Homeಕರ್ನಾಟಕಬಿಜೆಪಿ ಕರ್ನಾಟಕವನ್ನು ಭಿಕ್ಷುಕ ರಾಜ್ಯವನ್ನಾಗಿ ಮಾಡಲು ಹೊರಟಿದೆ: ಸಿದ್ದರಾಮಯ್ಯ

ಬಿಜೆಪಿ ಕರ್ನಾಟಕವನ್ನು ಭಿಕ್ಷುಕ ರಾಜ್ಯವನ್ನಾಗಿ ಮಾಡಲು ಹೊರಟಿದೆ: ಸಿದ್ದರಾಮಯ್ಯ

ಕಾಂಗ್ರೆಸ್ ಮತ್ತು ಬಿಜೆಪಿಯ ತಲಾ ಐದು ವರ್ಷಗಳ ಆಡಳಿತಾವಧಿಯ ಹಣಕಾಸು ಸ್ಥಿತಿ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ಏರ್ಪಡಿಸಿ ಸ್ಥಳ, ಸಮಯ ತಿಳಿಸಿದರೆ ನಾನು ಬಂದು ಅದರಲ್ಲಿ ಭಾಗವಹಿಸುತ್ತೇನೆ ಎಂದು ಸವಾಲು ಎಸೆದಿದ್ದಾರೆ.

- Advertisement -
- Advertisement -

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಐದು ವರ್ಷಗಳ ಅವಧಿಯಲ್ಲಿ ರಾಜ್ಯದ ಜನರ ತಲೆ ಮೇಲೆ ಸಾಲದ ಹೊರೆ ಹೊರಿಸಿದ್ದಾರೆ ಎಂಬ ಬಿಜೆಪಿಯ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಬಿಜೆಪಿ ನಿರಾಧಾರವಾಗಿರುವ ಅಂಕಿ-ಅಂಶಗಳನ್ನು ಹುಟ್ಟುಹಾಕಿ ರಾಜ್ಯದ ಜನತೆಯ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದೆ. ಈ ಹಿನ್ನಲೆಯಲ್ಲಿ ಸತ್ಯ ಸಂಗತಿಯನ್ನು ಜನತೆಯ ಮುಂದಿಡುವುದು ನನ್ನ ಕರ್ತವ್ಯ ಎಂದು ಭಾವಿಸಿದ್ದೇನೆ ಎಂದು ಬಿಜೆಪಿ ವಿರುದ್ದ ಹಲವಾರು ವಿಷಯಗಳನ್ನು ಪಟ್ಟಿ ಮಾಡಿದ್ದಾರೆ.

ಬಿಜೆಪಿ ಮಾಡಿರುವ ಆರೋಪದ ಮೇಲೆ ಅಷ್ಟೊಂದು ವಿಶ್ವಾಸ ಇದ್ದರೆ ಕಾಂಗ್ರೆಸ್ ಮತ್ತು ಬಿಜೆಪಿಯ ತಲಾ ಐದು ವರ್ಷಗಳ ಆಡಳಿತಾವಧಿಯ ಹಣಕಾಸು ಸ್ಥಿತಿ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ಏರ್ಪಡಿಸಿ ಸ್ಥಳ, ಸಮಯ ತಿಳಿಸಿದರೆ ನಾನು ಬಂದು ಅದರಲ್ಲಿ ಭಾಗವಹಿಸುತ್ತೇನೆ ಎಂದು ಸವಾಲು ಎಸೆದಿದ್ದಾರೆ.

ಇದನ್ನೂ ಓದಿ: ಕಟೀಲ್ ವಿರುದ್ಧ ಟೀಕಾಸ್ತ್ರ: ಸಿದ್ದರಾಮಯ್ಯ ಕಾಂಗ್ರೆಸ್ ’ವಿದೂಷಕ’ ಎಂದ ಬಿಜೆಪಿ!

