Homeಮುಖಪುಟ’ಬಿಜೆಪಿ ನನ್ನನ್ನು ಕೇಸರಿಮಯ ಮಾಡಲು ಹೊರಟಿದೆ. ಆದರದು ಸಾಧ್ಯವಿಲ್ಲ’: ನಟ ರಜನಿಕಾಂತ್

’ಬಿಜೆಪಿ ನನ್ನನ್ನು ಕೇಸರಿಮಯ ಮಾಡಲು ಹೊರಟಿದೆ. ಆದರದು ಸಾಧ್ಯವಿಲ್ಲ’: ನಟ ರಜನಿಕಾಂತ್

- Advertisement -
- Advertisement -

ತಮಿಳು ಹಾಗೂ ಬಹುಭಾಷಾ ನಟ ಸೂಪರ್‌ ಸ್ಟಾರ್‌ ರಜನಿಕಾಂತ್ ಅವರು ಬಿಜೆಪಿ ವಿರುದ್ಧ ಗರಂ ಆಗಿದ್ದಾರೆ. ಮಾಜಿ ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಅವರನ್ನು ಭೇಟಿಯಾದ ಬಳಿಕ, ರಜನಿಕಾಂತ್ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ಊಹಾಪೋಹಗಳು ಎಲ್ಲೆಡೆ ಹರಿದಾಡಿದ್ದವು. ಈ ಎಲ್ಲಾ ಸುದ್ದಿಗಳನ್ನು ರಜನಿಕಾಂತ್ ತಳ್ಳಿ ಹಾಕಿದ್ದಾರೆ. ತಿರುವಳ್ಳುರ್ ಅವರಂತೆ ನನ್ನನ್ನೂ ಕೇಸರಿಮಯ ಮಾಡುವ ಯತ್ನ ನಡೆದಿದೆ ಎಂದು ಹರಿಹಾಯ್ದರು.

ತಮಿಳುನಾಡಿನಲ್ಲಿ ೨೦೨೧ಕ್ಕೆ ನಡೆಯಲಿರುವ ವಿಧಾನಸಭೆ ಚುನಾವಣೆ ವೇಳೆ ನಟ ರಜನಿಕಾಂತ್ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಅವರನ್ನು ಕೇಸರಿಮಯ ಮಾಡಲಾಗುವುದು ಎಂಬ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಚೆನ್ನೈನಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಬಿಜೆಪಿಯಿಂದ ಯಾವುದೇ ಆಫರ್ ಬಂದಿಲ್ಲ. ಯಾವುದೇ ಪಕ್ಷವನ್ನು ಸೇರಬೇಕೋ ಬೇಡವೋ ಎಂಬ ಬಗ್ಗೆ ಜನರು ತೀರ್ಮಾನಿಸಲಿದ್ದಾರೆ. ನನ್ನನ್ನು ಬಿಜೆಪಿ ಕೇಸರಿಮಯ ಮಾಡಲು ನೋಡುತ್ತಿದೆ. ಆದರೆ ಇದಕ್ಕೆ ಯಾವುದೇ ಅವಕಾಶವಿಲ್ಲ. ಅಷ್ಟು ಸುಲಭವಾಗಿ ನಮ್ಮನ್ನು ಭೇದಿಸಲು ಸಾಧ್ಯವಿಲ್ಲ ಎಂದರು.

