Homeಕರ್ನಾಟಕದೇಶದ ಐಕ್ಯತೆ, ಸಮಗ್ರತೆಗೆ ಭಂಗ ತರುತ್ತಿರುವ ಬಿಜೆಪಿ; ಕೇಂದ್ರ ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ಆಕ್ರೋಶ

ದೇಶದ ಐಕ್ಯತೆ, ಸಮಗ್ರತೆಗೆ ಭಂಗ ತರುತ್ತಿರುವ ಬಿಜೆಪಿ; ಕೇಂದ್ರ ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ಆಕ್ರೋಶ

- Advertisement -
- Advertisement -

‘ಕೇಂದ್ರದ ಬಿಜೆಪಿ ಸರ್ಕಾರ ದೇಶದ ಚರಿತ್ರೆಯಲ್ಲಿ ದಾಖಲಾಗುವಂತಹ ಕೆಲಸವನ್ನು ಸಂಸತ್ತಿನ ಉಭಯ ಸದನಗಳಲ್ಲಿ ಸ್ಪೀಕರ್ ಅವರಿಂದ ಮಾಡಿಸಿದೆ. ಈ ದೇಶದ ಐಕ್ಯತೆ, ಸಮಗ್ರತೆ, ಶಾಂತಿಗೆ ಭಂಗವಾಗುತ್ತಿದ್ದು, ಸಂಸತ್ ಭದ್ರತಾ ಲೋಪದ ಬಗ್ಗೆ ಸರ್ಕಾರ ಅಧಿಕೃತ ಹೇಳಿಕೆಯನ್ನು ಸದನದಲ್ಲಿ ನೀಡಬೇಕು ಎಂದು ಆಗ್ರಹಿಸಿದೆವು. ಈ ಬಗ್ಗೆ ಹೇಳಿಕೆ ನೀಡಲು ಅವರಿಂದ ಸಾಧ್ಯವಾಗದೇ ವಿರೋಧ ಪಕ್ಷಗಳ ಸಂಸತ್ ಸದಸ್ಯರನ್ನು ಅಮಾನತು ಮಾಡಿ ತಮಗೆ ಬೇಕಾದ ಮಸೂದೆ ಮಂಡನೆ ಮಾಡಿ ಅನುಮೋದನೆ ಪಡೆದಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ದೊಡ್ಡ ಅಪಮಾನ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇಂಡಿಯಾ ಒಕ್ಕೂಟದ 146 ಸಂಸದರ ಅಮಾನತು ವಿರೋಧಿಸಿ ಇಂದು ಬೆಂಗಳೂರಿನ ಫ್ರೀಡಂಪಾರ್ಕಿನಲ್ಲಿ ಕರ್ನಾಟಕ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಕೇಂದ್ರದ ಈ ಜನ ವಿರೋಧಿ ನಿರ್ಧಾರದ ಬಗ್ಗೆ ಜನರ ಗಮನ ಸೆಳೆಯಲು ದೇಶದಾದ್ಯಂತ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಾವು ಪ್ರಜಾಪ್ರಭುತ್ವ ಉಳಿಸಬೇಕು ಎಂಬ ಕಾರಣಕ್ಕೆ, ಕೇಂದ್ರ ಸರ್ಕಾರದ ಜನವಿರೋಧಿ ಧೋರಣೆ ಹಾಗೂ ವೈಫಲ್ಯವನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತೇವೆ’ ಎಂದರು.

‘ದೇಶದ ಸಂಸತ್ತಿನ ಮೇಲೆ ನಡೆದ ದಾಳಿ ವಿಚಾರವಾಗಿ ಪ್ರಧಾನಮಂತ್ರಿಗಳು ಹಾಗೂ ಗೃಹ ಸಚಿವರಿಂದ ಉತ್ತರ ಕೇಳಿದ ಕಾರಣಕ್ಕೆ ವಿರೋಧ ಪಕ್ಷಗಳ 146 ಸಂಸದರನ್ನು ಸದನದಿಂದ ಅಮಾನತು ಮಾಡಲಾಗಿದೆ. ಪ್ರಜಾಪ್ರಭುತ್ವ ಹಾಗೂ ಅದರ ಮೌಲ್ಯಗಳನ್ನು ಉಳಿಸುವ ಉದ್ದೇಶದಿಂದ ಸರ್ಕಾರದ ವೈಫ್ಯಲ್ಯ ಹಾಗೂ ಭದ್ರತಾ ಲೋಪದ ಬಗ್ಗೆ ಸದನದಲ್ಲಿ ಚರ್ಚೆಗೆ ಆಗ್ರಹಿಸಲಾಯಿತು. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರತುಪಡಿಸಿ ಉಳಿದವರನ್ನು ಅಮಾನತು ಮಾಡಿದ್ದಾರೆ’ ಎಂದು ಆರೋಪಿಸಿದರು.

