Homeಮುಖಪುಟಬಿಜೆಪಿಯು ಮಾವೋವಾದಿಗಳಿಗಿಂತ ಅಪಾಯಕಾರಿಯಾಗಿದೆ - ಮಮತಾ ಬ್ಯಾನರ್ಜಿ ವಾಗ್ದಾಳಿ

ಬಿಜೆಪಿಯು ಮಾವೋವಾದಿಗಳಿಗಿಂತ ಅಪಾಯಕಾರಿಯಾಗಿದೆ – ಮಮತಾ ಬ್ಯಾನರ್ಜಿ ವಾಗ್ದಾಳಿ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನವೇ ಆರೋಪ-ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದ್ದು, “ಬಿಜೆಪಿ ಮಾವೋವಾದಿಗಳಿಗಿಂತ ಅಪಾಯಕಾರಿ” ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟೀಕಿಸಿದ್ದಾರೆ.

ಪುರುಲಿಯಾದಲ್ಲಿ ನಡೆದ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, “ಚುನಾವಣೆಗೂ ಮುನ್ನ ಸುಳ್ಳು ಭರವಸೆಗಳನ್ನು ಬಿಜೆಪಿ ನೀಡುತ್ತಿದೆ. ರಾಜಕೀಯ ಎನ್ನುವುದು ಹೊಣೆಗಾರಿಕೆಯಿಂದ ಕೂಡಿದ ಸಿದ್ಧಾಂತ. ಇದನ್ನು ಬಟ್ಟೆ ಬದಲಾಯಿಸಿದಂತೆ ದಿನವೂ ಬದಲಾಯಿಸಲು ಸಾಧ್ಯವಿಲ್ಲ. ಯಾರು ಬಿಜೆಪಿಯನ್ನು ಸೇರಲು ಬಯಸುತ್ತೀರೊ ಅವರು ತೆರಳಬಹುದು. ಆದರೆ ನಾವು ಆ ಪಕ್ಷದ ಮುಂದೆ ಎಂದಿಗೂ ತಲೆ ತಗ್ಗಿಸುವುದಿಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಜಂಗಲ್‌ಮಹಲ್‌ ಪ್ರದೇಶದಲ್ಲಿ ವಾಸಿಸುತ್ತಿರುವ ಆದಿವಾಸಿ ಜನರನ್ನು ಬಿಜೆಪಿ ನಾಯಕರು ದಾರಿತಪ್ಪಿಸುತ್ತಿದ್ದಾರೆ. ಚುನಾವಣೆಗೂ ಮುನ್ನ ಸುಳ್ಳು ಭರವಸೆಗಳನ್ನು ನೀಡಿದ್ದ ಬಿಜೆಪಿ ನಾಯಕರು ಲೋಕಸಭೆ ಚುನಾವಣೆಯಲ್ಲಿ ಗೆದ್ದ ಬಳಿಕ ಈ ಕಡೆ ತಲೆ ಹಾಕಿಲ್ಲ” ಎಂದರು.

ಇದನ್ನೂ ಓದಿ: ಪ.ಬಂಗಾಳ ಚುನಾವಣೆ: ನಂದಿಗ್ರಾಮದಿಂದ ಸ್ಪರ್ಧಿಸುವುದಾಗಿ ಮಮತಾ ಬ್ಯಾನರ್ಜಿ ಘೋಷಣೆ

ಇನ್ನೇನು ಕೆಲವೇ ತಿಂಗಳಿನಲ್ಲಿ ವಿಧಾನಸಭೆ ಸಭೆ ಚುನಾವಣೆ ನಡೆಯಲಿದ್ದು, ಇದರ ಬೆನ್ನಲ್ಲೇ ಹಲವು ಟಿಎಂಸಿ ನಾಯಕರು ಬಿಜೆಪಿ ಸೇರ್ಪಡೆ ಆಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಮತಾ ಬ್ಯಾನರ್ಜಿ ಈ ರೀತಿ ಪ್ರತಿಕ್ರಿಯಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಭಾಗವಹಿಸುತ್ತೇವೆ ಎಂದು ಹಲವು ಪ್ರಮುಖ ಪಕ್ಷಗಳು ಇದುವರೆಗೂ ಘೋಷಿಸಿವೆ. ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ, ಶಿವಸೇನೆ ಮತ್ತು ಅಸದುದ್ದೀನ್ ಓವೈಸಿ ಅವರ ಪಕ್ಷವೂ ಸಹ ರಾಜ್ಯದ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿವೆ. ಇನ್ನು ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಪಕ್ಷವೂ ಸಹ ತನ್ನ ಅಧಿಕಾರವನ್ನು ಉಳಿಸಿಕೊಳ್ಳಲು ಸಕಲ ಸಿದ್ಧತೆಗಳನ್ನು ನಡೆಸುತ್ತಿದೆ. ಮತ್ತೊಂದು ಕಡೆ ಬಿಜೆಪಿ, ಈ ಬಾರಿ ಅಧಿಕಾರ ಹಿಡಿಯಲೇ ಬೇಕು ಎಂದು ಹವಣಿಸುತ್ತಿದೆ. ಈ ನಿಟ್ಟಿನಲ್ಲಿ ಹಲವು ಟಿಎಂಸಿ ನಾಯಕರು ಬಿಜೆಪಿ ಸೇರುತ್ತಿದ್ದಾರೆ. ಇನ್ನು ಕಾಂಗ್ರೆಸ್ ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದೆ.

ಕೊರೊನಾ ಸಾಂಕ್ರಾಮಿಕ ರೋಗದ ನಂತರ ದೇಶದಲ್ಲಿ ನಡೆಯುತ್ತಿರುವ ಎರಡನೇ ಅತಿದೊಡ್ಡ ಚುನಾವಣೆ ಇದಾಗಿದ್ದು, ಕೇಂದ್ರದ ಬಿಜೆಪಿ ಸರ್ಕಾರ ಮತ್ತು ತೃಣಮೂಲ ಕಾಂಗ್ರೆಸ್‌ಗೆ ನೇರಾನೇರಾ ತೀವ್ರ ಪೈಪೋಟಿ ಇರಲಿದೆ. ಹಾಗಾಗಿ ಪಶ್ಚಿಮ ಬಂಗಾಳ ಯಾರ ತೆಕ್ಕೆಗೆ ಹೋಗಲಿದೆ ಎಂಬುದನ್ನು ಕಾದುನೋಡಬೇಕಿದೆ.


ಇದನ್ನೂ ಓದಿ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಶಿವಸೇನೆ ಸ್ಪರ್ಧೆ: ಮಮತಾಗೆ ಮತ್ತೊಂದು ಆಘಾತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...