Homeಮುಖಪುಟಕೊರೊನಾ ವೈರಸ್‌ಗಿಂತ ಬಿಜೆಪಿ ಅಪಾಯಕಾರಿಯೆಂದ ಸಂಸದೆ‌-ಬಿಜೆಪಿಯ ಉತ್ತರವೇನು ಗೊತ್ತೆ?

ಕೊರೊನಾ ವೈರಸ್‌ಗಿಂತ ಬಿಜೆಪಿ ಅಪಾಯಕಾರಿಯೆಂದ ಸಂಸದೆ‌-ಬಿಜೆಪಿಯ ಉತ್ತರವೇನು ಗೊತ್ತೆ?

- Advertisement -
- Advertisement -

ರಕ್ತದಾನ ಶಿಬಿರದಲ್ಲಿ ಮಾತನಾಡುತ್ತಿದ್ದ ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್, ಬಿಜೆಪಿ ಪಕ್ಷವನ್ನು ಕೊರೊನಾ ವೈರಸ್‌ಗಿಂತ ಅಪಾಯಕಾರಿ ಎಂದು ಸಾರ್ವಜನಿಕವಾಗಿ ಜರಿದಿದ್ದಾರೆ.

“ನಿಮ್ಮ ಕಿವಿ ಮತ್ತು ಕಣ್ಣುಗಳನ್ನು ತೆರೆದಿಡಿ ಯಾಕೆಂದರೆ ನಿಮ್ಮ ಸುತ್ತಲೂ ಕೊರೊನಾಗಿಂತಲೂ ಹೆಚ್ಚು ಅಪಾಯಕಾರಿ ಜನರು ಇದ್ದಾರೆ. ಬಿಜೆಪಿ ಕೊರೊನಾಗಿಂತಲೂ ಹೆಚ್ಚು ಅಪಾಯಕಾರಿಯಾಗಿದೆ. ಯಾಕೆಂದರೆ ಅವರಿಗೆ ನಮ್ಮ ಸಂಸ್ಕೃತಿ ಅರ್ಥವಾಗುವುದಿಲ್ಲ, ಅವರಿಗೆ ಮಾನವೀಯತೆ ಅರ್ಥವಾಗುವುದಿಲ್ಲ. ಅವರಿಗೆ ನಮ್ಮ ಕಠಿಣ ಪರಿಶ್ರಮದ ಮೌಲ್ಯವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ಅವರಿಗೆ ವ್ಯವಹಾರ ಮಾತ್ರ ತಿಳಿದಿದೆ” ಎಂದು ಅವರು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಪ.ಬಂಗಾಳ ಚುನಾವಣೆ: AAP ಯ ದೆಹಲಿ ಮಾದರಿ ಪ್ರಚಾರ ತಂತ್ರ ಬಳಸಲಿರುವ ಮಮತಾ ಬ್ಯಾನರ್ಜಿ

“ಅವರಲ್ಲಿ ಸಾಕಷ್ಟು ಹಣವಿದೆ. ಅವರು ಅದನ್ನು ಎಲ್ಲೆಡೆ ಹಂಚಿ, ತದನಂತರ ಧರ್ಮದ ಆಧಾರದ ಮೇಲೆ ಜನರನ್ನು ಒಡೆದು ಗಲಭೆಗಳನ್ನು ಪ್ರಚೋದಿಸುತ್ತಾರೆ” ಎಂದು ಅವರು ಬಹಿರಂಗ ಸಭೆಯಲ್ಲಿ ಹೇಳಿದ್ದಾರೆ.

ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿಯ ಸಾಮಾಜಿಕ ಜಾಲತಾಣ ಮುಖ್ಯಸ್ಥ ಅಮಿತ್ ಮಾಳವಿಯಾ, ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದಾರೆ. “ಪಶ್ಚಿಮ ಬಂಗಾಳದಲ್ಲಿ ಕೆಟ್ಟ ರೀತಿಯ ಲಸಿಕೆ ರಾಜಕಾರಣ ನಡೆಯುತ್ತಿದೆ. ಮೊದಲನೆಯದಾಗಿ ಮಮತಾ ಬ್ಯಾನರ್ಜಿಯ ಸಂಪುಟ ಸಚಿವರಾದ ಸಿದ್ದಿಕುಲ್ಲಾ ಚೌಧರಿ ಲಸಿಕೆಗಳನ್ನು ಸಾಗಿಸುವ ಲಾರಿಗಳನ್ನು ಹಿಡಿದಿದ್ದಾರೆ. ಈಗ ಟಿಎಂಸಿ ಸಂಸದೆ ಬಿಜೆಪಿಯನ್ನು ಕೊರೊನಾಗೆ ಹೋಲಿಸಿ ಮುಸ್ಲಿಂ ಬಹುಸಂಖ್ಯಾತ ಪ್ರದೇಶದಲ್ಲಿ ಅಪಪ್ರಚಾರ ಪ್ರಚಾರ ಮಾಡುತ್ತಿದ್ದಾರೆ. ಆದರೆ ಪಿಶಿ (ಆಂಟಿ) ಮೌನವಾಗಿದ್ದಾರೆ. ಯಾಕೆ? ರಾಜಿ ಮಾಡಿಕೊಂಡಿದ್ದಾರೆಯೆ?” ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿಯ 6-7 ಸಂಸದರು ಟಿಎಂಸಿ ಸೇರಲಿದ್ದಾರೆ: ಬಿಜೆಪಿಗೆ ಆಘಾತ ನೀಡಿದ ಜ್ಯೋತಿಪ್ರಿಯ ಮಲ್ಲಿಕ್

