Homeಕರ್ನಾಟಕದೇಶದ ಐಕ್ಯತೆ, ಸಮಗ್ರತೆಗೆ ಭಂಗ ತರುತ್ತಿರುವ ಬಿಜೆಪಿ; ಕೇಂದ್ರ ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ಆಕ್ರೋಶ

ದೇಶದ ಐಕ್ಯತೆ, ಸಮಗ್ರತೆಗೆ ಭಂಗ ತರುತ್ತಿರುವ ಬಿಜೆಪಿ; ಕೇಂದ್ರ ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ಆಕ್ರೋಶ

- Advertisement -
- Advertisement -

‘ಕೇಂದ್ರದ ಬಿಜೆಪಿ ಸರ್ಕಾರ ದೇಶದ ಚರಿತ್ರೆಯಲ್ಲಿ ದಾಖಲಾಗುವಂತಹ ಕೆಲಸವನ್ನು ಸಂಸತ್ತಿನ ಉಭಯ ಸದನಗಳಲ್ಲಿ ಸ್ಪೀಕರ್ ಅವರಿಂದ ಮಾಡಿಸಿದೆ. ಈ ದೇಶದ ಐಕ್ಯತೆ, ಸಮಗ್ರತೆ, ಶಾಂತಿಗೆ ಭಂಗವಾಗುತ್ತಿದ್ದು, ಸಂಸತ್ ಭದ್ರತಾ ಲೋಪದ ಬಗ್ಗೆ ಸರ್ಕಾರ ಅಧಿಕೃತ ಹೇಳಿಕೆಯನ್ನು ಸದನದಲ್ಲಿ ನೀಡಬೇಕು ಎಂದು ಆಗ್ರಹಿಸಿದೆವು. ಈ ಬಗ್ಗೆ ಹೇಳಿಕೆ ನೀಡಲು ಅವರಿಂದ ಸಾಧ್ಯವಾಗದೇ ವಿರೋಧ ಪಕ್ಷಗಳ ಸಂಸತ್ ಸದಸ್ಯರನ್ನು ಅಮಾನತು ಮಾಡಿ ತಮಗೆ ಬೇಕಾದ ಮಸೂದೆ ಮಂಡನೆ ಮಾಡಿ ಅನುಮೋದನೆ ಪಡೆದಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ದೊಡ್ಡ ಅಪಮಾನ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇಂಡಿಯಾ ಒಕ್ಕೂಟದ 146 ಸಂಸದರ ಅಮಾನತು ವಿರೋಧಿಸಿ ಇಂದು ಬೆಂಗಳೂರಿನ ಫ್ರೀಡಂಪಾರ್ಕಿನಲ್ಲಿ ಕರ್ನಾಟಕ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಕೇಂದ್ರದ ಈ ಜನ ವಿರೋಧಿ ನಿರ್ಧಾರದ ಬಗ್ಗೆ ಜನರ ಗಮನ ಸೆಳೆಯಲು ದೇಶದಾದ್ಯಂತ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಾವು ಪ್ರಜಾಪ್ರಭುತ್ವ ಉಳಿಸಬೇಕು ಎಂಬ ಕಾರಣಕ್ಕೆ, ಕೇಂದ್ರ ಸರ್ಕಾರದ ಜನವಿರೋಧಿ ಧೋರಣೆ ಹಾಗೂ ವೈಫಲ್ಯವನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತೇವೆ’ ಎಂದರು.

‘ದೇಶದ ಸಂಸತ್ತಿನ ಮೇಲೆ ನಡೆದ ದಾಳಿ ವಿಚಾರವಾಗಿ ಪ್ರಧಾನಮಂತ್ರಿಗಳು ಹಾಗೂ ಗೃಹ ಸಚಿವರಿಂದ ಉತ್ತರ ಕೇಳಿದ ಕಾರಣಕ್ಕೆ ವಿರೋಧ ಪಕ್ಷಗಳ 146 ಸಂಸದರನ್ನು ಸದನದಿಂದ ಅಮಾನತು ಮಾಡಲಾಗಿದೆ. ಪ್ರಜಾಪ್ರಭುತ್ವ ಹಾಗೂ ಅದರ ಮೌಲ್ಯಗಳನ್ನು ಉಳಿಸುವ ಉದ್ದೇಶದಿಂದ ಸರ್ಕಾರದ ವೈಫ್ಯಲ್ಯ ಹಾಗೂ ಭದ್ರತಾ ಲೋಪದ ಬಗ್ಗೆ ಸದನದಲ್ಲಿ ಚರ್ಚೆಗೆ ಆಗ್ರಹಿಸಲಾಯಿತು. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರತುಪಡಿಸಿ ಉಳಿದವರನ್ನು ಅಮಾನತು ಮಾಡಿದ್ದಾರೆ’ ಎಂದು ಆರೋಪಿಸಿದರು.

