Homeಮುಖಪುಟಫೇಸ್‌ಬುಕ್‌ಗೆ ಬಿಜೆಪಿಯೇ ಅತಿದೊಡ್ಡ ಜಾಹೀರಾತುದಾರ: ಮೋದಿ ಪಕ್ಷದಿಂದ ಶೇ.70ರಷ್ಟು ಜಾಹೀರಾತುಗಳು

ಫೇಸ್‌ಬುಕ್‌ಗೆ ಬಿಜೆಪಿಯೇ ಅತಿದೊಡ್ಡ ಜಾಹೀರಾತುದಾರ: ಮೋದಿ ಪಕ್ಷದಿಂದ ಶೇ.70ರಷ್ಟು ಜಾಹೀರಾತುಗಳು

ಜಾಹೀರಾತುಗಳಿಗೆ ಖರ್ಚು ಮಾಡುವ ಹಣದ ಡೇಟಾ ಟ್ರ್ಯಾಕಿಂಗ್ ಮಾಹಿತಿ ಪ್ರಕಾರ, ಬಿಜೆಪಿ ಪಕ್ಷ ಕಾರ್ಪೊರೇಟ್ ಕಂಪನಿಗಳಿಗಿಂತ ಹೆಚ್ಚಾಗಿ ಜಾಹೀರಾತಿಗೆ ಹಣ ವ್ಯಯಿಸುತ್ತದೆ.

- Advertisement -
- Advertisement -

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ ಭಾರತದಲ್ಲಿ ಬಿಜೆಪಿ ಪಕ್ಷದ ಪರವಾಗಿ ಕೆಲಸ ಮಾಡುತ್ತಿದೆ ಎಂಬ ಆರೋಪಗಳ ನಡುವೆ ಫೇಸ್‌ಬುಕ್‌ಗೆ ಬಿಜೆಪಿಯೇ ಅತಿದೊಡ್ಡ ಜಾಹೀರಾತುದಾರ ಎಂಬ ವರದಿ ಹೊರಬಿದ್ದಿದ್ದು, ಒಟ್ಟು ಜಾಹಿರಾತುಗಳಲ್ಲಿ ಮೋದಿ ಪಕ್ಷವೇ ಶೇ.70ರಷ್ಟು ಜಾಹೀರಾತುಗಳನ್ನು ನೀಡಿದೆ ಎಂಬ ಅಂಶ ಬೆಳಕಿಗೆ ಬಂದಿದೆ.

ಫೇಸ್‌ಬುಕ್‌ನಲ್ಲಿ ಜಾಹೀರಾತಿಗಾಗಿ ಬಿಜೆಪಿ ಖರ್ಚು ಮಾಡುವ ಹಣದ ಮೌಲ್ಯ ನಿಜಕ್ಕೂ ಜನ ಸಾಮಾನ್ಯರನ್ನು ದಂಗುಬಡಿಸುತ್ತದೆ. ಕಳೆದ 18 ತಿಂಗಳಲ್ಲಿ ಆಡಳಿತ ಪಕ್ಷ ಬಿಜೆಪಿ ಸಾಮಾಜಿಕ, ರಾಜಕೀಯ ಮತ್ತು ಚುನಾವಣಾ ವಿಚಾರಗಳ ಜಾಹೀರಾತುಗಾಗಿ ಫೇಸ್‌ಬುಕ್‌ಗೆ ಸುರಿದ ಹಣ 4.61 ಕೋಟಿ ರೂಪಾಯಿ ಅಂದರೆ ನೀವು ನಂಬಲೇಬೇಕು. ಕಳೆದ ವರ್ಷದ ಎಪ್ರಿಲ್-ಮೇ ತಿಂಗಳಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಲು ಸಾಮಾಜಿಕ ಜಾಲತಾಣಗಳು ವಹಿಸಿದ ಪಾತ್ರವನ್ನು ಯಾರೂ ಅಲ್ಲಗೆಳೆಯಲಾರರು.

ಇದನ್ನೂ ಓದಿ: ಫೇಸ್‌ಬುಕ್‌ನ “ಹೇಟ್‌ಸ್ಪೀಚ್” ನಿಯಮಗಳು ಮತ್ತು ಭಾರತದ ರಾಜಕೀಯ: ವಾಲ್‌ಸ್ಟ್ರೀಟ್‌ ಜರ್ನಲ್ ಲೇಖನದ ಅನುವಾದ

ಪ್ರಪಂಚದಲ್ಲಿ ಫೇಸ್‌ಬುಕ್ ಅನ್ನು ಅತಿ ಹೆಚ್ಚು ಬಳಸುವವರು ಭಾರತೀಯರೇ. ಜಾಹೀರಾತುಗಳಿಗೆ ಖರ್ಚು ಮಾಡುವ ಹಣದ ಡೇಟಾ ಟ್ರ್ಯಾಕಿಂಗ್ ಮಾಹಿತಿ ಪ್ರಕಾರ, ಬಿಜೆಪಿ ಪಕ್ಷ ಕಾರ್ಪೊರೇಟ್ ಕಂಪನಿಗಳಿಗಿಂತ ಹೆಚ್ಚಾಗಿ ಜಾಹೀರಾತಿಗೆ ಹಣ ವ್ಯಯಿಸುತ್ತದೆ. ಕಾಂಗ್ರೆಸ್ ಪಕ್ಷ ಎರಡನೇ ಸ್ಥಾನದಲ್ಲಿದೆ.

