Homeಕರ್ನಾಟಕದೇಶದ ಐಕ್ಯತೆ, ಸಮಗ್ರತೆಗೆ ಭಂಗ ತರುತ್ತಿರುವ ಬಿಜೆಪಿ; ಕೇಂದ್ರ ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ಆಕ್ರೋಶ

ದೇಶದ ಐಕ್ಯತೆ, ಸಮಗ್ರತೆಗೆ ಭಂಗ ತರುತ್ತಿರುವ ಬಿಜೆಪಿ; ಕೇಂದ್ರ ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ಆಕ್ರೋಶ

- Advertisement -
- Advertisement -

‘ಕೇಂದ್ರದ ಬಿಜೆಪಿ ಸರ್ಕಾರ ದೇಶದ ಚರಿತ್ರೆಯಲ್ಲಿ ದಾಖಲಾಗುವಂತಹ ಕೆಲಸವನ್ನು ಸಂಸತ್ತಿನ ಉಭಯ ಸದನಗಳಲ್ಲಿ ಸ್ಪೀಕರ್ ಅವರಿಂದ ಮಾಡಿಸಿದೆ. ಈ ದೇಶದ ಐಕ್ಯತೆ, ಸಮಗ್ರತೆ, ಶಾಂತಿಗೆ ಭಂಗವಾಗುತ್ತಿದ್ದು, ಸಂಸತ್ ಭದ್ರತಾ ಲೋಪದ ಬಗ್ಗೆ ಸರ್ಕಾರ ಅಧಿಕೃತ ಹೇಳಿಕೆಯನ್ನು ಸದನದಲ್ಲಿ ನೀಡಬೇಕು ಎಂದು ಆಗ್ರಹಿಸಿದೆವು. ಈ ಬಗ್ಗೆ ಹೇಳಿಕೆ ನೀಡಲು ಅವರಿಂದ ಸಾಧ್ಯವಾಗದೇ ವಿರೋಧ ಪಕ್ಷಗಳ ಸಂಸತ್ ಸದಸ್ಯರನ್ನು ಅಮಾನತು ಮಾಡಿ ತಮಗೆ ಬೇಕಾದ ಮಸೂದೆ ಮಂಡನೆ ಮಾಡಿ ಅನುಮೋದನೆ ಪಡೆದಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ದೊಡ್ಡ ಅಪಮಾನ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇಂಡಿಯಾ ಒಕ್ಕೂಟದ 146 ಸಂಸದರ ಅಮಾನತು ವಿರೋಧಿಸಿ ಇಂದು ಬೆಂಗಳೂರಿನ ಫ್ರೀಡಂಪಾರ್ಕಿನಲ್ಲಿ ಕರ್ನಾಟಕ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಕೇಂದ್ರದ ಈ ಜನ ವಿರೋಧಿ ನಿರ್ಧಾರದ ಬಗ್ಗೆ ಜನರ ಗಮನ ಸೆಳೆಯಲು ದೇಶದಾದ್ಯಂತ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಾವು ಪ್ರಜಾಪ್ರಭುತ್ವ ಉಳಿಸಬೇಕು ಎಂಬ ಕಾರಣಕ್ಕೆ, ಕೇಂದ್ರ ಸರ್ಕಾರದ ಜನವಿರೋಧಿ ಧೋರಣೆ ಹಾಗೂ ವೈಫಲ್ಯವನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತೇವೆ’ ಎಂದರು.

‘ದೇಶದ ಸಂಸತ್ತಿನ ಮೇಲೆ ನಡೆದ ದಾಳಿ ವಿಚಾರವಾಗಿ ಪ್ರಧಾನಮಂತ್ರಿಗಳು ಹಾಗೂ ಗೃಹ ಸಚಿವರಿಂದ ಉತ್ತರ ಕೇಳಿದ ಕಾರಣಕ್ಕೆ ವಿರೋಧ ಪಕ್ಷಗಳ 146 ಸಂಸದರನ್ನು ಸದನದಿಂದ ಅಮಾನತು ಮಾಡಲಾಗಿದೆ. ಪ್ರಜಾಪ್ರಭುತ್ವ ಹಾಗೂ ಅದರ ಮೌಲ್ಯಗಳನ್ನು ಉಳಿಸುವ ಉದ್ದೇಶದಿಂದ ಸರ್ಕಾರದ ವೈಫ್ಯಲ್ಯ ಹಾಗೂ ಭದ್ರತಾ ಲೋಪದ ಬಗ್ಗೆ ಸದನದಲ್ಲಿ ಚರ್ಚೆಗೆ ಆಗ್ರಹಿಸಲಾಯಿತು. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರತುಪಡಿಸಿ ಉಳಿದವರನ್ನು ಅಮಾನತು ಮಾಡಿದ್ದಾರೆ’ ಎಂದು ಆರೋಪಿಸಿದರು.

