Homeಮುಖಪುಟಬಿಜೆಪಿ ದೇಶಕ್ಕೆ ವಿನಾಶಕಾರಿ ಶಕ್ತಿ: ಅಮಿತ್ ಶಾಗೆ ಪಿಣರಾಯಿ ವಿಜಯನ್ ತಿರುಗೇಟು

ಬಿಜೆಪಿ ದೇಶಕ್ಕೆ ವಿನಾಶಕಾರಿ ಶಕ್ತಿ: ಅಮಿತ್ ಶಾಗೆ ಪಿಣರಾಯಿ ವಿಜಯನ್ ತಿರುಗೇಟು

- Advertisement -
- Advertisement -

ಕೇರಳದ ಸುರಕ್ಷತೆ ಬಗ್ಗೆ ಇತ್ತೀಚೆಗೆ ಚುನಾವಣಾ ರ್ಯಾಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು  ಮಾತನಾಡಿದ್ದರು. ಅದಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಬಿಜೆಪಿ ದೇಶಕ್ಕೆ ವಿನಾಶಕಾರಿ ಶಕ್ತಿಯಾಗಿ ಪರಿಣಮಿಸಿದೆ ಎಂದು ತಿರುಗೇಟು ನೀಡಿದ್ದಾರೆ.

ಇತ್ತೀಚೆಗೆ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ರ್ಯಾಲಿಯಲ್ಲಿ, ”ನಿಮಗೆ [ಕರ್ನಾಟಕ] ಸಮೀಪದಲ್ಲಿ ಕೇರಳವಿದೆ” ಎಂದು ಅಮಿತ್ ಶಾ ಹೇಳಿದ್ದರು. “ನಾನು ಹೆಚ್ಚು ಹೇಳಲು ಬಯಸುವುದಿಲ್ಲ. ಕರ್ನಾಟಕವನ್ನು ಸುರಕ್ಷಿತವಾಗಿಡಬೇಕಾದರೆ ಬಿಜೆಪಿಯಿಂದ ಮಾತ್ರ ಸಾಧ್ಯ. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಕರ್ನಾಟಕದ ಬಿಜೆಪಿ ಸರ್ಕಾರ ಮಾತ್ರ ಇದನ್ನು ಮಾಡಲು ಸಾಧ್ಯ. ತಮ್ಮ ಪಕ್ಷದಿಂದ ಮಾತ್ರ ರಾಜ್ಯವನ್ನು ಸುರಕ್ಷಿತವಾಗಿಡಲು ಸಾಧ್ಯ ಎಂದು ಹೇಳಿರುವುದಾಗಿ ಎಎನ್‌ಐ ವರದಿ ಮಾಡಿತ್ತು.

ಕೇರಳದ ಉಲ್ಲೇಖದ ಅರ್ಥವನ್ನು ಗೃಹ ಸಚಿವರು ವಿವರಿಸಲಿಲ್ಲ. ಆದಾಗ್ಯೂ, ಕಳೆದ ವರ್ಷ ಐದು ವರ್ಷಗಳ ಕಾಲ ನಿಷೇಧಕ್ಕೊಳಗಾದ ಇಸ್ಲಾಮಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮೇಲೆ ಕೇಂದ್ರದ ಶಿಸ್ತುಕ್ರಮದ ಹಿನ್ನೆಲೆಯಲ್ಲಿ ಅವರು ಈ ರೀತಿ ಮಾತನಾಡಿದ್ದಾರೆ. ನವೆಂಬರ್ 2006ರಲ್ಲಿ ಕೇರಳದ ಕೋಝಿಕ್ಕೋಡ್‌ನಲ್ಲಿ ಈ ಸಂಘಟನೆಯನ್ನು ರಚಿಸಲಾಯಿತು.

ಇದನ್ನೂ ಓದಿ: ಹೈದರಾಬಾದ್ ಕೇಂದ್ರೀಯ ವಿ.ವಿಯಲ್ಲಿ ಮೋದಿ ಸಾಕ್ಷ್ಯಚಿತ್ರ ಪ್ರದರ್ಶನ ಯಶಸ್ವಿ: JNU, ಕೇರಳದಲ್ಲಿ ಇಂದು

ಅಮಿತ್ ಶಾ ಅವರ ಹೇಳಿಕೆಗೆ ಭಾನುವಾರ ಪ್ರತಿಕ್ರಿಯಿಸಿದ ವಿಜಯನ್, ”ಕೇರಳ ಶಾಂತಿ ಮತ್ತು ಜಾತ್ಯತೀತತೆಯ ಓಯಸಿಸ್ ಎಂದು ಹೇಳಿದ್ದಾರೆ ಮತ್ತು ಸಂಘ ಪರಿವಾರದ ಕಾರ್ಯಸೂಚಿಯು ರಾಜ್ಯದಲ್ಲಿ ಸ್ವಲ್ಪಮಟ್ಟಿನ ಎಳೆತವನ್ನು ಕಂಡುಕೊಂಡಿದೆ ಎಂದು ಹೇಳರುವುದಾಗಿ ದಿ ಹಿಂದೂ ವರದಿ ಮಾಡಿದೆ.

