Homeಮುಖಪುಟಬಂಗಾಳಿ ಭಾಷಿಕರನ್ನು ಬಾಂಗ್ಲಾದೇಶಿಗಳು ಎಂದು ಬಿಜೆಪಿ ಹಣೆಪಟ್ಟಿ ಕಟ್ಟುತ್ತಿದೆ: ಸಿಎಂ ಮಮತಾ

ಬಂಗಾಳಿ ಭಾಷಿಕರನ್ನು ಬಾಂಗ್ಲಾದೇಶಿಗಳು ಎಂದು ಬಿಜೆಪಿ ಹಣೆಪಟ್ಟಿ ಕಟ್ಟುತ್ತಿದೆ: ಸಿಎಂ ಮಮತಾ

- Advertisement -
- Advertisement -

ಬಿಜೆಪಿ ಆಳ್ವಿಕೆಯಲ್ಲಿರುವ ರಾಜ್ಯಗಳಲ್ಲಿ ಬಂಗಾಳಿ ಮಾತನಾಡುವ ಭಾರತೀಯ ನಾಗರಿಕರನ್ನು ಅಕ್ರಮ ಬಾಂಗ್ಲಾದೇಸಿ ವಲಸಿಗರೆಂದು ಹಣೆಪಟ್ಟಿ ಕಟ್ಟಲಾಗುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಆಕ್ರೋಶ ವ್ಯಕ್ತಪಡಿಸಿದ್ದು, ದೃಢೀಕೃತ ದಾಖಲೆ ಹೊಂದಿದ್ದರೂ ಬಂಗಾಳಿ ಭಾಷಿಕರನ್ನು ಗುರಿಯಾಗಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಬಂಗಾಳಿ ಭಾಷಿಕರನ್ನು

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಂಗಾಳಿ ಮಾತನಾಡುವ ಜನರನ್ನು ಬಿಜೆಪಿ ಬೇಟೆಯಾಡುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಅವರು ರಾಜ್ಯದ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಆರೋಪಿಸಿದ್ದು, ಈ ವೇಳೆ ವಿಪಕ್ಷಗಳು ಗದ್ದಲ ಆರಂಭಿಸಿದವು.

“ಮಾತನಾಡುವ ಭಾಷೆಯ ಕಾರಣಕ್ಕಾಗಿ ನಿಜವಾದ ಭಾರತೀಯ ನಾಗರಿಕರನ್ನು ಬಾಂಗ್ಲಾದೇಶಿಗಳು ಎಂದು ಹಣೆಪಟ್ಟಿ ಕಟ್ಟುತ್ತಿರುವುದಕ್ಕೆ ನಿಮಗೆ ನಾಚಿಕೆಯಾಗಬೇಕು. ಬಂಗಾಳಿ, ಗುಜರಾತಿ, ಮರಾಠಿ, ಹಿಂದಿ ಭಾಷೆಗಳಲ್ಲಿ ಮಾತನಾಡಲು ಹೆಮ್ಮೆಪಡಬೇಕು. ನೀವು ನನ್ನನ್ನು ಕೇಳಿದರೆ, ನಾನು ಈ ಎಲ್ಲಾ ಭಾಷೆಗಳಲ್ಲಿ ಮಾತನಾಡಬಲ್ಲೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

“ಒಂದೆಡೆ, ನೀವು ಮಾತನಾಡುವ ಮಾತಿಗಾಗಿ ಭಾರತೀಯರನ್ನು ಬಾಂಗ್ಲಾದೇಶಿಗಳು ಎಂದು ಬ್ರಾಂಡ್ ಮಾಡುತ್ತಿದ್ದೀರಿ ಮತ್ತು ಮತ್ತೊಂದೆಡೆ, ಮತದಾರರ ಗುರುತಿನ ಚೀಟಿ, ಪ್ಯಾನ್ ಮತ್ತು ಆಧಾರ್ ಕಾರ್ಡ್‌ಗಳನ್ನು ಹೊಂದಿರುವ ಈ ಜನರಿಗೆ ನಿಮ್ಮ ರಾಜ್ಯಗಳಲ್ಲಿ ಜೀವನೋಪಾಯವನ್ನು ಗಳಿಸುವ ಹಕ್ಕನ್ನು ಕಸಿದುಕೊಳ್ಳುತ್ತಿದ್ದೀರಿ” ಎಂದು ಅವರು ಹೇಳಿದ್ದಾರೆ.

