Homeಮುಖಪುಟಬಿಜೆಪಿ ದೇಶಕ್ಕೆ ವಿನಾಶಕಾರಿ ಶಕ್ತಿ: ಅಮಿತ್ ಶಾಗೆ ಪಿಣರಾಯಿ ವಿಜಯನ್ ತಿರುಗೇಟು

ಬಿಜೆಪಿ ದೇಶಕ್ಕೆ ವಿನಾಶಕಾರಿ ಶಕ್ತಿ: ಅಮಿತ್ ಶಾಗೆ ಪಿಣರಾಯಿ ವಿಜಯನ್ ತಿರುಗೇಟು

- Advertisement -
- Advertisement -

ಕೇರಳದ ಸುರಕ್ಷತೆ ಬಗ್ಗೆ ಇತ್ತೀಚೆಗೆ ಚುನಾವಣಾ ರ್ಯಾಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು  ಮಾತನಾಡಿದ್ದರು. ಅದಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಬಿಜೆಪಿ ದೇಶಕ್ಕೆ ವಿನಾಶಕಾರಿ ಶಕ್ತಿಯಾಗಿ ಪರಿಣಮಿಸಿದೆ ಎಂದು ತಿರುಗೇಟು ನೀಡಿದ್ದಾರೆ.

ಇತ್ತೀಚೆಗೆ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ರ್ಯಾಲಿಯಲ್ಲಿ, ”ನಿಮಗೆ [ಕರ್ನಾಟಕ] ಸಮೀಪದಲ್ಲಿ ಕೇರಳವಿದೆ” ಎಂದು ಅಮಿತ್ ಶಾ ಹೇಳಿದ್ದರು. “ನಾನು ಹೆಚ್ಚು ಹೇಳಲು ಬಯಸುವುದಿಲ್ಲ. ಕರ್ನಾಟಕವನ್ನು ಸುರಕ್ಷಿತವಾಗಿಡಬೇಕಾದರೆ ಬಿಜೆಪಿಯಿಂದ ಮಾತ್ರ ಸಾಧ್ಯ. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಕರ್ನಾಟಕದ ಬಿಜೆಪಿ ಸರ್ಕಾರ ಮಾತ್ರ ಇದನ್ನು ಮಾಡಲು ಸಾಧ್ಯ. ತಮ್ಮ ಪಕ್ಷದಿಂದ ಮಾತ್ರ ರಾಜ್ಯವನ್ನು ಸುರಕ್ಷಿತವಾಗಿಡಲು ಸಾಧ್ಯ ಎಂದು ಹೇಳಿರುವುದಾಗಿ ಎಎನ್‌ಐ ವರದಿ ಮಾಡಿತ್ತು.

ಕೇರಳದ ಉಲ್ಲೇಖದ ಅರ್ಥವನ್ನು ಗೃಹ ಸಚಿವರು ವಿವರಿಸಲಿಲ್ಲ. ಆದಾಗ್ಯೂ, ಕಳೆದ ವರ್ಷ ಐದು ವರ್ಷಗಳ ಕಾಲ ನಿಷೇಧಕ್ಕೊಳಗಾದ ಇಸ್ಲಾಮಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮೇಲೆ ಕೇಂದ್ರದ ಶಿಸ್ತುಕ್ರಮದ ಹಿನ್ನೆಲೆಯಲ್ಲಿ ಅವರು ಈ ರೀತಿ ಮಾತನಾಡಿದ್ದಾರೆ. ನವೆಂಬರ್ 2006ರಲ್ಲಿ ಕೇರಳದ ಕೋಝಿಕ್ಕೋಡ್‌ನಲ್ಲಿ ಈ ಸಂಘಟನೆಯನ್ನು ರಚಿಸಲಾಯಿತು.

ಇದನ್ನೂ ಓದಿ: ಹೈದರಾಬಾದ್ ಕೇಂದ್ರೀಯ ವಿ.ವಿಯಲ್ಲಿ ಮೋದಿ ಸಾಕ್ಷ್ಯಚಿತ್ರ ಪ್ರದರ್ಶನ ಯಶಸ್ವಿ: JNU, ಕೇರಳದಲ್ಲಿ ಇಂದು

ಅಮಿತ್ ಶಾ ಅವರ ಹೇಳಿಕೆಗೆ ಭಾನುವಾರ ಪ್ರತಿಕ್ರಿಯಿಸಿದ ವಿಜಯನ್, ”ಕೇರಳ ಶಾಂತಿ ಮತ್ತು ಜಾತ್ಯತೀತತೆಯ ಓಯಸಿಸ್ ಎಂದು ಹೇಳಿದ್ದಾರೆ ಮತ್ತು ಸಂಘ ಪರಿವಾರದ ಕಾರ್ಯಸೂಚಿಯು ರಾಜ್ಯದಲ್ಲಿ ಸ್ವಲ್ಪಮಟ್ಟಿನ ಎಳೆತವನ್ನು ಕಂಡುಕೊಂಡಿದೆ ಎಂದು ಹೇಳರುವುದಾಗಿ ದಿ ಹಿಂದೂ ವರದಿ ಮಾಡಿದೆ.

