Homeಕರ್ನಾಟಕಬಿಜೆಪಿ ಮಾಡುತ್ತಿರುವುದು ಧರ್ಮಯಾತ್ರೆ ಅಲ್ಲ, ರಾಜಕೀಯ ಯಾತ್ರೆ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಮಾಡುತ್ತಿರುವುದು ಧರ್ಮಯಾತ್ರೆ ಅಲ್ಲ, ರಾಜಕೀಯ ಯಾತ್ರೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ‘ಧರ್ಮ ಯಾತ್ರೆಯಲ್ಲ, ರಾಜಕೀಯ ಯಾತ್ರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ಮಂಗಳವಾರ (ಸೆ.2) ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಯುತ್ತಿದೆ. ಬಿಜೆಪಿಯವರು ಈಗ ಎನ್‌ಐಎ ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಹಾಗಾದರೆ, ನಮ್ಮ ಪೊಲೀಸರ ಮೇಲೆ ಅವರಿಗೆ ನಂಬಿಕೆ ಇಲ್ಲವೇ ಎಂದು ಸಿಎಂ ಪ್ರಶ್ನಿಸಿದರು.

ಎಸ್ಐಟಿ ರಚನೆಯಾದ ಪ್ರಾರಂಭದಲ್ಲಿ ಎನ್ಐಎ ತನಿಖೆ ಮಾಡಿ ಎನ್ನಲಿಲ್ಲ. ನಂತರ ದೇಹಗಳು ಸಿಗದೇ ಹೋದಾಗ ಒತ್ತಾಯಿಸುತ್ತಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರೇ ಸ್ವತಃ ಸತ್ಯ ಹೊರಬರಲಿ ಎಂದು ಎಸ್ಐಟಿ ರಚನೆಯನ್ನು ಸ್ವಾಗತಿಸಿದ್ದಾರೆ. ನಮ್ಮ ಮೇಲಿನ ಅನುಮಾನದ ತೂಗುಗತ್ತಿ ನಿವಾರಣೆಯಾಗಬೇಕೆಂದಿದ್ದಾರೆ. ಎಸ್‌ಐಟಿ ತನಿಖೆ ಸ್ವತಂತ್ರವಾಗಿ ನಡೆಯುತ್ತಿದ್ದು, ನಾವ್ಯಾರು ಅದರಲ್ಲಿ ಹಸ್ತಕ್ಷೇಪ ಮಾಡಿಲ್ಲ. ಸತ್ಯ ಹೊರಬರಬೇಕು ಎಂದರು.

ಎಲ್ಲಾ ವಿಷಯಗಳಲ್ಲಿ ರಾಜಕೀಯ ಮಾಡಬಾರದು 

ಧರ್ಮಸ್ಥಳದ ವಿರುದ್ದ ‍ಷಡ್ಯಂತ್ರ ರೂಪಿಸಲು ಹೊರದೇಶಗಳಿಂದ ಹಣ ಬಂದಿದೆ ಎಂಬ ಬಿಜೆಪಿ ಆರೋಪದ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ, “ಇದರಲ್ಲಿ ಸತ್ಯವಿಲ್ಲ, ಹಣ ಬಂದಿರುವುದು ಬಿಜೆಪಿಯವರಿಗೆ. ವಿರೋಧಿಗಳು ಟೀಕೆ ಮಾಡಲಿ. ಆದರೆ ಎಲ್ಲಾ ವಿಷಯಗಳಲ್ಲಿ ರಾಜಕೀಯ ಮಾಡಬಾರದು ಎಂದು ಹೇಳಿದರು.

ಬಿಜೆಪಿಯವರು ಯಾರ ಪರ ಇದ್ದಾರೆ?

