Homeಮುಖಪುಟತಮಿಳುನಾಡಿನಲ್ಲಿ ಕೋಮು ರಾಜಕೀಯ ಮಾಡಲೋಗಿ ಮತ್ತೆ ಕೈಸುಟ್ಟುಕೊಂಡ ಬಿಜೆಪಿ..

ತಮಿಳುನಾಡಿನಲ್ಲಿ ಕೋಮು ರಾಜಕೀಯ ಮಾಡಲೋಗಿ ಮತ್ತೆ ಕೈಸುಟ್ಟುಕೊಂಡ ಬಿಜೆಪಿ..

- Advertisement -
- Advertisement -

ಶತಾಯಗತಾಯ ತಮಿಳುನಾಡಿನಲ್ಲಿ ನೆಲೆ ಕಂಡುಕೊಳ್ಳಲು ಯತ್ನಿಸುತ್ತಿರುವ ಬಿಜೆಪಿಗೆ ಸೋಲಿನ ಮೇಲೆ ಸೋಲುಗಳು ಎದುರಾಗಿವೆ. ದೇಶದಲ್ಲಿಯೇ ಭಾರೀ ಬಹುಮತವನ್ನು ಹೊಂದಿರುವ ಬಿಜೆಪಿ ದಕ್ಷಿಣದ ತಮಿಳುನಾಡಿನಲ್ಲಿ ಒಂದೂ ಸ್ಥಾನ ಗೆದ್ದಿಲ್ಲ.

ಅಷ್ಟು ಮಾತ್ರವಲ್ಲ ಪ್ರತಿ ಭಾರೀ ಮೋದಿ ತಮಿಳುನಾಡಿಗೆ ಭೇಟಿ ನೀಡಿದಾಗಲೆಲ್ಲಾ ಗೋಬ್ಯಾಕ್‌ ಮೋದಿ ಎಂಬ ಹ್ಯಾಷ್‌ಟ್ಯಾಗ್‌ಗಳು ಟ್ವಿಟ್ಟರ್‌ನಲ್ಲಿ ಸದ್ದು ಮಾಡುತ್ತವೆ. ಆದರೂ ಛಲಬಿಡದ ಬಿಜೆಪಿ ಏನಾದರೂ ಮಾಡಿ ನೆಲೆ ಕಂಡುಕೊಳ್ಳಲು ಸಾಧ್ಯವಿರುವ ಎಲ್ಲಾ ಮಾರ್ಗಗಳನ್ನು ಬಳಸುತ್ತಿದೆ. ಕಳೆದ ತಿಂಗಳು ಚೀನಾದ ಅಧ್ಯಕ್ಷರನ್ನು ತಮಿಳುನಾಡಿನ ಮಾಮಲ್ಲಪುರಂಗೆ ಕರೆದುಕೊಂಡು ಹೋಗಿ ಪುಸಿ ಹೊಡೆದಿದ್ದ ಮೋದಿಪಡೆ ಈ ಬಾರಿ ತಮಿಳಿನ ಸಾಂಸ್ಕೃತಿಕ ಸಾಹಿತ್ಯಕ ಲೋಕಕ್ಕೆ ಪ್ರವೇಶಿಸಲು ನೋಡಿ ಕೈಸುಟ್ಟುಕೊಂಡಿದೆ.

ತಮಿಳಿನ ಪ್ರಖಾತ್ಯ ಕವಿ ತಿರುವಳ್ಳುವರ್‌ ಎಂದರೆ ಎಲ್ಲರಿಗೂ ಪ್ರೀತಿ. ತಮಿಳರಿಗೆ ಮಾತ್ರವಲ್ಲದೇ ಕರ್ನಾಟಕದಲ್ಲಿಯೂ ಕೂಡ ತಿರುವಳ್ಳುವರ್‌ ಪ್ರತಿಮೆ ನಿರ್ಮಿಸಿ ಗೌರವಿಸಲಾಗಿದೆ. ಇಂತಹ ತಿರುವಳ್ಳುವರ್‌ರವರ ಭಾವಚಿತ್ರವನ್ನು ಬಿಜೆಪಿ ತಿರುಚಲು ಹೋಗಿ ಸಿಕ್ಕಿಬಿದ್ದಿದೆ. ಬಿಳಿ ಬಣ್ಣದ ವಸ್ತ್ರ ಧರಿಸಿರುವ ತಿರುವಳ್ಳುವರ್‌ರವರ ಭಾವಚಿತ್ರಗಳು ತಮಿಳುನಾಡಿನ ಎಲ್ಲಾ ಮನೆಗಳಲ್ಲೂ ಮನೆಮಾತಾಗಿರುವುದು ಎಲ್ಲರಿಗೂ ತಿಳಿದ ವಿಚಾರ. ಆದರೆ ಬಿಜೆಪಿಗರೂ ತಿರುವಳ್ಳುವರ್‌ ಹಿಂದೂ ಧರ್ಮದವರಾದ್ದರಿಂದ ಅವರ ಭಾವಚಿತ್ರ ಕೇಸರಿ ಬಣ್ಣದಲ್ಲಿರಬೇಕೆಂದು ಬಯಸಿ ಕೇಸರಿ ಬಣ್ಣದ ಭಾವಚಿತ್ರಗಳನ್ನು ಟ್ವೀಟ್‌ ಮಾಡಿದ್ದಾರೆ.

