Homeಮುಖಪುಟಫೇಸ್‌ಬುಕ್‌ಗೆ ಬಿಜೆಪಿಯೇ ಅತಿದೊಡ್ಡ ಜಾಹೀರಾತುದಾರ: ಮೋದಿ ಪಕ್ಷದಿಂದ ಶೇ.70ರಷ್ಟು ಜಾಹೀರಾತುಗಳು

ಫೇಸ್‌ಬುಕ್‌ಗೆ ಬಿಜೆಪಿಯೇ ಅತಿದೊಡ್ಡ ಜಾಹೀರಾತುದಾರ: ಮೋದಿ ಪಕ್ಷದಿಂದ ಶೇ.70ರಷ್ಟು ಜಾಹೀರಾತುಗಳು

ಜಾಹೀರಾತುಗಳಿಗೆ ಖರ್ಚು ಮಾಡುವ ಹಣದ ಡೇಟಾ ಟ್ರ್ಯಾಕಿಂಗ್ ಮಾಹಿತಿ ಪ್ರಕಾರ, ಬಿಜೆಪಿ ಪಕ್ಷ ಕಾರ್ಪೊರೇಟ್ ಕಂಪನಿಗಳಿಗಿಂತ ಹೆಚ್ಚಾಗಿ ಜಾಹೀರಾತಿಗೆ ಹಣ ವ್ಯಯಿಸುತ್ತದೆ.

- Advertisement -
- Advertisement -

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ ಭಾರತದಲ್ಲಿ ಬಿಜೆಪಿ ಪಕ್ಷದ ಪರವಾಗಿ ಕೆಲಸ ಮಾಡುತ್ತಿದೆ ಎಂಬ ಆರೋಪಗಳ ನಡುವೆ ಫೇಸ್‌ಬುಕ್‌ಗೆ ಬಿಜೆಪಿಯೇ ಅತಿದೊಡ್ಡ ಜಾಹೀರಾತುದಾರ ಎಂಬ ವರದಿ ಹೊರಬಿದ್ದಿದ್ದು, ಒಟ್ಟು ಜಾಹಿರಾತುಗಳಲ್ಲಿ ಮೋದಿ ಪಕ್ಷವೇ ಶೇ.70ರಷ್ಟು ಜಾಹೀರಾತುಗಳನ್ನು ನೀಡಿದೆ ಎಂಬ ಅಂಶ ಬೆಳಕಿಗೆ ಬಂದಿದೆ.

ಫೇಸ್‌ಬುಕ್‌ನಲ್ಲಿ ಜಾಹೀರಾತಿಗಾಗಿ ಬಿಜೆಪಿ ಖರ್ಚು ಮಾಡುವ ಹಣದ ಮೌಲ್ಯ ನಿಜಕ್ಕೂ ಜನ ಸಾಮಾನ್ಯರನ್ನು ದಂಗುಬಡಿಸುತ್ತದೆ. ಕಳೆದ 18 ತಿಂಗಳಲ್ಲಿ ಆಡಳಿತ ಪಕ್ಷ ಬಿಜೆಪಿ ಸಾಮಾಜಿಕ, ರಾಜಕೀಯ ಮತ್ತು ಚುನಾವಣಾ ವಿಚಾರಗಳ ಜಾಹೀರಾತುಗಾಗಿ ಫೇಸ್‌ಬುಕ್‌ಗೆ ಸುರಿದ ಹಣ 4.61 ಕೋಟಿ ರೂಪಾಯಿ ಅಂದರೆ ನೀವು ನಂಬಲೇಬೇಕು. ಕಳೆದ ವರ್ಷದ ಎಪ್ರಿಲ್-ಮೇ ತಿಂಗಳಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಲು ಸಾಮಾಜಿಕ ಜಾಲತಾಣಗಳು ವಹಿಸಿದ ಪಾತ್ರವನ್ನು ಯಾರೂ ಅಲ್ಲಗೆಳೆಯಲಾರರು.

ಇದನ್ನೂ ಓದಿ: ಫೇಸ್‌ಬುಕ್‌ನ “ಹೇಟ್‌ಸ್ಪೀಚ್” ನಿಯಮಗಳು ಮತ್ತು ಭಾರತದ ರಾಜಕೀಯ: ವಾಲ್‌ಸ್ಟ್ರೀಟ್‌ ಜರ್ನಲ್ ಲೇಖನದ ಅನುವಾದ

ಪ್ರಪಂಚದಲ್ಲಿ ಫೇಸ್‌ಬುಕ್ ಅನ್ನು ಅತಿ ಹೆಚ್ಚು ಬಳಸುವವರು ಭಾರತೀಯರೇ. ಜಾಹೀರಾತುಗಳಿಗೆ ಖರ್ಚು ಮಾಡುವ ಹಣದ ಡೇಟಾ ಟ್ರ್ಯಾಕಿಂಗ್ ಮಾಹಿತಿ ಪ್ರಕಾರ, ಬಿಜೆಪಿ ಪಕ್ಷ ಕಾರ್ಪೊರೇಟ್ ಕಂಪನಿಗಳಿಗಿಂತ ಹೆಚ್ಚಾಗಿ ಜಾಹೀರಾತಿಗೆ ಹಣ ವ್ಯಯಿಸುತ್ತದೆ. ಕಾಂಗ್ರೆಸ್ ಪಕ್ಷ ಎರಡನೇ ಸ್ಥಾನದಲ್ಲಿದೆ.

