Homeಮುಖಪುಟತಮಿಳುನಾಡಿನಲ್ಲಿ ಕೋಮು ರಾಜಕೀಯ ಮಾಡಲೋಗಿ ಮತ್ತೆ ಕೈಸುಟ್ಟುಕೊಂಡ ಬಿಜೆಪಿ..

ತಮಿಳುನಾಡಿನಲ್ಲಿ ಕೋಮು ರಾಜಕೀಯ ಮಾಡಲೋಗಿ ಮತ್ತೆ ಕೈಸುಟ್ಟುಕೊಂಡ ಬಿಜೆಪಿ..

- Advertisement -
- Advertisement -

ಶತಾಯಗತಾಯ ತಮಿಳುನಾಡಿನಲ್ಲಿ ನೆಲೆ ಕಂಡುಕೊಳ್ಳಲು ಯತ್ನಿಸುತ್ತಿರುವ ಬಿಜೆಪಿಗೆ ಸೋಲಿನ ಮೇಲೆ ಸೋಲುಗಳು ಎದುರಾಗಿವೆ. ದೇಶದಲ್ಲಿಯೇ ಭಾರೀ ಬಹುಮತವನ್ನು ಹೊಂದಿರುವ ಬಿಜೆಪಿ ದಕ್ಷಿಣದ ತಮಿಳುನಾಡಿನಲ್ಲಿ ಒಂದೂ ಸ್ಥಾನ ಗೆದ್ದಿಲ್ಲ.

ಅಷ್ಟು ಮಾತ್ರವಲ್ಲ ಪ್ರತಿ ಭಾರೀ ಮೋದಿ ತಮಿಳುನಾಡಿಗೆ ಭೇಟಿ ನೀಡಿದಾಗಲೆಲ್ಲಾ ಗೋಬ್ಯಾಕ್‌ ಮೋದಿ ಎಂಬ ಹ್ಯಾಷ್‌ಟ್ಯಾಗ್‌ಗಳು ಟ್ವಿಟ್ಟರ್‌ನಲ್ಲಿ ಸದ್ದು ಮಾಡುತ್ತವೆ. ಆದರೂ ಛಲಬಿಡದ ಬಿಜೆಪಿ ಏನಾದರೂ ಮಾಡಿ ನೆಲೆ ಕಂಡುಕೊಳ್ಳಲು ಸಾಧ್ಯವಿರುವ ಎಲ್ಲಾ ಮಾರ್ಗಗಳನ್ನು ಬಳಸುತ್ತಿದೆ. ಕಳೆದ ತಿಂಗಳು ಚೀನಾದ ಅಧ್ಯಕ್ಷರನ್ನು ತಮಿಳುನಾಡಿನ ಮಾಮಲ್ಲಪುರಂಗೆ ಕರೆದುಕೊಂಡು ಹೋಗಿ ಪುಸಿ ಹೊಡೆದಿದ್ದ ಮೋದಿಪಡೆ ಈ ಬಾರಿ ತಮಿಳಿನ ಸಾಂಸ್ಕೃತಿಕ ಸಾಹಿತ್ಯಕ ಲೋಕಕ್ಕೆ ಪ್ರವೇಶಿಸಲು ನೋಡಿ ಕೈಸುಟ್ಟುಕೊಂಡಿದೆ.

ತಮಿಳಿನ ಪ್ರಖಾತ್ಯ ಕವಿ ತಿರುವಳ್ಳುವರ್‌ ಎಂದರೆ ಎಲ್ಲರಿಗೂ ಪ್ರೀತಿ. ತಮಿಳರಿಗೆ ಮಾತ್ರವಲ್ಲದೇ ಕರ್ನಾಟಕದಲ್ಲಿಯೂ ಕೂಡ ತಿರುವಳ್ಳುವರ್‌ ಪ್ರತಿಮೆ ನಿರ್ಮಿಸಿ ಗೌರವಿಸಲಾಗಿದೆ. ಇಂತಹ ತಿರುವಳ್ಳುವರ್‌ರವರ ಭಾವಚಿತ್ರವನ್ನು ಬಿಜೆಪಿ ತಿರುಚಲು ಹೋಗಿ ಸಿಕ್ಕಿಬಿದ್ದಿದೆ. ಬಿಳಿ ಬಣ್ಣದ ವಸ್ತ್ರ ಧರಿಸಿರುವ ತಿರುವಳ್ಳುವರ್‌ರವರ ಭಾವಚಿತ್ರಗಳು ತಮಿಳುನಾಡಿನ ಎಲ್ಲಾ ಮನೆಗಳಲ್ಲೂ ಮನೆಮಾತಾಗಿರುವುದು ಎಲ್ಲರಿಗೂ ತಿಳಿದ ವಿಚಾರ. ಆದರೆ ಬಿಜೆಪಿಗರೂ ತಿರುವಳ್ಳುವರ್‌ ಹಿಂದೂ ಧರ್ಮದವರಾದ್ದರಿಂದ ಅವರ ಭಾವಚಿತ್ರ ಕೇಸರಿ ಬಣ್ಣದಲ್ಲಿರಬೇಕೆಂದು ಬಯಸಿ ಕೇಸರಿ ಬಣ್ಣದ ಭಾವಚಿತ್ರಗಳನ್ನು ಟ್ವೀಟ್‌ ಮಾಡಿದ್ದಾರೆ.