ಇದು ತಮಿಳರ ಸ್ವಾಭಿಮಾನವನ್ನು ಬಡಿದೆಬ್ಬಿಸಿದೆ. ಕೂಡಲೇ ’ಬಿಜೆಪಿ ತಿರುವಳ್ಳುವರ್‌ಗೆ ಅವಮಾನಿಸಿದ” #BJPInsultsThiruvalluvar ಎಂದು ಆರೋಪಿಸಿ ಟ್ವಿಟ್ಟರ್‌ನಲ್ಲಿ ಟ್ರೆಂಡ್‌ ಮಾಡಿದ್ದಾರೆ.

ತಮಿಳುನಾಡಿನಲ್ಲಿ 1000 ಸಂಘಟನೆಗಳು, ರಾಜಕೀಯ ಪಕ್ಷಗಳು ಮತ್ತು ಸಾಮಾಜಿಕ ಚಳುವಳಿಗಳು ನಡೆದಿವೆ. ಎಡ ಅಥವಾ ಬಲವಾಗಿರಲಿ ಅವರಲ್ಲಿ ಯಾರೂ ಕೂಡ ತಿರುವಳ್ಳುವರ್‌ರವರಿಗೆ ಕೋಮು ಬಣ್ಣವನ್ನು ನೀಡಿರಲಿಲ್ಲ ಅಥವಾ  ಅವರ ಸಿದ್ಧಾಂತಕ್ಕೆ ಬಣ್ಣ ಕೊಟ್ಟಿರಲಿಲ್ಲ. ಆದರೀಗ ಬಿಜೆಪಿಯ ಕೋಮುರಾಜಕೀಯಕ್ಕೆ ತಿರುವಳ್ಳುವರ್ ಸಹ ಉಳಿದಿಲ್ಲ ಎಂಬುದು ಬೇಸರದ ಸಂಗತಿ ಎಂದು ಹಲವು ಜನ ಅಭಿಪ್ರಾಯಪಟ್ಟಿದ್ದಾರೆ.

ಮಹಾನ್ ಕವಿ ತಿರುವಳ್ಳುವರ್ ಅವರಿಗೆ ಕೇಸರಿ ಬಣ್ಣ ನೀಡಿ ಬಿಜೆಪಿ ಅವಮಾನಿಸಿದೆ. ತಿರುವಳ್ಳುವರ್ ಅವರ ಕೆಲಸವನ್ನು ವಿಶ್ವದಾದ್ಯಂತ ಜಾತ್ಯತೀತ ಮನೋಭಾವದಿಂದ ಸ್ವೀಕರಿಸಲಾಗಿದೆ. ಈ ವಿವಾದವನ್ನು ಸೃಷ್ಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಆಶೀಸ್‌ ವಿವೇಕ್‌ ಎಂಬುವವರು ಆಗ್ರಹಿಸಿದ್ದಾರೆ.

ಇಂದು ನಾನು ತುಂಬಾ ದುಃಖಿತನಾಗಿದ್ದೇನೆ. ನನ್ನ ಸಂಸ್ಕೃತಿ, ಸಾಹಿತ್ಯ, ಜನರು ಮತ್ತು ಸ್ಥಳಗಳೆಲ್ಲವೂ ಹಿಂದುತ್ವದಿಂದ ಅಪಾಯದಲ್ಲಿದೆ ಎಂದು ನಾವೆಲ್ಲರೂ ಸ್ಪಷ್ಟವಾಗಿ ನೋಡಬಹುದು.

ಬ್ರಿಟಿಷರಂತೆಯೇ ಬಿಜೆಪಿಯು ಸಹ ವಿಭಜನೆಯ ನಿಯಮವನ್ನು ಬಳಸಿಕೊಂಡು ತಮಿಳುನಾಡು ಪ್ರವೇಶಿಸಲು ಪ್ರಯತ್ನಿಸುತ್ತಿದೆ. ನಾನು ಇದನ್ನು ಕ್ಷಮಿಸುವುದಿಲ್ಲ ಅಥವಾ ಮರೆಯುವುದಿಲ್ಲ ಮತ್ತೊಬ್ಬರು ಟ್ವೀಟ್‌ ಮಾಡಿದ್ದಾರೆ.

ಅಲ್ಲದೇ ಅಂಬೇಡ್ಕರ್‌ ಸೇರಿದಂತೆ ಎಲ್ಲಾ ನಾಯಕರನ್ನು ಕೇಸರಿ ಬಣ್ಣಕ್ಕೆ ತಿರುಗಿಸುವ ಬಿಜೆಪಿಯ ತಂತ್ರಕ್ಕೆ ಪ್ರತಿರೋಧ ವ್ಯಕ್ತವಾಗಿದೆ. ಬಣ್ಣವನ್ನಷ್ಟೇ ಬದಲಿಸಬಹದು ನಮ್ಮ ಚಿಂತನೆಗಳನ್ನು ಬದಲಿಸಲು ಸಾಧ್ಯವಿಲ್ಲ ಎಂದು ಸವಾಲು ಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...