Homeಕರ್ನಾಟಕಉರ್ದು ವಿಚಾರದಲ್ಲಿ ಬಿಜೆಪಿ ಕೋಮುವೈಷಮ್ಯ ಹರಡುತ್ತಿದೆ: ಸಿಎಂ ಸಿದ್ದರಾಮಯ್ಯ

ಉರ್ದು ವಿಚಾರದಲ್ಲಿ ಬಿಜೆಪಿ ಕೋಮುವೈಷಮ್ಯ ಹರಡುತ್ತಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕನ್ನಡ ಭಾಷೆಯನ್ನು ನಿರ್ಲಕ್ಷಿಸಿ ಉರ್ದು ಭಾಷೆಗೆ ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ನೀಡುತ್ತಿದೆ ಎಂದು ರಾಜ್ಯ ಬಿಜೆಪಿ ಮಾಡುತ್ತಿರುವ ಅಪಪ್ರಚಾರ ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು, ಕೋಮುವೈಷಮ್ಯ ಹುಟ್ಟಿಸುವ ದುರುದ್ದೇಶದಿಂದ ಕೂಡಿದ್ದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ. ಒಂದು ರಾಷ್ಟ್ರೀಯ ಪಕ್ಷ ಇಷ್ಟೊಂದು ಬೇಜವಾಬ್ದಾರಿತನದಿಂದ ಕಿಡಿಗೇಡಿ ಟ್ರೋಲರ್‌ಗಳ ರೀತಿ ಸುಳ್ಳು ಸುದ್ದಿಯನ್ನು ಪ್ರಚಾರ ಮಾಡುತ್ತಿರುವುದು ವಿಷಾದನೀಯ ಎಂದು ಅವರು ಹೇಳಿದ್ದಾರೆ. ಉರ್ದು ವಿಚಾರದಲ್ಲಿ ಬಿಜೆಪಿ

2025-26ನೇ ಸಾಲಿನಲ್ಲಿ ರಾಜ್ಯ ಸರ್ಕಾರವು ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಇಲಾಖೆಗೆ ₹34,438 ಕೋಟಿ ಮತ್ತು ಸಮಾಜ ಕಲ್ಯಾಣ ಮತ್ತಿತರ ಇಲಾಖೆಗಳಿಗೆ ಸೇರಿದ ಶಾಲೆಗಳಿಗೆ ₹4,150 ಕೋಟಿ ಹೀಗೆ ಕನ್ನಡ ಭಾಷೆಯ ಶಾಲೆಗಳಿಗಾಗಿಯೇ ರಾಜ್ಯ ಸರ್ಕಾರ ಒಟ್ಟು 38,688 ಕೋಟಿ ರೂ.ಗಳನ್ನು ನೀಡಿದೆ ಎಂದು ಅವರು ಹೇಳಿದ್ದಾರೆ.

“ಅಷ್ಟೆ ಅಲ್ಲದೆ, ಸರ್ಕಾರಿ ಶಾಲೆಗಳ ನಿರ್ವಹಣೆ ಮತ್ತು ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕಾಗಿ ಒಟ್ಟು 999.30 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗಿದೆ. ಈ ಒಟ್ಟು ಅನುದಾನ ಕನ್ನಡ ಭಾಷೆಯ ಅಭಿವೃದ್ದಿಗಾಗಿಯೇ ವ್ಯಯವಾಗಲಿದೆ. ಹೀಗಿರುವಾಗ ಕನ್ನಡ ಭಾಷೆಗೆ ರಾಜ್ಯ ಸರ್ಕಾರ ಕೇವಲ 32 ಕೋಟಿ ರೂಪಾಯಿ ಅನುದಾನ ನೀಡುತ್ತಿದೆ ಎಂಬ ಮಾಹಿತಿಯ ಪ್ರಸಾರದ ಹಿಂದೆ ರಾಜಕೀಯ ದುರುದ್ದೇಶ ಇರುವುದು ಸ್ಪಷ್ಟವಾಗುತ್ತದೆ” ಎಂದು ಸಿದ್ದರಾಮಯ್ಯಾ ಅವರು ಹೇಳಿದ್ದಾರೆ.