“ಬಿಜೆಪಿ ತನ್ನ ನಾಯಕರಿಗೆ ದೇಶ, ಧರ್ಮ, ಸಮಾಜ ಒಡೆಯುವ ತರಬೇತಿಯನ್ನಷ್ಟೇ ನೀಡದೆ ಆಡಳಿತ ಮತ್ತು ಆರ್ಥಿಕ ನಿರ್ವಹಣೆ ಬಗ್ಗೆಯೂ ಪಾಠ ಮಾಡಿದ್ದರೆ ಅವರಿಂದ ಇಂತಹ ಅಜ್ಞಾನದ ಮುತ್ತುಗಳು ಉದುರಿ ಬೀಳುತ್ತಿರಲಿಲ್ಲ. ತರಬೇತಿದಾರರ ಕೊರತೆಯಿದ್ದರೆ ನಾನೇ ಬಂದು ಪಾಠ ಮಾಡ್ತೇನೆ” ಎಂದು ಅವರು ಹೇಳಿದ್ದಾರೆ.

“2008-09 ರಿಂದ 2013-14 ರ ವರೆಗಿನ ಬಿಜೆಪಿ ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಸಾಲದ ಪ್ರಮಾಣ ಶೇಕಡಾ 212 ರಷ್ಟು ಹೆಚ್ಚಿತ್ತು. 2013-14 ರಿಂದ 2018-19 ರ ನಮ್ಮ ಸರ್ಕಾರದ ಅವಧಿಯಲ್ಲಿ ಸಾಲದ ಪ್ರಮಾಣ ಹೆಚ್ಚಿದ್ದು ಕೇವಲ ಶೇಕಡಾ 65 ರಷ್ಟು ಮಾತ್ರ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಕೌರವರಾಗಲೂ ಅರ್ಹತೆಯಿಲ್ಲದ ದುಷ್ಟರು: ಸಿದ್ದರಾಮಯ್ಯ ತಿರುಗೇಟು

“ಹಿಂದಿನ ಅವಧಿಯ ಸಾಲವನ್ನು ಸೇರಿಸಿ ರಾಜ್ಯದ ಒಟ್ಟು ಸಾಲದ ಪ್ರಮಾಣ 2008-09 ರಿಂದ 2013-14 ರ ಅವಧಿಯಲ್ಲಿ ಶೇಕಡಾ 94.18 ರಷ್ಟು ಹೆಚ್ಚಿದ್ದರೆ, 2013-14 ರಿಂದ 2018-19 ರ ಅವಧಿಯಲ್ಲಿ ಒಟ್ಟು ಸಾಲದ ಪ್ರಮಾಣ ಹೆಚ್ಚಿದ್ದು ಕೇವಲ ಶೇಕಡಾ 78.19 ರಷ್ಟು ಮಾತ್ರ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದವ ಬಿಜೆಪಿ ರಾಜ್ಯಾಧ್ಯಕ್ಷ- ಸಿದ್ದರಾಮಯ್ಯ ವ್ಯಂಗ್ಯ

“ಪ್ರಸಕ್ತ ಸಾಲಿನ ಬಜೆಟ್ ಅಂದಾಜಿನ ಪ್ರಕಾರ ರಾಜ್ಯದ ಸಾಲ ರೂ.53,000 ಕೋಟಿ. ಕೊರೊನಾದಿಂದಾಗಿ ಆಗಿರುವ ಆದಾಯ ಖೋತಾ ತುಂಬಲು ಹೆಚ್ಚುವರಿ ರೂ.33,000 ಕೋಟಿ ಸಾಲದ ಜೊತೆ, ಜಿಎಸ್‌ಟಿ ಪರಿಹಾರ ಭರಿಸಲು ಮತ್ತೆ ರೂ.12,000 ಕೋಟಿ ಸಾಲ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಒಂದೇ ವರ್ಷದಲ್ಲಿ ಸಾಲದ ಮೊತ್ತ ದುಪ್ಪಟ್ಟು ಮಾಡಿರುವುದು ಬಿಜೆಪಿಯ ಸಾಧನೆ” ಎಂದು ಹೇಳಿದ್ದಾರೆ.

