Homeಮುಖಪುಟಬಿಜೆಪಿ ಹೇಳಿದಷ್ಟು ಸುಳ್ಳನ್ನು ವಿಶ್ವದಲ್ಲಿ ಯಾರೂ ಹೇಳಿಲ್ಲ: ಅಖಿಲೇಶ್ ಯಾದವ್

ಬಿಜೆಪಿ ಹೇಳಿದಷ್ಟು ಸುಳ್ಳನ್ನು ವಿಶ್ವದಲ್ಲಿ ಯಾರೂ ಹೇಳಿಲ್ಲ: ಅಖಿಲೇಶ್ ಯಾದವ್

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ್ದಕ್ಕಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ವಿಶ್ವದಾದ್ಯಂತ ನಾಚಿಕೆಪಡುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾನುವಾರ ಹೇಳಿದ್ದಾರೆ.

ವಿರೋಧ ಪಕ್ಷವಾದ ಇಂಡಿಯಾ ಬ್ಲಾಕ್‌ನ ಮೆಗಾ ರ್ಯಾಲಿಯಲ್ಲಿ ಭಾಗವಹಿಸಲು ರಾಷ್ಟ್ರ ರಾಜಧಾನಿಗೆ ಆಗಮಿಸಿದ ಅಖಿಲೇಶ್ ಯಾದವ್, ಚುನಾವಣಾ ಬಾಂಡ್‌ಗಳ ವಿಷಯವಾಗಿ ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ, ಬಿಜೆಪಿ ಹೇಳಿದಷ್ಟು ಸುಳ್ಳುಗಳನ್ನು ವಿಶ್ವದಲ್ಲಿ ಯಾರೂ ಹೇಳುವುದಿಲ್ಲ ಎಂದು ಹೇಳಿದ್ದಾರೆ.

ಅಧಿಕಾರ ಕಳೆದುಕೊಳ್ಳುತ್ತದೆ ಎಂಬ ಕಳವಳ ಬಿಜೆಪಿಗೆ ಇದೆ. ಇಂದು ಮೀರತ್‌ನಲ್ಲಿ ನಿಗದಿಯಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ರ್ಯಾಲಿ ಮತ್ತು ದೆಹಲಿಯಲ್ಲಿ ಪ್ರತಿಪಕ್ಷಗಳ ರ್ಯಾಲಿಯನ್ನು ಉಲ್ಲೇಖಿಸಿದ ಎಸ್‌ಪಿ ಮುಖ್ಯಸ್ಥರು, ಇದು ಯಾರು ಅಧಿಕಾರಕ್ಕೆ ಬರುತ್ತಾರೆ ಮತ್ತು ಯಾರು ಹೊರಬರುತ್ತಾರೆ ಎಂಬುವುದರ ಸಂಕೇತವಾಗಿದೆ ಎಂದು ಹೇಳಿದ್ದಾರೆ.

ಇಡಿ, ಸಿಬಿಐ ಮತ್ತು ಐಟಿ ನಿಯೋಜಿಸಲಾಗಿದೆ ಮತ್ತು ದೇಣಿಗೆ ಸಂಗ್ರಹಿಸಲಾಗಿದೆ, ಇದು ಹೊಸ ಆವಿಷ್ಕಾರವಾಗಿದೆ. ವಿಶ್ವದಲ್ಲಿ ಬಿಜೆಪಿಯವರಷ್ಟು ಸುಳ್ಳು ಯಾರೂ ಹೇಳಿಲ್ಲ. ಅರವಿಂದ್ ಕೇಜ್ರಿವಾಲ್ ಬಂಧನದ ನಂತರ ಬಿಜೆಪಿಗೆ ವಿಶ್ವದಾದ್ಯಂತ ನಾಚಿಕೆಯಾಗುತ್ತಿದೆ ಎಂದು ಹೇಳಿದ್ದಾರೆ.

ಕೇಜ್ರಿವಾಲ್ ಅವರ ಬಂಧನ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಪ್ರತಿಪಕ್ಷಗಳ ವಿರುದ್ಧ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ ಇಂಡಿಯಾ ಬ್ಲಾಕ್‌ ನಾಯಕರು ತಮ್ಮ ‘ಲೋಕತಂತ್ರ ಬಚಾವೋ’ (ಪ್ರಜಾಪ್ರಭುತ್ವ ಉಳಿಸಿ) ರ್ಯಾಲಿಗಾಗಿ ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನಕ್ಕೆ ಆಗಮಿಸಿದ್ದಾರೆ.

ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಶರದ್ ಪವಾರ್, ಉದ್ಧವ್ ಠಾಕ್ರೆ ಮತ್ತು ತೇಜಸ್ವಿ ಯಾದವ್ ಸೇರಿದಂತೆ ಇಂಡಿಯಾ ಮೈತ್ರಿ ಕೂಟದ ಪ್ರಮುಖ ನಾಯಕರು ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಸಿದ್ಧರಾಗಿದ್ದಾರೆ.

ಕೆಲವು ಷರತ್ತುಗಳೊಂದಿಗೆ ದೆಹಲಿ ಪೊಲೀಸರು ರ್ಯಾಲಿಗೆ ಅನುಮತಿ ನೀಡಿದ್ದಾರೆ. ಸ್ಥಳದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರಿಗೆ ಅವಕಾಶ ನೀಡಬಹುದಾದರೂ,  20,000 ಜನರಿಗೆ ಮಾತ್ರ ಭಾಗವಹಿಸಲು ಅನುಮತಿಸಲಾಗಿದೆ. 30,000ಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆಯನ್ನು ಪೊಲೀಸರು ಇಟ್ಟುಕೊಂಡಿದ್ದಾರೆ. ಆದರೆ AAP ಪಕ್ಷವು ಮೈದಾನವು ಸಂಪೂರ್ಣವಾಗಿ ತುಂಬಲಿದೆ ಎಂದು ಹೇಳಿಕೊಂಡಿದೆ.

ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಮತ್ತು ಹೇಮಂತ್ ಸೊರೆನ್ ಅವರ ಪತ್ನಿ ಕಲ್ಪನಾ ಸೊರೆನ್ ಸೇರಿದಂತೆ ಇಂಡಿಯಾ ಬ್ಲಾಕ್‌ನ ಬಹುತೇಕ ಎಲ್ಲಾ ಉನ್ನತ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ. ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಮಾಜಿ ಸಿಎಂ ಅವರನ್ನು ಜನವರಿಯಲ್ಲಿ ಇಡಿ ಬಂಧಿಸಿತ್ತು.

ಇದನ್ನು ಓದಿ: ಪ್ರಮುಖ ಸಮಸ್ಯೆಗಳ ಬಗ್ಗೆ ಮೌನ; ಉತ್ತರಪ್ರದೇಶದ ಜನರ ಪರವಾಗಿ ಮೋದಿಗೆ ಹಲವು ಪ್ರಶ್ನೆಗಳನ್ನು ಕೇಳಿದ ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...