Homeಮುಖಪುಟವಲಸಿಗರ ವಿಚಾರದಲ್ಲಿ ಬಿಜೆಪಿ ಸುಳ್ಳು ಸುದ್ದಿ ಹರಡುತ್ತಿದೆ: ಸಿಎಂ ಸ್ಟಾಲಿನ್ ವಾಗ್ದಾಳಿ

ವಲಸಿಗರ ವಿಚಾರದಲ್ಲಿ ಬಿಜೆಪಿ ಸುಳ್ಳು ಸುದ್ದಿ ಹರಡುತ್ತಿದೆ: ಸಿಎಂ ಸ್ಟಾಲಿನ್ ವಾಗ್ದಾಳಿ

- Advertisement -
- Advertisement -

ವಲಸಿಗರು ದಾಳಿಗೆ ಒಳಗಾಗುತ್ತಿದ್ದಾರೆ ಎಂಬ ವದಂತಿಗಳ ಬಗ್ಗೆ ಬಿಜೆಪಿ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ವಾಗ್ದಾಳಿ ನಡೆಸಿದ್ದಾರೆ. ದೇಶದ ಎಲ್ಲಾ ಬಿಜೆಪಿಯೇತರ ಪಕ್ಷಗಳ ಒಗ್ಗಟ್ಟಿಗೆ ಕರೆ ನೀಡಿದ ಒಂದು ದಿನದ ನಂತರ “ಉತ್ತರ ಭಾರತದ ಬಿಜೆಪಿ ನಾಯಕರು” “ಸುಳ್ಳು ಸುದ್ದಿ” ಹರಡಲು ಆರಂಭಿಸಿದರು ಎಂದು ಗುರುವಾರ ಸ್ಟಾಲಿನ್ ಬಿಜೆಪಿ ವಿರುದ್ಧ ಕಿಡಿಕಾರಿದರು.

ತಮಿಳುನಾಡಿನಲ್ಲಿ ಉತ್ತರ ಭಾರತದ ಕಾರ್ಮಿಕರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಸುಳ್ಳು ಸುದ್ದಿ ಹರಡುವಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸ್ಟಾಲಿನ್, ”ಬಿಜೆಪಿ ವಿರೋಧಿ ಪಕ್ಷಗಳು ಒಂದಾಗುವ ಅಗತ್ಯದ ಬಗ್ಗೆ ನಾನು ಮಾತನಾಡಿದ ಒಂದು ದಿನದ ನಂತರ ಉತ್ತರ ಭಾರತದ ಬಿಜೆಪಿ ನಾಯಕರಿಂದ ನಕಲಿ ವೀಡಿಯೊಗಳ ಹರಡುವಿಕೆ ಪ್ರಾರಂಭವಾಯಿತು, ಇದು ಅವರ ರಹಸ್ಯ ಉದ್ದೇಶವನ್ನು ಬಹಿರಂಗಪಡಿಸುತ್ತದೆ. ಈ ಸುಳ್ಳುಗಳನ್ನು ಹರಡುವುದರ ಹಿಂದಿನ ಸ್ಪಷ್ಟ ಉದ್ದೇಶ ಏನು ಎಂಬುದನ್ನು ಸೂಚಿಸುತ್ತದೆ” ಎಂದು ಸ್ಟಾಲಿನ್ ಅವರು ಕಲಾಪದ ವೇಳೆ ಪ್ರಶ್ನೋತ್ತರ ಅವಧಿಯಲ್ಲಿ ಗುರುವಾರ ಹೇಳಿದರು.

ಇದನ್ನೂ ಓದಿ: ತಮಿಳುನಾಡು: ಬಿಜೆಪಿ ತೊರೆದು ಎಐಎಡಿಎಂಕೆ ಸೇರಿದ 13 ಮುಖಂಡರು

”ಪಾಟ್ನಾದಲ್ಲಿ ಜೆಡಿಯು ಕೂಡ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ತಮಿಳುನಾಡಿನಲ್ಲಿ ವಲಸೆ ಕಾರ್ಮಿಕರ ಮೇಲಿನ ದಾಳಿಯ “ವದಂತಿಗಳನ್ನು” ಹರಡುತ್ತಿದೆ. ಎರಡು ರಾಜ್ಯಗಳ ನಡುವೆ ಬಿರುಕು ಮೂಡಿಸಲು ಮತ್ತು ವಿರೋಧ ಪಕ್ಷಗಳನ್ನು ಸೋಲಿಸಲು ಈ ರೀತಿ ಬಿಜೆಪಿ ಸುಳ್ಳುಗಳನ್ನು ಹರಿಬಿಡುತ್ತಿದೆ ಎಂದು ಆರೋಪಿಸಿದೆ” ಎಂದರು.

