Homeಮುಖಪುಟತಮಿಳುನಾಡಿನಲ್ಲಿ ಕೋಮು ರಾಜಕೀಯ ಮಾಡಲೋಗಿ ಮತ್ತೆ ಕೈಸುಟ್ಟುಕೊಂಡ ಬಿಜೆಪಿ..

ತಮಿಳುನಾಡಿನಲ್ಲಿ ಕೋಮು ರಾಜಕೀಯ ಮಾಡಲೋಗಿ ಮತ್ತೆ ಕೈಸುಟ್ಟುಕೊಂಡ ಬಿಜೆಪಿ..

- Advertisement -
- Advertisement -

ಶತಾಯಗತಾಯ ತಮಿಳುನಾಡಿನಲ್ಲಿ ನೆಲೆ ಕಂಡುಕೊಳ್ಳಲು ಯತ್ನಿಸುತ್ತಿರುವ ಬಿಜೆಪಿಗೆ ಸೋಲಿನ ಮೇಲೆ ಸೋಲುಗಳು ಎದುರಾಗಿವೆ. ದೇಶದಲ್ಲಿಯೇ ಭಾರೀ ಬಹುಮತವನ್ನು ಹೊಂದಿರುವ ಬಿಜೆಪಿ ದಕ್ಷಿಣದ ತಮಿಳುನಾಡಿನಲ್ಲಿ ಒಂದೂ ಸ್ಥಾನ ಗೆದ್ದಿಲ್ಲ.

ಅಷ್ಟು ಮಾತ್ರವಲ್ಲ ಪ್ರತಿ ಭಾರೀ ಮೋದಿ ತಮಿಳುನಾಡಿಗೆ ಭೇಟಿ ನೀಡಿದಾಗಲೆಲ್ಲಾ ಗೋಬ್ಯಾಕ್‌ ಮೋದಿ ಎಂಬ ಹ್ಯಾಷ್‌ಟ್ಯಾಗ್‌ಗಳು ಟ್ವಿಟ್ಟರ್‌ನಲ್ಲಿ ಸದ್ದು ಮಾಡುತ್ತವೆ. ಆದರೂ ಛಲಬಿಡದ ಬಿಜೆಪಿ ಏನಾದರೂ ಮಾಡಿ ನೆಲೆ ಕಂಡುಕೊಳ್ಳಲು ಸಾಧ್ಯವಿರುವ ಎಲ್ಲಾ ಮಾರ್ಗಗಳನ್ನು ಬಳಸುತ್ತಿದೆ. ಕಳೆದ ತಿಂಗಳು ಚೀನಾದ ಅಧ್ಯಕ್ಷರನ್ನು ತಮಿಳುನಾಡಿನ ಮಾಮಲ್ಲಪುರಂಗೆ ಕರೆದುಕೊಂಡು ಹೋಗಿ ಪುಸಿ ಹೊಡೆದಿದ್ದ ಮೋದಿಪಡೆ ಈ ಬಾರಿ ತಮಿಳಿನ ಸಾಂಸ್ಕೃತಿಕ ಸಾಹಿತ್ಯಕ ಲೋಕಕ್ಕೆ ಪ್ರವೇಶಿಸಲು ನೋಡಿ ಕೈಸುಟ್ಟುಕೊಂಡಿದೆ.

ತಮಿಳಿನ ಪ್ರಖಾತ್ಯ ಕವಿ ತಿರುವಳ್ಳುವರ್‌ ಎಂದರೆ ಎಲ್ಲರಿಗೂ ಪ್ರೀತಿ. ತಮಿಳರಿಗೆ ಮಾತ್ರವಲ್ಲದೇ ಕರ್ನಾಟಕದಲ್ಲಿಯೂ ಕೂಡ ತಿರುವಳ್ಳುವರ್‌ ಪ್ರತಿಮೆ ನಿರ್ಮಿಸಿ ಗೌರವಿಸಲಾಗಿದೆ. ಇಂತಹ ತಿರುವಳ್ಳುವರ್‌ರವರ ಭಾವಚಿತ್ರವನ್ನು ಬಿಜೆಪಿ ತಿರುಚಲು ಹೋಗಿ ಸಿಕ್ಕಿಬಿದ್ದಿದೆ. ಬಿಳಿ ಬಣ್ಣದ ವಸ್ತ್ರ ಧರಿಸಿರುವ ತಿರುವಳ್ಳುವರ್‌ರವರ ಭಾವಚಿತ್ರಗಳು ತಮಿಳುನಾಡಿನ ಎಲ್ಲಾ ಮನೆಗಳಲ್ಲೂ ಮನೆಮಾತಾಗಿರುವುದು ಎಲ್ಲರಿಗೂ ತಿಳಿದ ವಿಚಾರ. ಆದರೆ ಬಿಜೆಪಿಗರೂ ತಿರುವಳ್ಳುವರ್‌ ಹಿಂದೂ ಧರ್ಮದವರಾದ್ದರಿಂದ ಅವರ ಭಾವಚಿತ್ರ ಕೇಸರಿ ಬಣ್ಣದಲ್ಲಿರಬೇಕೆಂದು ಬಯಸಿ ಕೇಸರಿ ಬಣ್ಣದ ಭಾವಚಿತ್ರಗಳನ್ನು ಟ್ವೀಟ್‌ ಮಾಡಿದ್ದಾರೆ.