‘ನೂತನ ಸಂಸತ್ ಭವನದಲ್ಲಿ ವಿರೋಧ ಪಕ್ಷದ ಸಂಸದರ ವಿರುದ್ಧದ ದಾಳಿ, ಕೇಂದ್ರ ಸರ್ಕಾರದ ದುರಾಡಳಿತ, ಸಂವಿಧಾನ ವಿರೋಧಿ ನೀತಿ ಖಂಡಿಸಿ ಸಂಸತ್ ಆವರಣದ ಮಹಾತ್ಮ ಗಾಂಧಿ ಅವರ ಪ್ರತಿಮೆ ಮುಂದೆ ನಮ್ಮ ಸಂಸತ್ ಸದಸ್ಯರು ಪ್ರತಿಭಟನೆ ಮಾಡಿದ್ದಾರೆ. ದೇಶದಾದ್ಯಂತ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸುತ್ತಿದೆ. ಸ್ಪೀಕರ್ ಅವರ ಬಳಿ ಕಾಗದ ಹರಿದಿದ್ದಾರೆ ಎಂದು ವಿರೋಧ ಪಕ್ಷಗಳ ಕೆಲವು ಸದಸ್ಯರ ನಡೆಯನ್ನು ಹಕ್ಕುಬಾಧ್ಯತಾ ಸಮಿತಿಯ ಪರಿಶೀಲನೆಗೆ ಒಳಪಡಿಸಿದ್ದಾರೆ. ಆ ಮೂಲಕ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದೆಯೋ ಇಲ್ಲವೋ ಎಂಬ ಪ್ರಶ್ನೆಯನ್ನು ನಾವು ಜನರ ಮುಂದೆ ಇಡಬೇಕಿದೆ’ ಎಂದರು.

‘ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯ ಗೆದ್ದಿದ್ದೇವೆ, ನಾವು ಏನು ಬೇಕಾದರೂ ಮಾಡಬಹುದು ಎಂದು ಬಿಜೆಪಿ ನಾಯಕರು ಬೀಗುತ್ತಿದ್ದಾರೆ. ಜನ ಯಾವಾಗ ಬೇಕಾದರೂ ತಮ್ಮ ನಿರ್ಧಾರವನ್ನು ಬದಲಿಸಬಹುದು. ರಾಜ್ಯ ವಿಧಾನಸಭೆ ನಂತರ ಲೋಕಸಭೆ ಚುನಾವಣೆಯಲ್ಲಿ ಜನ ಬೇರೆ ರೀತಿಯ ಫಲಿತಾಂಶ ಕೊಟ್ಟಿರುವ ಉದಾಹರಣೆಗಳಿವೆ. ರಾಮಕೃಷ್ಣ ಹೆಗಡೆ ಅವರ ಕಾಲದಲ್ಲಿ ವಿಧಾನಸಭೆ ಚುನಾವಣೆ ನಂತರ ಎರಡೇ ತಿಂಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಜನರ ತೀರ್ಪು ಬದಲಾಗಿತ್ತು. ಆದ್ದರಿಂದ ನಾವು ಹತಾಶರಾಗುವುದು ಬೇಡ. ನಾವು ನೀತಿ ಮೇಲೆ ರಾಜಕಾರಣ ಮಾಡುತ್ತಿದ್ದು, ಬಿಜೆಪಿಯ ಸರ್ವಾಧಿಕಾರಿ ಸರ್ಕಾರಕ್ಕೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ. ನಮ್ಮ ರಾಜ್ಯದಲ್ಲಿ, ಜನರ ಸಮಸ್ಯೆ ಬಗ್ಗೆ ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆ ಮಾಡಿ ಎಂದರೆ ವಿರೋಧ ಪಕ್ಷದ ನಾಯಕರು ಚರ್ಚೆ ಮಾಡಲಿಲ್ಲ. ಕೊನೆಯ ದಿನ ಅವರು ಹೊರಗೆ ಪ್ರತಿಭಟನೆ ಮಾಡಿದ್ದರು. ಜನ ಸದನದ ಒಳಗೆ ಚರ್ಚೆ ಮಾಡಲು ಬಿಜೆಪಿಯ 65 ನಾಯಕರನ್ನು ಆರಿಸಿ ಕಳುಹಿಸಿದ್ದಾರೆ’ ಎಂದು ಡಿಕೆಶಿ ವಾಗ್ದಾಳಿ ನಡೆಸಿದರು.

