸುವುದಿಲ್ಲ ಅಥವಾ ಮರೆಯುವುದಿಲ್ಲ ಮತ್ತೊಬ್ಬರು ಟ್ವೀಟ್‌ ಮಾಡಿದ್ದಾರೆ.

ಅಲ್ಲದೇ ಅಂಬೇಡ್ಕರ್‌ ಸೇರಿದಂತೆ ಎಲ್ಲಾ ನಾಯಕರನ್ನು ಕೇಸರಿ ಬಣ್ಣಕ್ಕೆ ತಿರುಗಿಸುವ ಬಿಜೆಪಿಯ ತಂತ್ರಕ್ಕೆ ಪ್ರತಿರೋಧ ವ್ಯಕ್ತವಾಗಿದೆ. ಬಣ್ಣವನ್ನಷ್ಟೇ ಬದಲಿಸಬಹದು ನಮ್ಮ ಚಿಂತನೆಗಳನ್ನು ಬದಲಿಸಲು ಸಾಧ್ಯವಿಲ್ಲ ಎಂದು ಸವಾಲು ಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...