”ಮಂಗಳೂರಿನಲ್ಲಿ 2021ರ ಕ್ರಿಸ್‌ಮಸ್ ಸಮಯದಲ್ಲಿ 150 ವರ್ಷಗಳಷ್ಟು ಹಳೆಯದಾದ ಚರ್ಚ್‌ನ್ನು ಧ್ವಂಸ ಮಾಡಿದ ಶ್ರೀರಾಮ ಸೇನೆ ಕೇರಳದಲ್ಲಿ ಇಲ್ಲ” ಎಂದು ವಿಜಯನ್ ಹೇಳಿದರು.

ದೇಶದಲ್ಲಿ ಹೆಚ್ಚುತ್ತಿರುವ ಬಡತನ ಮತ್ತು ಹಸಿವು, ಹೆಚ್ಚುತ್ತಿರುವ ಜೀವನ ವೆಚ್ಚ ಮತ್ತು ಬೆರಳಣಿಕೆ ಜನರ ಸಂಪತ್ತು ಹೆಚ್ಚುತ್ತಿರುವ ವಿಚಾರಗಳ ಬಗ್ಗೆ ಸಾರ್ವಜನಿಕರ ಗಮನ ಬೇರೆಡೆಗೆ ತಿರುಗಿಸಲು ಕರ್ನಾಟಕದ ಬಿಜೆಪಿ ಸರ್ಕಾರವು ಅಲ್ಪಸಂಖ್ಯಾತರನ್ನು ರಾಕ್ಷಸೀಕರಿಸುವ ಮೂಲಕ ರಾಜಕೀಯ ಲಾಭಕ್ಕಾಗಿ ಕೋಮು ವಿಭಜನೆಯನ್ನು ಪ್ರಚೋದಿಸಿದೆ ಎಂದು ಅವರು ಹೇಳಿದರು.

“ಮಂಗಳೂರು ಸೇರಿದಂತೆ ಕರ್ನಾಟಕದ ನಮ್ಮ ಗಡಿ ಪ್ರದೇಶಗಳು ಅನೇಕ ಕೋಮುಗಲಭೆಗೆ ಸಾಕ್ಷಿಯಾಗಿದೆ” ಎಂದು ವಿಜಯನ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. ”2021ರ ಕ್ರಿಸ್‌ಮಸ್ ಋತುವಿನಲ್ಲಿ ಚಿಕ್ಕಮಗಳೂರಿನ 150 ವರ್ಷ ಹಳೆಯ ಚರ್ಚ್ ಮೇಲೆ ಸಂಘಪರಿವಾರ ದಾಳಿ ನಡೆಸಿತ್ತು. ಕ್ರೈಸ್ತರು ಮತ್ತು ಇತರ ಅಲ್ಪಸಂಖ್ಯಾತರು ಸಂಘಪರಿವಾರದಿಂದ ಇಂತಹ ಅನೇಕ ದಾಳಿಗಳನ್ನು ಎದುರಿಸಿದ್ದಾರೆ. ಆದರೆ ಕೇರಳದ ಪರಿಸ್ಥಿತಿ ಹೀಗಿದೆಯೇ? ಕೇರಳದಲ್ಲಿ ಯಾರೂ ಯಾವುದೇ ಸಮಸ್ಯೆಗಳನ್ನು ಎದುರಿಸುವುದಿಲ್ಲ ಏಕೆಂದರೆ ಅವರಿಗೆ ನಮ್ಮ ಸರ್ಕಾರದ ಮೇಲೆ ನಂಬಿಕೆ ಇದೆ” ಎಂದರು.

”ಬಿಜೆಪಿ ದೇಶಕ್ಕೆ ವಿನಾಶಕಾರಿ ಶಕ್ತಿಯಾಗಿ ಪರಿಣಮಿಸಿದೆ. ಬಿಜೆಪಿಗೆ ಇನ್ನೂ ಒಂದು ಅವಕಾಶ ನೀಡಿದರೆ, ಅದು ಈ ದೇಶಕ್ಕೆ ದುರಂತವಾಗಲಿದೆ” ಎಂದು ಮುಖ್ಯಮಂತ್ರಿ ವಿಜಯನ್ ಹೇಳಿರುವ ಬಗ್ಗೆ ಪಿಟಿಐ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...