Homeಮುಖಪುಟವಲಸಿಗರ ವಿಚಾರದಲ್ಲಿ ಬಿಜೆಪಿ ಸುಳ್ಳು ಸುದ್ದಿ ಹರಡುತ್ತಿದೆ: ಸಿಎಂ ಸ್ಟಾಲಿನ್ ವಾಗ್ದಾಳಿ

ವಲಸಿಗರ ವಿಚಾರದಲ್ಲಿ ಬಿಜೆಪಿ ಸುಳ್ಳು ಸುದ್ದಿ ಹರಡುತ್ತಿದೆ: ಸಿಎಂ ಸ್ಟಾಲಿನ್ ವಾಗ್ದಾಳಿ

- Advertisement -
- Advertisement -

ವಲಸಿಗರು ದಾಳಿಗೆ ಒಳಗಾಗುತ್ತಿದ್ದಾರೆ ಎಂಬ ವದಂತಿಗಳ ಬಗ್ಗೆ ಬಿಜೆಪಿ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ವಾಗ್ದಾಳಿ ನಡೆಸಿದ್ದಾರೆ. ದೇಶದ ಎಲ್ಲಾ ಬಿಜೆಪಿಯೇತರ ಪಕ್ಷಗಳ ಒಗ್ಗಟ್ಟಿಗೆ ಕರೆ ನೀಡಿದ ಒಂದು ದಿನದ ನಂತರ “ಉತ್ತರ ಭಾರತದ ಬಿಜೆಪಿ ನಾಯಕರು” “ಸುಳ್ಳು ಸುದ್ದಿ” ಹರಡಲು ಆರಂಭಿಸಿದರು ಎಂದು ಗುರುವಾರ ಸ್ಟಾಲಿನ್ ಬಿಜೆಪಿ ವಿರುದ್ಧ ಕಿಡಿಕಾರಿದರು.

ತಮಿಳುನಾಡಿನಲ್ಲಿ ಉತ್ತರ ಭಾರತದ ಕಾರ್ಮಿಕರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಸುಳ್ಳು ಸುದ್ದಿ ಹರಡುವಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸ್ಟಾಲಿನ್, ”ಬಿಜೆಪಿ ವಿರೋಧಿ ಪಕ್ಷಗಳು ಒಂದಾಗುವ ಅಗತ್ಯದ ಬಗ್ಗೆ ನಾನು ಮಾತನಾಡಿದ ಒಂದು ದಿನದ ನಂತರ ಉತ್ತರ ಭಾರತದ ಬಿಜೆಪಿ ನಾಯಕರಿಂದ ನಕಲಿ ವೀಡಿಯೊಗಳ ಹರಡುವಿಕೆ ಪ್ರಾರಂಭವಾಯಿತು, ಇದು ಅವರ ರಹಸ್ಯ ಉದ್ದೇಶವನ್ನು ಬಹಿರಂಗಪಡಿಸುತ್ತದೆ. ಈ ಸುಳ್ಳುಗಳನ್ನು ಹರಡುವುದರ ಹಿಂದಿನ ಸ್ಪಷ್ಟ ಉದ್ದೇಶ ಏನು ಎಂಬುದನ್ನು ಸೂಚಿಸುತ್ತದೆ” ಎಂದು ಸ್ಟಾಲಿನ್ ಅವರು ಕಲಾಪದ ವೇಳೆ ಪ್ರಶ್ನೋತ್ತರ ಅವಧಿಯಲ್ಲಿ ಗುರುವಾರ ಹೇಳಿದರು.

ಇದನ್ನೂ ಓದಿ: ತಮಿಳುನಾಡು: ಬಿಜೆಪಿ ತೊರೆದು ಎಐಎಡಿಎಂಕೆ ಸೇರಿದ 13 ಮುಖಂಡರು

”ಪಾಟ್ನಾದಲ್ಲಿ ಜೆಡಿಯು ಕೂಡ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ತಮಿಳುನಾಡಿನಲ್ಲಿ ವಲಸೆ ಕಾರ್ಮಿಕರ ಮೇಲಿನ ದಾಳಿಯ “ವದಂತಿಗಳನ್ನು” ಹರಡುತ್ತಿದೆ. ಎರಡು ರಾಜ್ಯಗಳ ನಡುವೆ ಬಿರುಕು ಮೂಡಿಸಲು ಮತ್ತು ವಿರೋಧ ಪಕ್ಷಗಳನ್ನು ಸೋಲಿಸಲು ಈ ರೀತಿ ಬಿಜೆಪಿ ಸುಳ್ಳುಗಳನ್ನು ಹರಿಬಿಡುತ್ತಿದೆ ಎಂದು ಆರೋಪಿಸಿದೆ” ಎಂದರು.

