Homeಮುಖಪುಟವಲಸಿಗರ ವಿಚಾರದಲ್ಲಿ ಬಿಜೆಪಿ ಸುಳ್ಳು ಸುದ್ದಿ ಹರಡುತ್ತಿದೆ: ಸಿಎಂ ಸ್ಟಾಲಿನ್ ವಾಗ್ದಾಳಿ

ವಲಸಿಗರ ವಿಚಾರದಲ್ಲಿ ಬಿಜೆಪಿ ಸುಳ್ಳು ಸುದ್ದಿ ಹರಡುತ್ತಿದೆ: ಸಿಎಂ ಸ್ಟಾಲಿನ್ ವಾಗ್ದಾಳಿ

- Advertisement -
- Advertisement -

ವಲಸಿಗರು ದಾಳಿಗೆ ಒಳಗಾಗುತ್ತಿದ್ದಾರೆ ಎಂಬ ವದಂತಿಗಳ ಬಗ್ಗೆ ಬಿಜೆಪಿ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ವಾಗ್ದಾಳಿ ನಡೆಸಿದ್ದಾರೆ. ದೇಶದ ಎಲ್ಲಾ ಬಿಜೆಪಿಯೇತರ ಪಕ್ಷಗಳ ಒಗ್ಗಟ್ಟಿಗೆ ಕರೆ ನೀಡಿದ ಒಂದು ದಿನದ ನಂತರ “ಉತ್ತರ ಭಾರತದ ಬಿಜೆಪಿ ನಾಯಕರು” “ಸುಳ್ಳು ಸುದ್ದಿ” ಹರಡಲು ಆರಂಭಿಸಿದರು ಎಂದು ಗುರುವಾರ ಸ್ಟಾಲಿನ್ ಬಿಜೆಪಿ ವಿರುದ್ಧ ಕಿಡಿಕಾರಿದರು.

ತಮಿಳುನಾಡಿನಲ್ಲಿ ಉತ್ತರ ಭಾರತದ ಕಾರ್ಮಿಕರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಸುಳ್ಳು ಸುದ್ದಿ ಹರಡುವಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸ್ಟಾಲಿನ್, ”ಬಿಜೆಪಿ ವಿರೋಧಿ ಪಕ್ಷಗಳು ಒಂದಾಗುವ ಅಗತ್ಯದ ಬಗ್ಗೆ ನಾನು ಮಾತನಾಡಿದ ಒಂದು ದಿನದ ನಂತರ ಉತ್ತರ ಭಾರತದ ಬಿಜೆಪಿ ನಾಯಕರಿಂದ ನಕಲಿ ವೀಡಿಯೊಗಳ ಹರಡುವಿಕೆ ಪ್ರಾರಂಭವಾಯಿತು, ಇದು ಅವರ ರಹಸ್ಯ ಉದ್ದೇಶವನ್ನು ಬಹಿರಂಗಪಡಿಸುತ್ತದೆ. ಈ ಸುಳ್ಳುಗಳನ್ನು ಹರಡುವುದರ ಹಿಂದಿನ ಸ್ಪಷ್ಟ ಉದ್ದೇಶ ಏನು ಎಂಬುದನ್ನು ಸೂಚಿಸುತ್ತದೆ” ಎಂದು ಸ್ಟಾಲಿನ್ ಅವರು ಕಲಾಪದ ವೇಳೆ ಪ್ರಶ್ನೋತ್ತರ ಅವಧಿಯಲ್ಲಿ ಗುರುವಾರ ಹೇಳಿದರು.

ಇದನ್ನೂ ಓದಿ: ತಮಿಳುನಾಡು: ಬಿಜೆಪಿ ತೊರೆದು ಎಐಎಡಿಎಂಕೆ ಸೇರಿದ 13 ಮುಖಂಡರು

”ಪಾಟ್ನಾದಲ್ಲಿ ಜೆಡಿಯು ಕೂಡ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ತಮಿಳುನಾಡಿನಲ್ಲಿ ವಲಸೆ ಕಾರ್ಮಿಕರ ಮೇಲಿನ ದಾಳಿಯ “ವದಂತಿಗಳನ್ನು” ಹರಡುತ್ತಿದೆ. ಎರಡು ರಾಜ್ಯಗಳ ನಡುವೆ ಬಿರುಕು ಮೂಡಿಸಲು ಮತ್ತು ವಿರೋಧ ಪಕ್ಷಗಳನ್ನು ಸೋಲಿಸಲು ಈ ರೀತಿ ಬಿಜೆಪಿ ಸುಳ್ಳುಗಳನ್ನು ಹರಿಬಿಡುತ್ತಿದೆ ಎಂದು ಆರೋಪಿಸಿದೆ” ಎಂದರು.

