Homeಮುಖಪುಟಜನರ ಭಕ್ತಿಯೊಂದಿಗೆ ಬಿಜೆಪಿ ಆಟವಾಡುತ್ತಿದೆ: ಪ್ರಿಯಾಂಕಾ ಗಾಂಧಿ

ಜನರ ಭಕ್ತಿಯೊಂದಿಗೆ ಬಿಜೆಪಿ ಆಟವಾಡುತ್ತಿದೆ: ಪ್ರಿಯಾಂಕಾ ಗಾಂಧಿ

ಅಯೋಧ್ಯೆಯಲ್ಲಿ ಭೂಕಬಳಿಕೆ ಆರೋಪ ಕೇಳಿಬಂದಿದ್ದು, ಬಿಜೆಪಿ ನಾಯಕರ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

- Advertisement -
- Advertisement -

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿರುವ ವ್ಯಾಪ್ತಿಯಲ್ಲಿ ಭೂಮಿಯನ್ನು ಕಬಳಿಕೆ ಮಾಡಲಾಗುತ್ತಿದೆ ಎಂಬ ವರದಿಗಳು ಹೊರಬಂದ ನಂತರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬಿಜೆಪಿ ನಾಯಕರು ಮತ್ತು ಸರ್ಕಾರಿ ಅಧಿಕಾರಿಗಳ ವಿರುದ್ಧ ಗುರುವಾರ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ರಾಮಮಂದಿರ ಟ್ರಸ್ಟ್‌ನವರು ಮತ್ತು ಸರ್ಕಾರಿ ಅಧಿಕಾರಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪಗಳಿವೆ. ಈ ಭ್ರಷ್ಟಾಚಾರದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

ರಾಮಮಂದಿರ ಟ್ರಸ್ಟ್‌ಗಾಗಿ ಏನಾದರೂ ದಾನ ಮಾಡಿದ ದೇಶದ ಅಸಂಖ್ಯಾತ ಜನರ ಭಕ್ತಿಯನ್ನು ರಾಜ್ಯದ ಆಡಳಿತ ಪಕ್ಷವು “ಲೂಟಿ” ಮಾಡುತ್ತಿದೆ. ಜನರ ಭಕ್ತಿಯೊಂದಿಗೆ ಆಟವಾಡುತ್ತಿದೆ ಎಂದು ಪ್ರಿಯಾಂಕಾ ಟೀಕಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, “ದೇಶದ ಬಹುತೇಕ ಪ್ರತಿಯೊಂದು ಮನೆಯವರು ರಾಮಮಂದಿರ ಟ್ರಸ್ಟ್‌ಗೆ ಏನನ್ನಾದರೂ ದೇಣಿಗೆ ನೀಡಿದ್ದಾರೆ. ಮನೆ-ಮನೆಗೆ ತೆರಳಿ ಪ್ರಚಾರ ನಡೆಸಲಾಗಿದೆ. ಇದು ಭಕ್ತಿಯ ವಿಷಯ ಮತ್ತು ಅದರೊಂದಿಗೆ ಆಟವಾಡಲಾಗುತ್ತಿದೆ. ಖರೀದಿಸಲು ಸಾಧ್ಯವಾಗದ ದಲಿತರ ಭೂಮಿಯನ್ನು ಕಿತ್ತುಕೊಳ್ಳಲಾಗಿದೆ” ಎಂದು ದೂರಿದ್ದಾರೆ.

ರಾಮಜನ್ಮಭೂಮಿ-ಬಾಬರಿ ಮಸೀದಿ ವಿವಾದದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದ ನಂತರ ರಾಮ ಮಂದಿರ ನಿರ್ಮಾಣಕ್ಕೆ ದಾರಿ ಮಾಡಿಕೊಟ್ಟ ಬಳಿಕ ಶಾಸಕರು, ಮೇಯರ್‌ಗಳು, ಆಯುಕ್ತರ ಸಂಬಂಧಿಕರು, ಎಸ್‌ಡಿಎಂ ಮತ್ತು ಡಿಐಜಿ ಅಯೋಧ್ಯೆಯಲ್ಲಿ ಭೂಮಿ ಖರೀದಿಸಿದ್ದಾರೆ ಎಂದು ವರದಿಗಳಾಗಿವೆ ಎಂದು ತಿಳಿಸಿದ್ದಾರೆ.

ವರದಿ ಬಂದ ಕೂಡಲೇ ಉತ್ತರ ಪ್ರದೇಶದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಮಾಹಿತಿ) ನವನೀತ್ ಸೆಹಗಲ್ ಅವರು ಬುಧವಾರ ಪಿಟಿಐ ಸುದ್ದಿ ಸಂಸ್ಥೆಗೆ ಪ್ರತಿಕ್ರಿಯೆ ನೀಡಿದ್ದಾರೆ. “ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ವಿಷಯವನ್ನು ಕೂಲಂಕಷವಾಗಿ ತನಿಖೆ ನಡೆಸುವಂತೆ ಕಂದಾಯ ಇಲಾಖೆಗೆ ಆದೇಶಿಸಿದ್ದಾರೆ” ಎಂದು ಸೆಹಗಲ್‌ ಹೇಳಿದ್ದಾರೆ.

“ಹೌದು, ಯುಪಿ ಸರ್ಕಾರವು ಆರೋಪಗಳ ತನಿಖೆಗಾಗಿ ತನಿಖಾ ಆಯೋಗವನ್ನು ನೇಮಿಸುತ್ತಿದೆ, ಯಾರು ತನಿಖೆಯನ್ನು ನಡೆಸುತ್ತಾರೆ? ಇವರು ಜಿಲ್ಲಾಧಿಕಾರಿ ಮಟ್ಟದ ಅಧಿಕಾರಿಗಳಾಗಿದ್ದಾರೆ. ಇದರ ಬದಲಿಗೆ ಸುಪ್ರೀಂ ಕೋರ್ಟ್ ನೇತೃತ್ವದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು” ಎಂದು ಪ್ರಿಯಾಂಕಾ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಅವರು ಈ ಪ್ರಕರಣವನ್ನು “ಭೂ ಹಗರಣ” ಎಂದು ಕರೆದಿದ್ದಾರೆ. “ಬಿಜೆಪಿಯೊಂದಿಗೆ ಸಂಪರ್ಕದಲ್ಲಿರುವವರು ಅಯೋಧ್ಯೆ ನಗರದೊಳಗೆ ಭೂಮಿಯನ್ನು ಬಹಿರಂಗವಾಗಿ ಲೂಟಿ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಮಹಾಭಾರತದ ಬಗ್ಗೆ ರಾಹುಲ್‌ ಗಾಂಧಿ ತಪ್ಪುತಪ್ಪಾಗಿ ಹೇಳಿದ್ದಾರೆ ಎನ್ನಲಾಗಿರುವ ಈ ಟ್ವೀಟ್ ಎಡಿಟ್‌ ಮಾಡಿರುವಂತದ್ದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...