”ಬಿಜೆಪಿಯು ವಲಸಿಗರ ಮೇಲೆ ದಾಳಿ ನಡೆಸಲಾಗಿದೆ ಎಂಬ ವದಂತಿಗಳನ್ನು ಹರಡಿತು. ಇದರಿಂದ ತಮಿಳುನಾಡು ಮತ್ತು ಬಿಹಾರದ ನಡುವೆ ಬಿರುಕು ಉಂಟುಮಾಡಲು ಪ್ರಯತ್ನಿಸಿತು ಆದರೆ ಏನಾಯಿತು? ಹಲ್ಲೆ ನಡೆದಿದೆ ಎನ್ನುವ ವಿಚಾರವೇ ಸುಳ್ಳು. ಈ ಬಗ್ಗೆ ತನಿಖೆ ನಡೆಸಲು ಬಿಹಾರದ ತಂಡವೊಂದು ತಮಿಳುನಾಡಿಗೆ ಭೇಟಿ ನೀಡಿತ್ತು ಮತ್ತು ಅವರ ಸರ್ಕಾರವೂ ಅದನ್ನು ಪರಿಶೀಲಿಸಿದೆ. ಆದರೆ ಒಂದೇ ಒಂದು ಘಟನೆ ಕೂಡ ವರದಿಯಾಗಿಲ್ಲ ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ ಅ.ಕಾ.ಲಾಲನ್ ಸಿಂಗ್ ಹೇಳಿದ್ದಾರೆ” ಎಂದು ಸ್ಟಾಲಿನ್ ವಿವರಿಸಿದರು.

”ಈ ನಕಲಿ ವರದಿಗಳ ಹರಿದಾಡಿದಾಗ, ನಾನು ಡಿಜಿಪಿ ಬಳಿ ವಿಚಾರಿಸಿದ್ದೇನೆ. ಅವರು ಅಂತಹ ಯಾವದೇ ಘಟನೆ ನಡೆದಿಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ. ಆನಂತರ ನಾನು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಸಂಪರ್ಕಿಸಿ ಇಲ್ಲಿಯ ವಾಸ್ತವತೆ ಬಗ್ಗೆ ತಿಳಿಸಿದ್ದೇನೆ. ಆದರೂ ಬಿಹಾರದ ಅಧಿಕಾರಿಗಳ ನಿಯೋಗವು ತಮಿಳುನಾಡಿಗೆ ಭೇಟಿ ನೀಡಿ, ಇಲ್ಲಿನ ಶಾಂತಿಯುತ ವಾತಾವರಣದಿಂದ ತೃಪ್ತರಾಗಿ ಮರಳಿದೆ. ತಮಿಳುನಾಡು ಹೊರಗಿನವರನ್ನು ಸ್ವಾಗತಿಸಲು ಹೆಸರುವಾಸಿಯಾಗಿದೆ” ಎಂದು ಗುರುವಾರ ತಮ್ಮ ಹೇಳಿಕೆಯಲ್ಲಿ ಸ್ಟಾಲಿನ್ ತಿಳಿಸಿದ್ದಾರೆ.

”ತಮಿಳುನಾಡು ಮತ್ತು ತಮಿಳರು ಏಕತೆ ಮತ್ತು ಭ್ರಾತೃತ್ವವನ್ನು ಗೌರವಿಸುತ್ತಾರೆ. ನಮ್ಮ ಧ್ಯೇಯವಾಕ್ಯವೆಂದರೆ ‘ಎಲ್ಲಾ ಪಟ್ಟಣಗಳು ನಮ್ಮದು, ಮತ್ತು ಎಲ್ಲರೂ ನಮ್ಮ ಬಂಧುಗಳು..’ ಇಲ್ಲಿ ವಾಸಿಸುವ ಉತ್ತರ ಭಾರತೀಯ ಸಹೋದರರಿಗೆ ಇದು ಚೆನ್ನಾಗಿ ತಿಳಿದಿದೆ” ಎಂದು ಸ್ಟಾಲಿನ್ ಹೇಳಿದರು.

