Homeಮುಖಪುಟತಮಿಳುನಾಡಿನಲ್ಲಿ ಕೋಮು ರಾಜಕೀಯ ಮಾಡಲೋಗಿ ಮತ್ತೆ ಕೈಸುಟ್ಟುಕೊಂಡ ಬಿಜೆಪಿ..

ತಮಿಳುನಾಡಿನಲ್ಲಿ ಕೋಮು ರಾಜಕೀಯ ಮಾಡಲೋಗಿ ಮತ್ತೆ ಕೈಸುಟ್ಟುಕೊಂಡ ಬಿಜೆಪಿ..

- Advertisement -
- Advertisement -

ಶತಾಯಗತಾಯ ತಮಿಳುನಾಡಿನಲ್ಲಿ ನೆಲೆ ಕಂಡುಕೊಳ್ಳಲು ಯತ್ನಿಸುತ್ತಿರುವ ಬಿಜೆಪಿಗೆ ಸೋಲಿನ ಮೇಲೆ ಸೋಲುಗಳು ಎದುರಾಗಿವೆ. ದೇಶದಲ್ಲಿಯೇ ಭಾರೀ ಬಹುಮತವನ್ನು ಹೊಂದಿರುವ ಬಿಜೆಪಿ ದಕ್ಷಿಣದ ತಮಿಳುನಾಡಿನಲ್ಲಿ ಒಂದೂ ಸ್ಥಾನ ಗೆದ್ದಿಲ್ಲ.

ಅಷ್ಟು ಮಾತ್ರವಲ್ಲ ಪ್ರತಿ ಭಾರೀ ಮೋದಿ ತಮಿಳುನಾಡಿಗೆ ಭೇಟಿ ನೀಡಿದಾಗಲೆಲ್ಲಾ ಗೋಬ್ಯಾಕ್‌ ಮೋದಿ ಎಂಬ ಹ್ಯಾಷ್‌ಟ್ಯಾಗ್‌ಗಳು ಟ್ವಿಟ್ಟರ್‌ನಲ್ಲಿ ಸದ್ದು ಮಾಡುತ್ತವೆ. ಆದರೂ ಛಲಬಿಡದ ಬಿಜೆಪಿ ಏನಾದರೂ ಮಾಡಿ ನೆಲೆ ಕಂಡುಕೊಳ್ಳಲು ಸಾಧ್ಯವಿರುವ ಎಲ್ಲಾ ಮಾರ್ಗಗಳನ್ನು ಬಳಸುತ್ತಿದೆ. ಕಳೆದ ತಿಂಗಳು ಚೀನಾದ ಅಧ್ಯಕ್ಷರನ್ನು ತಮಿಳುನಾಡಿನ ಮಾಮಲ್ಲಪುರಂಗೆ ಕರೆದುಕೊಂಡು ಹೋಗಿ ಪುಸಿ ಹೊಡೆದಿದ್ದ ಮೋದಿಪಡೆ ಈ ಬಾರಿ ತಮಿಳಿನ ಸಾಂಸ್ಕೃತಿಕ ಸಾಹಿತ್ಯಕ ಲೋಕಕ್ಕೆ ಪ್ರವೇಶಿಸಲು ನೋಡಿ ಕೈಸುಟ್ಟುಕೊಂಡಿದೆ.

ತಮಿಳಿನ ಪ್ರಖಾತ್ಯ ಕವಿ ತಿರುವಳ್ಳುವರ್‌ ಎಂದರೆ ಎಲ್ಲರಿಗೂ ಪ್ರೀತಿ. ತಮಿಳರಿಗೆ ಮಾತ್ರವಲ್ಲದೇ ಕರ್ನಾಟಕದಲ್ಲಿಯೂ ಕೂಡ ತಿರುವಳ್ಳುವರ್‌ ಪ್ರತಿಮೆ ನಿರ್ಮಿಸಿ ಗೌರವಿಸಲಾಗಿದೆ. ಇಂತಹ ತಿರುವಳ್ಳುವರ್‌ರವರ ಭಾವಚಿತ್ರವನ್ನು ಬಿಜೆಪಿ ತಿರುಚಲು ಹೋಗಿ ಸಿಕ್ಕಿಬಿದ್ದಿದೆ. ಬಿಳಿ ಬಣ್ಣದ ವಸ್ತ್ರ ಧರಿಸಿರುವ ತಿರುವಳ್ಳುವರ್‌ರವರ ಭಾವಚಿತ್ರಗಳು ತಮಿಳುನಾಡಿನ ಎಲ್ಲಾ ಮನೆಗಳಲ್ಲೂ ಮನೆಮಾತಾಗಿರುವುದು ಎಲ್ಲರಿಗೂ ತಿಳಿದ ವಿಚಾರ. ಆದರೆ ಬಿಜೆಪಿಗರೂ ತಿರುವಳ್ಳುವರ್‌ ಹಿಂದೂ ಧರ್ಮದವರಾದ್ದರಿಂದ ಅವರ ಭಾವಚಿತ್ರ ಕೇಸರಿ ಬಣ್ಣದಲ್ಲಿರಬೇಕೆಂದು ಬಯಸಿ ಕೇಸರಿ ಬಣ್ಣದ ಭಾವಚಿತ್ರಗಳನ್ನು ಟ್ವೀಟ್‌ ಮಾಡಿದ್ದಾರೆ.

