Homeಮುಖಪುಟಫೇಸ್‌ಬುಕ್‌ಗೆ ಬಿಜೆಪಿಯೇ ಅತಿದೊಡ್ಡ ಜಾಹೀರಾತುದಾರ: ಮೋದಿ ಪಕ್ಷದಿಂದ ಶೇ.70ರಷ್ಟು ಜಾಹೀರಾತುಗಳು

ಫೇಸ್‌ಬುಕ್‌ಗೆ ಬಿಜೆಪಿಯೇ ಅತಿದೊಡ್ಡ ಜಾಹೀರಾತುದಾರ: ಮೋದಿ ಪಕ್ಷದಿಂದ ಶೇ.70ರಷ್ಟು ಜಾಹೀರಾತುಗಳು

ಜಾಹೀರಾತುಗಳಿಗೆ ಖರ್ಚು ಮಾಡುವ ಹಣದ ಡೇಟಾ ಟ್ರ್ಯಾಕಿಂಗ್ ಮಾಹಿತಿ ಪ್ರಕಾರ, ಬಿಜೆಪಿ ಪಕ್ಷ ಕಾರ್ಪೊರೇಟ್ ಕಂಪನಿಗಳಿಗಿಂತ ಹೆಚ್ಚಾಗಿ ಜಾಹೀರಾತಿಗೆ ಹಣ ವ್ಯಯಿಸುತ್ತದೆ.

- Advertisement -
- Advertisement -

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ ಭಾರತದಲ್ಲಿ ಬಿಜೆಪಿ ಪಕ್ಷದ ಪರವಾಗಿ ಕೆಲಸ ಮಾಡುತ್ತಿದೆ ಎಂಬ ಆರೋಪಗಳ ನಡುವೆ ಫೇಸ್‌ಬುಕ್‌ಗೆ ಬಿಜೆಪಿಯೇ ಅತಿದೊಡ್ಡ ಜಾಹೀರಾತುದಾರ ಎಂಬ ವರದಿ ಹೊರಬಿದ್ದಿದ್ದು, ಒಟ್ಟು ಜಾಹಿರಾತುಗಳಲ್ಲಿ ಮೋದಿ ಪಕ್ಷವೇ ಶೇ.70ರಷ್ಟು ಜಾಹೀರಾತುಗಳನ್ನು ನೀಡಿದೆ ಎಂಬ ಅಂಶ ಬೆಳಕಿಗೆ ಬಂದಿದೆ.

ಫೇಸ್‌ಬುಕ್‌ನಲ್ಲಿ ಜಾಹೀರಾತಿಗಾಗಿ ಬಿಜೆಪಿ ಖರ್ಚು ಮಾಡುವ ಹಣದ ಮೌಲ್ಯ ನಿಜಕ್ಕೂ ಜನ ಸಾಮಾನ್ಯರನ್ನು ದಂಗುಬಡಿಸುತ್ತದೆ. ಕಳೆದ 18 ತಿಂಗಳಲ್ಲಿ ಆಡಳಿತ ಪಕ್ಷ ಬಿಜೆಪಿ ಸಾಮಾಜಿಕ, ರಾಜಕೀಯ ಮತ್ತು ಚುನಾವಣಾ ವಿಚಾರಗಳ ಜಾಹೀರಾತುಗಾಗಿ ಫೇಸ್‌ಬುಕ್‌ಗೆ ಸುರಿದ ಹಣ 4.61 ಕೋಟಿ ರೂಪಾಯಿ ಅಂದರೆ ನೀವು ನಂಬಲೇಬೇಕು. ಕಳೆದ ವರ್ಷದ ಎಪ್ರಿಲ್-ಮೇ ತಿಂಗಳಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಲು ಸಾಮಾಜಿಕ ಜಾಲತಾಣಗಳು ವಹಿಸಿದ ಪಾತ್ರವನ್ನು ಯಾರೂ ಅಲ್ಲಗೆಳೆಯಲಾರರು.

ಇದನ್ನೂ ಓದಿ: ಫೇಸ್‌ಬುಕ್‌ನ “ಹೇಟ್‌ಸ್ಪೀಚ್” ನಿಯಮಗಳು ಮತ್ತು ಭಾರತದ ರಾಜಕೀಯ: ವಾಲ್‌ಸ್ಟ್ರೀಟ್‌ ಜರ್ನಲ್ ಲೇಖನದ ಅನುವಾದ

ಪ್ರಪಂಚದಲ್ಲಿ ಫೇಸ್‌ಬುಕ್ ಅನ್ನು ಅತಿ ಹೆಚ್ಚು ಬಳಸುವವರು ಭಾರತೀಯರೇ. ಜಾಹೀರಾತುಗಳಿಗೆ ಖರ್ಚು ಮಾಡುವ ಹಣದ ಡೇಟಾ ಟ್ರ್ಯಾಕಿಂಗ್ ಮಾಹಿತಿ ಪ್ರಕಾರ, ಬಿಜೆಪಿ ಪಕ್ಷ ಕಾರ್ಪೊರೇಟ್ ಕಂಪನಿಗಳಿಗಿಂತ ಹೆಚ್ಚಾಗಿ ಜಾಹೀರಾತಿಗೆ ಹಣ ವ್ಯಯಿಸುತ್ತದೆ. ಕಾಂಗ್ರೆಸ್ ಪಕ್ಷ ಎರಡನೇ ಸ್ಥಾನದಲ್ಲಿದೆ.