“ಸಾಲದ ಹೊರೆಯ ಸುಳ್ಳು ಆರೋಪ ಮಾಡುವುದಕ್ಕಿಂತ ಮೊದಲು ರಾಜ್ಯದ ಬಿಜೆಪಿ ನಾಯಕರು ವಿತ್ತೀಯ ಹೊಣೆಗಾರಿಕೆ ಅಧಿನಿಯಮವನ್ನೊಮ್ಮೆ ಓದಿಕೊಳ್ಳಬೇಕಿತ್ತು. ಅದರ ಪ್ರಕಾರ ನಮ್ಮ ಸಾಲ ರಾಜ್ಯದ ಆಂತರಿಕ ಉತ್ಪನ್ನದ 25% ರ ಮಿತಿಯಲ್ಲಿರಬೇಕಾಗುತ್ತದೆ. ನನ್ನ ಕೊನೆಯ ಬಜೆಟ್‌ನಲ್ಲಿ ರಾಜ್ಯದ ಸಾಲ ಶೇಕಡಾ 20.36 ರ ಮಿತಿಯೊಳಗೆ ಇತ್ತು. ಈಗಿನ ಬಿಜೆಪಿ ಆಡಳಿತದಲ್ಲಿ ಅದು ಶೇಕಡಾ 33 ರ ಮಿತಿ ದಾಟಲಿದೆ” ಎಂದ ಭವಿಷ್ಯ ನುಡಿದಿದ್ದಾರೆ.

“ರಾಜ್ಯದ ವಿತ್ತೀಯ ಕೊರತೆ ನಮ್ಮ ಆಂತರಿಕ ಉತ್ಪನ್ನದ(GSDP) ಶೇಕಡಾ ಮೂರನ್ನು ಮೀರಬಾರದು ಎಂದು ವಿತ್ತೀಯ ಹೊಣೆಗಾರಿಕೆ ಅಧಿನಿಯಮ ಹೇಳಿದೆ. ಮುಖ್ಯಮಂತ್ರಿಯಾಗಿ ನಾನು ಮಂಡಿಸಿದ್ದ ಆರು ಆಯವ್ಯಯಪತ್ರಗಳಲ್ಲಿ ವಿತ್ತೀಯ ಕೊರತೆ ಎಂದೂ ಶೇಕಡಾ ಮೂರರ ಮಿತಿಯನ್ನು ಮೀರಿರಲಿಲ್ಲ. ನನ್ನ ಕೊನೆಯ ಬಜೆಟ್ ನಲ್ಲಿ ಈ ಮಿತಿ ಶೇಕಡಾ 2.49 ರಷ್ಟಿತ್ತು” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಜನರಿಗೆ ಪಾಠ ಹೇಳುವ ಮೊದಲು ಮೋದಿ ಆತ್ಮಾವಲೋಕನ ಮಾಡಿಕೊಳ್ಳಲಿ: ಸಿದ್ದರಾಮಯ್ಯ

ಸಿದ್ದರಾಮಯ್ಯ

“ರಾಜ್ಯದ ಬಿಜೆಪಿ ಸರ್ಕಾರ ವಿತ್ತೀಯ ಕೊರತೆಯ ಮಿತಿಯನ್ನು 3% ಇಂದ 5% ಗೆ ಏರಿಕೆ ಮಾಡುವ ಅಪಾಯಕಾರಿ ನಿಲುವು ತೆಗೆದುಕೊಂಡಿದೆ. 5% ಗೆ ಏರಿಕೆಯಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಲಿದೆ ಹೆಚ್ಚೆಂದರೆ 3.5 ಕ್ಕೆ ಏರಿಕೆ ಮಾಡಿ, ಮುಂದಿನ ದಿನಗಳಲ್ಲಿ ಮತ್ತೆ ಇಳಿಕೆ ಮಾಡಬಹುದಿತ್ತು. ಈ ಕಿವುಡು ಸರ್ಕಾರಕ್ಕೆ ಹೇಳುವವರು ಕೇಳುವವರು ಯಾರೂ ಇಲ್ಲದಂತಾಗಿದೆ” ಎಂದು ಅವರು ಅಸಮಧಾನ ವ್ಯಕ್ತಪಡಿಸಿದ್ದಾರೆ.

