Homeಮುಖಪುಟಫೇಸ್‌ಬುಕ್‌ಗೆ ಬಿಜೆಪಿಯೇ ಅತಿದೊಡ್ಡ ಜಾಹೀರಾತುದಾರ: ಮೋದಿ ಪಕ್ಷದಿಂದ ಶೇ.70ರಷ್ಟು ಜಾಹೀರಾತುಗಳು

ಫೇಸ್‌ಬುಕ್‌ಗೆ ಬಿಜೆಪಿಯೇ ಅತಿದೊಡ್ಡ ಜಾಹೀರಾತುದಾರ: ಮೋದಿ ಪಕ್ಷದಿಂದ ಶೇ.70ರಷ್ಟು ಜಾಹೀರಾತುಗಳು

ಜಾಹೀರಾತುಗಳಿಗೆ ಖರ್ಚು ಮಾಡುವ ಹಣದ ಡೇಟಾ ಟ್ರ್ಯಾಕಿಂಗ್ ಮಾಹಿತಿ ಪ್ರಕಾರ, ಬಿಜೆಪಿ ಪಕ್ಷ ಕಾರ್ಪೊರೇಟ್ ಕಂಪನಿಗಳಿಗಿಂತ ಹೆಚ್ಚಾಗಿ ಜಾಹೀರಾತಿಗೆ ಹಣ ವ್ಯಯಿಸುತ್ತದೆ.

- Advertisement -
- Advertisement -

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ ಭಾರತದಲ್ಲಿ ಬಿಜೆಪಿ ಪಕ್ಷದ ಪರವಾಗಿ ಕೆಲಸ ಮಾಡುತ್ತಿದೆ ಎಂಬ ಆರೋಪಗಳ ನಡುವೆ ಫೇಸ್‌ಬುಕ್‌ಗೆ ಬಿಜೆಪಿಯೇ ಅತಿದೊಡ್ಡ ಜಾಹೀರಾತುದಾರ ಎಂಬ ವರದಿ ಹೊರಬಿದ್ದಿದ್ದು, ಒಟ್ಟು ಜಾಹಿರಾತುಗಳಲ್ಲಿ ಮೋದಿ ಪಕ್ಷವೇ ಶೇ.70ರಷ್ಟು ಜಾಹೀರಾತುಗಳನ್ನು ನೀಡಿದೆ ಎಂಬ ಅಂಶ ಬೆಳಕಿಗೆ ಬಂದಿದೆ.

ಫೇಸ್‌ಬುಕ್‌ನಲ್ಲಿ ಜಾಹೀರಾತಿಗಾಗಿ ಬಿಜೆಪಿ ಖರ್ಚು ಮಾಡುವ ಹಣದ ಮೌಲ್ಯ ನಿಜಕ್ಕೂ ಜನ ಸಾಮಾನ್ಯರನ್ನು ದಂಗುಬಡಿಸುತ್ತದೆ. ಕಳೆದ 18 ತಿಂಗಳಲ್ಲಿ ಆಡಳಿತ ಪಕ್ಷ ಬಿಜೆಪಿ ಸಾಮಾಜಿಕ, ರಾಜಕೀಯ ಮತ್ತು ಚುನಾವಣಾ ವಿಚಾರಗಳ ಜಾಹೀರಾತುಗಾಗಿ ಫೇಸ್‌ಬುಕ್‌ಗೆ ಸುರಿದ ಹಣ 4.61 ಕೋಟಿ ರೂಪಾಯಿ ಅಂದರೆ ನೀವು ನಂಬಲೇಬೇಕು. ಕಳೆದ ವರ್ಷದ ಎಪ್ರಿಲ್-ಮೇ ತಿಂಗಳಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಲು ಸಾಮಾಜಿಕ ಜಾಲತಾಣಗಳು ವಹಿಸಿದ ಪಾತ್ರವನ್ನು ಯಾರೂ ಅಲ್ಲಗೆಳೆಯಲಾರರು.

ಇದನ್ನೂ ಓದಿ: ಫೇಸ್‌ಬುಕ್‌ನ “ಹೇಟ್‌ಸ್ಪೀಚ್” ನಿಯಮಗಳು ಮತ್ತು ಭಾರತದ ರಾಜಕೀಯ: ವಾಲ್‌ಸ್ಟ್ರೀಟ್‌ ಜರ್ನಲ್ ಲೇಖನದ ಅನುವಾದ

ಪ್ರಪಂಚದಲ್ಲಿ ಫೇಸ್‌ಬುಕ್ ಅನ್ನು ಅತಿ ಹೆಚ್ಚು ಬಳಸುವವರು ಭಾರತೀಯರೇ. ಜಾಹೀರಾತುಗಳಿಗೆ ಖರ್ಚು ಮಾಡುವ ಹಣದ ಡೇಟಾ ಟ್ರ್ಯಾಕಿಂಗ್ ಮಾಹಿತಿ ಪ್ರಕಾರ, ಬಿಜೆಪಿ ಪಕ್ಷ ಕಾರ್ಪೊರೇಟ್ ಕಂಪನಿಗಳಿಗಿಂತ ಹೆಚ್ಚಾಗಿ ಜಾಹೀರಾತಿಗೆ ಹಣ ವ್ಯಯಿಸುತ್ತದೆ. ಕಾಂಗ್ರೆಸ್ ಪಕ್ಷ ಎರಡನೇ ಸ್ಥಾನದಲ್ಲಿದೆ.