ಟಾಪ್ 10 ಜಾಹೀರಾತುದಾರರಲ್ಲಿ ಬಿಜೆಪಿಯೊಂದಿಗೆ ಸಂಬಂಧದಲ್ಲಿರುವ, ಬಿಜೆಪಿಯ ಸಿದ್ಧಾಂತ, ಅಭಿಪ್ರಾಯಗಳನ್ನು ಉತ್ತೇಜಿಸುವ ನಾಲ್ಕು ಪೇಜ್‌ಗಳು ಮತ್ತು ವೆಬ್‌ಸೈಟ್‌ಗಳು ಸಹ ಸೇರಿವೆ.

ಮುಖ್ಯವಾಗಿ ‘ಮೇರಾ ಪೆಹ್ಲಾ ವೋಟ್ ಮೋದಿ ಕೋ’(ನನ್ನ ಮೊದಲ ಮತ ಮೋದಿಯವರಿಗೆ) ಮತ್ತು ‘ಭಾರತ್ ಕಿ ಮನ್ ಕೀ ಬಾತ್’ (ಭಾರತದ ಮನದ ಮಾತು) ಎಂಬ ಫೇಸ್‌ಬುಕ್‌ ಪೇಜ್‌ಗಳು ಪ್ರಮುಖ ಜಾಹೀರಾತುದಾರರಾಗಿದ್ದಾರೆ. ಮೇರಾ ಪೆಹ್ಲಾ ವೋಟ್ ಮೋದಿ ಕೋ ಪೇಜ್ ಜಾಹೀರಾತುಗಳಿಗೆ 1.39 ಕೋಟಿ ರೂಪಾಯಿ ವ್ಯಯಿಸಿದರೆ, ಎರಡನೇ ಪೇಜ್ ಭಾರತ್ ಕಿ ಮನ್ ಕೀ ಬಾತ್ ಸುಮಾರು 2.24 ಕೋಟಿ ರೂಪಾಯಿ ವ್ಯಯಿಸಿದ್ದಾರೆ. ಇವುಗಳ ಜೊತೆಗೆ ಸುದ್ದಿ ಮತ್ತು ಮಾಧ್ಯಮ ವೆಬ್‌ಸೈಟ್ ಎಂದು ವಿಭಾಗಿಸಲಾಗಿರುವ ‘ನೇಷನ್ ವಿತ್ ನಮೋ’ ಎಂಬ ಪೇಜ್ ಕೂಡ 1.28 ಕೋಟಿ ರೂಪಾಯಿ ಜಾಹೀರಾತು ನೀಡಿದೆ.

ವೆಬ್‌ಸೈಟ್, ಫೇಸ್‌ಬುಕ್ ಪೇಜ್‌ಗಳ ಕಥೆ ಇಷ್ಟಾದರೆ, ಬಿಜೆಪಿಯ ನಾಯಕರುಗಳು ಸಹ ನಾವೇನು ಕಡಿಮೆ ಇಲ್ಲ ಎನ್ನುವಂತೆ ಫೇಸ್‌ಬುಕ್‌ಗೆ ಜಾಹೀರಾತು ನೀಡಿದ್ದಾರೆ. ಬಿಜೆಪಿ ಮುಖಂಡ, ಮಾಜಿ ಸಂಸದ ಆರ್.ಕೆ.ಸಿನ್ಹಾ ಜಾಹೀರಾತೀಗಾಗಿ 65 ಲಕ್ಷ ರೂಪಾಯಿ ನೀಡಿದ್ದಾರೆ. ಒಟ್ಟಾರೆ ಎಲ್ಲಾ ಮೂಲಗಳು ಸೇರಿ ಸರಿಸುಮಾರು 10.17 ಕೋಟಿ ರೂಪಾಯಿಗಳು ಫೇಸ್‌ಬುಕ್‌ಗೆ ಸಂದಿವೆ. ಫೇಸ್‌ಬುಕ್‌ಗೆ ಬರುವ ಜಾಹೀರಾತುಗಳಲ್ಲಿ ಶೇ.70ರಷ್ಟು ಆಡಳಿತ ಪಕ್ಷ ಬಿಜೆಪಿಯಿಂದ ಫೇಸ್‌ಬುಕ್‌ಗೆ ಸಂದಿದೆ.

ಈ ಡೇಟಾ ಗಮನಿಸಿದರೇ ಆಡಳಿತ ಪಕ್ಷ ಬಿಜೆಪಿ ಅಧಿಕಾರಕ್ಕೆ ಬರಲು ಸಾಮಾಜಿಕ ಜಾಲತಾಣಗಳು, ಸಾಮಾಜಿಕ ಮಾಧ್ಯಮಗಳನ್ನು ಎಷ್ಟರ ಮಟ್ಟಿಗೆ ಬಳಸಿಕೊಂಡಿದೆ ಎಂಬುದು ತಿಳಿಯುತ್ತದೆ. ಹೀಗಾಗಿ ಫೇಸ್ ಬುಕ್ ವಿರುದ್ಧ ಕೆಲ ಪ್ರಜ್ಞಾವಂತ ನಾಗರಿಕರು ಮಾಡುತ್ತಿರುವ ಆರೋಪವನ್ನು ತಳ್ಳಿಹಾಕುವಂತಿಲ್ಲ.


ಇದನ್ನೂ ಓದಿ: ನಾಜಿ ಜರ್ಮನಿ-IBM, ಫೇಸ್‌ಬುಕ್ ಭಾರತ-BJP: ‘ಸುಮಧುರ ಬಾಂಧವ್ಯ’ದ ಕತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...