Homeಮುಖಪುಟವಲಸಿಗರ ವಿಚಾರದಲ್ಲಿ ಬಿಜೆಪಿ ಸುಳ್ಳು ಸುದ್ದಿ ಹರಡುತ್ತಿದೆ: ಸಿಎಂ ಸ್ಟಾಲಿನ್ ವಾಗ್ದಾಳಿ

ವಲಸಿಗರ ವಿಚಾರದಲ್ಲಿ ಬಿಜೆಪಿ ಸುಳ್ಳು ಸುದ್ದಿ ಹರಡುತ್ತಿದೆ: ಸಿಎಂ ಸ್ಟಾಲಿನ್ ವಾಗ್ದಾಳಿ

- Advertisement -
- Advertisement -

ವಲಸಿಗರು ದಾಳಿಗೆ ಒಳಗಾಗುತ್ತಿದ್ದಾರೆ ಎಂಬ ವದಂತಿಗಳ ಬಗ್ಗೆ ಬಿಜೆಪಿ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ವಾಗ್ದಾಳಿ ನಡೆಸಿದ್ದಾರೆ. ದೇಶದ ಎಲ್ಲಾ ಬಿಜೆಪಿಯೇತರ ಪಕ್ಷಗಳ ಒಗ್ಗಟ್ಟಿಗೆ ಕರೆ ನೀಡಿದ ಒಂದು ದಿನದ ನಂತರ “ಉತ್ತರ ಭಾರತದ ಬಿಜೆಪಿ ನಾಯಕರು” “ಸುಳ್ಳು ಸುದ್ದಿ” ಹರಡಲು ಆರಂಭಿಸಿದರು ಎಂದು ಗುರುವಾರ ಸ್ಟಾಲಿನ್ ಬಿಜೆಪಿ ವಿರುದ್ಧ ಕಿಡಿಕಾರಿದರು.

ತಮಿಳುನಾಡಿನಲ್ಲಿ ಉತ್ತರ ಭಾರತದ ಕಾರ್ಮಿಕರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಸುಳ್ಳು ಸುದ್ದಿ ಹರಡುವಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸ್ಟಾಲಿನ್, ”ಬಿಜೆಪಿ ವಿರೋಧಿ ಪಕ್ಷಗಳು ಒಂದಾಗುವ ಅಗತ್ಯದ ಬಗ್ಗೆ ನಾನು ಮಾತನಾಡಿದ ಒಂದು ದಿನದ ನಂತರ ಉತ್ತರ ಭಾರತದ ಬಿಜೆಪಿ ನಾಯಕರಿಂದ ನಕಲಿ ವೀಡಿಯೊಗಳ ಹರಡುವಿಕೆ ಪ್ರಾರಂಭವಾಯಿತು, ಇದು ಅವರ ರಹಸ್ಯ ಉದ್ದೇಶವನ್ನು ಬಹಿರಂಗಪಡಿಸುತ್ತದೆ. ಈ ಸುಳ್ಳುಗಳನ್ನು ಹರಡುವುದರ ಹಿಂದಿನ ಸ್ಪಷ್ಟ ಉದ್ದೇಶ ಏನು ಎಂಬುದನ್ನು ಸೂಚಿಸುತ್ತದೆ” ಎಂದು ಸ್ಟಾಲಿನ್ ಅವರು ಕಲಾಪದ ವೇಳೆ ಪ್ರಶ್ನೋತ್ತರ ಅವಧಿಯಲ್ಲಿ ಗುರುವಾರ ಹೇಳಿದರು.

ಇದನ್ನೂ ಓದಿ: ತಮಿಳುನಾಡು: ಬಿಜೆಪಿ ತೊರೆದು ಎಐಎಡಿಎಂಕೆ ಸೇರಿದ 13 ಮುಖಂಡರು

”ಪಾಟ್ನಾದಲ್ಲಿ ಜೆಡಿಯು ಕೂಡ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ತಮಿಳುನಾಡಿನಲ್ಲಿ ವಲಸೆ ಕಾರ್ಮಿಕರ ಮೇಲಿನ ದಾಳಿಯ “ವದಂತಿಗಳನ್ನು” ಹರಡುತ್ತಿದೆ. ಎರಡು ರಾಜ್ಯಗಳ ನಡುವೆ ಬಿರುಕು ಮೂಡಿಸಲು ಮತ್ತು ವಿರೋಧ ಪಕ್ಷಗಳನ್ನು ಸೋಲಿಸಲು ಈ ರೀತಿ ಬಿಜೆಪಿ ಸುಳ್ಳುಗಳನ್ನು ಹರಿಬಿಡುತ್ತಿದೆ ಎಂದು ಆರೋಪಿಸಿದೆ” ಎಂದರು.

