Homeಮುಖಪುಟಬಿಜೆಪಿ ರಾಹುಲ್ ಗಾಂಧಿಯನ್ನು 'ಹೀರೋ' ಮಾಡುತ್ತಿದೆ: ಮಮತಾ ಬ್ಯಾನರ್ಜಿ ವಾಗ್ದಾಳಿ

ಬಿಜೆಪಿ ರಾಹುಲ್ ಗಾಂಧಿಯನ್ನು ‘ಹೀರೋ’ ಮಾಡುತ್ತಿದೆ: ಮಮತಾ ಬ್ಯಾನರ್ಜಿ ವಾಗ್ದಾಳಿ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ”ಹೀರೋ” ಮಾಡುವ ಮೂಲಕ ಬಿಜೆಪಿಯು ಪ್ರಸ್ತುತ ಸಮಸ್ಯೆಗಳಿಂದ ಬೇರೆಡೆ ಗಮನ ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಲಂಡನ್‌ನಲ್ಲಿ ನೀಡಿದ ಅವರ ಹೇಳಿಕೆಗಳ ವಿಚಾರವಾಗಿ ಸಂಸತ್ತಿನ ಕಲಾಪಗಳನ್ನು ಸ್ಥಗಿತಗೊಳಿಸಿದ್ದಾರೆ.

ಮಾರ್ಚ್ 19ರಂದು ಸಂಜೆ ಬಹರಂಪುರ ಪಕ್ಷದ ಕಚೇರಿಯಲ್ಲಿ ಆಂತರಿಕ ಸಭೆ ನಡೆಯಿತು. ಈ ಸಭೆಯಲ್ಲಿ ಫೊನ್ ಮೂಲಕ ಪಕ್ಷದ ಮುಖಂಡರ ಜೊತೆ ಮಾತನಾಡಿದ ಬ್ಯಾನರ್ಜಿ, ”ಬಿಜೆಪಿಯನ್ನು ಎದುರಿಸಲು ಕಾಂಗ್ರೆಸ್ ವಿಫಲವಾಗಿದೆ ಮತ್ತು ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಮತ್ತು ಕೇಸರಿ ಪಕ್ಷದ ನಡುವೆ ಅಘೋಷಿತ ಒಪ್ಪಂದವಿದೆ ಎಂದು ಆರೋಪ ಮಾಡಿದ್ದಾರೆ.

”ವಿರೋಧ ಪಕ್ಷಗಳು ಜನರ ಬಗ್ಗೆ ಕಾಳಜಿ ವ್ಯಕ್ತಪಡಿಸುವುದನ್ನು ತಡೆಯುವ ಮೂಲಕ ಬಿಜೆಪಿ ಲಾಭ ಮಾಡಿಕೊಳ್ಳುವ ಗುರಿಯನ್ನು ಹೊಂದಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಲಂಡನ್ ಭಾಷಣದ ವಿಚಾರ: ರಾಹುಲ್‌ ಲೋಕಸಭೆ ಸದಸ್ಯತ್ವ ಅಮಾನತ್ತಿಗೆ ಆಗ್ರಹಿಸಿದ ಬಿಜೆಪಿ

ರಾಹುಲ್ ಗಾಂಧಿ ಅವರು ಇತ್ತೀಚಿನ ಲಂಡನ್ ಪ್ರವಾಸದ ಸಂದರ್ಭದಲ್ಲಿ ನೀಡಿದ ಹೇಳಿಕೆಗಳ ಕುರಿತು ಸಂಸತ್ತಿನಲ್ಲಿ ಗದ್ದಲ ಗಲಾಟೆಯಲ್ಲೇ ಸದನ ಮುಂದೂಡತ್ತ ಬರಲಾಗಿದೆ. ಬಜೆಟ್ ಅಧಿವೇಶನದ ದ್ವಿತೀಯಾರ್ಧದ ಮೊದಲ ಐದು ದಿನಗಳವರೆಗೆ ಮಹತ್ವದ ವ್ಯವಹಾರವನ್ನು ನಡೆಸದಂತೆ ಎರಡೂ ಸದನಗಳನ್ನು ಸ್ಥಗಿತಗೊಳಿಸಲಾಗಿದೆ. ಹಾಗಾಗಿ ಮಮತಾ ಬ್ಯಾನರ್ಜಿ ಅವರು ಕೇಂದ್ರ ಬಿಜೆಪಿ ವಿರುದ್ಧ ಆರೋಪ ಮಾಡಿದ್ದಾರೆ.

ಕಾಂಗ್ರೆಸ್ ವಿರೋಧ ಪಕ್ಷದ “ಬಿಗ್ ಬಾಸ್” ಅಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಈ ಮೂಲಕ ಎಲ್ಲ ವಿರೋಧ ಪಕ್ಷಗಳು ಒಗ್ಗೂಡಿ 2024ರ ಲೋಕಾಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ವಿಚಾರದಿಂದ ದೂರ ಉಳಿದಿದ್ದಾರೆ.

ಸಾಗರ್ದಿಘಿ ಉಪಚುನಾವಣೆ ಫಲಿತಾಂಶಗಳನ್ನು ಉಲ್ಲೇಖಿಸಿ, ಟಿಎಂಸಿ ಸ್ಥಾನವನ್ನು ಕಾಂಗ್ರೆಸ್ ಸ್ಥಾನ ಪಡೆದುಕೊಂಡಿದೆ. ರಾಜ್ಯದಲ್ಲಿ “ಕಾಂಗ್ರೆಸ್-ಸಿಪಿಐ(ಎಂ)-ಬಿಜೆಪಿಯೊಂದಿಗೆ ಅಪವಿತ್ರ ನಂಟು” ಹೊಂದಿದೆ ಎಂದು ಬ್ಯಾನರ್ಜಿ ಆರೋಪ ಮಾಡಿದ್ದಾರೆ. ಮುಂಬರುವ ಪಂಚಾಯತ್ ಮತ್ತು ಲೋಕಸಭೆ ಚುನಾವಣೆಯಲ್ಲಿ ಈ ಮೈತ್ರಿಕೂಟವನ್ನು ಸೋಲಿಸಬೇಕು ಎಂದು ಪಕ್ಷದ ಸದಸ್ಯರನ್ನು ಬ್ಯಾನರ್ಜಿ ಕೋರಿದ್ದಾರೆ.

”ಅವರು “ಬಿಜೆಪಿಯೊಂದಿಗೆ ಅಘೋಷಿತ ಹೊಂದಾಣಿಕೆ” ಹೊಂದಿದ್ದಾರೆ ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಧೀರ್ ಚೌಧುರಿ ಅವರನ್ನು ಹೆಸರಿಸದೆ ಬ್ಯಾನರ್ಜಿ ಆರೋಪಿಸಿದರು. ಈ ಹಿಂದೆ ಉಪಚುನಾವಣೆ ಫಲಿತಾಂಶದ ನಂತರ ಬ್ಯಾನರ್ಜಿ ಅವರು ಕಾಂಗ್ರೆಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...