Homeಮುಖಪುಟಫೇಸ್‌ಬುಕ್‌ಗೆ ಬಿಜೆಪಿಯೇ ಅತಿದೊಡ್ಡ ಜಾಹೀರಾತುದಾರ: ಮೋದಿ ಪಕ್ಷದಿಂದ ಶೇ.70ರಷ್ಟು ಜಾಹೀರಾತುಗಳು

ಫೇಸ್‌ಬುಕ್‌ಗೆ ಬಿಜೆಪಿಯೇ ಅತಿದೊಡ್ಡ ಜಾಹೀರಾತುದಾರ: ಮೋದಿ ಪಕ್ಷದಿಂದ ಶೇ.70ರಷ್ಟು ಜಾಹೀರಾತುಗಳು

ಜಾಹೀರಾತುಗಳಿಗೆ ಖರ್ಚು ಮಾಡುವ ಹಣದ ಡೇಟಾ ಟ್ರ್ಯಾಕಿಂಗ್ ಮಾಹಿತಿ ಪ್ರಕಾರ, ಬಿಜೆಪಿ ಪಕ್ಷ ಕಾರ್ಪೊರೇಟ್ ಕಂಪನಿಗಳಿಗಿಂತ ಹೆಚ್ಚಾಗಿ ಜಾಹೀರಾತಿಗೆ ಹಣ ವ್ಯಯಿಸುತ್ತದೆ.

- Advertisement -
- Advertisement -

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ ಭಾರತದಲ್ಲಿ ಬಿಜೆಪಿ ಪಕ್ಷದ ಪರವಾಗಿ ಕೆಲಸ ಮಾಡುತ್ತಿದೆ ಎಂಬ ಆರೋಪಗಳ ನಡುವೆ ಫೇಸ್‌ಬುಕ್‌ಗೆ ಬಿಜೆಪಿಯೇ ಅತಿದೊಡ್ಡ ಜಾಹೀರಾತುದಾರ ಎಂಬ ವರದಿ ಹೊರಬಿದ್ದಿದ್ದು, ಒಟ್ಟು ಜಾಹಿರಾತುಗಳಲ್ಲಿ ಮೋದಿ ಪಕ್ಷವೇ ಶೇ.70ರಷ್ಟು ಜಾಹೀರಾತುಗಳನ್ನು ನೀಡಿದೆ ಎಂಬ ಅಂಶ ಬೆಳಕಿಗೆ ಬಂದಿದೆ.

ಫೇಸ್‌ಬುಕ್‌ನಲ್ಲಿ ಜಾಹೀರಾತಿಗಾಗಿ ಬಿಜೆಪಿ ಖರ್ಚು ಮಾಡುವ ಹಣದ ಮೌಲ್ಯ ನಿಜಕ್ಕೂ ಜನ ಸಾಮಾನ್ಯರನ್ನು ದಂಗುಬಡಿಸುತ್ತದೆ. ಕಳೆದ 18 ತಿಂಗಳಲ್ಲಿ ಆಡಳಿತ ಪಕ್ಷ ಬಿಜೆಪಿ ಸಾಮಾಜಿಕ, ರಾಜಕೀಯ ಮತ್ತು ಚುನಾವಣಾ ವಿಚಾರಗಳ ಜಾಹೀರಾತುಗಾಗಿ ಫೇಸ್‌ಬುಕ್‌ಗೆ ಸುರಿದ ಹಣ 4.61 ಕೋಟಿ ರೂಪಾಯಿ ಅಂದರೆ ನೀವು ನಂಬಲೇಬೇಕು. ಕಳೆದ ವರ್ಷದ ಎಪ್ರಿಲ್-ಮೇ ತಿಂಗಳಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಲು ಸಾಮಾಜಿಕ ಜಾಲತಾಣಗಳು ವಹಿಸಿದ ಪಾತ್ರವನ್ನು ಯಾರೂ ಅಲ್ಲಗೆಳೆಯಲಾರರು.

ಇದನ್ನೂ ಓದಿ: ಫೇಸ್‌ಬುಕ್‌ನ “ಹೇಟ್‌ಸ್ಪೀಚ್” ನಿಯಮಗಳು ಮತ್ತು ಭಾರತದ ರಾಜಕೀಯ: ವಾಲ್‌ಸ್ಟ್ರೀಟ್‌ ಜರ್ನಲ್ ಲೇಖನದ ಅನುವಾದ

ಪ್ರಪಂಚದಲ್ಲಿ ಫೇಸ್‌ಬುಕ್ ಅನ್ನು ಅತಿ ಹೆಚ್ಚು ಬಳಸುವವರು ಭಾರತೀಯರೇ. ಜಾಹೀರಾತುಗಳಿಗೆ ಖರ್ಚು ಮಾಡುವ ಹಣದ ಡೇಟಾ ಟ್ರ್ಯಾಕಿಂಗ್ ಮಾಹಿತಿ ಪ್ರಕಾರ, ಬಿಜೆಪಿ ಪಕ್ಷ ಕಾರ್ಪೊರೇಟ್ ಕಂಪನಿಗಳಿಗಿಂತ ಹೆಚ್ಚಾಗಿ ಜಾಹೀರಾತಿಗೆ ಹಣ ವ್ಯಯಿಸುತ್ತದೆ. ಕಾಂಗ್ರೆಸ್ ಪಕ್ಷ ಎರಡನೇ ಸ್ಥಾನದಲ್ಲಿದೆ.

