Homeಮುಖಪುಟ’ಬಿಜೆಪಿ ನನ್ನನ್ನು ಕೇಸರಿಮಯ ಮಾಡಲು ಹೊರಟಿದೆ. ಆದರದು ಸಾಧ್ಯವಿಲ್ಲ’: ನಟ ರಜನಿಕಾಂತ್

’ಬಿಜೆಪಿ ನನ್ನನ್ನು ಕೇಸರಿಮಯ ಮಾಡಲು ಹೊರಟಿದೆ. ಆದರದು ಸಾಧ್ಯವಿಲ್ಲ’: ನಟ ರಜನಿಕಾಂತ್

- Advertisement -
- Advertisement -

ತಮಿಳು ಹಾಗೂ ಬಹುಭಾಷಾ ನಟ ಸೂಪರ್‌ ಸ್ಟಾರ್‌ ರಜನಿಕಾಂತ್ ಅವರು ಬಿಜೆಪಿ ವಿರುದ್ಧ ಗರಂ ಆಗಿದ್ದಾರೆ. ಮಾಜಿ ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಅವರನ್ನು ಭೇಟಿಯಾದ ಬಳಿಕ, ರಜನಿಕಾಂತ್ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ಊಹಾಪೋಹಗಳು ಎಲ್ಲೆಡೆ ಹರಿದಾಡಿದ್ದವು. ಈ ಎಲ್ಲಾ ಸುದ್ದಿಗಳನ್ನು ರಜನಿಕಾಂತ್ ತಳ್ಳಿ ಹಾಕಿದ್ದಾರೆ. ತಿರುವಳ್ಳುರ್ ಅವರಂತೆ ನನ್ನನ್ನೂ ಕೇಸರಿಮಯ ಮಾಡುವ ಯತ್ನ ನಡೆದಿದೆ ಎಂದು ಹರಿಹಾಯ್ದರು.

ತಮಿಳುನಾಡಿನಲ್ಲಿ ೨೦೨೧ಕ್ಕೆ ನಡೆಯಲಿರುವ ವಿಧಾನಸಭೆ ಚುನಾವಣೆ ವೇಳೆ ನಟ ರಜನಿಕಾಂತ್ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಅವರನ್ನು ಕೇಸರಿಮಯ ಮಾಡಲಾಗುವುದು ಎಂಬ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಚೆನ್ನೈನಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಬಿಜೆಪಿಯಿಂದ ಯಾವುದೇ ಆಫರ್ ಬಂದಿಲ್ಲ. ಯಾವುದೇ ಪಕ್ಷವನ್ನು ಸೇರಬೇಕೋ ಬೇಡವೋ ಎಂಬ ಬಗ್ಗೆ ಜನರು ತೀರ್ಮಾನಿಸಲಿದ್ದಾರೆ. ನನ್ನನ್ನು ಬಿಜೆಪಿ ಕೇಸರಿಮಯ ಮಾಡಲು ನೋಡುತ್ತಿದೆ. ಆದರೆ ಇದಕ್ಕೆ ಯಾವುದೇ ಅವಕಾಶವಿಲ್ಲ. ಅಷ್ಟು ಸುಲಭವಾಗಿ ನಮ್ಮನ್ನು ಭೇದಿಸಲು ಸಾಧ್ಯವಿಲ್ಲ ಎಂದರು.