ತಿರುವಳ್ಳುರ್ ಅವರನ್ನು ಕೇಸರಿಮಯ ಮಾಡಲು ಯತ್ನಿಸಿದಂತೆ, ರಜನಿಕಾಂತ್ ಅವರನ್ನೂ ಕೇಸರಿಮಯವನ್ನಾಗಿ ಮಾಡಲು ಬಿಜೆಪಿ ಯತ್ನಿಸುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದರು. ತಮಿಳು ಹೊಸ ವರ್ಷವಾದ ನವೆಂಬರ್ ೨ರಂದು ತಮಿಳುನಾಡು ಬಿಜೆಪಿ ಘಟಕವು, ತಮಿಳಿನ ಖ್ಯಾತ ದಾರ್ಶನಿಕ ಕವಿ ತಿರುವಳ್ಳುರ್ ಅವರಿಗೆ ಕೇಸರಿ ನಿಲುವಂಗಿ ತೊಡಿಸಿದ ಚಿತ್ರವನ್ನು ಟ್ವೀಟ್ ಮಾಡಿತ್ತು. ಅದಕ್ಕೆ ಭಾರೀ ಪ್ರತಿರೋಧ ಎದುರಾಗಿತ್ತು.

“ತಿರುವಳ್ಳುರ್ ಅವರು ಬೌದ್ಧಿಕವಾಗಿ ಕೃಷಿ ಮಾಡಿದವರು. ಅಂತಹವರನ್ನು ಒಂದು ಧರ್ಮಕ್ಕೆ ಸೀಮಿತಗೊಳಿಸಬಾರದು. ಇಂತಹ ವ್ಯಕ್ತಿಗಳನ್ನು ಧರ್ಮದ ಬಂಧನದಲ್ಲಿ ಬಂಧಿಸುವುದು ತಪ್ಪಾಗುತ್ತದೆ. ತಿರುವಳ್ಳುರ್ ನಾಸ್ತಿಕರಲ್ಲ. ಅವರು ನಂಬಿಕೆ ಉಳ್ಳವರು. ಅವರನ್ನು ಯಾರೂ ಮರೆಯಲು ಸಾಧ್ಯವಿಲ್ಲ” ಎಂದು ರಜನೀಕಾಂತ್ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

“ಬಿಜೆಪಿ ಪಕ್ಷವು ಕೇಸರಿ ಬಣ್ಣಕ್ಕೆ ಪೇಟೆಂಟ್ ಪಡೆದಿಟ್ಟುಕೊಂಡಂತೆ ಕಾಣುತ್ತೆ. ದೇಶದಲ್ಲಿ ಚರ್ಚಿಸಲು ಸಾಕಷ್ಟು ವಿಷಯಗಳಿವೆ. ಸಮಾಜವನ್ನು ಕಾಡುತ್ತಿರುವ ಅತಿದೊಡ್ಡ ಸಮಸ್ಯೆಗಳಿವೆ. ಅವುಗಳ ಬಗ್ಗೆ ಚರ್ಚೆ ಮಾಡುವುದನ್ನು ಬಿಟ್ಟು, ಬರೀ ಕೇಸರಿ ಬಣ್ಣದ ಬಟ್ಟೆ ಧರಿಸುವುದನ್ನೇ ದೊಡ್ಡ ಸಮಸ್ಯೆಯನ್ನಾಗಿ ಬಿಂಬಿಸಲಾಗುತ್ತಿದೆ. ಇದೆಲ್ಲಾ ಸಿಲ್ಲಿಯಾಗಿದೆ” ಎಂದರು.

“ಇಂದು ನೋಟ್ ನಿಷೇಧಕ್ಕೆ ೩ ವರ್ಷ ಸಂದಿದೆ. ಭಾರತದ ಆರ್ಥಿಕತೆ ನೆಲಕಚ್ಚಿದೆ. ಅಭಿವೃದ್ಧಿ ಮಂದಗತಿಯಲ್ಲಿ ಸಾಗುತ್ತಿದೆ. ಕೇಂದ್ರ ಸರ್ಕಾರ ಕುಸಿಯುತ್ತಿರುವ ಆರ್ಥಿಕತೆಯನ್ನು ಸುಧಾರಿಸಲು ಸೂಕ್ತ ಕ್ರಮ ಕೈಗೊಳ್ಳುವತ್ತ ಹೆಜ್ಜೆಯಿಡಬೇಕು” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....