Homeಮುಖಪುಟದೆಹಲಿ ಅಬಕಾರಿ ಹಗರಣದಲ್ಲಿ ಬಿಜೆಪಿ ಕೈವಾಡವಿದೆ: ಎಎಪಿ ನಾಯಕ ಸಂಜಯ್ ಸಿಂಗ್ ಆರೋಪ

ದೆಹಲಿ ಅಬಕಾರಿ ಹಗರಣದಲ್ಲಿ ಬಿಜೆಪಿ ಕೈವಾಡವಿದೆ: ಎಎಪಿ ನಾಯಕ ಸಂಜಯ್ ಸಿಂಗ್ ಆರೋಪ

- Advertisement -
- Advertisement -

‘ದೆಹಲಿ ಅಬಕಾರಿ ಹಗರಣವು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜೈಲಿಗೆ ಹಾಕಲು ಭಾರತೀಯ ಜನತಾ ಪಕ್ಷ (ಬಿಜೆಪಿ) ನಡೆಸಿದ ದೊಡ್ಡ ಪಿತೂರಿಯಾಗಿದೆ; ಪಿತೂರಿಯಲ್ಲಿ ಬಿಜೆಪಿಯ ಉನ್ನತ ನಾಯಕರು ಭಾಗಿಯಾಗಿದ್ದಾರೆ’ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಶುಕ್ರವಾರ ಗಂಭೀರ ಆರೋಪ ಮಾಡಿದ್ದಾರೆ.

ಅಬಕಾರಿ ನೀತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದ ನಂತರ ಬುಧವಾರ ತಿಹಾರ್ ಜೈಲಿನಿಂದ ಬಿಡುಗಡೆಯಾದ ಸಂಜಯ್ ಸಿಂಗ್, ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ‘ಇಂದು ನಿಮ್ಮ ಮುಂದೆ ನಾನು ಈ ಪಿತೂರಿ ಹೇಗೆ ಎಂದು ಹೇಳಲಿದ್ದೇನೆ; ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲು ಪಿತೂರಿ ಮಾಡಲಾಗಿತ್ತು… ಈ ಮದ್ಯದ ಹಗರಣ ಬಿಜೆಪಿಯಿಂದಲೇ ನಡೆದಿದೆ ಎನ್ನುವುದನ್ನು ಬಹಿರಂಗಪಡಿಸುತ್ತೇನೆ. ಇದರಲ್ಲಿ ಬಿಜೆಪಿಯ ಹಿರಿಯ ನಾಯಕರು ಭಾಗಿಯಾಗಿದ್ದಾರೆ’ ಎಂದರು.

ಪ್ರಕರಣದಲ್ಲಿ ಇಡಿ ಅನುಮೋದಕರಾಗಿ ಕೇಜ್ರಿವಾಲ್ ವಿರುದ್ಧ ಹೇಳಿಕೆ ನೀಡಿದ ಮಾಗುಂತ ರೆಡ್ಡಿ ಎಂಬ ವ್ಯಕ್ತಿಯ ಬಗ್ಗೆ ಸಿಂಗ್ ಪ್ರಸ್ತಾಪಿಸಿದರು. ‘ಐದು ತಿಂಗಳ ಚಿತ್ರಹಿಂಸೆಯ ನಂತರ ರೆಡ್ಡಿ ಹೇಳಿಕೆಯನ್ನು ಬದಲಾಯಿಸಿದ್ದಾರೆ; ದೆಹಲಿ ಸಿಎಂ ವಿರುದ್ಧ ಸುಳ್ಳು ಹೇಳಿಕೆ ನೀಡಿದ್ದಾರೆ’ ಎಂದು ಸಿಂಗ್ ಹೇಳಿದ್ದಾರೆ.

