Homeಮುಖಪುಟಕೊರೊನಾ ವೈರಸ್‌ಗಿಂತ ಬಿಜೆಪಿ ಅಪಾಯಕಾರಿಯೆಂದ ಸಂಸದೆ‌-ಬಿಜೆಪಿಯ ಉತ್ತರವೇನು ಗೊತ್ತೆ?

ಕೊರೊನಾ ವೈರಸ್‌ಗಿಂತ ಬಿಜೆಪಿ ಅಪಾಯಕಾರಿಯೆಂದ ಸಂಸದೆ‌-ಬಿಜೆಪಿಯ ಉತ್ತರವೇನು ಗೊತ್ತೆ?

- Advertisement -
- Advertisement -

ರಕ್ತದಾನ ಶಿಬಿರದಲ್ಲಿ ಮಾತನಾಡುತ್ತಿದ್ದ ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್, ಬಿಜೆಪಿ ಪಕ್ಷವನ್ನು ಕೊರೊನಾ ವೈರಸ್‌ಗಿಂತ ಅಪಾಯಕಾರಿ ಎಂದು ಸಾರ್ವಜನಿಕವಾಗಿ ಜರಿದಿದ್ದಾರೆ.

“ನಿಮ್ಮ ಕಿವಿ ಮತ್ತು ಕಣ್ಣುಗಳನ್ನು ತೆರೆದಿಡಿ ಯಾಕೆಂದರೆ ನಿಮ್ಮ ಸುತ್ತಲೂ ಕೊರೊನಾಗಿಂತಲೂ ಹೆಚ್ಚು ಅಪಾಯಕಾರಿ ಜನರು ಇದ್ದಾರೆ. ಬಿಜೆಪಿ ಕೊರೊನಾಗಿಂತಲೂ ಹೆಚ್ಚು ಅಪಾಯಕಾರಿಯಾಗಿದೆ. ಯಾಕೆಂದರೆ ಅವರಿಗೆ ನಮ್ಮ ಸಂಸ್ಕೃತಿ ಅರ್ಥವಾಗುವುದಿಲ್ಲ, ಅವರಿಗೆ ಮಾನವೀಯತೆ ಅರ್ಥವಾಗುವುದಿಲ್ಲ. ಅವರಿಗೆ ನಮ್ಮ ಕಠಿಣ ಪರಿಶ್ರಮದ ಮೌಲ್ಯವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ಅವರಿಗೆ ವ್ಯವಹಾರ ಮಾತ್ರ ತಿಳಿದಿದೆ” ಎಂದು ಅವರು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಪ.ಬಂಗಾಳ ಚುನಾವಣೆ: AAP ಯ ದೆಹಲಿ ಮಾದರಿ ಪ್ರಚಾರ ತಂತ್ರ ಬಳಸಲಿರುವ ಮಮತಾ ಬ್ಯಾನರ್ಜಿ

“ಅವರಲ್ಲಿ ಸಾಕಷ್ಟು ಹಣವಿದೆ. ಅವರು ಅದನ್ನು ಎಲ್ಲೆಡೆ ಹಂಚಿ, ತದನಂತರ ಧರ್ಮದ ಆಧಾರದ ಮೇಲೆ ಜನರನ್ನು ಒಡೆದು ಗಲಭೆಗಳನ್ನು ಪ್ರಚೋದಿಸುತ್ತಾರೆ” ಎಂದು ಅವರು ಬಹಿರಂಗ ಸಭೆಯಲ್ಲಿ ಹೇಳಿದ್ದಾರೆ.

ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿಯ ಸಾಮಾಜಿಕ ಜಾಲತಾಣ ಮುಖ್ಯಸ್ಥ ಅಮಿತ್ ಮಾಳವಿಯಾ, ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದಾರೆ. “ಪಶ್ಚಿಮ ಬಂಗಾಳದಲ್ಲಿ ಕೆಟ್ಟ ರೀತಿಯ ಲಸಿಕೆ ರಾಜಕಾರಣ ನಡೆಯುತ್ತಿದೆ. ಮೊದಲನೆಯದಾಗಿ ಮಮತಾ ಬ್ಯಾನರ್ಜಿಯ ಸಂಪುಟ ಸಚಿವರಾದ ಸಿದ್ದಿಕುಲ್ಲಾ ಚೌಧರಿ ಲಸಿಕೆಗಳನ್ನು ಸಾಗಿಸುವ ಲಾರಿಗಳನ್ನು ಹಿಡಿದಿದ್ದಾರೆ. ಈಗ ಟಿಎಂಸಿ ಸಂಸದೆ ಬಿಜೆಪಿಯನ್ನು ಕೊರೊನಾಗೆ ಹೋಲಿಸಿ ಮುಸ್ಲಿಂ ಬಹುಸಂಖ್ಯಾತ ಪ್ರದೇಶದಲ್ಲಿ ಅಪಪ್ರಚಾರ ಪ್ರಚಾರ ಮಾಡುತ್ತಿದ್ದಾರೆ. ಆದರೆ ಪಿಶಿ (ಆಂಟಿ) ಮೌನವಾಗಿದ್ದಾರೆ. ಯಾಕೆ? ರಾಜಿ ಮಾಡಿಕೊಂಡಿದ್ದಾರೆಯೆ?” ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿಯ 6-7 ಸಂಸದರು ಟಿಎಂಸಿ ಸೇರಲಿದ್ದಾರೆ: ಬಿಜೆಪಿಗೆ ಆಘಾತ ನೀಡಿದ ಜ್ಯೋತಿಪ್ರಿಯ ಮಲ್ಲಿಕ್