”ಮಂಗಳೂರಿನಲ್ಲಿ 2021ರ ಕ್ರಿಸ್‌ಮಸ್ ಸಮಯದಲ್ಲಿ 150 ವರ್ಷಗಳಷ್ಟು ಹಳೆಯದಾದ ಚರ್ಚ್‌ನ್ನು ಧ್ವಂಸ ಮಾಡಿದ ಶ್ರೀರಾಮ ಸೇನೆ ಕೇರಳದಲ್ಲಿ ಇಲ್ಲ” ಎಂದು ವಿಜಯನ್ ಹೇಳಿದರು.

ದೇಶದಲ್ಲಿ ಹೆಚ್ಚುತ್ತಿರುವ ಬಡತನ ಮತ್ತು ಹಸಿವು, ಹೆಚ್ಚುತ್ತಿರುವ ಜೀವನ ವೆಚ್ಚ ಮತ್ತು ಬೆರಳಣಿಕೆ ಜನರ ಸಂಪತ್ತು ಹೆಚ್ಚುತ್ತಿರುವ ವಿಚಾರಗಳ ಬಗ್ಗೆ ಸಾರ್ವಜನಿಕರ ಗಮನ ಬೇರೆಡೆಗೆ ತಿರುಗಿಸಲು ಕರ್ನಾಟಕದ ಬಿಜೆಪಿ ಸರ್ಕಾರವು ಅಲ್ಪಸಂಖ್ಯಾತರನ್ನು ರಾಕ್ಷಸೀಕರಿಸುವ ಮೂಲಕ ರಾಜಕೀಯ ಲಾಭಕ್ಕಾಗಿ ಕೋಮು ವಿಭಜನೆಯನ್ನು ಪ್ರಚೋದಿಸಿದೆ ಎಂದು ಅವರು ಹೇಳಿದರು.

“ಮಂಗಳೂರು ಸೇರಿದಂತೆ ಕರ್ನಾಟಕದ ನಮ್ಮ ಗಡಿ ಪ್ರದೇಶಗಳು ಅನೇಕ ಕೋಮುಗಲಭೆಗೆ ಸಾಕ್ಷಿಯಾಗಿದೆ” ಎಂದು ವಿಜಯನ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. ”2021ರ ಕ್ರಿಸ್‌ಮಸ್ ಋತುವಿನಲ್ಲಿ ಚಿಕ್ಕಮಗಳೂರಿನ 150 ವರ್ಷ ಹಳೆಯ ಚರ್ಚ್ ಮೇಲೆ ಸಂಘಪರಿವಾರ ದಾಳಿ ನಡೆಸಿತ್ತು. ಕ್ರೈಸ್ತರು ಮತ್ತು ಇತರ ಅಲ್ಪಸಂಖ್ಯಾತರು ಸಂಘಪರಿವಾರದಿಂದ ಇಂತಹ ಅನೇಕ ದಾಳಿಗಳನ್ನು ಎದುರಿಸಿದ್ದಾರೆ. ಆದರೆ ಕೇರಳದ ಪರಿಸ್ಥಿತಿ ಹೀಗಿದೆಯೇ? ಕೇರಳದಲ್ಲಿ ಯಾರೂ ಯಾವುದೇ ಸಮಸ್ಯೆಗಳನ್ನು ಎದುರಿಸುವುದಿಲ್ಲ ಏಕೆಂದರೆ ಅವರಿಗೆ ನಮ್ಮ ಸರ್ಕಾರದ ಮೇಲೆ ನಂಬಿಕೆ ಇದೆ” ಎಂದರು.

”ಬಿಜೆಪಿ ದೇಶಕ್ಕೆ ವಿನಾಶಕಾರಿ ಶಕ್ತಿಯಾಗಿ ಪರಿಣಮಿಸಿದೆ. ಬಿಜೆಪಿಗೆ ಇನ್ನೂ ಒಂದು ಅವಕಾಶ ನೀಡಿದರೆ, ಅದು ಈ ದೇಶಕ್ಕೆ ದುರಂತವಾಗಲಿದೆ” ಎಂದು ಮುಖ್ಯಮಂತ್ರಿ ವಿಜಯನ್ ಹೇಳಿರುವ ಬಗ್ಗೆ ಪಿಟಿಐ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...