ಇದು ತಮಿಳರ ಸ್ವಾಭಿಮಾನವನ್ನು ಬಡಿದೆಬ್ಬಿಸಿದೆ. ಕೂಡಲೇ ’ಬಿಜೆಪಿ ತಿರುವಳ್ಳುವರ್‌ಗೆ ಅವಮಾನಿಸಿದ” #BJPInsultsThiruvalluvar ಎಂದು ಆರೋಪಿಸಿ ಟ್ವಿಟ್ಟರ್‌ನಲ್ಲಿ ಟ್ರೆಂಡ್‌ ಮಾಡಿದ್ದಾರೆ.

ತಮಿಳುನಾಡಿನಲ್ಲಿ 1000 ಸಂಘಟನೆಗಳು, ರಾಜಕೀಯ ಪಕ್ಷಗಳು ಮತ್ತು ಸಾಮಾಜಿಕ ಚಳುವಳಿಗಳು ನಡೆದಿವೆ. ಎಡ ಅಥವಾ ಬಲವಾಗಿರಲಿ ಅವರಲ್ಲಿ ಯಾರೂ ಕೂಡ ತಿರುವಳ್ಳುವರ್‌ರವರಿಗೆ ಕೋಮು ಬಣ್ಣವನ್ನು ನೀಡಿರಲಿಲ್ಲ ಅಥವಾ  ಅವರ ಸಿದ್ಧಾಂತಕ್ಕೆ ಬಣ್ಣ ಕೊಟ್ಟಿರಲಿಲ್ಲ. ಆದರೀಗ ಬಿಜೆಪಿಯ ಕೋಮುರಾಜಕೀಯಕ್ಕೆ ತಿರುವಳ್ಳುವರ್ ಸಹ ಉಳಿದಿಲ್ಲ ಎಂಬುದು ಬೇಸರದ ಸಂಗತಿ ಎಂದು ಹಲವು ಜನ ಅಭಿಪ್ರಾಯಪಟ್ಟಿದ್ದಾರೆ.

ಮಹಾನ್ ಕವಿ ತಿರುವಳ್ಳುವರ್ ಅವರಿಗೆ ಕೇಸರಿ ಬಣ್ಣ ನೀಡಿ ಬಿಜೆಪಿ ಅವಮಾನಿಸಿದೆ. ತಿರುವಳ್ಳುವರ್ ಅವರ ಕೆಲಸವನ್ನು ವಿಶ್ವದಾದ್ಯಂತ ಜಾತ್ಯತೀತ ಮನೋಭಾವದಿಂದ ಸ್ವೀಕರಿಸಲಾಗಿದೆ. ಈ ವಿವಾದವನ್ನು ಸೃಷ್ಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಆಶೀಸ್‌ ವಿವೇಕ್‌ ಎಂಬುವವರು ಆಗ್ರಹಿಸಿದ್ದಾರೆ.

ಇಂದು ನಾನು ತುಂಬಾ ದುಃಖಿತನಾಗಿದ್ದೇನೆ. ನನ್ನ ಸಂಸ್ಕೃತಿ, ಸಾಹಿತ್ಯ, ಜನರು ಮತ್ತು ಸ್ಥಳಗಳೆಲ್ಲವೂ ಹಿಂದುತ್ವದಿಂದ ಅಪಾಯದಲ್ಲಿದೆ ಎಂದು ನಾವೆಲ್ಲರೂ ಸ್ಪಷ್ಟವಾಗಿ ನೋಡಬಹುದು.

ಬ್ರಿಟಿಷರಂತೆಯೇ ಬಿಜೆಪಿಯು ಸಹ ವಿಭಜನೆಯ ನಿಯಮವನ್ನು ಬಳಸಿಕೊಂಡು ತಮಿಳುನಾಡು ಪ್ರವೇಶಿಸಲು ಪ್ರಯತ್ನಿಸುತ್ತಿದೆ. ನಾನು ಇದನ್ನು ಕ್ಷಮಿಸುವುದಿಲ್ಲ ಅಥವಾ ಮರೆಯುವುದಿಲ್ಲ ಮತ್ತೊಬ್ಬರು ಟ್ವೀಟ್‌ ಮಾಡಿದ್ದಾರೆ.

ಅಲ್ಲದೇ ಅಂಬೇಡ್ಕರ್‌ ಸೇರಿದಂತೆ ಎಲ್ಲಾ ನಾಯಕರನ್ನು ಕೇಸರಿ ಬಣ್ಣಕ್ಕೆ ತಿರುಗಿಸುವ ಬಿಜೆಪಿಯ ತಂತ್ರಕ್ಕೆ ಪ್ರತಿರೋಧ ವ್ಯಕ್ತವಾಗಿದೆ. ಬಣ್ಣವನ್ನಷ್ಟೇ ಬದಲಿಸಬಹದು ನಮ್ಮ ಚಿಂತನೆಗಳನ್ನು ಬದಲಿಸಲು ಸಾಧ್ಯವಿಲ್ಲ ಎಂದು ಸವಾಲು ಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...