ತಿರುವಳ್ಳುರ್ ಅವರನ್ನು ಕೇಸರಿಮಯ ಮಾಡಲು ಯತ್ನಿಸಿದಂತೆ, ರಜನಿಕಾಂತ್ ಅವರನ್ನೂ ಕೇಸರಿಮಯವನ್ನಾಗಿ ಮಾಡಲು ಬಿಜೆಪಿ ಯತ್ನಿಸುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದರು. ತಮಿಳು ಹೊಸ ವರ್ಷವಾದ ನವೆಂಬರ್ ೨ರಂದು ತಮಿಳುನಾಡು ಬಿಜೆಪಿ ಘಟಕವು, ತಮಿಳಿನ ಖ್ಯಾತ ದಾರ್ಶನಿಕ ಕವಿ ತಿರುವಳ್ಳುರ್ ಅವರಿಗೆ ಕೇಸರಿ ನಿಲುವಂಗಿ ತೊಡಿಸಿದ ಚಿತ್ರವನ್ನು ಟ್ವೀಟ್ ಮಾಡಿತ್ತು. ಅದಕ್ಕೆ ಭಾರೀ ಪ್ರತಿರೋಧ ಎದುರಾಗಿತ್ತು.

“ತಿರುವಳ್ಳುರ್ ಅವರು ಬೌದ್ಧಿಕವಾಗಿ ಕೃಷಿ ಮಾಡಿದವರು. ಅಂತಹವರನ್ನು ಒಂದು ಧರ್ಮಕ್ಕೆ ಸೀಮಿತಗೊಳಿಸಬಾರದು. ಇಂತಹ ವ್ಯಕ್ತಿಗಳನ್ನು ಧರ್ಮದ ಬಂಧನದಲ್ಲಿ ಬಂಧಿಸುವುದು ತಪ್ಪಾಗುತ್ತದೆ. ತಿರುವಳ್ಳುರ್ ನಾಸ್ತಿಕರಲ್ಲ. ಅವರು ನಂಬಿಕೆ ಉಳ್ಳವರು. ಅವರನ್ನು ಯಾರೂ ಮರೆಯಲು ಸಾಧ್ಯವಿಲ್ಲ” ಎಂದು ರಜನೀಕಾಂತ್ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

“ಬಿಜೆಪಿ ಪಕ್ಷವು ಕೇಸರಿ ಬಣ್ಣಕ್ಕೆ ಪೇಟೆಂಟ್ ಪಡೆದಿಟ್ಟುಕೊಂಡಂತೆ ಕಾಣುತ್ತೆ. ದೇಶದಲ್ಲಿ ಚರ್ಚಿಸಲು ಸಾಕಷ್ಟು ವಿಷಯಗಳಿವೆ. ಸಮಾಜವನ್ನು ಕಾಡುತ್ತಿರುವ ಅತಿದೊಡ್ಡ ಸಮಸ್ಯೆಗಳಿವೆ. ಅವುಗಳ ಬಗ್ಗೆ ಚರ್ಚೆ ಮಾಡುವುದನ್ನು ಬಿಟ್ಟು, ಬರೀ ಕೇಸರಿ ಬಣ್ಣದ ಬಟ್ಟೆ ಧರಿಸುವುದನ್ನೇ ದೊಡ್ಡ ಸಮಸ್ಯೆಯನ್ನಾಗಿ ಬಿಂಬಿಸಲಾಗುತ್ತಿದೆ. ಇದೆಲ್ಲಾ ಸಿಲ್ಲಿಯಾಗಿದೆ” ಎಂದರು.

“ಇಂದು ನೋಟ್ ನಿಷೇಧಕ್ಕೆ ೩ ವರ್ಷ ಸಂದಿದೆ. ಭಾರತದ ಆರ್ಥಿಕತೆ ನೆಲಕಚ್ಚಿದೆ. ಅಭಿವೃದ್ಧಿ ಮಂದಗತಿಯಲ್ಲಿ ಸಾಗುತ್ತಿದೆ. ಕೇಂದ್ರ ಸರ್ಕಾರ ಕುಸಿಯುತ್ತಿರುವ ಆರ್ಥಿಕತೆಯನ್ನು ಸುಧಾರಿಸಲು ಸೂಕ್ತ ಕ್ರಮ ಕೈಗೊಳ್ಳುವತ್ತ ಹೆಜ್ಜೆಯಿಡಬೇಕು” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...