”ಬಿಜೆಪಿಯು ವಲಸಿಗರ ಮೇಲೆ ದಾಳಿ ನಡೆಸಲಾಗಿದೆ ಎಂಬ ವದಂತಿಗಳನ್ನು ಹರಡಿತು. ಇದರಿಂದ ತಮಿಳುನಾಡು ಮತ್ತು ಬಿಹಾರದ ನಡುವೆ ಬಿರುಕು ಉಂಟುಮಾಡಲು ಪ್ರಯತ್ನಿಸಿತು ಆದರೆ ಏನಾಯಿತು? ಹಲ್ಲೆ ನಡೆದಿದೆ ಎನ್ನುವ ವಿಚಾರವೇ ಸುಳ್ಳು. ಈ ಬಗ್ಗೆ ತನಿಖೆ ನಡೆಸಲು ಬಿಹಾರದ ತಂಡವೊಂದು ತಮಿಳುನಾಡಿಗೆ ಭೇಟಿ ನೀಡಿತ್ತು ಮತ್ತು ಅವರ ಸರ್ಕಾರವೂ ಅದನ್ನು ಪರಿಶೀಲಿಸಿದೆ. ಆದರೆ ಒಂದೇ ಒಂದು ಘಟನೆ ಕೂಡ ವರದಿಯಾಗಿಲ್ಲ ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ ಅ.ಕಾ.ಲಾಲನ್ ಸಿಂಗ್ ಹೇಳಿದ್ದಾರೆ” ಎಂದು ಸ್ಟಾಲಿನ್ ವಿವರಿಸಿದರು.

”ಈ ನಕಲಿ ವರದಿಗಳ ಹರಿದಾಡಿದಾಗ, ನಾನು ಡಿಜಿಪಿ ಬಳಿ ವಿಚಾರಿಸಿದ್ದೇನೆ. ಅವರು ಅಂತಹ ಯಾವದೇ ಘಟನೆ ನಡೆದಿಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ. ಆನಂತರ ನಾನು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಸಂಪರ್ಕಿಸಿ ಇಲ್ಲಿಯ ವಾಸ್ತವತೆ ಬಗ್ಗೆ ತಿಳಿಸಿದ್ದೇನೆ. ಆದರೂ ಬಿಹಾರದ ಅಧಿಕಾರಿಗಳ ನಿಯೋಗವು ತಮಿಳುನಾಡಿಗೆ ಭೇಟಿ ನೀಡಿ, ಇಲ್ಲಿನ ಶಾಂತಿಯುತ ವಾತಾವರಣದಿಂದ ತೃಪ್ತರಾಗಿ ಮರಳಿದೆ. ತಮಿಳುನಾಡು ಹೊರಗಿನವರನ್ನು ಸ್ವಾಗತಿಸಲು ಹೆಸರುವಾಸಿಯಾಗಿದೆ” ಎಂದು ಗುರುವಾರ ತಮ್ಮ ಹೇಳಿಕೆಯಲ್ಲಿ ಸ್ಟಾಲಿನ್ ತಿಳಿಸಿದ್ದಾರೆ.

”ತಮಿಳುನಾಡು ಮತ್ತು ತಮಿಳರು ಏಕತೆ ಮತ್ತು ಭ್ರಾತೃತ್ವವನ್ನು ಗೌರವಿಸುತ್ತಾರೆ. ನಮ್ಮ ಧ್ಯೇಯವಾಕ್ಯವೆಂದರೆ ‘ಎಲ್ಲಾ ಪಟ್ಟಣಗಳು ನಮ್ಮದು, ಮತ್ತು ಎಲ್ಲರೂ ನಮ್ಮ ಬಂಧುಗಳು..’ ಇಲ್ಲಿ ವಾಸಿಸುವ ಉತ್ತರ ಭಾರತೀಯ ಸಹೋದರರಿಗೆ ಇದು ಚೆನ್ನಾಗಿ ತಿಳಿದಿದೆ” ಎಂದು ಸ್ಟಾಲಿನ್ ಹೇಳಿದರು.