ಇದು ತಮಿಳರ ಸ್ವಾಭಿಮಾನವನ್ನು ಬಡಿದೆಬ್ಬಿಸಿದೆ. ಕೂಡಲೇ ’ಬಿಜೆಪಿ ತಿರುವಳ್ಳುವರ್‌ಗೆ ಅವಮಾನಿಸಿದ” #BJPInsultsThiruvalluvar ಎಂದು ಆರೋಪಿಸಿ ಟ್ವಿಟ್ಟರ್‌ನಲ್ಲಿ ಟ್ರೆಂಡ್‌ ಮಾಡಿದ್ದಾರೆ.

ತಮಿಳುನಾಡಿನಲ್ಲಿ 1000 ಸಂಘಟನೆಗಳು, ರಾಜಕೀಯ ಪಕ್ಷಗಳು ಮತ್ತು ಸಾಮಾಜಿಕ ಚಳುವಳಿಗಳು ನಡೆದಿವೆ. ಎಡ ಅಥವಾ ಬಲವಾಗಿರಲಿ ಅವರಲ್ಲಿ ಯಾರೂ ಕೂಡ ತಿರುವಳ್ಳುವರ್‌ರವರಿಗೆ ಕೋಮು ಬಣ್ಣವನ್ನು ನೀಡಿರಲಿಲ್ಲ ಅಥವಾ  ಅವರ ಸಿದ್ಧಾಂತಕ್ಕೆ ಬಣ್ಣ ಕೊಟ್ಟಿರಲಿಲ್ಲ. ಆದರೀಗ ಬಿಜೆಪಿಯ ಕೋಮುರಾಜಕೀಯಕ್ಕೆ ತಿರುವಳ್ಳುವರ್ ಸಹ ಉಳಿದಿಲ್ಲ ಎಂಬುದು ಬೇಸರದ ಸಂಗತಿ ಎಂದು ಹಲವು ಜನ ಅಭಿಪ್ರಾಯಪಟ್ಟಿದ್ದಾರೆ.

ಮಹಾನ್ ಕವಿ ತಿರುವಳ್ಳುವರ್ ಅವರಿಗೆ ಕೇಸರಿ ಬಣ್ಣ ನೀಡಿ ಬಿಜೆಪಿ ಅವಮಾನಿಸಿದೆ. ತಿರುವಳ್ಳುವರ್ ಅವರ ಕೆಲಸವನ್ನು ವಿಶ್ವದಾದ್ಯಂತ ಜಾತ್ಯತೀತ ಮನೋಭಾವದಿಂದ ಸ್ವೀಕರಿಸಲಾಗಿದೆ. ಈ ವಿವಾದವನ್ನು ಸೃಷ್ಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಆಶೀಸ್‌ ವಿವೇಕ್‌ ಎಂಬುವವರು ಆಗ್ರಹಿಸಿದ್ದಾರೆ.

ಇಂದು ನಾನು ತುಂಬಾ ದುಃಖಿತನಾಗಿದ್ದೇನೆ. ನನ್ನ ಸಂಸ್ಕೃತಿ, ಸಾಹಿತ್ಯ, ಜನರು ಮತ್ತು ಸ್ಥಳಗಳೆಲ್ಲವೂ ಹಿಂದುತ್ವದಿಂದ ಅಪಾಯದಲ್ಲಿದೆ ಎಂದು ನಾವೆಲ್ಲರೂ ಸ್ಪಷ್ಟವಾಗಿ ನೋಡಬಹುದು.

ಬ್ರಿಟಿಷರಂತೆಯೇ ಬಿಜೆಪಿಯು ಸಹ ವಿಭಜನೆಯ ನಿಯಮವನ್ನು ಬಳಸಿಕೊಂಡು ತಮಿಳುನಾಡು ಪ್ರವೇಶಿಸಲು ಪ್ರಯತ್ನಿಸುತ್ತಿದೆ. ನಾನು ಇದನ್ನು ಕ್ಷಮಿಸುವುದಿಲ್ಲ ಅಥವಾ ಮರೆಯುವುದಿಲ್ಲ ಮತ್ತೊಬ್ಬರು ಟ್ವೀಟ್‌ ಮಾಡಿದ್ದಾರೆ.

ಅಲ್ಲದೇ ಅಂಬೇಡ್ಕರ್‌ ಸೇರಿದಂತೆ ಎಲ್ಲಾ ನಾಯಕರನ್ನು ಕೇಸರಿ ಬಣ್ಣಕ್ಕೆ ತಿರುಗಿಸುವ ಬಿಜೆಪಿಯ ತಂತ್ರಕ್ಕೆ ಪ್ರತಿರೋಧ ವ್ಯಕ್ತವಾಗಿದೆ. ಬಣ್ಣವನ್ನಷ್ಟೇ ಬದಲಿಸಬಹದು ನಮ್ಮ ಚಿಂತನೆಗಳನ್ನು ಬದಲಿಸಲು ಸಾಧ್ಯವಿಲ್ಲ ಎಂದು ಸವಾಲು ಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...