Homeಕರ್ನಾಟಕದೇಶದ ಐಕ್ಯತೆ, ಸಮಗ್ರತೆಗೆ ಭಂಗ ತರುತ್ತಿರುವ ಬಿಜೆಪಿ; ಕೇಂದ್ರ ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ಆಕ್ರೋಶ

ದೇಶದ ಐಕ್ಯತೆ, ಸಮಗ್ರತೆಗೆ ಭಂಗ ತರುತ್ತಿರುವ ಬಿಜೆಪಿ; ಕೇಂದ್ರ ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ಆಕ್ರೋಶ

- Advertisement -
- Advertisement -

‘ಕೇಂದ್ರದ ಬಿಜೆಪಿ ಸರ್ಕಾರ ದೇಶದ ಚರಿತ್ರೆಯಲ್ಲಿ ದಾಖಲಾಗುವಂತಹ ಕೆಲಸವನ್ನು ಸಂಸತ್ತಿನ ಉಭಯ ಸದನಗಳಲ್ಲಿ ಸ್ಪೀಕರ್ ಅವರಿಂದ ಮಾಡಿಸಿದೆ. ಈ ದೇಶದ ಐಕ್ಯತೆ, ಸಮಗ್ರತೆ, ಶಾಂತಿಗೆ ಭಂಗವಾಗುತ್ತಿದ್ದು, ಸಂಸತ್ ಭದ್ರತಾ ಲೋಪದ ಬಗ್ಗೆ ಸರ್ಕಾರ ಅಧಿಕೃತ ಹೇಳಿಕೆಯನ್ನು ಸದನದಲ್ಲಿ ನೀಡಬೇಕು ಎಂದು ಆಗ್ರಹಿಸಿದೆವು. ಈ ಬಗ್ಗೆ ಹೇಳಿಕೆ ನೀಡಲು ಅವರಿಂದ ಸಾಧ್ಯವಾಗದೇ ವಿರೋಧ ಪಕ್ಷಗಳ ಸಂಸತ್ ಸದಸ್ಯರನ್ನು ಅಮಾನತು ಮಾಡಿ ತಮಗೆ ಬೇಕಾದ ಮಸೂದೆ ಮಂಡನೆ ಮಾಡಿ ಅನುಮೋದನೆ ಪಡೆದಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ದೊಡ್ಡ ಅಪಮಾನ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇಂಡಿಯಾ ಒಕ್ಕೂಟದ 146 ಸಂಸದರ ಅಮಾನತು ವಿರೋಧಿಸಿ ಇಂದು ಬೆಂಗಳೂರಿನ ಫ್ರೀಡಂಪಾರ್ಕಿನಲ್ಲಿ ಕರ್ನಾಟಕ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಕೇಂದ್ರದ ಈ ಜನ ವಿರೋಧಿ ನಿರ್ಧಾರದ ಬಗ್ಗೆ ಜನರ ಗಮನ ಸೆಳೆಯಲು ದೇಶದಾದ್ಯಂತ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಾವು ಪ್ರಜಾಪ್ರಭುತ್ವ ಉಳಿಸಬೇಕು ಎಂಬ ಕಾರಣಕ್ಕೆ, ಕೇಂದ್ರ ಸರ್ಕಾರದ ಜನವಿರೋಧಿ ಧೋರಣೆ ಹಾಗೂ ವೈಫಲ್ಯವನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತೇವೆ’ ಎಂದರು.

‘ದೇಶದ ಸಂಸತ್ತಿನ ಮೇಲೆ ನಡೆದ ದಾಳಿ ವಿಚಾರವಾಗಿ ಪ್ರಧಾನಮಂತ್ರಿಗಳು ಹಾಗೂ ಗೃಹ ಸಚಿವರಿಂದ ಉತ್ತರ ಕೇಳಿದ ಕಾರಣಕ್ಕೆ ವಿರೋಧ ಪಕ್ಷಗಳ 146 ಸಂಸದರನ್ನು ಸದನದಿಂದ ಅಮಾನತು ಮಾಡಲಾಗಿದೆ. ಪ್ರಜಾಪ್ರಭುತ್ವ ಹಾಗೂ ಅದರ ಮೌಲ್ಯಗಳನ್ನು ಉಳಿಸುವ ಉದ್ದೇಶದಿಂದ ಸರ್ಕಾರದ ವೈಫ್ಯಲ್ಯ ಹಾಗೂ ಭದ್ರತಾ ಲೋಪದ ಬಗ್ಗೆ ಸದನದಲ್ಲಿ ಚರ್ಚೆಗೆ ಆಗ್ರಹಿಸಲಾಯಿತು. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರತುಪಡಿಸಿ ಉಳಿದವರನ್ನು ಅಮಾನತು ಮಾಡಿದ್ದಾರೆ’ ಎಂದು ಆರೋಪಿಸಿದರು.