ಸೌಜನ್ಯ ಪ್ರಕರಣವನ್ನು ಸಿಬಿಐಗೆ ಹಸ್ತಾಂತರ ಮಾಡಬೇಕೆಂದು ಬಿಜೆಪಿ ಒತ್ತಾಯಿಸುತ್ತಿರುವ ಬಗ್ಗೆ ಮಾತನಾಡಿದ ಸಿಎಂ, “ಸಿಬಿಐ ಕೇಂದ್ರ ಸರ್ಕಾರದ ಅಧೀನದಲ್ಲಿದ್ದು, ಅವರು ತನಿಖೆ ಮಾಡಿ ವರದಿ ಕೊಟ್ಟಿದ್ದಾರೆ. ಈಗ ಸರ್ವೋಚ್ಚ ನ್ಯಾಯಾಲಯಕ್ಕೆ ಹೋಗಬೇಕೆಂದು ಬಿಜೆಪಿ ಹೇಳುತ್ತಿದೆ. ಸೌಜನ್ಯ ಪ್ರಕರಣದಲ್ಲಿ ವೀರೇಂದ್ರ ಹೆಗ್ಗಡೆಯವರ ಮೇಲೆ ಆರೋಪವಿದೆ. ಹಾಗಾದರೆ, ಬಿಜೆಪಿ ಯಾರ ಪರ ಇದ್ದಾರೆ ಎಂದು ಪ್ರಶ್ನಿಸಿದರು. ಒಂದು ಕಡೆ ವೀರೇಂದ್ರ ಹೆಗಡೆಯವರ ಪರ ಎನ್ನುತ್ತಾರೆ, ಮತ್ತೊಂದೆಡೆ ಸೌಜನ್ಯ ಪರ ಎನ್ನುತ್ತಾರೆ. ನಿಜವಾಗಿಯೂ ಇವರು ಯಾರ ಪರ ಇದ್ದಾರೆ ಎಂದು ಪ್ರಶ್ನಿಸಿದರು.

ಅಶೋಕ್ ಸದನದಲ್ಲಿ ಬೇರೆ ಚರ್ಚೆ ಮಾಡಿದ್ದರು

ಚಿನ್ನಯ್ಯ ಎಂಬ ವ್ಯಕ್ತಿಯನ್ನು ಕರೆತಂದಿರುವುದೇ ಕಾಂಗ್ರೆಸ್ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿದ ಸಿಎಂ, ಸದನದಲ್ಲಿ ಈ ಬಗ್ಗೆ ಚರ್ಚೆಯಾದಾಗ ಬೇರೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಶಾಸಕ ಸುನೀಲ್ ಕುಮಾರ್, ಈಗ ಬೇರೆ ಹೇಳುತ್ತಿದ್ದಾರೆ. ದಿನಕ್ಕೊಂದು ಹೇಳಿಕೆ ಕೊಡಬಾರದು. ಅಸತ್ಯದ ಮೇಲೆ ಚರ್ಚೆ ಮಾಡಿದರೆ ಹೀಗೆ ಆಗುವುದು ಎಂದರು.

ಸತ್ಯ ಗೊತ್ತಿದ್ದ ಮೇಲೆ, ಅದನ್ನು ಮುಚ್ಚಿಡುವುದು ಅಪರಾಧ

12 ವರ್ಷಗಳ ಹಿಂದೆ ಸೌಜನ್ಯಾಳನ್ನು ಅಪಹರಿಸಿರುವುದನ್ನು ಕಣ್ಣಾರೆ ನೋಡಿದ್ದೇನೆ ಎಂದು ಎಸ್ಐಟಿಗೆ ಮಹಿಳೆಯೊಬ್ಬರು ದೂರ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಇದನ್ನು ಸಿಬಿಐ ತನಿಖೆ ನಡೆದಾಗ ಏಕೆ ಹೇಳಲಿಲ್ಲ? ಸತ್ಯ ಗೊತ್ತಿದ್ದ ಮೇಲೆ, ಅದನ್ನು ಮುಚ್ಚಿಡುವುದು ಅಪರಾಧ ಎಂದು ಹೇಳಿದರು.

ಸೌಜನ್ಯ ಪ್ರಕರಣದ ಮರು ತನಿಖೆ: ಸೌಜನ್ಯ ತಾಯಿ ತೀರ್ಮಾನಿಸಬೇಕು

ಸೌಜನ್ಯ ಪ್ರಕರಣದ ಮರು ತನಿಖೆ ಅಗತ್ಯವಿದ್ದರೆ ನ್ಯಾಯಾಲಯಕ್ಕೆ ಹೋಗಲಿ. ನಾನು ಅದರ ತೀರ್ಪನ್ನು ನೋಡಿಲ್ಲ. ಈ ಬಗ್ಗೆ ಸೌಜನ್ಯ ತಾಯಿ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು ಎಂದರು.

ಬಾನು ಮುಷ್ತಾಕ್‌ರನ್ನು ವಿರೋಧಿಸುತ್ತಿರುವವರು ಧರ್ಮಾಂಧರು: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....