“ಅತಿ ಹೆಚ್ಚು ವಿದ್ಯಾರ್ಥಿಗಳ ದಾಖಲಾತಿ ಇರುವ ರಾಜ್ಯದ ಉರ್ದು ಮಾಧ್ಯಮ ಶಾಲೆಗಳಿಗೆ ಕರ್ನಾಟಕ ಪಬ್ಲಿಕ್ ಶಾಲೆ ಮಾದರಿಯಲ್ಲಿ ಮೂಲಸೌಕರ್ಯಗಳನ್ನು ಒದಗಿಸಿ ಬೋಧನೆಯ ಗುಣಮಟ್ಟವನ್ನು ಹೆಚ್ಚಿಸುವ ಹಾಗೂ ಮೌಲಾನ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸುವ ಉದ್ದೇಶದಿಂದ ಪ್ರಸಕ್ತ ಹಣಕಾಸು ವರ್ಷದಲ್ಲಿ 100 ಕೋಟಿ ರೂ.ಗಳನ್ನು ಅಲ್ಪಸಂಖ್ಯಾತ ಇಲಾಖೆಯಡಿ ಒದಗಿಸಲಾಗಿದೆ.” ಎಂದು ಅವರು ಹೇಳಿದ್ದಾರೆ.

“ಈ ಅನುದಾನವನ್ನು ಕೇವಲ ಭಾಷಾ ಕಲಿಕೆಗೆ ಮಾತ್ರವಲ್ಲ ಶಾಲಾ ಮೂಲಸೌಕರ್ಯ, ಶಿಕ್ಷಕರ ನೇಮಕಾತಿಗಾಗಿ, ಪಠ್ಯಪುಸ್ತಕಗಳು ಮತ್ತು ಹೊಸ ಶಾಲಾ ಕಟ್ಟಡಗಳ ನಿರ್ಮಾಣಕ್ಕೂ ಬಳಸಲಾಗುವುದು. ಕನ್ನಡ, ಉರ್ದು ಭಾಷೆಗಳು ಸೇರಿದಂತೆ ಯಾವುದೇ ಭಾಷೆಯನ್ನು ನಿರ್ದಿಷ್ಠ ಜಾತಿ, ಧರ್ಮದ ಜೊತೆ ಜೋಡಿಸುವುದು ಆ ಭಾಷೆಗಳಿಗೆ ತೋರುವ ಅಗೌರವವಾಗುತ್ತದೆ.” ಎಂದು ಅವರು ಹೇಳಿದ್ದಾರೆ.

“ನಮ್ಮ ಸರ್ಕಾರ ರಾಜ್ಯದಲ್ಲಿ ಬಳಕೆಯಲ್ಲಿರುವ ಎಲ್ಲ ಭಾಷೆಗಳ ಬಗ್ಗೆ ಸಮಾನ ಕಾಳಜಿಯನ್ನು ಹೊಂದಿದೆ. ಇದೇ ಸದುದ್ದೇಶದಿಂದ ರಾಜ್ಯದಲ್ಲಿ ಬಳಕೆಯಲ್ಲಿರುವ ತುಳು, ಕೊಂಕಣಿ, ಅರೆಬಾಸೆ, ಕೊಡವ ಭಾಷೆಗಳಿಗಾಗಿಯೇ ಪ್ರತ್ಯೇಕ ಅಕಾಡೆಮಿಗಳನ್ನು ಸ್ಥಾಪಿಸಲಾಗಿದ್ದು, ಇವುಗಳಿಗೆ ವಾರ್ಷಿಕ 80 ಲಕ್ಷ ರೂಪಾಯಿಗಳ ಅನುದಾನವನ್ನು ನೀಡಲಾಗುತ್ತದೆ. ಇದರ ಜೊತೆಗೆ ವಿಶೇಷ ಕಾರ್ಯಕ್ರಮಗಳಿಗಾಗಿ ಹೆಚ್ಚುವರಿ ಅನುದಾನವನ್ನು ನೀಡಲಾಗುತ್ತದೆ.” ಎಂದು ಅವರು ಹೇಳಿದ್ದಾರೆ.

“ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುವ ಉದ್ದೇಶಕ್ಕಾಗಿಯೇ ಪ್ರತ್ಯೇಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದೆ. ಇದರಡಿಯಲ್ಲಿ 14 ಅಕಾಡೆಮಿಗಳು, 3 ಪ್ರಾಧಿಕಾರ ಮತ್ತು ಸಾಹಿತಿಗಳ ಹೆಸರಿನ 24 ಟ್ರಸ್ಟ್ ಗಳು ಕಾರ್ಯನಿರ್ವಹಿಸುತ್ತಿವೆ. ಇವೆಲ್ಲವೂ ಕನ್ನಡ, ಕನ್ನಡಿಗ ಮತ್ತು ಕರ್ನಾಟಕಕ್ಕೆ ಮೀಸಲಾಗಿವೆ.

ಕನ್ನಡ ಭಾಷೆಗೆ ಕನ್ನಡಿಗರೆಲ್ಲರೂ ತಾಯಿಯ ಸ್ಥಾನವನ್ನು ನೀಡಿದ್ದು ಇದೇ ಗೌರವವನ್ನು ನಮ್ಮ ಸರ್ಕಾರ ಕೂಡಾ ಹೊಂದಿದೆ. ನೆಲ-ಜಲ-ಭಾಷೆಯ ರಕ್ಷಣೆಯ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎನ್ನುವುದನ್ನು ನಾನು ಪದೇ ಪದೇ ಹೇಳಿಕೊಂಡು ಬಂದಿದ್ದೇನೆ. ಇದೇ ರೀತಿ ನಾಡು-ನುಡಿಗೆ ಬಗೆವ ಅವಮಾನವನ್ನು ಕೂಡಾ ನಮ್ಮ ಸರ್ಕಾರ ಸಹಿಸುವುದಿಲ್ಲ.” ಎಂದು ಅವರು ಹೇಳಿದ್ದಾರೆ.

“ಹೀಗಿರುವಾಗ ಕನ್ನಡ ಭಾಷೆಗಾಗಿ ಕೇವಲ 32 ಕೋಟಿ ರೂಪಾಯಿ ನೀಡಲಾಗಿದೆ ಎಂಬ ಸುಳ್ಳು ಸುದ್ದಿಯನ್ನು ರಾಜ್ಯ ಬಿಜೆಪಿ ಹಂಚಿಕೊಂಡು ಜನರನ್ನು ತಪ್ಪು ದಾರಿಗೆಳೆಯುತ್ತಿರುವುದು ಅಕ್ಷಮ್ಯ ಅಪರಾಧ ಮಾತ್ರವಲ್ಲ ಕನ್ನಡ ನಾಡು ಮತ್ತು ನುಡಿಗೆ ಬಗೆವ ದ್ರೋಹವಾಗಿದೆ. ರಾಜ್ಯ ಬಿಜೆಪಿ ತಕ್ಷಣ ಸ್ಪಷ್ಟೀಕರಣದ ಮೂಲಕ ಸತ್ಯ ಸಂಗತಿಯನ್ನು ತಿಳಿಸುವ ಜೊತೆಯಲ್ಲಿ ತಮ್ಮಿಂದ ಆಗಿರುವ ತಪ್ಪಿಗೆ ರಾಜ್ಯದ ಜನತೆಯ ಕ್ಷಮೆ ಕೇಳಬೇಕು” ಎಂದು ಅವರು ಆಗ್ರಹಿಸಿದ್ದಾರೆ. ಉರ್ದು ವಿಚಾರದಲ್ಲಿ ಬಿಜೆಪಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತಿಪಟೂರು | ದಲಿತ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

ತಿಪಟೂರು | ದಲಿತ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...