Homeಮುಖಪುಟಮಣಿಪುರದಲ್ಲಿ ಬಿಜೆಪಿಯು 'ಕ್ರಿಶ್ಚಿಯನ್ ವಿರೋಧಿ'ಯಾಗಿದೆ: ಪಕ್ಷ ತೊರೆದ ಮಿಜೋರಾಂ ಉಪಾಧ್ಯಕ್ಷ

ಮಣಿಪುರದಲ್ಲಿ ಬಿಜೆಪಿಯು ‘ಕ್ರಿಶ್ಚಿಯನ್ ವಿರೋಧಿ’ಯಾಗಿದೆ: ಪಕ್ಷ ತೊರೆದ ಮಿಜೋರಾಂ ಉಪಾಧ್ಯಕ್ಷ

- Advertisement -
- Advertisement -

ಮಿಜೋರಾಂನಲ್ಲಿ ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಈ ನಡುವೆ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ರಾಜ್ಯ ಬಿಜೆಪಿ ಉಪಾಧ್ಯಕ್ಷ ಆರ್ ವನ್ರಾಮ್‌ಚುವಾಂಗಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷ ತೊರೆದಿದ್ದಾರೆ.

ಮಣಿಪುರದಲ್ಲಿ ನಡೆದ ಹಿಂಸಾಚಾರದ ನಡುವೆ ಕ್ರಿಶ್ಚಿಯನ್ ಸಮುದಾಯದ ಬಗ್ಗೆ ಕೇಂದ್ರ ಸರ್ಕಾರವು ಅಸಡ್ಡೆ ತೋರುತ್ತಿದೆ ಎಂದು ಆರೋಪಿಸಿ ಮಿಜೋರಾಂನ ಬಿಜೆಪಿ ಉಪಾಧ್ಯಕ್ಷ ಆರ್ ವನ್ರಾಮ್‌ಚುವಾಂಗಾ ಅವರು ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷ ತೊರೆದಿದ್ದಾರೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ವನ್ರಾಮ್‌ಚುವಾಂಗಾ ಅವರು ಮಿಜೋರಾಂ ಬಿಜೆಪಿ ಮುಖ್ಯಸ್ಥ ವನ್‌ಲಾಲ್‌ಮುವಾಕಾ ಅವರಿಗೆ ನೀಡಿದ ರಾಜೀನಾಮೆ ಪತ್ರದಲ್ಲಿ ನೆರೆಯ ರಾಜ್ಯ ಮಣಿಪುರದಲ್ಲಿ ”ಕ್ರಿಶ್ಚಿಯನ್ ವಿರೋಧಿ ಚಟುವಟಿಕೆಗಳಿಂದ” ತೀವ್ರವಾಗಿ ನೋವಾಗಿದೆ ಎಂದು ಹೇಳಿದ್ದಾರೆ. ”ಮೈತಿ ಉಗ್ರಗಾಮಿಗಳು 357 ಕ್ರಿಶ್ಚಿಯನ್ ಚರ್ಚ್‌ಗಳನ್ನು, ಪಾದ್ರಿ ಕ್ವಾರ್ಟರ್‌ಗಳನ್ನು ಮತ್ತು ವಿವಿಧ ಚರ್ಚ್‌ಗಳಿಗೆ ಸೇರಿದ ಕಚೇರಿ ಕಟ್ಟಡಗಳನ್ನು ಸುಟ್ಟುಹಾಕಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಸಮುದಾಯವನ್ನು ರಕ್ಷಿಸುವಲ್ಲಿ ವಿಫಲರಾಗಿದ್ದಾರೆ ಎಂದು ಮಾಜಿ ಬಿಜೆಪಿ ನಾಯಕ ಆರೋಪಿಸಿದ್ದಾರೆ.

”ಶಾ ಅವರು ಸ್ವತಃ [ಮಣಿಪುರ ರಾಜಧಾನಿ] ಇಂಫಾಲ್‌ಗೆ ಹೋಗಿದ್ದರು ಮತ್ತು ಮೂರು ಹಗಲು ಮತ್ತು ಎರಡು ರಾತ್ರಿ ಇದ್ದರು, ಆದರೆ ಅವರ ಆಗಮನದ ಸಮಯದಲ್ಲಿ ಮತ್ತು ಅವರು ಹೋದ ನಂತರವೂ ಹಿಂಸಾಚಾರ ಮುಂದುವರೆದಿದೆ” ಎಂದು ಅವರು ಹೇಳಿದರು.