ಟಾಪ್ 10 ಜಾಹೀರಾತುದಾರರಲ್ಲಿ ಬಿಜೆಪಿಯೊಂದಿಗೆ ಸಂಬಂಧದಲ್ಲಿರುವ, ಬಿಜೆಪಿಯ ಸಿದ್ಧಾಂತ, ಅಭಿಪ್ರಾಯಗಳನ್ನು ಉತ್ತೇಜಿಸುವ ನಾಲ್ಕು ಪೇಜ್‌ಗಳು ಮತ್ತು ವೆಬ್‌ಸೈಟ್‌ಗಳು ಸಹ ಸೇರಿವೆ.

ಮುಖ್ಯವಾಗಿ ‘ಮೇರಾ ಪೆಹ್ಲಾ ವೋಟ್ ಮೋದಿ ಕೋ’(ನನ್ನ ಮೊದಲ ಮತ ಮೋದಿಯವರಿಗೆ) ಮತ್ತು ‘ಭಾರತ್ ಕಿ ಮನ್ ಕೀ ಬಾತ್’ (ಭಾರತದ ಮನದ ಮಾತು) ಎಂಬ ಫೇಸ್‌ಬುಕ್‌ ಪೇಜ್‌ಗಳು ಪ್ರಮುಖ ಜಾಹೀರಾತುದಾರರಾಗಿದ್ದಾರೆ. ಮೇರಾ ಪೆಹ್ಲಾ ವೋಟ್ ಮೋದಿ ಕೋ ಪೇಜ್ ಜಾಹೀರಾತುಗಳಿಗೆ 1.39 ಕೋಟಿ ರೂಪಾಯಿ ವ್ಯಯಿಸಿದರೆ, ಎರಡನೇ ಪೇಜ್ ಭಾರತ್ ಕಿ ಮನ್ ಕೀ ಬಾತ್ ಸುಮಾರು 2.24 ಕೋಟಿ ರೂಪಾಯಿ ವ್ಯಯಿಸಿದ್ದಾರೆ. ಇವುಗಳ ಜೊತೆಗೆ ಸುದ್ದಿ ಮತ್ತು ಮಾಧ್ಯಮ ವೆಬ್‌ಸೈಟ್ ಎಂದು ವಿಭಾಗಿಸಲಾಗಿರುವ ‘ನೇಷನ್ ವಿತ್ ನಮೋ’ ಎಂಬ ಪೇಜ್ ಕೂಡ 1.28 ಕೋಟಿ ರೂಪಾಯಿ ಜಾಹೀರಾತು ನೀಡಿದೆ.

ವೆಬ್‌ಸೈಟ್, ಫೇಸ್‌ಬುಕ್ ಪೇಜ್‌ಗಳ ಕಥೆ ಇಷ್ಟಾದರೆ, ಬಿಜೆಪಿಯ ನಾಯಕರುಗಳು ಸಹ ನಾವೇನು ಕಡಿಮೆ ಇಲ್ಲ ಎನ್ನುವಂತೆ ಫೇಸ್‌ಬುಕ್‌ಗೆ ಜಾಹೀರಾತು ನೀಡಿದ್ದಾರೆ. ಬಿಜೆಪಿ ಮುಖಂಡ, ಮಾಜಿ ಸಂಸದ ಆರ್.ಕೆ.ಸಿನ್ಹಾ ಜಾಹೀರಾತೀಗಾಗಿ 65 ಲಕ್ಷ ರೂಪಾಯಿ ನೀಡಿದ್ದಾರೆ. ಒಟ್ಟಾರೆ ಎಲ್ಲಾ ಮೂಲಗಳು ಸೇರಿ ಸರಿಸುಮಾರು 10.17 ಕೋಟಿ ರೂಪಾಯಿಗಳು ಫೇಸ್‌ಬುಕ್‌ಗೆ ಸಂದಿವೆ. ಫೇಸ್‌ಬುಕ್‌ಗೆ ಬರುವ ಜಾಹೀರಾತುಗಳಲ್ಲಿ ಶೇ.70ರಷ್ಟು ಆಡಳಿತ ಪಕ್ಷ ಬಿಜೆಪಿಯಿಂದ ಫೇಸ್‌ಬುಕ್‌ಗೆ ಸಂದಿದೆ.

ಈ ಡೇಟಾ ಗಮನಿಸಿದರೇ ಆಡಳಿತ ಪಕ್ಷ ಬಿಜೆಪಿ ಅಧಿಕಾರಕ್ಕೆ ಬರಲು ಸಾಮಾಜಿಕ ಜಾಲತಾಣಗಳು, ಸಾಮಾಜಿಕ ಮಾಧ್ಯಮಗಳನ್ನು ಎಷ್ಟರ ಮಟ್ಟಿಗೆ ಬಳಸಿಕೊಂಡಿದೆ ಎಂಬುದು ತಿಳಿಯುತ್ತದೆ. ಹೀಗಾಗಿ ಫೇಸ್ ಬುಕ್ ವಿರುದ್ಧ ಕೆಲ ಪ್ರಜ್ಞಾವಂತ ನಾಗರಿಕರು ಮಾಡುತ್ತಿರುವ ಆರೋಪವನ್ನು ತಳ್ಳಿಹಾಕುವಂತಿಲ್ಲ.


ಇದನ್ನೂ ಓದಿ: ನಾಜಿ ಜರ್ಮನಿ-IBM, ಫೇಸ್‌ಬುಕ್ ಭಾರತ-BJP: ‘ಸುಮಧುರ ಬಾಂಧವ್ಯ’ದ ಕತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....