”ಬಿಜೆಪಿಯು ವಲಸಿಗರ ಮೇಲೆ ದಾಳಿ ನಡೆಸಲಾಗಿದೆ ಎಂಬ ವದಂತಿಗಳನ್ನು ಹರಡಿತು. ಇದರಿಂದ ತಮಿಳುನಾಡು ಮತ್ತು ಬಿಹಾರದ ನಡುವೆ ಬಿರುಕು ಉಂಟುಮಾಡಲು ಪ್ರಯತ್ನಿಸಿತು ಆದರೆ ಏನಾಯಿತು? ಹಲ್ಲೆ ನಡೆದಿದೆ ಎನ್ನುವ ವಿಚಾರವೇ ಸುಳ್ಳು. ಈ ಬಗ್ಗೆ ತನಿಖೆ ನಡೆಸಲು ಬಿಹಾರದ ತಂಡವೊಂದು ತಮಿಳುನಾಡಿಗೆ ಭೇಟಿ ನೀಡಿತ್ತು ಮತ್ತು ಅವರ ಸರ್ಕಾರವೂ ಅದನ್ನು ಪರಿಶೀಲಿಸಿದೆ. ಆದರೆ ಒಂದೇ ಒಂದು ಘಟನೆ ಕೂಡ ವರದಿಯಾಗಿಲ್ಲ ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ ಅ.ಕಾ.ಲಾಲನ್ ಸಿಂಗ್ ಹೇಳಿದ್ದಾರೆ” ಎಂದು ಸ್ಟಾಲಿನ್ ವಿವರಿಸಿದರು.

”ಈ ನಕಲಿ ವರದಿಗಳ ಹರಿದಾಡಿದಾಗ, ನಾನು ಡಿಜಿಪಿ ಬಳಿ ವಿಚಾರಿಸಿದ್ದೇನೆ. ಅವರು ಅಂತಹ ಯಾವದೇ ಘಟನೆ ನಡೆದಿಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ. ಆನಂತರ ನಾನು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಸಂಪರ್ಕಿಸಿ ಇಲ್ಲಿಯ ವಾಸ್ತವತೆ ಬಗ್ಗೆ ತಿಳಿಸಿದ್ದೇನೆ. ಆದರೂ ಬಿಹಾರದ ಅಧಿಕಾರಿಗಳ ನಿಯೋಗವು ತಮಿಳುನಾಡಿಗೆ ಭೇಟಿ ನೀಡಿ, ಇಲ್ಲಿನ ಶಾಂತಿಯುತ ವಾತಾವರಣದಿಂದ ತೃಪ್ತರಾಗಿ ಮರಳಿದೆ. ತಮಿಳುನಾಡು ಹೊರಗಿನವರನ್ನು ಸ್ವಾಗತಿಸಲು ಹೆಸರುವಾಸಿಯಾಗಿದೆ” ಎಂದು ಗುರುವಾರ ತಮ್ಮ ಹೇಳಿಕೆಯಲ್ಲಿ ಸ್ಟಾಲಿನ್ ತಿಳಿಸಿದ್ದಾರೆ.

”ತಮಿಳುನಾಡು ಮತ್ತು ತಮಿಳರು ಏಕತೆ ಮತ್ತು ಭ್ರಾತೃತ್ವವನ್ನು ಗೌರವಿಸುತ್ತಾರೆ. ನಮ್ಮ ಧ್ಯೇಯವಾಕ್ಯವೆಂದರೆ ‘ಎಲ್ಲಾ ಪಟ್ಟಣಗಳು ನಮ್ಮದು, ಮತ್ತು ಎಲ್ಲರೂ ನಮ್ಮ ಬಂಧುಗಳು..’ ಇಲ್ಲಿ ವಾಸಿಸುವ ಉತ್ತರ ಭಾರತೀಯ ಸಹೋದರರಿಗೆ ಇದು ಚೆನ್ನಾಗಿ ತಿಳಿದಿದೆ” ಎಂದು ಸ್ಟಾಲಿನ್ ಹೇಳಿದರು.