‘ನೂತನ ಸಂಸತ್ ಭವನದಲ್ಲಿ ವಿರೋಧ ಪಕ್ಷದ ಸಂಸದರ ವಿರುದ್ಧದ ದಾಳಿ, ಕೇಂದ್ರ ಸರ್ಕಾರದ ದುರಾಡಳಿತ, ಸಂವಿಧಾನ ವಿರೋಧಿ ನೀತಿ ಖಂಡಿಸಿ ಸಂಸತ್ ಆವರಣದ ಮಹಾತ್ಮ ಗಾಂಧಿ ಅವರ ಪ್ರತಿಮೆ ಮುಂದೆ ನಮ್ಮ ಸಂಸತ್ ಸದಸ್ಯರು ಪ್ರತಿಭಟನೆ ಮಾಡಿದ್ದಾರೆ. ದೇಶದಾದ್ಯಂತ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸುತ್ತಿದೆ. ಸ್ಪೀಕರ್ ಅವರ ಬಳಿ ಕಾಗದ ಹರಿದಿದ್ದಾರೆ ಎಂದು ವಿರೋಧ ಪಕ್ಷಗಳ ಕೆಲವು ಸದಸ್ಯರ ನಡೆಯನ್ನು ಹಕ್ಕುಬಾಧ್ಯತಾ ಸಮಿತಿಯ ಪರಿಶೀಲನೆಗೆ ಒಳಪಡಿಸಿದ್ದಾರೆ. ಆ ಮೂಲಕ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದೆಯೋ ಇಲ್ಲವೋ ಎಂಬ ಪ್ರಶ್ನೆಯನ್ನು ನಾವು ಜನರ ಮುಂದೆ ಇಡಬೇಕಿದೆ’ ಎಂದರು.

‘ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯ ಗೆದ್ದಿದ್ದೇವೆ, ನಾವು ಏನು ಬೇಕಾದರೂ ಮಾಡಬಹುದು ಎಂದು ಬಿಜೆಪಿ ನಾಯಕರು ಬೀಗುತ್ತಿದ್ದಾರೆ. ಜನ ಯಾವಾಗ ಬೇಕಾದರೂ ತಮ್ಮ ನಿರ್ಧಾರವನ್ನು ಬದಲಿಸಬಹುದು. ರಾಜ್ಯ ವಿಧಾನಸಭೆ ನಂತರ ಲೋಕಸಭೆ ಚುನಾವಣೆಯಲ್ಲಿ ಜನ ಬೇರೆ ರೀತಿಯ ಫಲಿತಾಂಶ ಕೊಟ್ಟಿರುವ ಉದಾಹರಣೆಗಳಿವೆ. ರಾಮಕೃಷ್ಣ ಹೆಗಡೆ ಅವರ ಕಾಲದಲ್ಲಿ ವಿಧಾನಸಭೆ ಚುನಾವಣೆ ನಂತರ ಎರಡೇ ತಿಂಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಜನರ ತೀರ್ಪು ಬದಲಾಗಿತ್ತು. ಆದ್ದರಿಂದ ನಾವು ಹತಾಶರಾಗುವುದು ಬೇಡ. ನಾವು ನೀತಿ ಮೇಲೆ ರಾಜಕಾರಣ ಮಾಡುತ್ತಿದ್ದು, ಬಿಜೆಪಿಯ ಸರ್ವಾಧಿಕಾರಿ ಸರ್ಕಾರಕ್ಕೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ. ನಮ್ಮ ರಾಜ್ಯದಲ್ಲಿ, ಜನರ ಸಮಸ್ಯೆ ಬಗ್ಗೆ ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆ ಮಾಡಿ ಎಂದರೆ ವಿರೋಧ ಪಕ್ಷದ ನಾಯಕರು ಚರ್ಚೆ ಮಾಡಲಿಲ್ಲ. ಕೊನೆಯ ದಿನ ಅವರು ಹೊರಗೆ ಪ್ರತಿಭಟನೆ ಮಾಡಿದ್ದರು. ಜನ ಸದನದ ಒಳಗೆ ಚರ್ಚೆ ಮಾಡಲು ಬಿಜೆಪಿಯ 65 ನಾಯಕರನ್ನು ಆರಿಸಿ ಕಳುಹಿಸಿದ್ದಾರೆ’ ಎಂದು ಡಿಕೆಶಿ ವಾಗ್ದಾಳಿ ನಡೆಸಿದರು.

