Homeಕರ್ನಾಟಕಉರ್ದು ವಿಚಾರದಲ್ಲಿ ಬಿಜೆಪಿ ಕೋಮುವೈಷಮ್ಯ ಹರಡುತ್ತಿದೆ: ಸಿಎಂ ಸಿದ್ದರಾಮಯ್ಯ

ಉರ್ದು ವಿಚಾರದಲ್ಲಿ ಬಿಜೆಪಿ ಕೋಮುವೈಷಮ್ಯ ಹರಡುತ್ತಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕನ್ನಡ ಭಾಷೆಯನ್ನು ನಿರ್ಲಕ್ಷಿಸಿ ಉರ್ದು ಭಾಷೆಗೆ ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ನೀಡುತ್ತಿದೆ ಎಂದು ರಾಜ್ಯ ಬಿಜೆಪಿ ಮಾಡುತ್ತಿರುವ ಅಪಪ್ರಚಾರ ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು, ಕೋಮುವೈಷಮ್ಯ ಹುಟ್ಟಿಸುವ ದುರುದ್ದೇಶದಿಂದ ಕೂಡಿದ್ದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ. ಒಂದು ರಾಷ್ಟ್ರೀಯ ಪಕ್ಷ ಇಷ್ಟೊಂದು ಬೇಜವಾಬ್ದಾರಿತನದಿಂದ ಕಿಡಿಗೇಡಿ ಟ್ರೋಲರ್‌ಗಳ ರೀತಿ ಸುಳ್ಳು ಸುದ್ದಿಯನ್ನು ಪ್ರಚಾರ ಮಾಡುತ್ತಿರುವುದು ವಿಷಾದನೀಯ ಎಂದು ಅವರು ಹೇಳಿದ್ದಾರೆ. ಉರ್ದು ವಿಚಾರದಲ್ಲಿ ಬಿಜೆಪಿ

2025-26ನೇ ಸಾಲಿನಲ್ಲಿ ರಾಜ್ಯ ಸರ್ಕಾರವು ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಇಲಾಖೆಗೆ ₹34,438 ಕೋಟಿ ಮತ್ತು ಸಮಾಜ ಕಲ್ಯಾಣ ಮತ್ತಿತರ ಇಲಾಖೆಗಳಿಗೆ ಸೇರಿದ ಶಾಲೆಗಳಿಗೆ ₹4,150 ಕೋಟಿ ಹೀಗೆ ಕನ್ನಡ ಭಾಷೆಯ ಶಾಲೆಗಳಿಗಾಗಿಯೇ ರಾಜ್ಯ ಸರ್ಕಾರ ಒಟ್ಟು 38,688 ಕೋಟಿ ರೂ.ಗಳನ್ನು ನೀಡಿದೆ ಎಂದು ಅವರು ಹೇಳಿದ್ದಾರೆ.

“ಅಷ್ಟೆ ಅಲ್ಲದೆ, ಸರ್ಕಾರಿ ಶಾಲೆಗಳ ನಿರ್ವಹಣೆ ಮತ್ತು ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕಾಗಿ ಒಟ್ಟು 999.30 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗಿದೆ. ಈ ಒಟ್ಟು ಅನುದಾನ ಕನ್ನಡ ಭಾಷೆಯ ಅಭಿವೃದ್ದಿಗಾಗಿಯೇ ವ್ಯಯವಾಗಲಿದೆ. ಹೀಗಿರುವಾಗ ಕನ್ನಡ ಭಾಷೆಗೆ ರಾಜ್ಯ ಸರ್ಕಾರ ಕೇವಲ 32 ಕೋಟಿ ರೂಪಾಯಿ ಅನುದಾನ ನೀಡುತ್ತಿದೆ ಎಂಬ ಮಾಹಿತಿಯ ಪ್ರಸಾರದ ಹಿಂದೆ ರಾಜಕೀಯ ದುರುದ್ದೇಶ ಇರುವುದು ಸ್ಪಷ್ಟವಾಗುತ್ತದೆ” ಎಂದು ಸಿದ್ದರಾಮಯ್ಯಾ ಅವರು ಹೇಳಿದ್ದಾರೆ.