ಟಾಪ್ 10 ಜಾಹೀರಾತುದಾರರಲ್ಲಿ ಬಿಜೆಪಿಯೊಂದಿಗೆ ಸಂಬಂಧದಲ್ಲಿರುವ, ಬಿಜೆಪಿಯ ಸಿದ್ಧಾಂತ, ಅಭಿಪ್ರಾಯಗಳನ್ನು ಉತ್ತೇಜಿಸುವ ನಾಲ್ಕು ಪೇಜ್‌ಗಳು ಮತ್ತು ವೆಬ್‌ಸೈಟ್‌ಗಳು ಸಹ ಸೇರಿವೆ.

ಮುಖ್ಯವಾಗಿ ‘ಮೇರಾ ಪೆಹ್ಲಾ ವೋಟ್ ಮೋದಿ ಕೋ’(ನನ್ನ ಮೊದಲ ಮತ ಮೋದಿಯವರಿಗೆ) ಮತ್ತು ‘ಭಾರತ್ ಕಿ ಮನ್ ಕೀ ಬಾತ್’ (ಭಾರತದ ಮನದ ಮಾತು) ಎಂಬ ಫೇಸ್‌ಬುಕ್‌ ಪೇಜ್‌ಗಳು ಪ್ರಮುಖ ಜಾಹೀರಾತುದಾರರಾಗಿದ್ದಾರೆ. ಮೇರಾ ಪೆಹ್ಲಾ ವೋಟ್ ಮೋದಿ ಕೋ ಪೇಜ್ ಜಾಹೀರಾತುಗಳಿಗೆ 1.39 ಕೋಟಿ ರೂಪಾಯಿ ವ್ಯಯಿಸಿದರೆ, ಎರಡನೇ ಪೇಜ್ ಭಾರತ್ ಕಿ ಮನ್ ಕೀ ಬಾತ್ ಸುಮಾರು 2.24 ಕೋಟಿ ರೂಪಾಯಿ ವ್ಯಯಿಸಿದ್ದಾರೆ. ಇವುಗಳ ಜೊತೆಗೆ ಸುದ್ದಿ ಮತ್ತು ಮಾಧ್ಯಮ ವೆಬ್‌ಸೈಟ್ ಎಂದು ವಿಭಾಗಿಸಲಾಗಿರುವ ‘ನೇಷನ್ ವಿತ್ ನಮೋ’ ಎಂಬ ಪೇಜ್ ಕೂಡ 1.28 ಕೋಟಿ ರೂಪಾಯಿ ಜಾಹೀರಾತು ನೀಡಿದೆ.

ವೆಬ್‌ಸೈಟ್, ಫೇಸ್‌ಬುಕ್ ಪೇಜ್‌ಗಳ ಕಥೆ ಇಷ್ಟಾದರೆ, ಬಿಜೆಪಿಯ ನಾಯಕರುಗಳು ಸಹ ನಾವೇನು ಕಡಿಮೆ ಇಲ್ಲ ಎನ್ನುವಂತೆ ಫೇಸ್‌ಬುಕ್‌ಗೆ ಜಾಹೀರಾತು ನೀಡಿದ್ದಾರೆ. ಬಿಜೆಪಿ ಮುಖಂಡ, ಮಾಜಿ ಸಂಸದ ಆರ್.ಕೆ.ಸಿನ್ಹಾ ಜಾಹೀರಾತೀಗಾಗಿ 65 ಲಕ್ಷ ರೂಪಾಯಿ ನೀಡಿದ್ದಾರೆ. ಒಟ್ಟಾರೆ ಎಲ್ಲಾ ಮೂಲಗಳು ಸೇರಿ ಸರಿಸುಮಾರು 10.17 ಕೋಟಿ ರೂಪಾಯಿಗಳು ಫೇಸ್‌ಬುಕ್‌ಗೆ ಸಂದಿವೆ. ಫೇಸ್‌ಬುಕ್‌ಗೆ ಬರುವ ಜಾಹೀರಾತುಗಳಲ್ಲಿ ಶೇ.70ರಷ್ಟು ಆಡಳಿತ ಪಕ್ಷ ಬಿಜೆಪಿಯಿಂದ ಫೇಸ್‌ಬುಕ್‌ಗೆ ಸಂದಿದೆ.

ಈ ಡೇಟಾ ಗಮನಿಸಿದರೇ ಆಡಳಿತ ಪಕ್ಷ ಬಿಜೆಪಿ ಅಧಿಕಾರಕ್ಕೆ ಬರಲು ಸಾಮಾಜಿಕ ಜಾಲತಾಣಗಳು, ಸಾಮಾಜಿಕ ಮಾಧ್ಯಮಗಳನ್ನು ಎಷ್ಟರ ಮಟ್ಟಿಗೆ ಬಳಸಿಕೊಂಡಿದೆ ಎಂಬುದು ತಿಳಿಯುತ್ತದೆ. ಹೀಗಾಗಿ ಫೇಸ್ ಬುಕ್ ವಿರುದ್ಧ ಕೆಲ ಪ್ರಜ್ಞಾವಂತ ನಾಗರಿಕರು ಮಾಡುತ್ತಿರುವ ಆರೋಪವನ್ನು ತಳ್ಳಿಹಾಕುವಂತಿಲ್ಲ.


ಇದನ್ನೂ ಓದಿ: ನಾಜಿ ಜರ್ಮನಿ-IBM, ಫೇಸ್‌ಬುಕ್ ಭಾರತ-BJP: ‘ಸುಮಧುರ ಬಾಂಧವ್ಯ’ದ ಕತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...