“2020-21 ರ ಆಯವ್ಯಯದಲ್ಲಿ ನಮ್ಮ ಒಟ್ಟು ಆಂತರಿಕ ಉತ್ಪನ್ನ 18 ಲಕ್ಷ ಕೋಟಿ ಎಂದು ಅಂದಾಜು ಮಾಡಲಾಗಿದೆ. ಆದರೆ ಕೊರೊನಾ ಹಾವಳಿ ಮತ್ತು ರಾಜ್ಯ ಸರ್ಕಾರದ ಆರ್ಥಿಕ ಎಡವಟ್ಟುಗಳ ಕಾರಣದಿಂದ ಅದು 12 ಲಕ್ಷ ಕೋಟಿಗಿಂತಲೂ ಕೆಳಗಿಳಿಯಬಹುದು. ಆಗ ನಮ್ಮ ಸಾಲದ ಸಾಮರ್ಥ್ಯ ಕೂಡಾ ಕಡಿಮೆಯಾಗಲಿದೆ” ಎಂದು ಹೇಳಿದ್ದಾರೆ.

“ಸಂವಿಧಾನದ 101 ನೇ ತಿದ್ದುಪಡಿ ಮೂಲಕ ಕಾರ್ಯರೂಪಕ್ಕೆ ಬಂದಿರುವ ಜಿಎಸ್‌ಟಿ ಕಾಯ್ದೆಯ ಸೆಕ್ಷನ್ 18 ರ ಪ್ರಕಾರ 5 ವರ್ಷಗಳ ಕಾಲ ಜಿಎಸ್‌ಟಿ ಪರಿಹಾರ ನೀಡಬೇಕಾಗಿರುವುದು ಸಂವಿಧಾನಾತ್ಮಕ ಕರ್ತವ್ಯ. 2020-2021 ರ ಆರ್ಥಿಕ ವರ್ಷದ ಅಂತ್ಯಕ್ಕೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಜಿಎಸ್ ಟಿ ಪರಿಹಾರವಾಗಿ 30,000 ಕೋಟಿ ನೀಡಬೇಕಾಗುತ್ತದೆ ಈ ಪರಿಹಾರದ ನಿರಾಕರಣೆ ನಮ್ಮ ಸಾಂವಿಧಾನಿಕ ಹಕ್ಕಿನ ಉಲ್ಲಂಘನೆಯಾಗಿದೆ” ಎಂದು ಅವರು ಹೇಳಿದ್ದಾರೆ.

“14 ನೇ ಹಣಕಾಸು ಆಯೋಗದಲ್ಲಿ 4.71% ಇದ್ದ ರಾಜ್ಯದ ಪಾಲನ್ನು 15 ನೇ ಹಣಕಾಸು ಆಯೋಗದಲ್ಲಿ 3.64% ಗೆ ಇಳಿಸಲಾಗಿದೆ. ಇದರಿಂದ ರಾಜ್ಯಕ್ಕೆ ರೂ.12 ಸಾವಿರ ಕೋಟಿ ನಷ್ಟವಾಗುತ್ತಿದೆ. ಇದಕ್ಕೆ ಪರಿಹಾರವಾಗಿ ಆಯೋಗ ಶಿಫಾರಸು ಮಾಡಿದ್ದ ರೂ.5495 ಕೋಟಿ ವಿಶೇಷ ಅನುದಾನವನ್ನು ಹಣಕಾಸು ಸಚಿವೆ ತಿರಸ್ಕರಿಸಿ ರಾಜ್ಯಕ್ಕೆ ದ್ರೋಹ ಬಗೆದಿದ್ದಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸ್ನೇಹಕ್ಕಾಗಿ ಪಕ್ಷನಿಷ್ಠೆ, ತತ್ವನಿಷ್ಠೆ ಬಿಡುವುದಿಲ್ಲ: ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