”ಬಿಜೆಪಿ ನಕಲಿ ಸುದ್ದಿ ಹರುಡುತ್ತಿದೆ” ಎಂದು ಸ್ಟಾಲಿನ್ ಅವರು ಗುರುವಾರ ಮೊದಲ ಬಾರಿಗೆ ಪಕ್ಷದ ಹೆಸರು ಬಳಸಿ ನೇರವಾಗಿ ಆರೋಪಿಸಿದ್ದಾರೆ. ಏಕೆಂದರೆ ಮಂಗಳವಾರ, ಇದೇ ವಿಚಾರವಾಗಿ ನಾಗರ್‌ಕೋಯಿಲ್‌ನಲ್ಲಿ ನಡೆದ ಡಿಎಂಕೆ ಕುಲಪತಿ ಎಂ ಕರುಣಾನಿಧಿ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡುವಾಗ, ಕೆಲವು ಶಕ್ತಿಗಳು ”ಜಾತಿ ಮತ್ತು ಕೋಮು ಗಲಭೆಗಳನ್ನು” ಪ್ರಚೋದಿಸುವ ಮೂಲಕ ತಮ್ಮ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿವೆ ಎಂದು ಬಿಜೆಪಿಯ ಹೆಸರು ಹೇಳದೆ ಮಾತನಾಡಿದ್ದರು. ಆದರೆ ಇದೇ ಮೊದಲ ಬಾರಿಗೆ ಸ್ಟಾಲಿನ್ ಅವರು ಬಿಜೆಪಿ ವಿರುದ್ಧ ನೇರವಾಗಿ ಆರೋಪ ಮಾಡಿದ್ದಾರೆ.

ಮಾರ್ಚ್ 1ರಂದು ಚೆನ್ನೈನಲ್ಲಿ ಡಿಎಂಕೆ ಆಯೋಜಿಸಿದ್ದ ಸಾರ್ವಜನಿಕ ರ್ಯಾಲಿಯಲ್ಲಿ, ಸ್ಟಾಲಿನ್ ಅವರು ‘2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಭಾರತದ ಎಲ್ಲಾ ವಿರೋಧ ಪಕ್ಷಗಳ ಬೇಷರತ್ ಒಗ್ಗಟ್ಟಿಗೆ ಕರೆ’ ನೀಡಿದ್ದರು. ಅವರ ಈ ಹೇಳಿಕೆಯ ನಂತರ ಬಿಜೆಪಿ ನಾಯಕರು, ತಮಿಳುನಾಡಿನಲ್ಲಿ ವಲಸಿಗರು ದಾಳಿಗೆ ಒಳಗಾಗುತ್ತಿದ್ದಾರೆ ಎಂಬ ವದಂತಿಗಳನ್ನು ಹರಡಲು ಪ್ರಾರಂಭಿಸಿದರು ಎಂದು ಗುರುವಾರ ಸ್ಟಾಲಿನ್ ಹೇಳಿದ್ದಾರೆ.

ಬಿಜೆಪಿ ಹರಿಬಿಟ್ಟ ಸುಳ್ಳು ಸುದ್ದಿಯ ಬಳಿಕ, ಬಿಹಾರ ಗ್ರಾಮೀಣಾಭಿವೃದ್ಧಿ ಕಾರ್ಯದರ್ಶಿ ಡಿ ಬಾಲಮುರುಗನ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ತಮಿಳುನಾಡಿಗೆ ಭೇಟಿ ನೀಡಿತ್ತು. ಈ ಸಂದರ್ಭದಲ್ಲಿ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ವಿ ಇರೈ ಅನ್ಬು ಅವರನ್ನು ಭೇಟಿ ಮಾಡಿದರು. ತಿರುಪುರ್ ಮತ್ತು ಕೊಯಮತ್ತೂರಿನಲ್ಲಿ ಬಿಹಾರದಿಂದ ವಲಸೆ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತೆಯರಿಗೆ ಸಹಾಯವಾಣಿ ಆರಂಭಿಸಿದ ಎಸ್‌ಐಟಿ

0
ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತರಿಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಹಾಯವಾಣಿ ತೆರೆದಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಸ್‌ಐಟಿ ಮುಖ್ಯಸ್ಥ ಬಿ.ಕೆ ಸಿಂಗ್, "ಹಾಸನ ಜಿಲ್ಲೆಯಲ್ಲಿ ನಡೆದ ಲೈಂಗಿಕ ದೌರ್ಜನ್ಯ...