‘ನೂತನ ಸಂಸತ್ ಭವನದಲ್ಲಿ ವಿರೋಧ ಪಕ್ಷದ ಸಂಸದರ ವಿರುದ್ಧದ ದಾಳಿ, ಕೇಂದ್ರ ಸರ್ಕಾರದ ದುರಾಡಳಿತ, ಸಂವಿಧಾನ ವಿರೋಧಿ ನೀತಿ ಖಂಡಿಸಿ ಸಂಸತ್ ಆವರಣದ ಮಹಾತ್ಮ ಗಾಂಧಿ ಅವರ ಪ್ರತಿಮೆ ಮುಂದೆ ನಮ್ಮ ಸಂಸತ್ ಸದಸ್ಯರು ಪ್ರತಿಭಟನೆ ಮಾಡಿದ್ದಾರೆ. ದೇಶದಾದ್ಯಂತ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸುತ್ತಿದೆ. ಸ್ಪೀಕರ್ ಅವರ ಬಳಿ ಕಾಗದ ಹರಿದಿದ್ದಾರೆ ಎಂದು ವಿರೋಧ ಪಕ್ಷಗಳ ಕೆಲವು ಸದಸ್ಯರ ನಡೆಯನ್ನು ಹಕ್ಕುಬಾಧ್ಯತಾ ಸಮಿತಿಯ ಪರಿಶೀಲನೆಗೆ ಒಳಪಡಿಸಿದ್ದಾರೆ. ಆ ಮೂಲಕ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದೆಯೋ ಇಲ್ಲವೋ ಎಂಬ ಪ್ರಶ್ನೆಯನ್ನು ನಾವು ಜನರ ಮುಂದೆ ಇಡಬೇಕಿದೆ’ ಎಂದರು.

‘ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯ ಗೆದ್ದಿದ್ದೇವೆ, ನಾವು ಏನು ಬೇಕಾದರೂ ಮಾಡಬಹುದು ಎಂದು ಬಿಜೆಪಿ ನಾಯಕರು ಬೀಗುತ್ತಿದ್ದಾರೆ. ಜನ ಯಾವಾಗ ಬೇಕಾದರೂ ತಮ್ಮ ನಿರ್ಧಾರವನ್ನು ಬದಲಿಸಬಹುದು. ರಾಜ್ಯ ವಿಧಾನಸಭೆ ನಂತರ ಲೋಕಸಭೆ ಚುನಾವಣೆಯಲ್ಲಿ ಜನ ಬೇರೆ ರೀತಿಯ ಫಲಿತಾಂಶ ಕೊಟ್ಟಿರುವ ಉದಾಹರಣೆಗಳಿವೆ. ರಾಮಕೃಷ್ಣ ಹೆಗಡೆ ಅವರ ಕಾಲದಲ್ಲಿ ವಿಧಾನಸಭೆ ಚುನಾವಣೆ ನಂತರ ಎರಡೇ ತಿಂಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಜನರ ತೀರ್ಪು ಬದಲಾಗಿತ್ತು. ಆದ್ದರಿಂದ ನಾವು ಹತಾಶರಾಗುವುದು ಬೇಡ. ನಾವು ನೀತಿ ಮೇಲೆ ರಾಜಕಾರಣ ಮಾಡುತ್ತಿದ್ದು, ಬಿಜೆಪಿಯ ಸರ್ವಾಧಿಕಾರಿ ಸರ್ಕಾರಕ್ಕೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ. ನಮ್ಮ ರಾಜ್ಯದಲ್ಲಿ, ಜನರ ಸಮಸ್ಯೆ ಬಗ್ಗೆ ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆ ಮಾಡಿ ಎಂದರೆ ವಿರೋಧ ಪಕ್ಷದ ನಾಯಕರು ಚರ್ಚೆ ಮಾಡಲಿಲ್ಲ. ಕೊನೆಯ ದಿನ ಅವರು ಹೊರಗೆ ಪ್ರತಿಭಟನೆ ಮಾಡಿದ್ದರು. ಜನ ಸದನದ ಒಳಗೆ ಚರ್ಚೆ ಮಾಡಲು ಬಿಜೆಪಿಯ 65 ನಾಯಕರನ್ನು ಆರಿಸಿ ಕಳುಹಿಸಿದ್ದಾರೆ’ ಎಂದು ಡಿಕೆಶಿ ವಾಗ್ದಾಳಿ ನಡೆಸಿದರು.