ಇದು ತಮಿಳರ ಸ್ವಾಭಿಮಾನವನ್ನು ಬಡಿದೆಬ್ಬಿಸಿದೆ. ಕೂಡಲೇ ’ಬಿಜೆಪಿ ತಿರುವಳ್ಳುವರ್‌ಗೆ ಅವಮಾನಿಸಿದ” #BJPInsultsThiruvalluvar ಎಂದು ಆರೋಪಿಸಿ ಟ್ವಿಟ್ಟರ್‌ನಲ್ಲಿ ಟ್ರೆಂಡ್‌ ಮಾಡಿದ್ದಾರೆ.

ತಮಿಳುನಾಡಿನಲ್ಲಿ 1000 ಸಂಘಟನೆಗಳು, ರಾಜಕೀಯ ಪಕ್ಷಗಳು ಮತ್ತು ಸಾಮಾಜಿಕ ಚಳುವಳಿಗಳು ನಡೆದಿವೆ. ಎಡ ಅಥವಾ ಬಲವಾಗಿರಲಿ ಅವರಲ್ಲಿ ಯಾರೂ ಕೂಡ ತಿರುವಳ್ಳುವರ್‌ರವರಿಗೆ ಕೋಮು ಬಣ್ಣವನ್ನು ನೀಡಿರಲಿಲ್ಲ ಅಥವಾ  ಅವರ ಸಿದ್ಧಾಂತಕ್ಕೆ ಬಣ್ಣ ಕೊಟ್ಟಿರಲಿಲ್ಲ. ಆದರೀಗ ಬಿಜೆಪಿಯ ಕೋಮುರಾಜಕೀಯಕ್ಕೆ ತಿರುವಳ್ಳುವರ್ ಸಹ ಉಳಿದಿಲ್ಲ ಎಂಬುದು ಬೇಸರದ ಸಂಗತಿ ಎಂದು ಹಲವು ಜನ ಅಭಿಪ್ರಾಯಪಟ್ಟಿದ್ದಾರೆ.

ಮಹಾನ್ ಕವಿ ತಿರುವಳ್ಳುವರ್ ಅವರಿಗೆ ಕೇಸರಿ ಬಣ್ಣ ನೀಡಿ ಬಿಜೆಪಿ ಅವಮಾನಿಸಿದೆ. ತಿರುವಳ್ಳುವರ್ ಅವರ ಕೆಲಸವನ್ನು ವಿಶ್ವದಾದ್ಯಂತ ಜಾತ್ಯತೀತ ಮನೋಭಾವದಿಂದ ಸ್ವೀಕರಿಸಲಾಗಿದೆ. ಈ ವಿವಾದವನ್ನು ಸೃಷ್ಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಆಶೀಸ್‌ ವಿವೇಕ್‌ ಎಂಬುವವರು ಆಗ್ರಹಿಸಿದ್ದಾರೆ.

ಇಂದು ನಾನು ತುಂಬಾ ದುಃಖಿತನಾಗಿದ್ದೇನೆ. ನನ್ನ ಸಂಸ್ಕೃತಿ, ಸಾಹಿತ್ಯ, ಜನರು ಮತ್ತು ಸ್ಥಳಗಳೆಲ್ಲವೂ ಹಿಂದುತ್ವದಿಂದ ಅಪಾಯದಲ್ಲಿದೆ ಎಂದು ನಾವೆಲ್ಲರೂ ಸ್ಪಷ್ಟವಾಗಿ ನೋಡಬಹುದು.

ಬ್ರಿಟಿಷರಂತೆಯೇ ಬಿಜೆಪಿಯು ಸಹ ವಿಭಜನೆಯ ನಿಯಮವನ್ನು ಬಳಸಿಕೊಂಡು ತಮಿಳುನಾಡು ಪ್ರವೇಶಿಸಲು ಪ್ರಯತ್ನಿಸುತ್ತಿದೆ. ನಾನು ಇದನ್ನು ಕ್ಷಮಿಸುವುದಿಲ್ಲ ಅಥವಾ ಮರೆಯುವುದಿಲ್ಲ ಮತ್ತೊಬ್ಬರು ಟ್ವೀಟ್‌ ಮಾಡಿದ್ದಾರೆ.

ಅಲ್ಲದೇ ಅಂಬೇಡ್ಕರ್‌ ಸೇರಿದಂತೆ ಎಲ್ಲಾ ನಾಯಕರನ್ನು ಕೇಸರಿ ಬಣ್ಣಕ್ಕೆ ತಿರುಗಿಸುವ ಬಿಜೆಪಿಯ ತಂತ್ರಕ್ಕೆ ಪ್ರತಿರೋಧ ವ್ಯಕ್ತವಾಗಿದೆ. ಬಣ್ಣವನ್ನಷ್ಟೇ ಬದಲಿಸಬಹದು ನಮ್ಮ ಚಿಂತನೆಗಳನ್ನು ಬದಲಿಸಲು ಸಾಧ್ಯವಿಲ್ಲ ಎಂದು ಸವಾಲು ಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...