‘3 ಹೇಳಿಕೆ ನೀಡಿದ ಮಾಗುಂಟ ರೆಡ್ಡಿ ಎಂಬ ಒಬ್ಬ ವ್ಯಕ್ತಿ, ಅವರ ಮಗ ರಾಘವ್ ಮಾಗುಂಟ 7 ಹೇಳಿಕೆಗಳನ್ನು ನೀಡಿದ್ದಾರೆ. ಸೆಪ್ಟೆಂಬರ್ 16 ರಂದು ಅರವಿಂದ್ ಕೇಜ್ರಿವಾಲ್ ಅವರಿಗೆ ತಿಳಿದಿದೆಯೇ ಎಂದು ಇಡಿ ಅವರನ್ನು (ಮಗುಂತ ರೆಡ್ಡಿ) ಮೊದಲು ಪ್ರಶ್ನಿಸಿದಾಗ ಅವರು ಸತ್ಯವನ್ನು ಹೇಳಿದರು. ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾದರು. ಆದರೆ ಚಾರಿಟಬಲ್ ಟ್ರಸ್ಟ್ ಜಮೀನಿನ ವಿಷಯದಲ್ಲಿ. ನಂತರ, ಅವರ ಮಗನನ್ನು ಬಂಧಿಸಲಾಯಿತು ಮತ್ತು ಐದು ತಿಂಗಳು ಜೈಲಿನಲ್ಲಿಟ್ಟ ನಂತರ ಅವರ ತಂದೆ ತಮ್ಮ ಹೇಳಿಕೆಯನ್ನು ಬದಲಾಯಿಸಿದರು” ಎಂದು ಸಂಜಯ್ ಸಿಂಗ್ ಹೇಳಿದರು.

‘ಫೆಬ್ರವರಿ 10 ರಿಂದ ಜುಲೈ 16 ರವರೆಗೆ ರಾಘವ್ ಮಾಗುಂಟರಿಂದ ಏಳು ಹೇಳಿಕೆಗಳನ್ನು ತೆಗೆದುಕೊಳ್ಳಲಾಗಿದೆ. ಏಳು ಹೇಳಿಕೆಗಳಲ್ಲಿ ಆರರಲ್ಲಿ ಅವರು ಅರವಿಂದ್ ಕೇಜ್ರಿವಾಲ್ ವಿರುದ್ಧ ಏನನ್ನೂ ಹೇಳುವುದಿಲ್ಲ. ಆದರೆ, ಜುಲೈ 16 ರಂದು ಏಳನೇ ಹೇಳಿಕೆಯಲ್ಲಿ ಅವರು ತಮ್ಮ ನಿಲುವು ಬದಲಿಸಿ ಪಿತೂರಿಯ ಭಾಗವಾಗಿದ್ದಾರೆ; ಅರವಿಂದ್ ಕೇಜ್ರಿವಾಲ್ ವಿರುದ್ಧ ಹೇಳಿಕೆ ನೀಡುತ್ತಾರೆ. 5 ತಿಂಗಳ ಚಿತ್ರಹಿಂಸೆಯ ನಂತರ ಅವರು ತಮ್ಮ ಹೇಳಿಕೆಯನ್ನು ಬದಲಾಯಿಸಿ, ಕೇಜ್ರಿವಾಲ್ ವಿರುದ್ಧ ನಿಂತರು’ ಎಂದು ಸಂಜಯ್ ಸಿಂಗ್ ವಿವರಿಸಿದರು.

“ನವೆಂಬರ್ 9, 2022 ರಂದು ಶರತ್ ರೆಡ್ಡಿ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ನಿಮಗೆ ಅರವಿಂದ್ ಕೇಜ್ರಿವಾಲ್ ಅವರ ಪರಿಚಯವಿದೆಯೇ ಎಂದು ಕೇಳಿದಾಗ, ಅವರು ಅದನ್ನು ನಿರಾಕರಿಸಿದರು. ನಾನು ಅವರನ್ನು ಭೇಟಿ ಮಾಡಿಲ್ಲ ಎಂದು ಹೇಳಿದರು. ಶರತ್ ರೆಡ್ಡಿಯನ್ನು 12 ಹೇಳಿಕೆಗಳನ್ನು ದಾಖಲಿಸಿಕೊಂಡು, ನವೆಂಬರ್ 10 ರಂದು ಬಂಧಿಸಿ ಏಪ್ರಿಲ್ 25 ರವರೆಗೆ ಒಟ್ಟು ಆರು ತಿಂಗಳ ಕಾಲ ಜೈಲಿನಲ್ಲಿ ಇರಿಸಲಾಗಿತ್ತು ಎಂದರು.