‘ಈ ಹೋರಾಟವನ್ನು ಜನರ ಮಧ್ಯೆ ತೆಗೆದುಕೊಂಡು ಹೋಗಬೇಕು. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು, ಸಂವಿಧಾನದ ಹಕ್ಕುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ನಮ್ಮ ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ತಲುಪಿದೆಯೇ ಎಂಬ ಪ್ರಶ್ನೆಯನ್ನು ವಿರೋಧ ಪಕ್ಷಗಳ ನಾಯಕರು ಎತ್ತುತ್ತಿದ್ದಾರೆ. ಶೇ.98 ರಷ್ಟು ಫಲಾನುಭವಿಗಳಿಗೆ ನಮ್ಮ ಯೋಜನೆಗಳು ತಲುಪಿವೆ. ಸುಮಾರು 59 ಸಾವಿರ ಕೋಟಿಯಷ್ಟು ಹಣವನ್ನು ನಾವು ಈ ಗ್ಯಾರಂಟಿ ಯೋಜನೆಗಳಿಗೆ ಮೀಸಲಿಟ್ಟಿದ್ದೇವೆ. ಕೊಟ್ಟ ಮಾತು ಉಳಿಸಿಕೊಳ್ಳುವುದು ಕಾಂಗ್ರೆಸ್ ಪಕ್ಷದ ಬದ್ಧತೆ. ಕಾರ್ಯಕರ್ತರಿಂದಲೇ ಈ ಪಕ್ಷ. ನಿಮ್ಮ ಹೋರಾಟವೇ ನಮಗೆ ಸ್ಫೂರ್ತಿ. ನಿಮ್ಮ ವಿಶ್ವಾಸ ಸದಾ ನಮ್ಮ ಜತೆ ಇರಲಿ ಎಂದು ಮನವಿ ಮಾಡುತ್ತೇನೆ’ ಎಂದರು.

ಮಕ್ಕಳಿಂದ ಶೌಚಾಲಯ ಸ್ವಚ್ಛತೆ; ತಪ್ಪಿತಸ್ಥರನ್ನು ಬಿಡುವುದಿಲ್ಲ:

ಯಶವಂತಪುರದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿರುವುದರ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಉಪ ಮುಖ್ಯಮಂತ್ರಿಗಳು, ‘ಈ ವಿಚಾರ ನನ್ನ ಗಮನಕ್ಕೆ ಬಂದಿದೆ. 3 ಗಂಟೆಗೆ ಪಾಲಿಕೆ ವ್ಯಾಪ್ತಿಯ ಶಾಲೆಗಳ ವಿಚಾರವಾಗಿ ಸಭೆ ಕರೆದಿದ್ದು, ಈ ಘಟನೆ ಬಗ್ಗೆ ವರದಿ ತರಿಸಿಕೊಳ್ಳುತ್ತಿದ್ದೇನೆ. ಈ ಪ್ರಕರಣದಲ್ಲಿ ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ. ಇತ್ತೀಚೆಗೆ ಕೋಲಾರದ ಶಾಲೆಯ ಘಟನೆಯಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಂಡಿದ್ದೇವೆ. ಮಕ್ಕಳನ್ನು ನಾವು ಯಾವ ರೀತಿ ನಡೆಸಿಕೊಳ್ಳಬೇಕೋ ಆ ರೀತಿ ನಡೆಸಿಕೊಳ್ಳಬೇಕು. ಮಕ್ಕಳನ್ನು ದುರುಪಯೋಗ ಮಾಡಿಕೊಳ್ಳುವಂತಿಲ್ಲ. ಶೌಚಾಲಯಗಳನ್ನು ಮಕ್ಕಳಿಂದ ಸ್ವಚ್ಛಗೊಳಿಸಲು ಅವಕಾಶ ನೀಡಿಲ್ಲ, ಮುಂದೆಯೂ ನೀಡುವುದಿಲ್ಲ’ ಎಂದು ಹೇಳಿದರು.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಜಿತ್ ಪವಾರ್ ಹಾಗೂ ಏಕನಾಥ ಶಿಂಧೆಯಂತಹವರು ಇದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಅವರು ಮೇಧಾವಿಗಳು; ಅವರಿಗೆ ಅನುಭವ ಹೆಚ್ಚಾಗಿದೆ. ಅವರಿಗೆ ಜೋತಿಷ್ಯ ಗೊತ್ತಿದ್ದು, ನುಡಿಮುತ್ತುಗಳನ್ನು ನಾವು ಸಂತೋಷದಿಂದ ಕೇಳುತ್ತಿದ್ದೇವೆ. ಅವರ ಬಾಯಿಗೆ ಬೀಗ ಹಾಕುವ ಶಕ್ತಿ ನನ್ನಲಿಲ್ಲ. ಅವರು ಮಾತನಾಡುತ್ತಿರಬೇಕು; ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ನಮ್ಮ ಪಕ್ಷ ಅಧಿಕಾರದಲ್ಲಿರುವುದನ್ನು ಅವರಿಂದ ಸಹಿಸಲಾಗುತ್ತಿಲ್ಲ. ಅವರಿಗೆ ಅಧಿಕಾರ ಸಿಗಲಿಲ್ಲ ಎಂಬ ಹತಾಶೆಯಿಂದ ಏನೆನೋ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ’ ಎಂದರು.

ನೀರಿನ ದರ ಹೆಚ್ಚಳದ ಬಗ್ಗೆ ಕೇಳಿದಾಗ, ‘ಜನಸಾಮಾನ್ಯರ ಮನೆಗಳ ನೀರಿನ ದರ ಏರಿಕೆ ಆಗಿಲ್ಲ. 2018ರಲ್ಲಿ ತೆಗೆದುಕೊಂಡಿದ್ದ ನಿರ್ಧಾರಕ್ಕೆ ಹೈಕೋರ್ಟ್ ನಲ್ಲಿ ತಡೆಯಾಜ್ಞೆ ಇತ್ತು. ಹೀಗಾಗಿ 2018ರಲ್ಲಿ ನಿಗದಿ ಮಾಡಿದಂತೆ ಕೈಗಾರಿಕೆಗಳ ನೀರಿನ ದರ ಏರಿಕೆ ಮಾಡಲಾಗಿದೆ. 2013ರಿಂದ ಇಲ್ಲಿಯವೆಗೂ ಕಳೆದ 10 ವರ್ಷಗಳಿಂದ ಬೆಂಗಳೂರಿನ ಜನಸಾಮಾನ್ಯರ ಬಳಕೆ ನೀರಿನ ದರವನ್ನು ಏರಿಕೆ ಮಾಡಿಲ್ಲ. ಈಗ 2018ರ ಕಾನೂನನ್ನು ಸಕ್ರಮ ಮಾಡಿದ್ದೇವೆ’ ಎಂದು ತಿಳಿಸಿದರು.

ಇದನ್ನೂ ಓದಿ; ‘ನಾನು ವಿಡಿಯೋ ಮಾಡಿದ್ದರ ಬಗ್ಗೆ ಮಾತನಾಡುತ್ತಿರುವ ಮಾಧ್ಯಮಗಳು ನಿರುದ್ಯೋಗದ ಕುರಿತು ಚರ್ಚಿಸುತ್ತಿಲ್ಲ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....