‘ನೂತನ ಸಂಸತ್ ಭವನದಲ್ಲಿ ವಿರೋಧ ಪಕ್ಷದ ಸಂಸದರ ವಿರುದ್ಧದ ದಾಳಿ, ಕೇಂದ್ರ ಸರ್ಕಾರದ ದುರಾಡಳಿತ, ಸಂವಿಧಾನ ವಿರೋಧಿ ನೀತಿ ಖಂಡಿಸಿ ಸಂಸತ್ ಆವರಣದ ಮಹಾತ್ಮ ಗಾಂಧಿ ಅವರ ಪ್ರತಿಮೆ ಮುಂದೆ ನಮ್ಮ ಸಂಸತ್ ಸದಸ್ಯರು ಪ್ರತಿಭಟನೆ ಮಾಡಿದ್ದಾರೆ. ದೇಶದಾದ್ಯಂತ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸುತ್ತಿದೆ. ಸ್ಪೀಕರ್ ಅವರ ಬಳಿ ಕಾಗದ ಹರಿದಿದ್ದಾರೆ ಎಂದು ವಿರೋಧ ಪಕ್ಷಗಳ ಕೆಲವು ಸದಸ್ಯರ ನಡೆಯನ್ನು ಹಕ್ಕುಬಾಧ್ಯತಾ ಸಮಿತಿಯ ಪರಿಶೀಲನೆಗೆ ಒಳಪಡಿಸಿದ್ದಾರೆ. ಆ ಮೂಲಕ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದೆಯೋ ಇಲ್ಲವೋ ಎಂಬ ಪ್ರಶ್ನೆಯನ್ನು ನಾವು ಜನರ ಮುಂದೆ ಇಡಬೇಕಿದೆ’ ಎಂದರು.

‘ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯ ಗೆದ್ದಿದ್ದೇವೆ, ನಾವು ಏನು ಬೇಕಾದರೂ ಮಾಡಬಹುದು ಎಂದು ಬಿಜೆಪಿ ನಾಯಕರು ಬೀಗುತ್ತಿದ್ದಾರೆ. ಜನ ಯಾವಾಗ ಬೇಕಾದರೂ ತಮ್ಮ ನಿರ್ಧಾರವನ್ನು ಬದಲಿಸಬಹುದು. ರಾಜ್ಯ ವಿಧಾನಸಭೆ ನಂತರ ಲೋಕಸಭೆ ಚುನಾವಣೆಯಲ್ಲಿ ಜನ ಬೇರೆ ರೀತಿಯ ಫಲಿತಾಂಶ ಕೊಟ್ಟಿರುವ ಉದಾಹರಣೆಗಳಿವೆ. ರಾಮಕೃಷ್ಣ ಹೆಗಡೆ ಅವರ ಕಾಲದಲ್ಲಿ ವಿಧಾನಸಭೆ ಚುನಾವಣೆ ನಂತರ ಎರಡೇ ತಿಂಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಜನರ ತೀರ್ಪು ಬದಲಾಗಿತ್ತು. ಆದ್ದರಿಂದ ನಾವು ಹತಾಶರಾಗುವುದು ಬೇಡ. ನಾವು ನೀತಿ ಮೇಲೆ ರಾಜಕಾರಣ ಮಾಡುತ್ತಿದ್ದು, ಬಿಜೆಪಿಯ ಸರ್ವಾಧಿಕಾರಿ ಸರ್ಕಾರಕ್ಕೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ. ನಮ್ಮ ರಾಜ್ಯದಲ್ಲಿ, ಜನರ ಸಮಸ್ಯೆ ಬಗ್ಗೆ ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆ ಮಾಡಿ ಎಂದರೆ ವಿರೋಧ ಪಕ್ಷದ ನಾಯಕರು ಚರ್ಚೆ ಮಾಡಲಿಲ್ಲ. ಕೊನೆಯ ದಿನ ಅವರು ಹೊರಗೆ ಪ್ರತಿಭಟನೆ ಮಾಡಿದ್ದರು. ಜನ ಸದನದ ಒಳಗೆ ಚರ್ಚೆ ಮಾಡಲು ಬಿಜೆಪಿಯ 65 ನಾಯಕರನ್ನು ಆರಿಸಿ ಕಳುಹಿಸಿದ್ದಾರೆ’ ಎಂದು ಡಿಕೆಶಿ ವಾಗ್ದಾಳಿ ನಡೆಸಿದರು.

