Homeಮುಖಪುಟಫೇಸ್‌ಬುಕ್‌ಗೆ ಬಿಜೆಪಿಯೇ ಅತಿದೊಡ್ಡ ಜಾಹೀರಾತುದಾರ: ಮೋದಿ ಪಕ್ಷದಿಂದ ಶೇ.70ರಷ್ಟು ಜಾಹೀರಾತುಗಳು

ಫೇಸ್‌ಬುಕ್‌ಗೆ ಬಿಜೆಪಿಯೇ ಅತಿದೊಡ್ಡ ಜಾಹೀರಾತುದಾರ: ಮೋದಿ ಪಕ್ಷದಿಂದ ಶೇ.70ರಷ್ಟು ಜಾಹೀರಾತುಗಳು

ಜಾಹೀರಾತುಗಳಿಗೆ ಖರ್ಚು ಮಾಡುವ ಹಣದ ಡೇಟಾ ಟ್ರ್ಯಾಕಿಂಗ್ ಮಾಹಿತಿ ಪ್ರಕಾರ, ಬಿಜೆಪಿ ಪಕ್ಷ ಕಾರ್ಪೊರೇಟ್ ಕಂಪನಿಗಳಿಗಿಂತ ಹೆಚ್ಚಾಗಿ ಜಾಹೀರಾತಿಗೆ ಹಣ ವ್ಯಯಿಸುತ್ತದೆ.

- Advertisement -
- Advertisement -

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ ಭಾರತದಲ್ಲಿ ಬಿಜೆಪಿ ಪಕ್ಷದ ಪರವಾಗಿ ಕೆಲಸ ಮಾಡುತ್ತಿದೆ ಎಂಬ ಆರೋಪಗಳ ನಡುವೆ ಫೇಸ್‌ಬುಕ್‌ಗೆ ಬಿಜೆಪಿಯೇ ಅತಿದೊಡ್ಡ ಜಾಹೀರಾತುದಾರ ಎಂಬ ವರದಿ ಹೊರಬಿದ್ದಿದ್ದು, ಒಟ್ಟು ಜಾಹಿರಾತುಗಳಲ್ಲಿ ಮೋದಿ ಪಕ್ಷವೇ ಶೇ.70ರಷ್ಟು ಜಾಹೀರಾತುಗಳನ್ನು ನೀಡಿದೆ ಎಂಬ ಅಂಶ ಬೆಳಕಿಗೆ ಬಂದಿದೆ.

ಫೇಸ್‌ಬುಕ್‌ನಲ್ಲಿ ಜಾಹೀರಾತಿಗಾಗಿ ಬಿಜೆಪಿ ಖರ್ಚು ಮಾಡುವ ಹಣದ ಮೌಲ್ಯ ನಿಜಕ್ಕೂ ಜನ ಸಾಮಾನ್ಯರನ್ನು ದಂಗುಬಡಿಸುತ್ತದೆ. ಕಳೆದ 18 ತಿಂಗಳಲ್ಲಿ ಆಡಳಿತ ಪಕ್ಷ ಬಿಜೆಪಿ ಸಾಮಾಜಿಕ, ರಾಜಕೀಯ ಮತ್ತು ಚುನಾವಣಾ ವಿಚಾರಗಳ ಜಾಹೀರಾತುಗಾಗಿ ಫೇಸ್‌ಬುಕ್‌ಗೆ ಸುರಿದ ಹಣ 4.61 ಕೋಟಿ ರೂಪಾಯಿ ಅಂದರೆ ನೀವು ನಂಬಲೇಬೇಕು. ಕಳೆದ ವರ್ಷದ ಎಪ್ರಿಲ್-ಮೇ ತಿಂಗಳಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಲು ಸಾಮಾಜಿಕ ಜಾಲತಾಣಗಳು ವಹಿಸಿದ ಪಾತ್ರವನ್ನು ಯಾರೂ ಅಲ್ಲಗೆಳೆಯಲಾರರು.

ಇದನ್ನೂ ಓದಿ: ಫೇಸ್‌ಬುಕ್‌ನ “ಹೇಟ್‌ಸ್ಪೀಚ್” ನಿಯಮಗಳು ಮತ್ತು ಭಾರತದ ರಾಜಕೀಯ: ವಾಲ್‌ಸ್ಟ್ರೀಟ್‌ ಜರ್ನಲ್ ಲೇಖನದ ಅನುವಾದ

ಪ್ರಪಂಚದಲ್ಲಿ ಫೇಸ್‌ಬುಕ್ ಅನ್ನು ಅತಿ ಹೆಚ್ಚು ಬಳಸುವವರು ಭಾರತೀಯರೇ. ಜಾಹೀರಾತುಗಳಿಗೆ ಖರ್ಚು ಮಾಡುವ ಹಣದ ಡೇಟಾ ಟ್ರ್ಯಾಕಿಂಗ್ ಮಾಹಿತಿ ಪ್ರಕಾರ, ಬಿಜೆಪಿ ಪಕ್ಷ ಕಾರ್ಪೊರೇಟ್ ಕಂಪನಿಗಳಿಗಿಂತ ಹೆಚ್ಚಾಗಿ ಜಾಹೀರಾತಿಗೆ ಹಣ ವ್ಯಯಿಸುತ್ತದೆ. ಕಾಂಗ್ರೆಸ್ ಪಕ್ಷ ಎರಡನೇ ಸ್ಥಾನದಲ್ಲಿದೆ.