ಅವರ ಹೇಳಿಕೆಗಳನ್ನು ವಿರೋಧಿಸಿ ಬಿಜೆಪಿ ಶಾಸಕರು ಪ್ರತಿಭಟನೆ ಮುಂದಾಗಿ ಎದ್ದು ನಿಂತು ಘೋಷಣೆಗಳನ್ನು ಕೂಗಿದ್ದು ವಿಧಾನಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಆದರೆ, ಮುಖ್ಯಮಂತ್ರಿಗಳು ತಮ್ಮ ಭಾಷಣವನ್ನು ನಿಲ್ಲಿಸದೆ ಮುಂದುವರಿಸಿದರು.

ಕೇಂದ್ರ ಸರ್ಕಾರವು ರಾಜ್ಯಕ್ಕೆ ಬರಬೇಕಾದ ಕೇಂದ್ರದ ನಿಧಿಯನ್ನು ನಿರ್ಬಂಧಿಸುತ್ತಿದೆ ಎಂದು ಆರೋಪಿಸಿದ ಸಿಎಂ, ಬಿಜೆಪಿಯ ಮಲತಾಯಿ ಧೋರಣೆಯ ಹೊರತಾಗಿಯೂ, ರಾಜ್ಯವು ಪಾಠಶ್ರೀ ಅಡಿಯಲ್ಲಿ 69,000 ಕಿ.ಮೀ ರಸ್ತೆಗಳನ್ನು ನಿರ್ಮಿಸಿದೆ ಮತ್ತು 11,000 ಕೋಟಿ ರೂ.ಗಳೊಂದಿಗೆ ಆವಾಸ್ ಯೋಜನೆಯನ್ನು ಪ್ರಾರಂಭಿಸಿದೆ ಎಂದು ಹೇಳಿದ್ದಾರೆ.

“ಬಂಗಾಳವು ರಸ್ತೆ ಮತ್ತು ಗ್ರಾಮೀಣ ವಸತಿ ಯೋಜನೆಗಳ ಶ್ರೇಯಾಂಕದಲ್ಲಿ ಸತತ ಐದು ಬಾರಿ ಅಗ್ರಸ್ಥಾನದಲ್ಲಿದೆ” ಎಂದು ಅವರು ಹೇಳಿದ್ದಾರೆ.

ಆರ್ಥಿಕ ಬಿಕ್ಕಟ್ಟಿನ ಹೊರತಾಗಿಯೂ, ರಾಜ್ಯದ ಜನರು ಸರಾಸರಿ 50 ದಿನಗಳ ಉದ್ಯೋಗವನ್ನು ಪಡೆಯುತ್ತಿದ್ದಾರೆ ಮತ್ತು ಅವರ ಸರ್ಕಾರವು ವಿವಿಧ ಯೋಜನೆಗಳ ಅಡಿಯಲ್ಲಿ 1.5 ಕೋಟಿ ಮಾನವ ದಿನಗಳನ್ನು ಸೃಷ್ಟಿಸಿದೆ ಎಂದು ಅವರು ಹೇಳಿಕೊಂಡಿದ್ದಾರೆ.