‘ಈ ಹೋರಾಟವನ್ನು ಜನರ ಮಧ್ಯೆ ತೆಗೆದುಕೊಂಡು ಹೋಗಬೇಕು. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು, ಸಂವಿಧಾನದ ಹಕ್ಕುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ನಮ್ಮ ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ತಲುಪಿದೆಯೇ ಎಂಬ ಪ್ರಶ್ನೆಯನ್ನು ವಿರೋಧ ಪಕ್ಷಗಳ ನಾಯಕರು ಎತ್ತುತ್ತಿದ್ದಾರೆ. ಶೇ.98 ರಷ್ಟು ಫಲಾನುಭವಿಗಳಿಗೆ ನಮ್ಮ ಯೋಜನೆಗಳು ತಲುಪಿವೆ. ಸುಮಾರು 59 ಸಾವಿರ ಕೋಟಿಯಷ್ಟು ಹಣವನ್ನು ನಾವು ಈ ಗ್ಯಾರಂಟಿ ಯೋಜನೆಗಳಿಗೆ ಮೀಸಲಿಟ್ಟಿದ್ದೇವೆ. ಕೊಟ್ಟ ಮಾತು ಉಳಿಸಿಕೊಳ್ಳುವುದು ಕಾಂಗ್ರೆಸ್ ಪಕ್ಷದ ಬದ್ಧತೆ. ಕಾರ್ಯಕರ್ತರಿಂದಲೇ ಈ ಪಕ್ಷ. ನಿಮ್ಮ ಹೋರಾಟವೇ ನಮಗೆ ಸ್ಫೂರ್ತಿ. ನಿಮ್ಮ ವಿಶ್ವಾಸ ಸದಾ ನಮ್ಮ ಜತೆ ಇರಲಿ ಎಂದು ಮನವಿ ಮಾಡುತ್ತೇನೆ’ ಎಂದರು.

ಮಕ್ಕಳಿಂದ ಶೌಚಾಲಯ ಸ್ವಚ್ಛತೆ; ತಪ್ಪಿತಸ್ಥರನ್ನು ಬಿಡುವುದಿಲ್ಲ:

ಯಶವಂತಪುರದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿರುವುದರ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಉಪ ಮುಖ್ಯಮಂತ್ರಿಗಳು, ‘ಈ ವಿಚಾರ ನನ್ನ ಗಮನಕ್ಕೆ ಬಂದಿದೆ. 3 ಗಂಟೆಗೆ ಪಾಲಿಕೆ ವ್ಯಾಪ್ತಿಯ ಶಾಲೆಗಳ ವಿಚಾರವಾಗಿ ಸಭೆ ಕರೆದಿದ್ದು, ಈ ಘಟನೆ ಬಗ್ಗೆ ವರದಿ ತರಿಸಿಕೊಳ್ಳುತ್ತಿದ್ದೇನೆ. ಈ ಪ್ರಕರಣದಲ್ಲಿ ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ. ಇತ್ತೀಚೆಗೆ ಕೋಲಾರದ ಶಾಲೆಯ ಘಟನೆಯಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಂಡಿದ್ದೇವೆ. ಮಕ್ಕಳನ್ನು ನಾವು ಯಾವ ರೀತಿ ನಡೆಸಿಕೊಳ್ಳಬೇಕೋ ಆ ರೀತಿ ನಡೆಸಿಕೊಳ್ಳಬೇಕು. ಮಕ್ಕಳನ್ನು ದುರುಪಯೋಗ ಮಾಡಿಕೊಳ್ಳುವಂತಿಲ್ಲ. ಶೌಚಾಲಯಗಳನ್ನು ಮಕ್ಕಳಿಂದ ಸ್ವಚ್ಛಗೊಳಿಸಲು ಅವಕಾಶ ನೀಡಿಲ್ಲ, ಮುಂದೆಯೂ ನೀಡುವುದಿಲ್ಲ’ ಎಂದು ಹೇಳಿದರು.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಜಿತ್ ಪವಾರ್ ಹಾಗೂ ಏಕನಾಥ ಶಿಂಧೆಯಂತಹವರು ಇದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಅವರು ಮೇಧಾವಿಗಳು; ಅವರಿಗೆ ಅನುಭವ ಹೆಚ್ಚಾಗಿದೆ. ಅವರಿಗೆ ಜೋತಿಷ್ಯ ಗೊತ್ತಿದ್ದು, ನುಡಿಮುತ್ತುಗಳನ್ನು ನಾವು ಸಂತೋಷದಿಂದ ಕೇಳುತ್ತಿದ್ದೇವೆ. ಅವರ ಬಾಯಿಗೆ ಬೀಗ ಹಾಕುವ ಶಕ್ತಿ ನನ್ನಲಿಲ್ಲ. ಅವರು ಮಾತನಾಡುತ್ತಿರಬೇಕು; ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ನಮ್ಮ ಪಕ್ಷ ಅಧಿಕಾರದಲ್ಲಿರುವುದನ್ನು ಅವರಿಂದ ಸಹಿಸಲಾಗುತ್ತಿಲ್ಲ. ಅವರಿಗೆ ಅಧಿಕಾರ ಸಿಗಲಿಲ್ಲ ಎಂಬ ಹತಾಶೆಯಿಂದ ಏನೆನೋ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ’ ಎಂದರು.

ನೀರಿನ ದರ ಹೆಚ್ಚಳದ ಬಗ್ಗೆ ಕೇಳಿದಾಗ, ‘ಜನಸಾಮಾನ್ಯರ ಮನೆಗಳ ನೀರಿನ ದರ ಏರಿಕೆ ಆಗಿಲ್ಲ. 2018ರಲ್ಲಿ ತೆಗೆದುಕೊಂಡಿದ್ದ ನಿರ್ಧಾರಕ್ಕೆ ಹೈಕೋರ್ಟ್ ನಲ್ಲಿ ತಡೆಯಾಜ್ಞೆ ಇತ್ತು. ಹೀಗಾಗಿ 2018ರಲ್ಲಿ ನಿಗದಿ ಮಾಡಿದಂತೆ ಕೈಗಾರಿಕೆಗಳ ನೀರಿನ ದರ ಏರಿಕೆ ಮಾಡಲಾಗಿದೆ. 2013ರಿಂದ ಇಲ್ಲಿಯವೆಗೂ ಕಳೆದ 10 ವರ್ಷಗಳಿಂದ ಬೆಂಗಳೂರಿನ ಜನಸಾಮಾನ್ಯರ ಬಳಕೆ ನೀರಿನ ದರವನ್ನು ಏರಿಕೆ ಮಾಡಿಲ್ಲ. ಈಗ 2018ರ ಕಾನೂನನ್ನು ಸಕ್ರಮ ಮಾಡಿದ್ದೇವೆ’ ಎಂದು ತಿಳಿಸಿದರು.

ಇದನ್ನೂ ಓದಿ; ‘ನಾನು ವಿಡಿಯೋ ಮಾಡಿದ್ದರ ಬಗ್ಗೆ ಮಾತನಾಡುತ್ತಿರುವ ಮಾಧ್ಯಮಗಳು ನಿರುದ್ಯೋಗದ ಕುರಿತು ಚರ್ಚಿಸುತ್ತಿಲ್ಲ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...