“ಈಗಿನ ಆರ್ಥಿಕ ಸಂಕಷ್ಟದಿಂದ ಪಾರಾಗಬೇಕಾದರೆ ರಾಜ್ಯ ಸರ್ಕಾರ ಬದ್ಧತಾ ವೆಚ್ಚಕ್ಕೆ ಕಡಿವಾಣ ಹಾಕಬೇಕಾಗಿದೆ. ದುಂದು ವೆಚ್ಚಗಳನ್ನು ನಿಲ್ಲಿಸಬೇಕು ಅನಗತ್ಯ ಹುದ್ದೆಗಳನ್ನು ರದ್ದುಮಾಡಬೇಕು, ತೆರಿಗೆಯೇತರ ಆದಾಯವನ್ನು ಹೆಚ್ಚಿಸಬೇಕು. ಆರ್ಥಿಕ ಶಿಸ್ತನ್ನು ಪಾಲಿಸಬೇಕು” ಎಂದು ಹೇಳಿದ್ದಾರೆ.

“ರಾಜ್ಯ ಸರ್ಕಾರ ಒಂದು ಲಕ್ಷ ಕೋಟಿ ರೂಪಾಯಿ ಸಾಲ ಎತ್ತಲು ಹೊರಟರೂ ಪ್ರವಾಹದಿಂದ ಬದುಕು ಕಳೆದುಕೊಂಡು ಬೀದಿಗೆ ಬಿದ್ದಿರುವ ಜನರಿಗೆ ಪರಿಹಾರ ಕೊಡಲು ರಾಜ್ಯ ಸರ್ಕಾರದಲ್ಲಿ ದುಡ್ಡಿಲ್ಲ, ಕೊರೊನಾ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ನೀಡಲು ಸಾಧ್ಯವಾಗಿಲ್ಲ. ಜನರ ತೆರಿಗೆಯ ದುಡ್ಡಿನ ಜೊತೆ ಸಾಲದ ದುಡ್ಡು ಕೂಡಾ ಯಾರ ಜೇಬಿಗೆ ಹೋಗಿದೆ ಎನ್ನುವುದನ್ನು ಮುಖ್ಯಮಂತ್ರಿಗಳು ತಿಳಿಸಬೇಕು” ಎಂದು ಅವರು ಹೇಳಿದ್ದಾರೆ.

“ಬಿಜೆಪಿ ಆಡಳಿತದ ಹಿಂದಿನ ಅವಧಿಯಲ್ಲಿ ದೇಶದ ಅತ್ಯಂತ ಭ್ರಷ್ಟ ಸರ್ಕಾರ ಕರ್ನಾಟಕದ್ದು ಎಂದು ಮಾಧ್ಯಮಗಳು ತುಚ್ಚೀಕರಿಸುತ್ತಿತ್ತು. ನಮ್ಮ ಆಡಳಿತದ ಕಾಲದಲ್ಲಿ ಅತ್ಯಂತ ಸಮರ್ಥವಾಗಿ ಹಣಕಾಸನ್ನು ನಿರ್ವಹಿಸಿದ ರಾಜ್ಯ ಕರ್ನಾಟಕವೆಂದು ದೇಶ ಕೊಂಡಾಡುತ್ತಿತ್ತು. ಇಂತಹ ಕರ್ನಾಟಕವನ್ನು ಭಾರತೀಯ ಜನತಾ ಪಕ್ಷದ ಸರ್ಕಾರ ಮತ್ತೆ ಭಿಕ್ಷುಕ ರಾಜ್ಯವನ್ನಾಗಿ ಮಾಡಲು ಹೊರಟಿದೆ” ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಉಪಚುನಾವಣೆ ಭ್ರಷ್ಟ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಆಗಬೇಕು – ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...