‘ಈ ಹೋರಾಟವನ್ನು ಜನರ ಮಧ್ಯೆ ತೆಗೆದುಕೊಂಡು ಹೋಗಬೇಕು. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು, ಸಂವಿಧಾನದ ಹಕ್ಕುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ನಮ್ಮ ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ತಲುಪಿದೆಯೇ ಎಂಬ ಪ್ರಶ್ನೆಯನ್ನು ವಿರೋಧ ಪಕ್ಷಗಳ ನಾಯಕರು ಎತ್ತುತ್ತಿದ್ದಾರೆ. ಶೇ.98 ರಷ್ಟು ಫಲಾನುಭವಿಗಳಿಗೆ ನಮ್ಮ ಯೋಜನೆಗಳು ತಲುಪಿವೆ. ಸುಮಾರು 59 ಸಾವಿರ ಕೋಟಿಯಷ್ಟು ಹಣವನ್ನು ನಾವು ಈ ಗ್ಯಾರಂಟಿ ಯೋಜನೆಗಳಿಗೆ ಮೀಸಲಿಟ್ಟಿದ್ದೇವೆ. ಕೊಟ್ಟ ಮಾತು ಉಳಿಸಿಕೊಳ್ಳುವುದು ಕಾಂಗ್ರೆಸ್ ಪಕ್ಷದ ಬದ್ಧತೆ. ಕಾರ್ಯಕರ್ತರಿಂದಲೇ ಈ ಪಕ್ಷ. ನಿಮ್ಮ ಹೋರಾಟವೇ ನಮಗೆ ಸ್ಫೂರ್ತಿ. ನಿಮ್ಮ ವಿಶ್ವಾಸ ಸದಾ ನಮ್ಮ ಜತೆ ಇರಲಿ ಎಂದು ಮನವಿ ಮಾಡುತ್ತೇನೆ’ ಎಂದರು.

ಮಕ್ಕಳಿಂದ ಶೌಚಾಲಯ ಸ್ವಚ್ಛತೆ; ತಪ್ಪಿತಸ್ಥರನ್ನು ಬಿಡುವುದಿಲ್ಲ:

ಯಶವಂತಪುರದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿರುವುದರ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಉಪ ಮುಖ್ಯಮಂತ್ರಿಗಳು, ‘ಈ ವಿಚಾರ ನನ್ನ ಗಮನಕ್ಕೆ ಬಂದಿದೆ. 3 ಗಂಟೆಗೆ ಪಾಲಿಕೆ ವ್ಯಾಪ್ತಿಯ ಶಾಲೆಗಳ ವಿಚಾರವಾಗಿ ಸಭೆ ಕರೆದಿದ್ದು, ಈ ಘಟನೆ ಬಗ್ಗೆ ವರದಿ ತರಿಸಿಕೊಳ್ಳುತ್ತಿದ್ದೇನೆ. ಈ ಪ್ರಕರಣದಲ್ಲಿ ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ. ಇತ್ತೀಚೆಗೆ ಕೋಲಾರದ ಶಾಲೆಯ ಘಟನೆಯಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಂಡಿದ್ದೇವೆ. ಮಕ್ಕಳನ್ನು ನಾವು ಯಾವ ರೀತಿ ನಡೆಸಿಕೊಳ್ಳಬೇಕೋ ಆ ರೀತಿ ನಡೆಸಿಕೊಳ್ಳಬೇಕು. ಮಕ್ಕಳನ್ನು ದುರುಪಯೋಗ ಮಾಡಿಕೊಳ್ಳುವಂತಿಲ್ಲ. ಶೌಚಾಲಯಗಳನ್ನು ಮಕ್ಕಳಿಂದ ಸ್ವಚ್ಛಗೊಳಿಸಲು ಅವಕಾಶ ನೀಡಿಲ್ಲ, ಮುಂದೆಯೂ ನೀಡುವುದಿಲ್ಲ’ ಎಂದು ಹೇಳಿದರು.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಜಿತ್ ಪವಾರ್ ಹಾಗೂ ಏಕನಾಥ ಶಿಂಧೆಯಂತಹವರು ಇದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಅವರು ಮೇಧಾವಿಗಳು; ಅವರಿಗೆ ಅನುಭವ ಹೆಚ್ಚಾಗಿದೆ. ಅವರಿಗೆ ಜೋತಿಷ್ಯ ಗೊತ್ತಿದ್ದು, ನುಡಿಮುತ್ತುಗಳನ್ನು ನಾವು ಸಂತೋಷದಿಂದ ಕೇಳುತ್ತಿದ್ದೇವೆ. ಅವರ ಬಾಯಿಗೆ ಬೀಗ ಹಾಕುವ ಶಕ್ತಿ ನನ್ನಲಿಲ್ಲ. ಅವರು ಮಾತನಾಡುತ್ತಿರಬೇಕು; ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ನಮ್ಮ ಪಕ್ಷ ಅಧಿಕಾರದಲ್ಲಿರುವುದನ್ನು ಅವರಿಂದ ಸಹಿಸಲಾಗುತ್ತಿಲ್ಲ. ಅವರಿಗೆ ಅಧಿಕಾರ ಸಿಗಲಿಲ್ಲ ಎಂಬ ಹತಾಶೆಯಿಂದ ಏನೆನೋ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ’ ಎಂದರು.

ನೀರಿನ ದರ ಹೆಚ್ಚಳದ ಬಗ್ಗೆ ಕೇಳಿದಾಗ, ‘ಜನಸಾಮಾನ್ಯರ ಮನೆಗಳ ನೀರಿನ ದರ ಏರಿಕೆ ಆಗಿಲ್ಲ. 2018ರಲ್ಲಿ ತೆಗೆದುಕೊಂಡಿದ್ದ ನಿರ್ಧಾರಕ್ಕೆ ಹೈಕೋರ್ಟ್ ನಲ್ಲಿ ತಡೆಯಾಜ್ಞೆ ಇತ್ತು. ಹೀಗಾಗಿ 2018ರಲ್ಲಿ ನಿಗದಿ ಮಾಡಿದಂತೆ ಕೈಗಾರಿಕೆಗಳ ನೀರಿನ ದರ ಏರಿಕೆ ಮಾಡಲಾಗಿದೆ. 2013ರಿಂದ ಇಲ್ಲಿಯವೆಗೂ ಕಳೆದ 10 ವರ್ಷಗಳಿಂದ ಬೆಂಗಳೂರಿನ ಜನಸಾಮಾನ್ಯರ ಬಳಕೆ ನೀರಿನ ದರವನ್ನು ಏರಿಕೆ ಮಾಡಿಲ್ಲ. ಈಗ 2018ರ ಕಾನೂನನ್ನು ಸಕ್ರಮ ಮಾಡಿದ್ದೇವೆ’ ಎಂದು ತಿಳಿಸಿದರು.

ಇದನ್ನೂ ಓದಿ; ‘ನಾನು ವಿಡಿಯೋ ಮಾಡಿದ್ದರ ಬಗ್ಗೆ ಮಾತನಾಡುತ್ತಿರುವ ಮಾಧ್ಯಮಗಳು ನಿರುದ್ಯೋಗದ ಕುರಿತು ಚರ್ಚಿಸುತ್ತಿಲ್ಲ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...