ಟಾಪ್ 10 ಜಾಹೀರಾತುದಾರರಲ್ಲಿ ಬಿಜೆಪಿಯೊಂದಿಗೆ ಸಂಬಂಧದಲ್ಲಿರುವ, ಬಿಜೆಪಿಯ ಸಿದ್ಧಾಂತ, ಅಭಿಪ್ರಾಯಗಳನ್ನು ಉತ್ತೇಜಿಸುವ ನಾಲ್ಕು ಪೇಜ್‌ಗಳು ಮತ್ತು ವೆಬ್‌ಸೈಟ್‌ಗಳು ಸಹ ಸೇರಿವೆ.

ಮುಖ್ಯವಾಗಿ ‘ಮೇರಾ ಪೆಹ್ಲಾ ವೋಟ್ ಮೋದಿ ಕೋ’(ನನ್ನ ಮೊದಲ ಮತ ಮೋದಿಯವರಿಗೆ) ಮತ್ತು ‘ಭಾರತ್ ಕಿ ಮನ್ ಕೀ ಬಾತ್’ (ಭಾರತದ ಮನದ ಮಾತು) ಎಂಬ ಫೇಸ್‌ಬುಕ್‌ ಪೇಜ್‌ಗಳು ಪ್ರಮುಖ ಜಾಹೀರಾತುದಾರರಾಗಿದ್ದಾರೆ. ಮೇರಾ ಪೆಹ್ಲಾ ವೋಟ್ ಮೋದಿ ಕೋ ಪೇಜ್ ಜಾಹೀರಾತುಗಳಿಗೆ 1.39 ಕೋಟಿ ರೂಪಾಯಿ ವ್ಯಯಿಸಿದರೆ, ಎರಡನೇ ಪೇಜ್ ಭಾರತ್ ಕಿ ಮನ್ ಕೀ ಬಾತ್ ಸುಮಾರು 2.24 ಕೋಟಿ ರೂಪಾಯಿ ವ್ಯಯಿಸಿದ್ದಾರೆ. ಇವುಗಳ ಜೊತೆಗೆ ಸುದ್ದಿ ಮತ್ತು ಮಾಧ್ಯಮ ವೆಬ್‌ಸೈಟ್ ಎಂದು ವಿಭಾಗಿಸಲಾಗಿರುವ ‘ನೇಷನ್ ವಿತ್ ನಮೋ’ ಎಂಬ ಪೇಜ್ ಕೂಡ 1.28 ಕೋಟಿ ರೂಪಾಯಿ ಜಾಹೀರಾತು ನೀಡಿದೆ.

ವೆಬ್‌ಸೈಟ್, ಫೇಸ್‌ಬುಕ್ ಪೇಜ್‌ಗಳ ಕಥೆ ಇಷ್ಟಾದರೆ, ಬಿಜೆಪಿಯ ನಾಯಕರುಗಳು ಸಹ ನಾವೇನು ಕಡಿಮೆ ಇಲ್ಲ ಎನ್ನುವಂತೆ ಫೇಸ್‌ಬುಕ್‌ಗೆ ಜಾಹೀರಾತು ನೀಡಿದ್ದಾರೆ. ಬಿಜೆಪಿ ಮುಖಂಡ, ಮಾಜಿ ಸಂಸದ ಆರ್.ಕೆ.ಸಿನ್ಹಾ ಜಾಹೀರಾತೀಗಾಗಿ 65 ಲಕ್ಷ ರೂಪಾಯಿ ನೀಡಿದ್ದಾರೆ. ಒಟ್ಟಾರೆ ಎಲ್ಲಾ ಮೂಲಗಳು ಸೇರಿ ಸರಿಸುಮಾರು 10.17 ಕೋಟಿ ರೂಪಾಯಿಗಳು ಫೇಸ್‌ಬುಕ್‌ಗೆ ಸಂದಿವೆ. ಫೇಸ್‌ಬುಕ್‌ಗೆ ಬರುವ ಜಾಹೀರಾತುಗಳಲ್ಲಿ ಶೇ.70ರಷ್ಟು ಆಡಳಿತ ಪಕ್ಷ ಬಿಜೆಪಿಯಿಂದ ಫೇಸ್‌ಬುಕ್‌ಗೆ ಸಂದಿದೆ.

ಈ ಡೇಟಾ ಗಮನಿಸಿದರೇ ಆಡಳಿತ ಪಕ್ಷ ಬಿಜೆಪಿ ಅಧಿಕಾರಕ್ಕೆ ಬರಲು ಸಾಮಾಜಿಕ ಜಾಲತಾಣಗಳು, ಸಾಮಾಜಿಕ ಮಾಧ್ಯಮಗಳನ್ನು ಎಷ್ಟರ ಮಟ್ಟಿಗೆ ಬಳಸಿಕೊಂಡಿದೆ ಎಂಬುದು ತಿಳಿಯುತ್ತದೆ. ಹೀಗಾಗಿ ಫೇಸ್ ಬುಕ್ ವಿರುದ್ಧ ಕೆಲ ಪ್ರಜ್ಞಾವಂತ ನಾಗರಿಕರು ಮಾಡುತ್ತಿರುವ ಆರೋಪವನ್ನು ತಳ್ಳಿಹಾಕುವಂತಿಲ್ಲ.


ಇದನ್ನೂ ಓದಿ: ನಾಜಿ ಜರ್ಮನಿ-IBM, ಫೇಸ್‌ಬುಕ್ ಭಾರತ-BJP: ‘ಸುಮಧುರ ಬಾಂಧವ್ಯ’ದ ಕತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...