”ಬಿಜೆಪಿಯು ವಲಸಿಗರ ಮೇಲೆ ದಾಳಿ ನಡೆಸಲಾಗಿದೆ ಎಂಬ ವದಂತಿಗಳನ್ನು ಹರಡಿತು. ಇದರಿಂದ ತಮಿಳುನಾಡು ಮತ್ತು ಬಿಹಾರದ ನಡುವೆ ಬಿರುಕು ಉಂಟುಮಾಡಲು ಪ್ರಯತ್ನಿಸಿತು ಆದರೆ ಏನಾಯಿತು? ಹಲ್ಲೆ ನಡೆದಿದೆ ಎನ್ನುವ ವಿಚಾರವೇ ಸುಳ್ಳು. ಈ ಬಗ್ಗೆ ತನಿಖೆ ನಡೆಸಲು ಬಿಹಾರದ ತಂಡವೊಂದು ತಮಿಳುನಾಡಿಗೆ ಭೇಟಿ ನೀಡಿತ್ತು ಮತ್ತು ಅವರ ಸರ್ಕಾರವೂ ಅದನ್ನು ಪರಿಶೀಲಿಸಿದೆ. ಆದರೆ ಒಂದೇ ಒಂದು ಘಟನೆ ಕೂಡ ವರದಿಯಾಗಿಲ್ಲ ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ ಅ.ಕಾ.ಲಾಲನ್ ಸಿಂಗ್ ಹೇಳಿದ್ದಾರೆ” ಎಂದು ಸ್ಟಾಲಿನ್ ವಿವರಿಸಿದರು.

”ಈ ನಕಲಿ ವರದಿಗಳ ಹರಿದಾಡಿದಾಗ, ನಾನು ಡಿಜಿಪಿ ಬಳಿ ವಿಚಾರಿಸಿದ್ದೇನೆ. ಅವರು ಅಂತಹ ಯಾವದೇ ಘಟನೆ ನಡೆದಿಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ. ಆನಂತರ ನಾನು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಸಂಪರ್ಕಿಸಿ ಇಲ್ಲಿಯ ವಾಸ್ತವತೆ ಬಗ್ಗೆ ತಿಳಿಸಿದ್ದೇನೆ. ಆದರೂ ಬಿಹಾರದ ಅಧಿಕಾರಿಗಳ ನಿಯೋಗವು ತಮಿಳುನಾಡಿಗೆ ಭೇಟಿ ನೀಡಿ, ಇಲ್ಲಿನ ಶಾಂತಿಯುತ ವಾತಾವರಣದಿಂದ ತೃಪ್ತರಾಗಿ ಮರಳಿದೆ. ತಮಿಳುನಾಡು ಹೊರಗಿನವರನ್ನು ಸ್ವಾಗತಿಸಲು ಹೆಸರುವಾಸಿಯಾಗಿದೆ” ಎಂದು ಗುರುವಾರ ತಮ್ಮ ಹೇಳಿಕೆಯಲ್ಲಿ ಸ್ಟಾಲಿನ್ ತಿಳಿಸಿದ್ದಾರೆ.

”ತಮಿಳುನಾಡು ಮತ್ತು ತಮಿಳರು ಏಕತೆ ಮತ್ತು ಭ್ರಾತೃತ್ವವನ್ನು ಗೌರವಿಸುತ್ತಾರೆ. ನಮ್ಮ ಧ್ಯೇಯವಾಕ್ಯವೆಂದರೆ ‘ಎಲ್ಲಾ ಪಟ್ಟಣಗಳು ನಮ್ಮದು, ಮತ್ತು ಎಲ್ಲರೂ ನಮ್ಮ ಬಂಧುಗಳು..’ ಇಲ್ಲಿ ವಾಸಿಸುವ ಉತ್ತರ ಭಾರತೀಯ ಸಹೋದರರಿಗೆ ಇದು ಚೆನ್ನಾಗಿ ತಿಳಿದಿದೆ” ಎಂದು ಸ್ಟಾಲಿನ್ ಹೇಳಿದರು.

