Homeಮುಖಪುಟಮಣಿಪುರದಲ್ಲಿ ಬಿಜೆಪಿಯು 'ಕ್ರಿಶ್ಚಿಯನ್ ವಿರೋಧಿ'ಯಾಗಿದೆ: ಪಕ್ಷ ತೊರೆದ ಮಿಜೋರಾಂ ಉಪಾಧ್ಯಕ್ಷ

ಮಣಿಪುರದಲ್ಲಿ ಬಿಜೆಪಿಯು ‘ಕ್ರಿಶ್ಚಿಯನ್ ವಿರೋಧಿ’ಯಾಗಿದೆ: ಪಕ್ಷ ತೊರೆದ ಮಿಜೋರಾಂ ಉಪಾಧ್ಯಕ್ಷ

- Advertisement -
- Advertisement -

ಮಿಜೋರಾಂನಲ್ಲಿ ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಈ ನಡುವೆ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ರಾಜ್ಯ ಬಿಜೆಪಿ ಉಪಾಧ್ಯಕ್ಷ ಆರ್ ವನ್ರಾಮ್‌ಚುವಾಂಗಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷ ತೊರೆದಿದ್ದಾರೆ.

ಮಣಿಪುರದಲ್ಲಿ ನಡೆದ ಹಿಂಸಾಚಾರದ ನಡುವೆ ಕ್ರಿಶ್ಚಿಯನ್ ಸಮುದಾಯದ ಬಗ್ಗೆ ಕೇಂದ್ರ ಸರ್ಕಾರವು ಅಸಡ್ಡೆ ತೋರುತ್ತಿದೆ ಎಂದು ಆರೋಪಿಸಿ ಮಿಜೋರಾಂನ ಬಿಜೆಪಿ ಉಪಾಧ್ಯಕ್ಷ ಆರ್ ವನ್ರಾಮ್‌ಚುವಾಂಗಾ ಅವರು ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷ ತೊರೆದಿದ್ದಾರೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ವನ್ರಾಮ್‌ಚುವಾಂಗಾ ಅವರು ಮಿಜೋರಾಂ ಬಿಜೆಪಿ ಮುಖ್ಯಸ್ಥ ವನ್‌ಲಾಲ್‌ಮುವಾಕಾ ಅವರಿಗೆ ನೀಡಿದ ರಾಜೀನಾಮೆ ಪತ್ರದಲ್ಲಿ ನೆರೆಯ ರಾಜ್ಯ ಮಣಿಪುರದಲ್ಲಿ ”ಕ್ರಿಶ್ಚಿಯನ್ ವಿರೋಧಿ ಚಟುವಟಿಕೆಗಳಿಂದ” ತೀವ್ರವಾಗಿ ನೋವಾಗಿದೆ ಎಂದು ಹೇಳಿದ್ದಾರೆ. ”ಮೈತಿ ಉಗ್ರಗಾಮಿಗಳು 357 ಕ್ರಿಶ್ಚಿಯನ್ ಚರ್ಚ್‌ಗಳನ್ನು, ಪಾದ್ರಿ ಕ್ವಾರ್ಟರ್‌ಗಳನ್ನು ಮತ್ತು ವಿವಿಧ ಚರ್ಚ್‌ಗಳಿಗೆ ಸೇರಿದ ಕಚೇರಿ ಕಟ್ಟಡಗಳನ್ನು ಸುಟ್ಟುಹಾಕಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಸಮುದಾಯವನ್ನು ರಕ್ಷಿಸುವಲ್ಲಿ ವಿಫಲರಾಗಿದ್ದಾರೆ ಎಂದು ಮಾಜಿ ಬಿಜೆಪಿ ನಾಯಕ ಆರೋಪಿಸಿದ್ದಾರೆ.

”ಶಾ ಅವರು ಸ್ವತಃ [ಮಣಿಪುರ ರಾಜಧಾನಿ] ಇಂಫಾಲ್‌ಗೆ ಹೋಗಿದ್ದರು ಮತ್ತು ಮೂರು ಹಗಲು ಮತ್ತು ಎರಡು ರಾತ್ರಿ ಇದ್ದರು, ಆದರೆ ಅವರ ಆಗಮನದ ಸಮಯದಲ್ಲಿ ಮತ್ತು ಅವರು ಹೋದ ನಂತರವೂ ಹಿಂಸಾಚಾರ ಮುಂದುವರೆದಿದೆ” ಎಂದು ಅವರು ಹೇಳಿದರು.