‘ಈ ಹೋರಾಟವನ್ನು ಜನರ ಮಧ್ಯೆ ತೆಗೆದುಕೊಂಡು ಹೋಗಬೇಕು. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು, ಸಂವಿಧಾನದ ಹಕ್ಕುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ನಮ್ಮ ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ತಲುಪಿದೆಯೇ ಎಂಬ ಪ್ರಶ್ನೆಯನ್ನು ವಿರೋಧ ಪಕ್ಷಗಳ ನಾಯಕರು ಎತ್ತುತ್ತಿದ್ದಾರೆ. ಶೇ.98 ರಷ್ಟು ಫಲಾನುಭವಿಗಳಿಗೆ ನಮ್ಮ ಯೋಜನೆಗಳು ತಲುಪಿವೆ. ಸುಮಾರು 59 ಸಾವಿರ ಕೋಟಿಯಷ್ಟು ಹಣವನ್ನು ನಾವು ಈ ಗ್ಯಾರಂಟಿ ಯೋಜನೆಗಳಿಗೆ ಮೀಸಲಿಟ್ಟಿದ್ದೇವೆ. ಕೊಟ್ಟ ಮಾತು ಉಳಿಸಿಕೊಳ್ಳುವುದು ಕಾಂಗ್ರೆಸ್ ಪಕ್ಷದ ಬದ್ಧತೆ. ಕಾರ್ಯಕರ್ತರಿಂದಲೇ ಈ ಪಕ್ಷ. ನಿಮ್ಮ ಹೋರಾಟವೇ ನಮಗೆ ಸ್ಫೂರ್ತಿ. ನಿಮ್ಮ ವಿಶ್ವಾಸ ಸದಾ ನಮ್ಮ ಜತೆ ಇರಲಿ ಎಂದು ಮನವಿ ಮಾಡುತ್ತೇನೆ’ ಎಂದರು.

ಮಕ್ಕಳಿಂದ ಶೌಚಾಲಯ ಸ್ವಚ್ಛತೆ; ತಪ್ಪಿತಸ್ಥರನ್ನು ಬಿಡುವುದಿಲ್ಲ:

ಯಶವಂತಪುರದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿರುವುದರ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಉಪ ಮುಖ್ಯಮಂತ್ರಿಗಳು, ‘ಈ ವಿಚಾರ ನನ್ನ ಗಮನಕ್ಕೆ ಬಂದಿದೆ. 3 ಗಂಟೆಗೆ ಪಾಲಿಕೆ ವ್ಯಾಪ್ತಿಯ ಶಾಲೆಗಳ ವಿಚಾರವಾಗಿ ಸಭೆ ಕರೆದಿದ್ದು, ಈ ಘಟನೆ ಬಗ್ಗೆ ವರದಿ ತರಿಸಿಕೊಳ್ಳುತ್ತಿದ್ದೇನೆ. ಈ ಪ್ರಕರಣದಲ್ಲಿ ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ. ಇತ್ತೀಚೆಗೆ ಕೋಲಾರದ ಶಾಲೆಯ ಘಟನೆಯಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಂಡಿದ್ದೇವೆ. ಮಕ್ಕಳನ್ನು ನಾವು ಯಾವ ರೀತಿ ನಡೆಸಿಕೊಳ್ಳಬೇಕೋ ಆ ರೀತಿ ನಡೆಸಿಕೊಳ್ಳಬೇಕು. ಮಕ್ಕಳನ್ನು ದುರುಪಯೋಗ ಮಾಡಿಕೊಳ್ಳುವಂತಿಲ್ಲ. ಶೌಚಾಲಯಗಳನ್ನು ಮಕ್ಕಳಿಂದ ಸ್ವಚ್ಛಗೊಳಿಸಲು ಅವಕಾಶ ನೀಡಿಲ್ಲ, ಮುಂದೆಯೂ ನೀಡುವುದಿಲ್ಲ’ ಎಂದು ಹೇಳಿದರು.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಜಿತ್ ಪವಾರ್ ಹಾಗೂ ಏಕನಾಥ ಶಿಂಧೆಯಂತಹವರು ಇದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಅವರು ಮೇಧಾವಿಗಳು; ಅವರಿಗೆ ಅನುಭವ ಹೆಚ್ಚಾಗಿದೆ. ಅವರಿಗೆ ಜೋತಿಷ್ಯ ಗೊತ್ತಿದ್ದು, ನುಡಿಮುತ್ತುಗಳನ್ನು ನಾವು ಸಂತೋಷದಿಂದ ಕೇಳುತ್ತಿದ್ದೇವೆ. ಅವರ ಬಾಯಿಗೆ ಬೀಗ ಹಾಕುವ ಶಕ್ತಿ ನನ್ನಲಿಲ್ಲ. ಅವರು ಮಾತನಾಡುತ್ತಿರಬೇಕು; ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ನಮ್ಮ ಪಕ್ಷ ಅಧಿಕಾರದಲ್ಲಿರುವುದನ್ನು ಅವರಿಂದ ಸಹಿಸಲಾಗುತ್ತಿಲ್ಲ. ಅವರಿಗೆ ಅಧಿಕಾರ ಸಿಗಲಿಲ್ಲ ಎಂಬ ಹತಾಶೆಯಿಂದ ಏನೆನೋ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ’ ಎಂದರು.

ನೀರಿನ ದರ ಹೆಚ್ಚಳದ ಬಗ್ಗೆ ಕೇಳಿದಾಗ, ‘ಜನಸಾಮಾನ್ಯರ ಮನೆಗಳ ನೀರಿನ ದರ ಏರಿಕೆ ಆಗಿಲ್ಲ. 2018ರಲ್ಲಿ ತೆಗೆದುಕೊಂಡಿದ್ದ ನಿರ್ಧಾರಕ್ಕೆ ಹೈಕೋರ್ಟ್ ನಲ್ಲಿ ತಡೆಯಾಜ್ಞೆ ಇತ್ತು. ಹೀಗಾಗಿ 2018ರಲ್ಲಿ ನಿಗದಿ ಮಾಡಿದಂತೆ ಕೈಗಾರಿಕೆಗಳ ನೀರಿನ ದರ ಏರಿಕೆ ಮಾಡಲಾಗಿದೆ. 2013ರಿಂದ ಇಲ್ಲಿಯವೆಗೂ ಕಳೆದ 10 ವರ್ಷಗಳಿಂದ ಬೆಂಗಳೂರಿನ ಜನಸಾಮಾನ್ಯರ ಬಳಕೆ ನೀರಿನ ದರವನ್ನು ಏರಿಕೆ ಮಾಡಿಲ್ಲ. ಈಗ 2018ರ ಕಾನೂನನ್ನು ಸಕ್ರಮ ಮಾಡಿದ್ದೇವೆ’ ಎಂದು ತಿಳಿಸಿದರು.

ಇದನ್ನೂ ಓದಿ; ‘ನಾನು ವಿಡಿಯೋ ಮಾಡಿದ್ದರ ಬಗ್ಗೆ ಮಾತನಾಡುತ್ತಿರುವ ಮಾಧ್ಯಮಗಳು ನಿರುದ್ಯೋಗದ ಕುರಿತು ಚರ್ಚಿಸುತ್ತಿಲ್ಲ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...