ಬುಧವಾರ ಕೋಲ್ಕತ್ತಾದಿಂದ ಬಂಕುರಾಕ್ಕೆ ಲಸಿಕೆಗಳನ್ನು ಸಾಗಿಸುತ್ತಿದ್ದ ಆರೋಗ್ಯ ಇಲಾಖೆ ವ್ಯಾನ್ ಬುರ್ದ್ವಾನ್‌ನ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿಕೊಂಡ ಘಟನೆಯನ್ನಾಗಿದೆ ಅವರು ಉಲ್ಲೇಖಿಸಿದ್ದು. ಬಂಗಾಳದ ಸಚಿವ ಸಿದ್ದಿಕುಲ್ಲಾ ಚೌಧರಿ ಅವರು ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿದ್ದರಿಂದ ಅಲ್ಲಿ ಟ್ರಾಫಿಕ್ ಜಾಂ ಉಂಟಾಗಿತ್ತು ಎಂದು ವರದಿಯಾಗಿದೆ. ನಂತರ ಲಸಿಕೆಯ ವಾಹನವನ್ನು ಪೊಲೀಸರು ಬೇರೆ ಮಾರ್ಗದ ಮೂಲಕ ಕಳುಹಿಸಿಕೊಟ್ಟಿದ್ದರು.

ಸಿದ್ದಿಕುಲ್ಲಾ ಚೌಧರಿ ಹೆದ್ದಾರಿ ಪ್ರತಿಭಟನೆಯ ಮೊದಲೇ ಘೋಷಿಸಲಾಗಿತ್ತು ಮತ್ತು ಅದರ ಬಗ್ಗೆ ಪೊಲೀಸರಿಗೆ ಹಿಂದೆಯೆ ತಿಳಿಸಲಾಗಿತ್ತು ಎನ್ನಲಾಗಿದೆ. ಆದರೆ ಆ ಮಾರ್ಗದಲ್ಲಿ ಲಸಿಕೆಗಳಿರುವ ವಾಹನ ಆಗಮಿಸುತ್ತಿರುವುದನ್ನು ಪೊಲೀಸರಿ ಮಾಹಿತಿ ನೀಡಿರಲಿಲ್ಲ ಎಂದು ವರದಿಯಾಗಿದೆ.

ಇದನ್ನೂ ಓದಿ: ಚುನಾವಣೆ ಸೋತ ದಿನ ಬಿಜೆಪಿ ಕೂಡಾ ಟ್ರಂಪ್ ಬೆಂಬಲಿಗರಂತೆಯೆ ವರ್ತಿಸುತ್ತದೆ: ಮಮತಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಗೌರಿ ತಂಡದವರೇ ಎಲ್ಲರಿಗೂ ನಮಸ್ಕಾರ.
    ನಿಮ್ಮ ಬರವಣಿಗೆಯ ಶೈಲಿಯೇ ಸ್ಪಷ್ಟವಾಗಿ ಹೇಳುತ್ತಿದೆ “ನೀವು ದೇಶ ದ್ರೋಹಿಗಳಿಂದ ದುಡ್ಡು ತೆಗೆದುಕೊಂಡು ದೇಶದ ವಿರುದ್ಧವಾಗಿ ಬರೆಯುತ್ತಿದ್ದೀರೆಂದು” ನಾಚಿಕೆಯಾಗಬೇಕು ನಿಮ್ಮಂಥ ಪತ್ರಿಕೋದ್ಯಮಕ್ಕೆ.
    ಇನ್ನು ಮುಂದಾದರೂ ನಿಮ್ಮ ಜ್ಞಾನವನ್ನು ಸರಿಯಾದ ಪಥದಲ್ಲಿ ಬಳಸಿಕೊಳ್ಳಿ, ದೇವರು ಒಳ್ಳೆಯದನ್ನು ಮಾಡಲಿ. ಸ್ವಲ್ಪ ಪಾಪಕರ್ಮ ಕಡಿಮೆಯಾಗಬಹುದು.
    ಇಲ್ಲಿಯ ಹಿಂದುತ್ವ ನಿಮಗೆ ಕಸಿವಿಸಿಯಾಗುತ್ತಿದ್ದರೆ ಹೋಗಿ ಆಫ್ಘಾನಿಸ್ತಾನವನ್ನು ಸೇರಿಕೊಳ್ಳಿ.

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...