ಬುಧವಾರ ಕೋಲ್ಕತ್ತಾದಿಂದ ಬಂಕುರಾಕ್ಕೆ ಲಸಿಕೆಗಳನ್ನು ಸಾಗಿಸುತ್ತಿದ್ದ ಆರೋಗ್ಯ ಇಲಾಖೆ ವ್ಯಾನ್ ಬುರ್ದ್ವಾನ್‌ನ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿಕೊಂಡ ಘಟನೆಯನ್ನಾಗಿದೆ ಅವರು ಉಲ್ಲೇಖಿಸಿದ್ದು. ಬಂಗಾಳದ ಸಚಿವ ಸಿದ್ದಿಕುಲ್ಲಾ ಚೌಧರಿ ಅವರು ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿದ್ದರಿಂದ ಅಲ್ಲಿ ಟ್ರಾಫಿಕ್ ಜಾಂ ಉಂಟಾಗಿತ್ತು ಎಂದು ವರದಿಯಾಗಿದೆ. ನಂತರ ಲಸಿಕೆಯ ವಾಹನವನ್ನು ಪೊಲೀಸರು ಬೇರೆ ಮಾರ್ಗದ ಮೂಲಕ ಕಳುಹಿಸಿಕೊಟ್ಟಿದ್ದರು.

ಸಿದ್ದಿಕುಲ್ಲಾ ಚೌಧರಿ ಹೆದ್ದಾರಿ ಪ್ರತಿಭಟನೆಯ ಮೊದಲೇ ಘೋಷಿಸಲಾಗಿತ್ತು ಮತ್ತು ಅದರ ಬಗ್ಗೆ ಪೊಲೀಸರಿಗೆ ಹಿಂದೆಯೆ ತಿಳಿಸಲಾಗಿತ್ತು ಎನ್ನಲಾಗಿದೆ. ಆದರೆ ಆ ಮಾರ್ಗದಲ್ಲಿ ಲಸಿಕೆಗಳಿರುವ ವಾಹನ ಆಗಮಿಸುತ್ತಿರುವುದನ್ನು ಪೊಲೀಸರಿ ಮಾಹಿತಿ ನೀಡಿರಲಿಲ್ಲ ಎಂದು ವರದಿಯಾಗಿದೆ.

ಇದನ್ನೂ ಓದಿ: ಚುನಾವಣೆ ಸೋತ ದಿನ ಬಿಜೆಪಿ ಕೂಡಾ ಟ್ರಂಪ್ ಬೆಂಬಲಿಗರಂತೆಯೆ ವರ್ತಿಸುತ್ತದೆ: ಮಮತಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಗೌರಿ ತಂಡದವರೇ ಎಲ್ಲರಿಗೂ ನಮಸ್ಕಾರ.
    ನಿಮ್ಮ ಬರವಣಿಗೆಯ ಶೈಲಿಯೇ ಸ್ಪಷ್ಟವಾಗಿ ಹೇಳುತ್ತಿದೆ “ನೀವು ದೇಶ ದ್ರೋಹಿಗಳಿಂದ ದುಡ್ಡು ತೆಗೆದುಕೊಂಡು ದೇಶದ ವಿರುದ್ಧವಾಗಿ ಬರೆಯುತ್ತಿದ್ದೀರೆಂದು” ನಾಚಿಕೆಯಾಗಬೇಕು ನಿಮ್ಮಂಥ ಪತ್ರಿಕೋದ್ಯಮಕ್ಕೆ.
    ಇನ್ನು ಮುಂದಾದರೂ ನಿಮ್ಮ ಜ್ಞಾನವನ್ನು ಸರಿಯಾದ ಪಥದಲ್ಲಿ ಬಳಸಿಕೊಳ್ಳಿ, ದೇವರು ಒಳ್ಳೆಯದನ್ನು ಮಾಡಲಿ. ಸ್ವಲ್ಪ ಪಾಪಕರ್ಮ ಕಡಿಮೆಯಾಗಬಹುದು.
    ಇಲ್ಲಿಯ ಹಿಂದುತ್ವ ನಿಮಗೆ ಕಸಿವಿಸಿಯಾಗುತ್ತಿದ್ದರೆ ಹೋಗಿ ಆಫ್ಘಾನಿಸ್ತಾನವನ್ನು ಸೇರಿಕೊಳ್ಳಿ.

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...