“ಆರು ತಿಂಗಳ ನಂತರ, ಹೇಳಿಕೆ ನೀಡುವಂತೆ ಕೇಳಿದಾಗ, ಅವರು ಜೈಲಿನಲ್ಲಿ ಕೊಳೆಯುತ್ತಾರೆ ಎಂದು ಬೆದರಿಸಿದ ನಂತರ, ಏಪ್ರಿಲ್ 25 ರಂದು ಅವರು ಕೇಜ್ರಿವಾಲ್ ವಿರುದ್ಧ ಹೇಳಿಕೆ ನೀಡಿದರು. ಕೇಜ್ರಿವಾಲ್ ವಿರುದ್ಧವಲ್ಲದ ಹತ್ತು ಹೇಳಿಕೆಗಳ ಬಗ್ಗೆ ಇಡಿ ಹೇಳಿದೆ. ಅರವಿಂದ್ ಕೇಜ್ರಿವಾಲ್ ವಿರುದ್ಧ ನೀಡಿದ ಹೇಳಿಕೆಗಾಗಿ ಅವರು ಜಾಮೀನು ಪಡೆದರು”ಎಂದು ಅವರು ಹೇಳಿದರು.

ಇಡಿ ಪ್ರಕಾರ ಹಗರಣದಲ್ಲಿ ಭಾಗಿಯಾಗಿರುವ ವ್ಯಕ್ತಿಯೊಬ್ಬರು ತೆಲುಗು ದೇಶಂ ಪಕ್ಷದಿಂದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ ಮತ್ತು ಪ್ರಧಾನಿಯವರ ಫೋಟೋವನ್ನು ಬಳಸಿಕೊಂಡು ಮತ ಕೇಳುತ್ತಿದ್ದಾರೆ ಎಂದು ಹೇಳಿದರು.

”ಮದ್ಯ ಹಗರಣದಲ್ಲಿ ಭಾಗಿಯಾಗಿದ್ದಾರೆಂದು ಇಡಿ ಹೇಳುತ್ತಿರುವ ವ್ಯಕ್ತಿಗೂ ಪ್ರಧಾನಿಗೂ ಏನು ಸಂಬಂಧ? ಅವರು ಟಿಡಿಪಿಯಿಂದ ಚುನಾವಣೆಗೆ ಸ್ಪರ್ಧಿಸಿ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರ ಹಾಕಿಕೊಂಡು ಮತ ಕೇಳುತ್ತಿದ್ದಾರೆ… ಬಿಜೆಪಿ ಮತ್ತು ಇಡಿ ಕರೆ ಮಾಡಿ ಒಬ್ಬ ಹಗರಣಗಾರ ಮತ್ತು ಅವನು ಪ್ರಧಾನಿಯ ಚಿತ್ರವನ್ನು ಬಳಸಿಕೊಂಡು ಜನರಿಂದ ಮತ ಕೇಳುತ್ತಾನೆ ಯಾಕೆ” ಎಂದು ಸಂಜಯ್ ಸಿಂಗ್ ಪ್ರಶ್ನಿಸಿದ್ದಾರೆ.

ಪ್ರಕರಣ ಸಂಬಂಧ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಬಂಧಿಸಲಾಯಿತು ಮತ್ತು ನಂತರ ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್ 15 ರವರೆಗೆ ವಿಸ್ತರಿಸಲಾಯಿತು.

ಇದನ್ನೂ ಓದಿ; ‘ಯುಪಿ ಮದ್ರಸಾ ಕಾನೂನು’ ರದ್ದುಗೊಳಿಸುವ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...