”ಮಣಿಪುರದ ಬೆಳವಣಿಗೆಗಳು ಬಿಜೆಪಿ ಕ್ರಿಶ್ಚಿಯನ್ ವಿರೋಧಿ ಪಕ್ಷ ಎಂಬ ಆರೋಪಗಳಿಗೆ ಪುಷ್ಠಿ ನೀಡಿವೆ” ಎಂದು ವನ್ರಾಮ್‌ಚುವಾಂಗಾ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ತಮ್ಮ ಮುಂದಿನ ನಡೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ”ಗುರುವಾರ ಇತರ ಕೆಲವು ಪಕ್ಷಗಳ ನಾಯಕರು ತಮ್ಮನ್ನು ಭೇಟಿ ಮಾಡಿದ್ದಾರೆ ಆದರೆ ಮುಂದಿನ ಕ್ರಮಗಳ ಬಗ್ಗೆ ಇನ್ನೂ ನಿರ್ಧರಿಸಿಲ್ಲ” ಎಂದು ಹೇಳಿದರು.

ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ

ಮಣಿಪುರವು ಮೇ 3 ರಿಂದ ಮೈತಿ ಮತ್ತು ಕುಕಿ ಸಮುದಾಯಗಳ ನಡುವೆ ಜನಾಂಗೀಯ ಘರ್ಷಣೆ ನಡೆಯುತ್ತಲಿದೆ. ಈ ಹಿಂಸಾಚಾರದಿಂದಾಗಿ 140 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 60,000 ಜನರು ತಮ್ಮ ಮನೆಗಳನ್ನು ತೊರೆದು ಹೋಗಬೇಕಾಯಿತು.

ರಾಜ್ಯದಲ್ಲಿ ಬಹುಪಾಲು ಮೈತಿಗಳು ಹಿಂದೂಗಳಾಗಿದ್ದರೆ, ಹೆಚ್ಚಿನ ಕುಕಿಗಳು ಮತ್ತು ನಾಗಾಗಳು ಕ್ರಿಶ್ಚಿಯನ್ನರು. ಮಿಜೋರಾಂನಲ್ಲಿರುವ ಮಿಜೋ ಸಮುದಾಯವು ಮಣಿಪುರದ ಕುಕಿ-ಜೋಮಿ ಸಮುದಾಯದೊಂದಿಗೆ ಜನಾಂಗೀಯ ಸಂಬಂಧಗಳನ್ನು ಹಂಚಿಕೊಂಡಿದೆ.

ಮೈತಿ ಲೀಪುನ್ ಮುಖ್ಯಸ್ಥನ ವಿರುದ್ಧ ದ್ವೇಷವನ್ನು ಉತ್ತೇಜಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ
ಮಣಿಪುರ ಪೊಲೀಸರು ಮೈತೆ ಲೀಪುನ್‌ನ ಮುಖ್ಯಸ್ಥ ಪ್ರಮೋತ್ ಸಿಂಗ್ ವಿರುದ್ಧ ದ್ವೇಷ ಮತ್ತು ಕ್ರಿಮಿನಲ್ ಪಿತೂರಿಯನ್ನು ಉತ್ತೇಜಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ದಿ ಹಿಂದೂ ಬುಧವಾರ ವರದಿ ಮಾಡಿದೆ.

ಮಣಿಪುರದಲ್ಲಿ ಕುಕಿಗಳ ವಿರುದ್ಧದ ಹಿಂಸಾಚಾರದಲ್ಲಿ ಮೈತಿ ಲೀಪುನ್, ಅರಾಂಬೈ ಟೆಂಗೋ ಎಂಬ ಇನ್ನೊಂದು ಮೈತಿ ಗುಂಪಿನೊಂದಿಗೆ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಅಲ್ಪಸಂಖ್ಯಾತರ ಮೇಲಿನ ಅಸಹಿಷ್ಣುತೆಯೇ ಮಣಿಪುರ ಹಿಂಸಾಚಾರಕ್ಕೆ ಕಾರಣ: ಯುರೋಪಿಯನ್ ಪಾರ್ಲಿಮೆಂಟ್ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...