ಟಾಪ್ 10 ಜಾಹೀರಾತುದಾರರಲ್ಲಿ ಬಿಜೆಪಿಯೊಂದಿಗೆ ಸಂಬಂಧದಲ್ಲಿರುವ, ಬಿಜೆಪಿಯ ಸಿದ್ಧಾಂತ, ಅಭಿಪ್ರಾಯಗಳನ್ನು ಉತ್ತೇಜಿಸುವ ನಾಲ್ಕು ಪೇಜ್‌ಗಳು ಮತ್ತು ವೆಬ್‌ಸೈಟ್‌ಗಳು ಸಹ ಸೇರಿವೆ.

ಮುಖ್ಯವಾಗಿ ‘ಮೇರಾ ಪೆಹ್ಲಾ ವೋಟ್ ಮೋದಿ ಕೋ’(ನನ್ನ ಮೊದಲ ಮತ ಮೋದಿಯವರಿಗೆ) ಮತ್ತು ‘ಭಾರತ್ ಕಿ ಮನ್ ಕೀ ಬಾತ್’ (ಭಾರತದ ಮನದ ಮಾತು) ಎಂಬ ಫೇಸ್‌ಬುಕ್‌ ಪೇಜ್‌ಗಳು ಪ್ರಮುಖ ಜಾಹೀರಾತುದಾರರಾಗಿದ್ದಾರೆ. ಮೇರಾ ಪೆಹ್ಲಾ ವೋಟ್ ಮೋದಿ ಕೋ ಪೇಜ್ ಜಾಹೀರಾತುಗಳಿಗೆ 1.39 ಕೋಟಿ ರೂಪಾಯಿ ವ್ಯಯಿಸಿದರೆ, ಎರಡನೇ ಪೇಜ್ ಭಾರತ್ ಕಿ ಮನ್ ಕೀ ಬಾತ್ ಸುಮಾರು 2.24 ಕೋಟಿ ರೂಪಾಯಿ ವ್ಯಯಿಸಿದ್ದಾರೆ. ಇವುಗಳ ಜೊತೆಗೆ ಸುದ್ದಿ ಮತ್ತು ಮಾಧ್ಯಮ ವೆಬ್‌ಸೈಟ್ ಎಂದು ವಿಭಾಗಿಸಲಾಗಿರುವ ‘ನೇಷನ್ ವಿತ್ ನಮೋ’ ಎಂಬ ಪೇಜ್ ಕೂಡ 1.28 ಕೋಟಿ ರೂಪಾಯಿ ಜಾಹೀರಾತು ನೀಡಿದೆ.

ವೆಬ್‌ಸೈಟ್, ಫೇಸ್‌ಬುಕ್ ಪೇಜ್‌ಗಳ ಕಥೆ ಇಷ್ಟಾದರೆ, ಬಿಜೆಪಿಯ ನಾಯಕರುಗಳು ಸಹ ನಾವೇನು ಕಡಿಮೆ ಇಲ್ಲ ಎನ್ನುವಂತೆ ಫೇಸ್‌ಬುಕ್‌ಗೆ ಜಾಹೀರಾತು ನೀಡಿದ್ದಾರೆ. ಬಿಜೆಪಿ ಮುಖಂಡ, ಮಾಜಿ ಸಂಸದ ಆರ್.ಕೆ.ಸಿನ್ಹಾ ಜಾಹೀರಾತೀಗಾಗಿ 65 ಲಕ್ಷ ರೂಪಾಯಿ ನೀಡಿದ್ದಾರೆ. ಒಟ್ಟಾರೆ ಎಲ್ಲಾ ಮೂಲಗಳು ಸೇರಿ ಸರಿಸುಮಾರು 10.17 ಕೋಟಿ ರೂಪಾಯಿಗಳು ಫೇಸ್‌ಬುಕ್‌ಗೆ ಸಂದಿವೆ. ಫೇಸ್‌ಬುಕ್‌ಗೆ ಬರುವ ಜಾಹೀರಾತುಗಳಲ್ಲಿ ಶೇ.70ರಷ್ಟು ಆಡಳಿತ ಪಕ್ಷ ಬಿಜೆಪಿಯಿಂದ ಫೇಸ್‌ಬುಕ್‌ಗೆ ಸಂದಿದೆ.

ಈ ಡೇಟಾ ಗಮನಿಸಿದರೇ ಆಡಳಿತ ಪಕ್ಷ ಬಿಜೆಪಿ ಅಧಿಕಾರಕ್ಕೆ ಬರಲು ಸಾಮಾಜಿಕ ಜಾಲತಾಣಗಳು, ಸಾಮಾಜಿಕ ಮಾಧ್ಯಮಗಳನ್ನು ಎಷ್ಟರ ಮಟ್ಟಿಗೆ ಬಳಸಿಕೊಂಡಿದೆ ಎಂಬುದು ತಿಳಿಯುತ್ತದೆ. ಹೀಗಾಗಿ ಫೇಸ್ ಬುಕ್ ವಿರುದ್ಧ ಕೆಲ ಪ್ರಜ್ಞಾವಂತ ನಾಗರಿಕರು ಮಾಡುತ್ತಿರುವ ಆರೋಪವನ್ನು ತಳ್ಳಿಹಾಕುವಂತಿಲ್ಲ.


ಇದನ್ನೂ ಓದಿ: ನಾಜಿ ಜರ್ಮನಿ-IBM, ಫೇಸ್‌ಬುಕ್ ಭಾರತ-BJP: ‘ಸುಮಧುರ ಬಾಂಧವ್ಯ’ದ ಕತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...