”ಬಿಜೆಪಿ ನಕಲಿ ಸುದ್ದಿ ಹರುಡುತ್ತಿದೆ” ಎಂದು ಸ್ಟಾಲಿನ್ ಅವರು ಗುರುವಾರ ಮೊದಲ ಬಾರಿಗೆ ಪಕ್ಷದ ಹೆಸರು ಬಳಸಿ ನೇರವಾಗಿ ಆರೋಪಿಸಿದ್ದಾರೆ. ಏಕೆಂದರೆ ಮಂಗಳವಾರ, ಇದೇ ವಿಚಾರವಾಗಿ ನಾಗರ್‌ಕೋಯಿಲ್‌ನಲ್ಲಿ ನಡೆದ ಡಿಎಂಕೆ ಕುಲಪತಿ ಎಂ ಕರುಣಾನಿಧಿ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡುವಾಗ, ಕೆಲವು ಶಕ್ತಿಗಳು ”ಜಾತಿ ಮತ್ತು ಕೋಮು ಗಲಭೆಗಳನ್ನು” ಪ್ರಚೋದಿಸುವ ಮೂಲಕ ತಮ್ಮ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿವೆ ಎಂದು ಬಿಜೆಪಿಯ ಹೆಸರು ಹೇಳದೆ ಮಾತನಾಡಿದ್ದರು. ಆದರೆ ಇದೇ ಮೊದಲ ಬಾರಿಗೆ ಸ್ಟಾಲಿನ್ ಅವರು ಬಿಜೆಪಿ ವಿರುದ್ಧ ನೇರವಾಗಿ ಆರೋಪ ಮಾಡಿದ್ದಾರೆ.

ಮಾರ್ಚ್ 1ರಂದು ಚೆನ್ನೈನಲ್ಲಿ ಡಿಎಂಕೆ ಆಯೋಜಿಸಿದ್ದ ಸಾರ್ವಜನಿಕ ರ್ಯಾಲಿಯಲ್ಲಿ, ಸ್ಟಾಲಿನ್ ಅವರು ‘2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಭಾರತದ ಎಲ್ಲಾ ವಿರೋಧ ಪಕ್ಷಗಳ ಬೇಷರತ್ ಒಗ್ಗಟ್ಟಿಗೆ ಕರೆ’ ನೀಡಿದ್ದರು. ಅವರ ಈ ಹೇಳಿಕೆಯ ನಂತರ ಬಿಜೆಪಿ ನಾಯಕರು, ತಮಿಳುನಾಡಿನಲ್ಲಿ ವಲಸಿಗರು ದಾಳಿಗೆ ಒಳಗಾಗುತ್ತಿದ್ದಾರೆ ಎಂಬ ವದಂತಿಗಳನ್ನು ಹರಡಲು ಪ್ರಾರಂಭಿಸಿದರು ಎಂದು ಗುರುವಾರ ಸ್ಟಾಲಿನ್ ಹೇಳಿದ್ದಾರೆ.

ಬಿಜೆಪಿ ಹರಿಬಿಟ್ಟ ಸುಳ್ಳು ಸುದ್ದಿಯ ಬಳಿಕ, ಬಿಹಾರ ಗ್ರಾಮೀಣಾಭಿವೃದ್ಧಿ ಕಾರ್ಯದರ್ಶಿ ಡಿ ಬಾಲಮುರುಗನ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ತಮಿಳುನಾಡಿಗೆ ಭೇಟಿ ನೀಡಿತ್ತು. ಈ ಸಂದರ್ಭದಲ್ಲಿ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ವಿ ಇರೈ ಅನ್ಬು ಅವರನ್ನು ಭೇಟಿ ಮಾಡಿದರು. ತಿರುಪುರ್ ಮತ್ತು ಕೊಯಮತ್ತೂರಿನಲ್ಲಿ ಬಿಹಾರದಿಂದ ವಲಸೆ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...