”ಮಣಿಪುರದ ಬೆಳವಣಿಗೆಗಳು ಬಿಜೆಪಿ ಕ್ರಿಶ್ಚಿಯನ್ ವಿರೋಧಿ ಪಕ್ಷ ಎಂಬ ಆರೋಪಗಳಿಗೆ ಪುಷ್ಠಿ ನೀಡಿವೆ” ಎಂದು ವನ್ರಾಮ್‌ಚುವಾಂಗಾ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ತಮ್ಮ ಮುಂದಿನ ನಡೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ”ಗುರುವಾರ ಇತರ ಕೆಲವು ಪಕ್ಷಗಳ ನಾಯಕರು ತಮ್ಮನ್ನು ಭೇಟಿ ಮಾಡಿದ್ದಾರೆ ಆದರೆ ಮುಂದಿನ ಕ್ರಮಗಳ ಬಗ್ಗೆ ಇನ್ನೂ ನಿರ್ಧರಿಸಿಲ್ಲ” ಎಂದು ಹೇಳಿದರು.

ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ

ಮಣಿಪುರವು ಮೇ 3 ರಿಂದ ಮೈತಿ ಮತ್ತು ಕುಕಿ ಸಮುದಾಯಗಳ ನಡುವೆ ಜನಾಂಗೀಯ ಘರ್ಷಣೆ ನಡೆಯುತ್ತಲಿದೆ. ಈ ಹಿಂಸಾಚಾರದಿಂದಾಗಿ 140 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 60,000 ಜನರು ತಮ್ಮ ಮನೆಗಳನ್ನು ತೊರೆದು ಹೋಗಬೇಕಾಯಿತು.

ರಾಜ್ಯದಲ್ಲಿ ಬಹುಪಾಲು ಮೈತಿಗಳು ಹಿಂದೂಗಳಾಗಿದ್ದರೆ, ಹೆಚ್ಚಿನ ಕುಕಿಗಳು ಮತ್ತು ನಾಗಾಗಳು ಕ್ರಿಶ್ಚಿಯನ್ನರು. ಮಿಜೋರಾಂನಲ್ಲಿರುವ ಮಿಜೋ ಸಮುದಾಯವು ಮಣಿಪುರದ ಕುಕಿ-ಜೋಮಿ ಸಮುದಾಯದೊಂದಿಗೆ ಜನಾಂಗೀಯ ಸಂಬಂಧಗಳನ್ನು ಹಂಚಿಕೊಂಡಿದೆ.

ಮೈತಿ ಲೀಪುನ್ ಮುಖ್ಯಸ್ಥನ ವಿರುದ್ಧ ದ್ವೇಷವನ್ನು ಉತ್ತೇಜಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ
ಮಣಿಪುರ ಪೊಲೀಸರು ಮೈತೆ ಲೀಪುನ್‌ನ ಮುಖ್ಯಸ್ಥ ಪ್ರಮೋತ್ ಸಿಂಗ್ ವಿರುದ್ಧ ದ್ವೇಷ ಮತ್ತು ಕ್ರಿಮಿನಲ್ ಪಿತೂರಿಯನ್ನು ಉತ್ತೇಜಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ದಿ ಹಿಂದೂ ಬುಧವಾರ ವರದಿ ಮಾಡಿದೆ.

ಮಣಿಪುರದಲ್ಲಿ ಕುಕಿಗಳ ವಿರುದ್ಧದ ಹಿಂಸಾಚಾರದಲ್ಲಿ ಮೈತಿ ಲೀಪುನ್, ಅರಾಂಬೈ ಟೆಂಗೋ ಎಂಬ ಇನ್ನೊಂದು ಮೈತಿ ಗುಂಪಿನೊಂದಿಗೆ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಅಲ್ಪಸಂಖ್ಯಾತರ ಮೇಲಿನ ಅಸಹಿಷ್ಣುತೆಯೇ ಮಣಿಪುರ ಹಿಂಸಾಚಾರಕ್ಕೆ ಕಾರಣ: ಯುರೋಪಿಯನ್ ಪಾರ್ಲಿಮೆಂಟ್ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...