“ಅತಿ ಹೆಚ್ಚು ವಿದ್ಯಾರ್ಥಿಗಳ ದಾಖಲಾತಿ ಇರುವ ರಾಜ್ಯದ ಉರ್ದು ಮಾಧ್ಯಮ ಶಾಲೆಗಳಿಗೆ ಕರ್ನಾಟಕ ಪಬ್ಲಿಕ್ ಶಾಲೆ ಮಾದರಿಯಲ್ಲಿ ಮೂಲಸೌಕರ್ಯಗಳನ್ನು ಒದಗಿಸಿ ಬೋಧನೆಯ ಗುಣಮಟ್ಟವನ್ನು ಹೆಚ್ಚಿಸುವ ಹಾಗೂ ಮೌಲಾನ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸುವ ಉದ್ದೇಶದಿಂದ ಪ್ರಸಕ್ತ ಹಣಕಾಸು ವರ್ಷದಲ್ಲಿ 100 ಕೋಟಿ ರೂ.ಗಳನ್ನು ಅಲ್ಪಸಂಖ್ಯಾತ ಇಲಾಖೆಯಡಿ ಒದಗಿಸಲಾಗಿದೆ.” ಎಂದು ಅವರು ಹೇಳಿದ್ದಾರೆ.

“ಈ ಅನುದಾನವನ್ನು ಕೇವಲ ಭಾಷಾ ಕಲಿಕೆಗೆ ಮಾತ್ರವಲ್ಲ ಶಾಲಾ ಮೂಲಸೌಕರ್ಯ, ಶಿಕ್ಷಕರ ನೇಮಕಾತಿಗಾಗಿ, ಪಠ್ಯಪುಸ್ತಕಗಳು ಮತ್ತು ಹೊಸ ಶಾಲಾ ಕಟ್ಟಡಗಳ ನಿರ್ಮಾಣಕ್ಕೂ ಬಳಸಲಾಗುವುದು. ಕನ್ನಡ, ಉರ್ದು ಭಾಷೆಗಳು ಸೇರಿದಂತೆ ಯಾವುದೇ ಭಾಷೆಯನ್ನು ನಿರ್ದಿಷ್ಠ ಜಾತಿ, ಧರ್ಮದ ಜೊತೆ ಜೋಡಿಸುವುದು ಆ ಭಾಷೆಗಳಿಗೆ ತೋರುವ ಅಗೌರವವಾಗುತ್ತದೆ.” ಎಂದು ಅವರು ಹೇಳಿದ್ದಾರೆ.

“ನಮ್ಮ ಸರ್ಕಾರ ರಾಜ್ಯದಲ್ಲಿ ಬಳಕೆಯಲ್ಲಿರುವ ಎಲ್ಲ ಭಾಷೆಗಳ ಬಗ್ಗೆ ಸಮಾನ ಕಾಳಜಿಯನ್ನು ಹೊಂದಿದೆ. ಇದೇ ಸದುದ್ದೇಶದಿಂದ ರಾಜ್ಯದಲ್ಲಿ ಬಳಕೆಯಲ್ಲಿರುವ ತುಳು, ಕೊಂಕಣಿ, ಅರೆಬಾಸೆ, ಕೊಡವ ಭಾಷೆಗಳಿಗಾಗಿಯೇ ಪ್ರತ್ಯೇಕ ಅಕಾಡೆಮಿಗಳನ್ನು ಸ್ಥಾಪಿಸಲಾಗಿದ್ದು, ಇವುಗಳಿಗೆ ವಾರ್ಷಿಕ 80 ಲಕ್ಷ ರೂಪಾಯಿಗಳ ಅನುದಾನವನ್ನು ನೀಡಲಾಗುತ್ತದೆ. ಇದರ ಜೊತೆಗೆ ವಿಶೇಷ ಕಾರ್ಯಕ್ರಮಗಳಿಗಾಗಿ ಹೆಚ್ಚುವರಿ ಅನುದಾನವನ್ನು ನೀಡಲಾಗುತ್ತದೆ.” ಎಂದು ಅವರು ಹೇಳಿದ್ದಾರೆ.

“ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುವ ಉದ್ದೇಶಕ್ಕಾಗಿಯೇ ಪ್ರತ್ಯೇಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದೆ. ಇದರಡಿಯಲ್ಲಿ 14 ಅಕಾಡೆಮಿಗಳು, 3 ಪ್ರಾಧಿಕಾರ ಮತ್ತು ಸಾಹಿತಿಗಳ ಹೆಸರಿನ 24 ಟ್ರಸ್ಟ್ ಗಳು ಕಾರ್ಯನಿರ್ವಹಿಸುತ್ತಿವೆ. ಇವೆಲ್ಲವೂ ಕನ್ನಡ, ಕನ್ನಡಿಗ ಮತ್ತು ಕರ್ನಾಟಕಕ್ಕೆ ಮೀಸಲಾಗಿವೆ.

ಕನ್ನಡ ಭಾಷೆಗೆ ಕನ್ನಡಿಗರೆಲ್ಲರೂ ತಾಯಿಯ ಸ್ಥಾನವನ್ನು ನೀಡಿದ್ದು ಇದೇ ಗೌರವವನ್ನು ನಮ್ಮ ಸರ್ಕಾರ ಕೂಡಾ ಹೊಂದಿದೆ. ನೆಲ-ಜಲ-ಭಾಷೆಯ ರಕ್ಷಣೆಯ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎನ್ನುವುದನ್ನು ನಾನು ಪದೇ ಪದೇ ಹೇಳಿಕೊಂಡು ಬಂದಿದ್ದೇನೆ. ಇದೇ ರೀತಿ ನಾಡು-ನುಡಿಗೆ ಬಗೆವ ಅವಮಾನವನ್ನು ಕೂಡಾ ನಮ್ಮ ಸರ್ಕಾರ ಸಹಿಸುವುದಿಲ್ಲ.” ಎಂದು ಅವರು ಹೇಳಿದ್ದಾರೆ.

“ಹೀಗಿರುವಾಗ ಕನ್ನಡ ಭಾಷೆಗಾಗಿ ಕೇವಲ 32 ಕೋಟಿ ರೂಪಾಯಿ ನೀಡಲಾಗಿದೆ ಎಂಬ ಸುಳ್ಳು ಸುದ್ದಿಯನ್ನು ರಾಜ್ಯ ಬಿಜೆಪಿ ಹಂಚಿಕೊಂಡು ಜನರನ್ನು ತಪ್ಪು ದಾರಿಗೆಳೆಯುತ್ತಿರುವುದು ಅಕ್ಷಮ್ಯ ಅಪರಾಧ ಮಾತ್ರವಲ್ಲ ಕನ್ನಡ ನಾಡು ಮತ್ತು ನುಡಿಗೆ ಬಗೆವ ದ್ರೋಹವಾಗಿದೆ. ರಾಜ್ಯ ಬಿಜೆಪಿ ತಕ್ಷಣ ಸ್ಪಷ್ಟೀಕರಣದ ಮೂಲಕ ಸತ್ಯ ಸಂಗತಿಯನ್ನು ತಿಳಿಸುವ ಜೊತೆಯಲ್ಲಿ ತಮ್ಮಿಂದ ಆಗಿರುವ ತಪ್ಪಿಗೆ ರಾಜ್ಯದ ಜನತೆಯ ಕ್ಷಮೆ ಕೇಳಬೇಕು” ಎಂದು ಅವರು ಆಗ್ರಹಿಸಿದ್ದಾರೆ. ಉರ್ದು ವಿಚಾರದಲ್ಲಿ ಬಿಜೆಪಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತಿಪಟೂರು | ದಲಿತ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

ತಿಪಟೂರು | ದಲಿತ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....