ಟಾಪ್ 10 ಜಾಹೀರಾತುದಾರರಲ್ಲಿ ಬಿಜೆಪಿಯೊಂದಿಗೆ ಸಂಬಂಧದಲ್ಲಿರುವ, ಬಿಜೆಪಿಯ ಸಿದ್ಧಾಂತ, ಅಭಿಪ್ರಾಯಗಳನ್ನು ಉತ್ತೇಜಿಸುವ ನಾಲ್ಕು ಪೇಜ್‌ಗಳು ಮತ್ತು ವೆಬ್‌ಸೈಟ್‌ಗಳು ಸಹ ಸೇರಿವೆ.

ಮುಖ್ಯವಾಗಿ ‘ಮೇರಾ ಪೆಹ್ಲಾ ವೋಟ್ ಮೋದಿ ಕೋ’(ನನ್ನ ಮೊದಲ ಮತ ಮೋದಿಯವರಿಗೆ) ಮತ್ತು ‘ಭಾರತ್ ಕಿ ಮನ್ ಕೀ ಬಾತ್’ (ಭಾರತದ ಮನದ ಮಾತು) ಎಂಬ ಫೇಸ್‌ಬುಕ್‌ ಪೇಜ್‌ಗಳು ಪ್ರಮುಖ ಜಾಹೀರಾತುದಾರರಾಗಿದ್ದಾರೆ. ಮೇರಾ ಪೆಹ್ಲಾ ವೋಟ್ ಮೋದಿ ಕೋ ಪೇಜ್ ಜಾಹೀರಾತುಗಳಿಗೆ 1.39 ಕೋಟಿ ರೂಪಾಯಿ ವ್ಯಯಿಸಿದರೆ, ಎರಡನೇ ಪೇಜ್ ಭಾರತ್ ಕಿ ಮನ್ ಕೀ ಬಾತ್ ಸುಮಾರು 2.24 ಕೋಟಿ ರೂಪಾಯಿ ವ್ಯಯಿಸಿದ್ದಾರೆ. ಇವುಗಳ ಜೊತೆಗೆ ಸುದ್ದಿ ಮತ್ತು ಮಾಧ್ಯಮ ವೆಬ್‌ಸೈಟ್ ಎಂದು ವಿಭಾಗಿಸಲಾಗಿರುವ ‘ನೇಷನ್ ವಿತ್ ನಮೋ’ ಎಂಬ ಪೇಜ್ ಕೂಡ 1.28 ಕೋಟಿ ರೂಪಾಯಿ ಜಾಹೀರಾತು ನೀಡಿದೆ.

ವೆಬ್‌ಸೈಟ್, ಫೇಸ್‌ಬುಕ್ ಪೇಜ್‌ಗಳ ಕಥೆ ಇಷ್ಟಾದರೆ, ಬಿಜೆಪಿಯ ನಾಯಕರುಗಳು ಸಹ ನಾವೇನು ಕಡಿಮೆ ಇಲ್ಲ ಎನ್ನುವಂತೆ ಫೇಸ್‌ಬುಕ್‌ಗೆ ಜಾಹೀರಾತು ನೀಡಿದ್ದಾರೆ. ಬಿಜೆಪಿ ಮುಖಂಡ, ಮಾಜಿ ಸಂಸದ ಆರ್.ಕೆ.ಸಿನ್ಹಾ ಜಾಹೀರಾತೀಗಾಗಿ 65 ಲಕ್ಷ ರೂಪಾಯಿ ನೀಡಿದ್ದಾರೆ. ಒಟ್ಟಾರೆ ಎಲ್ಲಾ ಮೂಲಗಳು ಸೇರಿ ಸರಿಸುಮಾರು 10.17 ಕೋಟಿ ರೂಪಾಯಿಗಳು ಫೇಸ್‌ಬುಕ್‌ಗೆ ಸಂದಿವೆ. ಫೇಸ್‌ಬುಕ್‌ಗೆ ಬರುವ ಜಾಹೀರಾತುಗಳಲ್ಲಿ ಶೇ.70ರಷ್ಟು ಆಡಳಿತ ಪಕ್ಷ ಬಿಜೆಪಿಯಿಂದ ಫೇಸ್‌ಬುಕ್‌ಗೆ ಸಂದಿದೆ.

ಈ ಡೇಟಾ ಗಮನಿಸಿದರೇ ಆಡಳಿತ ಪಕ್ಷ ಬಿಜೆಪಿ ಅಧಿಕಾರಕ್ಕೆ ಬರಲು ಸಾಮಾಜಿಕ ಜಾಲತಾಣಗಳು, ಸಾಮಾಜಿಕ ಮಾಧ್ಯಮಗಳನ್ನು ಎಷ್ಟರ ಮಟ್ಟಿಗೆ ಬಳಸಿಕೊಂಡಿದೆ ಎಂಬುದು ತಿಳಿಯುತ್ತದೆ. ಹೀಗಾಗಿ ಫೇಸ್ ಬುಕ್ ವಿರುದ್ಧ ಕೆಲ ಪ್ರಜ್ಞಾವಂತ ನಾಗರಿಕರು ಮಾಡುತ್ತಿರುವ ಆರೋಪವನ್ನು ತಳ್ಳಿಹಾಕುವಂತಿಲ್ಲ.


ಇದನ್ನೂ ಓದಿ: ನಾಜಿ ಜರ್ಮನಿ-IBM, ಫೇಸ್‌ಬುಕ್ ಭಾರತ-BJP: ‘ಸುಮಧುರ ಬಾಂಧವ್ಯ’ದ ಕತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....