”ಬಿಜೆಪಿ ನಕಲಿ ಸುದ್ದಿ ಹರುಡುತ್ತಿದೆ” ಎಂದು ಸ್ಟಾಲಿನ್ ಅವರು ಗುರುವಾರ ಮೊದಲ ಬಾರಿಗೆ ಪಕ್ಷದ ಹೆಸರು ಬಳಸಿ ನೇರವಾಗಿ ಆರೋಪಿಸಿದ್ದಾರೆ. ಏಕೆಂದರೆ ಮಂಗಳವಾರ, ಇದೇ ವಿಚಾರವಾಗಿ ನಾಗರ್‌ಕೋಯಿಲ್‌ನಲ್ಲಿ ನಡೆದ ಡಿಎಂಕೆ ಕುಲಪತಿ ಎಂ ಕರುಣಾನಿಧಿ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡುವಾಗ, ಕೆಲವು ಶಕ್ತಿಗಳು ”ಜಾತಿ ಮತ್ತು ಕೋಮು ಗಲಭೆಗಳನ್ನು” ಪ್ರಚೋದಿಸುವ ಮೂಲಕ ತಮ್ಮ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿವೆ ಎಂದು ಬಿಜೆಪಿಯ ಹೆಸರು ಹೇಳದೆ ಮಾತನಾಡಿದ್ದರು. ಆದರೆ ಇದೇ ಮೊದಲ ಬಾರಿಗೆ ಸ್ಟಾಲಿನ್ ಅವರು ಬಿಜೆಪಿ ವಿರುದ್ಧ ನೇರವಾಗಿ ಆರೋಪ ಮಾಡಿದ್ದಾರೆ.

ಮಾರ್ಚ್ 1ರಂದು ಚೆನ್ನೈನಲ್ಲಿ ಡಿಎಂಕೆ ಆಯೋಜಿಸಿದ್ದ ಸಾರ್ವಜನಿಕ ರ್ಯಾಲಿಯಲ್ಲಿ, ಸ್ಟಾಲಿನ್ ಅವರು ‘2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಭಾರತದ ಎಲ್ಲಾ ವಿರೋಧ ಪಕ್ಷಗಳ ಬೇಷರತ್ ಒಗ್ಗಟ್ಟಿಗೆ ಕರೆ’ ನೀಡಿದ್ದರು. ಅವರ ಈ ಹೇಳಿಕೆಯ ನಂತರ ಬಿಜೆಪಿ ನಾಯಕರು, ತಮಿಳುನಾಡಿನಲ್ಲಿ ವಲಸಿಗರು ದಾಳಿಗೆ ಒಳಗಾಗುತ್ತಿದ್ದಾರೆ ಎಂಬ ವದಂತಿಗಳನ್ನು ಹರಡಲು ಪ್ರಾರಂಭಿಸಿದರು ಎಂದು ಗುರುವಾರ ಸ್ಟಾಲಿನ್ ಹೇಳಿದ್ದಾರೆ.

ಬಿಜೆಪಿ ಹರಿಬಿಟ್ಟ ಸುಳ್ಳು ಸುದ್ದಿಯ ಬಳಿಕ, ಬಿಹಾರ ಗ್ರಾಮೀಣಾಭಿವೃದ್ಧಿ ಕಾರ್ಯದರ್ಶಿ ಡಿ ಬಾಲಮುರುಗನ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ತಮಿಳುನಾಡಿಗೆ ಭೇಟಿ ನೀಡಿತ್ತು. ಈ ಸಂದರ್ಭದಲ್ಲಿ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ವಿ ಇರೈ ಅನ್ಬು ಅವರನ್ನು ಭೇಟಿ ಮಾಡಿದರು. ತಿರುಪುರ್ ಮತ್ತು ಕೊಯಮತ್ತೂರಿನಲ್ಲಿ ಬಿಹಾರದಿಂದ ವಲಸೆ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...