Homeಮುಖಪುಟಅಣ್ಣಾಮಲೈ ವಿರುದ್ಧ ಆಕ್ರೋಶ: ಬಿಜೆಪಿ ಜೊತೆಗಿನ ಮೈತ್ರಿ ಮುರಿದ ಎಐಎಡಿಎಂಕೆ

ಅಣ್ಣಾಮಲೈ ವಿರುದ್ಧ ಆಕ್ರೋಶ: ಬಿಜೆಪಿ ಜೊತೆಗಿನ ಮೈತ್ರಿ ಮುರಿದ ಎಐಎಡಿಎಂಕೆ

- Advertisement -
- Advertisement -

ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ಬಿಜೆಪಿ ಜೊತೆ ಯಾವುದೇ ಮೈತ್ರಿ ಈಗ ಇಲ್ಲ, ಚುನಾವಣೆ ವೇಳೆ ಈ ಬಗ್ಗೆ ನಿರ್ಧರಿಸುತ್ತೇವೆ ಎಂದು ಎಐಎಡಿಎಂಕೆ ಹೇಳಿದೆ.

ಈ ಕುರಿತು ಮಾತನಾಡಿದ ಎಐಎಡಿಎಂಕೆ ನಾಯಕ ಡಿ. ಜಯಕುಮಾರ್‌, ಇದು ನನ್ನ ವೈಯಕ್ತಿಕ ನಿಲುವಲ್ಲ ಪಕ್ಷದ  ಅಭಿಪ್ರಾಯ. ಬಿಜೆಪಿ  ಮೈತ್ರಿಯನ್ನು ಬಯಸುತ್ತದೆ. ಅದರೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಇದೇ ರೀತಿ ಬಯಸವುದಿಲ್ಲ ಎಂದು ತೋರುತ್ತದೆ ಎಂದು ಹೇಳಿದ್ದಾರೆ.

ಬಿಜೆಪಿ ಕಾರ್ಯಕರ್ತರು ಮೈತ್ರಿಯನ್ನು ಬಯಸುತ್ತಾರೆ. ಆದರೆ ಅಣ್ಣಾಮಲೈ ಮೈತ್ರಿ ಬಯಸುವುದಿಲ್ಲ. ಅವರು ನಮ್ಮ ನಾಯಕರನ್ನು ಯಾವಗಲೂ ಟೀಕಿಸುತ್ತಾರೆ. ಅವರು ರಾಜ್ಯಾಧ್ಯಕ್ಷರಾಗಲು ಅಸಮರ್ಥರು ಎಂದು ಹೇಳಿದ್ದಾರೆ.

ಎಐಎಡಿಎಂಕೆ ಸಂಸ್ಥಾಪಕ ಎಂಜಿಆರ್ ಅವರ ಆಪ್ತ ದಿವಂಗತ ಮಾಜಿ ಸಿಎಂ ಅಣ್ಣಾದೊರೈ ಬಗ್ಗೆ ರಾಜ್ಯ ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ ಅವರ ಹೇಳಿಕೆ ಬೆನ್ನಲ್ಲೇ ಈ ಹೇಳಿಕೆಯನ್ನು ಎಐಎಡಿಎಂಕೆ ನೀಡಿದೆ.

ಅಣ್ಣಾಮಲೈ ಅವರು ಬಿಜೆಪಿಯ ರಾಜ್ಯಾಧ್ಯಕ್ಷರಾಗಲು ಅನರ್ಹರು. ಅವರು ತಮ್ಮನ್ನು ಪ್ರಚಾರದಲ್ಲಿರಿಸಲು ಮಾತ್ರ ದಿವಂಗತ ನಾಯಕರ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾರೆ ಎಂದು ಜಯಕುಮಾರ್ ಹೇಳಿದ್ದಾರೆ.

ಜಯಲಲಿತಾ ಬಗ್ಗೆ ರಾಜ್ಯ ಬಿಜೆಪಿ ಮುಖ್ಯಸ್ಥರ ಹೇಳಿಕೆ ಕಳೆದ ಜೂನ್‌ನಲ್ಲೇ ಮೈತ್ರಿಯಿಂದ ಹಿಂದೆ ಸರಿಯುವ  ಹಂತಕ್ಕೆ ತಂದು ನಿಲ್ಲಿಸಿತ್ತು. ಆದರೆ ಇದೀಗ ಅಣ್ಣಾದೊರೈ ಬಗ್ಗೆ ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ ಅವರ ಹೇಳಿಕೆ ಎಐಎಡಿಎಂಕೆಯ ಆಕ್ರೋಶಕ್ಕೆ ಕಾರಣವಾಗಿದೆ.

ಡಿಎಂಕೆ ಸಚಿವ ಶೇಖರ್‌ ಬಾಬು ವಿರುದ್ಧ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅಣ್ಣಾಮಲೈ ಮಾತನಾಡುತ್ತಾ, ಮುತ್ತುರಾಮಲಿಂಗ ದೇವರು ನಾಸ್ತಿಕತೆಯ ವಿರುದ್ಧ ಮಾತನಾಡಿದಾಗ ಅಣ್ಣಾದೊರೈ ಹೆದರಿ ಕ್ಷಮೆ ಕೇಳಿದರು ಎಂದು  ಇತ್ತೀಚೆಗೆ ಹೇಳಿಕೆ ನೀಡಿದ್ದರು. ಇದು ಎಐಎಡಿಎಂಕೆ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನು ಓದಿ: ‘ಸೌಜನ್ಯಳಿಗಾದ ಗತಿಯೇ ನಿನ್ನ ಮಗಳಿಗೂ ಆಗುತ್ತೆ’- ವ್ಯಕ್ತಿಯೋರ್ವರಿಗೆ ಮಹೇಶ್ ವಿಕ್ರಮ್ ಹೆಗಡೆ ಬೆದರಿಕೆ: FIR ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...