”ಬಿಜೆಪಿ ನಕಲಿ ಸುದ್ದಿ ಹರುಡುತ್ತಿದೆ” ಎಂದು ಸ್ಟಾಲಿನ್ ಅವರು ಗುರುವಾರ ಮೊದಲ ಬಾರಿಗೆ ಪಕ್ಷದ ಹೆಸರು ಬಳಸಿ ನೇರವಾಗಿ ಆರೋಪಿಸಿದ್ದಾರೆ. ಏಕೆಂದರೆ ಮಂಗಳವಾರ, ಇದೇ ವಿಚಾರವಾಗಿ ನಾಗರ್‌ಕೋಯಿಲ್‌ನಲ್ಲಿ ನಡೆದ ಡಿಎಂಕೆ ಕುಲಪತಿ ಎಂ ಕರುಣಾನಿಧಿ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡುವಾಗ, ಕೆಲವು ಶಕ್ತಿಗಳು ”ಜಾತಿ ಮತ್ತು ಕೋಮು ಗಲಭೆಗಳನ್ನು” ಪ್ರಚೋದಿಸುವ ಮೂಲಕ ತಮ್ಮ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿವೆ ಎಂದು ಬಿಜೆಪಿಯ ಹೆಸರು ಹೇಳದೆ ಮಾತನಾಡಿದ್ದರು. ಆದರೆ ಇದೇ ಮೊದಲ ಬಾರಿಗೆ ಸ್ಟಾಲಿನ್ ಅವರು ಬಿಜೆಪಿ ವಿರುದ್ಧ ನೇರವಾಗಿ ಆರೋಪ ಮಾಡಿದ್ದಾರೆ.

ಮಾರ್ಚ್ 1ರಂದು ಚೆನ್ನೈನಲ್ಲಿ ಡಿಎಂಕೆ ಆಯೋಜಿಸಿದ್ದ ಸಾರ್ವಜನಿಕ ರ್ಯಾಲಿಯಲ್ಲಿ, ಸ್ಟಾಲಿನ್ ಅವರು ‘2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಭಾರತದ ಎಲ್ಲಾ ವಿರೋಧ ಪಕ್ಷಗಳ ಬೇಷರತ್ ಒಗ್ಗಟ್ಟಿಗೆ ಕರೆ’ ನೀಡಿದ್ದರು. ಅವರ ಈ ಹೇಳಿಕೆಯ ನಂತರ ಬಿಜೆಪಿ ನಾಯಕರು, ತಮಿಳುನಾಡಿನಲ್ಲಿ ವಲಸಿಗರು ದಾಳಿಗೆ ಒಳಗಾಗುತ್ತಿದ್ದಾರೆ ಎಂಬ ವದಂತಿಗಳನ್ನು ಹರಡಲು ಪ್ರಾರಂಭಿಸಿದರು ಎಂದು ಗುರುವಾರ ಸ್ಟಾಲಿನ್ ಹೇಳಿದ್ದಾರೆ.

ಬಿಜೆಪಿ ಹರಿಬಿಟ್ಟ ಸುಳ್ಳು ಸುದ್ದಿಯ ಬಳಿಕ, ಬಿಹಾರ ಗ್ರಾಮೀಣಾಭಿವೃದ್ಧಿ ಕಾರ್ಯದರ್ಶಿ ಡಿ ಬಾಲಮುರುಗನ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ತಮಿಳುನಾಡಿಗೆ ಭೇಟಿ ನೀಡಿತ್ತು. ಈ ಸಂದರ್ಭದಲ್ಲಿ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ವಿ ಇರೈ ಅನ್ಬು ಅವರನ್ನು ಭೇಟಿ ಮಾಡಿದರು. ತಿರುಪುರ್ ಮತ್ತು ಕೊಯಮತ್ತೂರಿನಲ್ಲಿ ಬಿಹಾರದಿಂದ ವಲಸೆ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...