“ಒಂದೆಡೆ ನೀವು ಬಂಗಾಳದ ಬಡ ಜನರನ್ನು ವಂಚಿತಗೊಳಿಸುತ್ತಿದ್ದರೆ, ಮತ್ತೊಂದೆಡೆ, ನಿಮ್ಮ ರಾಜ್ಯಗಳಲ್ಲಿ ವಿವಿಧ ಅಪಘಾತಗಳಲ್ಲಿ ಸಾವಿನ ಮೆರವಣಿಗೆ ಮುಂದುವರೆದಿದೆ” ಎಂದು ಅವರು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನ ಸಾಮಾಜಿಕ ಕಲ್ಯಾಣ ನಿರ್ದೇಶನಗಳಿಗೆ ಅನುಗುಣವಾಗಿ, ಪರಿಶಿಷ್ಟ ಜಾತಿಗಳು (ಶೇಕಡಾ 26), ಪರಿಶಿಷ್ಟ ಪಂಗಡಗಳು (ಶೇಕಡಾ 6), ಹಿಂದುಳಿದ ಜಾತಿಗಳು ಮತ್ತು ಮುಸ್ಲಿಮರ (ಶೇಕಡಾ 30) ಹಿತಾಸಕ್ತಿಗಳನ್ನು ಕಾಪಾಡಲು ತಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಮಮತಾ ಬ್ಯಾನರ್ಜಿ ಪ್ರತಿಪಾದಿಸಿದ್ದಾರೆ.

“ನಮ್ಮ ಹಾದಿಯಿಂದ ನಮ್ಮನ್ನು ಹಳಿತಪ್ಪಿಸಲು ಅಥವಾ ನಮ್ಮ ಕನಸುಗಳನ್ನು ನನಸಾಗಿಸುವುದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಈ ಮಧ್ಯೆ, ಎಸ್‌ಎಸ್‌ಸಿ ಹಗರಣಕ್ಕೆ ಸಂಬಂಧಿಸಿದ “ಶಿಕ್ಷಣ ವಲಯದಲ್ಲಿನ ಬಿಕ್ಕಟ್ಟು” ಕುರಿತು ಮುಂದೂಡಿಕೆ ನಿರ್ಣಯವನ್ನು ಸ್ವೀಕರಿಸಲು ಸ್ಪೀಕರ್ ಬಿಮನ್ ಬ್ಯಾನರ್ಜಿ ನಿರಾಕರಿಸಿದ ನಂತರ ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದರು.

ಗದ್ದಲದ ಮಧ್ಯೆ, ಶಿಸ್ತು ಉಲ್ಲಂಘನೆಗಾಗಿ ಸ್ಪೀಕರ್ ಬಿಜೆಪಿ ಶಾಸಕ ಮನೋಜ್ ಒರಾವ್ ಅವರನ್ನು ದಿನದ ಮಟ್ಟಿಗೆ ಅಮಾನತುಗೊಳಿಸಿದರು ಮತ್ತು ಬಿಜೆಪಿ ಮುಖ್ಯ ಸಚೇತಕ ಶಂಕರ್ ಘೋಷ್ ಅವರ ನಡವಳಿಕೆಗೆ ಎಚ್ಚರಿಕೆ ನೀಡಿದರು.

ಸಾಂಕೇತಿಕ ಪ್ರತಿಭಟನೆ ನಡೆಸಿದ ಎಲ್ಲಾ 40 ಬಿಜೆಪಿ ಶಾಸಕರು ಮಡಕೆಯಲ್ಲಿಟ್ಟ ತುಳಸಿ ಗಿಡಗಳನ್ನು ಹೊತ್ತುಕೊಂಡು ಸದನದಿಂದ ನಿರ್ಗಮಿಸಿದರು. ಬಂಗಾಳಿ ಭಾಷಿಕರನ್ನು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕೆ.ಆರ್.ಪೇಟೆ ದಲಿತ ಯುವಕನ ಸಜೀವ ದಹನ ಪ್ರಕರಣ; ಅರೋಪಿಗೆ ಜಾಮೀನು ನಿರಾಕರಣೆ

ಕೆ.ಆರ್.ಪೇಟೆ ದಲಿತ ಯುವಕನ ಸಜೀವ ದಹನ ಪ್ರಕರಣ; ಅರೋಪಿಗೆ ಜಾಮೀನು ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...