Homeಮುಖಪುಟ'ಬಿಜೆಪಿ' ನಿಜವಾದ ತುಕ್ಡೇ-ತುಕ್ಡೇ ಗ್ಯಾಂಗ್: ಸುಖ್‌ಬೀರ್ ಸಿಂಗ್ ಬಾದಲ್ ಆಕ್ರೋಶ

‘ಬಿಜೆಪಿ’ ನಿಜವಾದ ತುಕ್ಡೇ-ತುಕ್ಡೇ ಗ್ಯಾಂಗ್: ಸುಖ್‌ಬೀರ್ ಸಿಂಗ್ ಬಾದಲ್ ಆಕ್ರೋಶ

"ರೈತರ ಪ್ರತಿಭಟನೆಯನ್ನು ದಿಕ್ಕುತಪ್ಪಿಸುವುದಕ್ಕಾಗಿ ಹಿಂದೂ-ಸಿಖ್ಖರ ನಡುವೆ ಕೋಮುದ್ವೇಷವನ್ನು ಹರಡಲಾಗುತ್ತಿದೆ. ರೈತರ ಆಂದೋಲನವನ್ನು ಸಿಖ್-ಹಿಂದೂ ಸಂಘರ್ಷವನ್ನಾಗಿಸಲು ಈ ಪ್ರಯತ್ನಗಳು ನಡೆಯುತ್ತಿವೆ"

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರೊಂದಿಗೆ ಸೇರಿಕೊಂಡ ಶಿರೋಮಣಿ ಅಕಾಲಿ ದಳದ ಅಧ್ಯಕ್ಷ ಸುಖ್‌ಬೀರ್ ಸಿಂಗ್ ಬಾದಲ್, “ಬಿಜೆಪಿಯೇ ನಿಜವಾದ ತುಕ್ಡೆ-ತುಕ್ಡೆ ಗ್ಯಾಂಗ್. ಈ ಪಕ್ಷ ಪಂಜಾಬ್ ಅ‌ನ್ನು ವಿಭಜಿಸಲು ಯತ್ನಿಸುತ್ತಿದೆ” ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಮಣಿಕರ್ಣಿಕಾ ವಿವಾದ: ಕಂಗನಾ ಕಾರಣಕ್ಕೆ ನಾನು ಜಗತ್ತಿಗೆ ಅಪರಿಚಿತನಾಗಿರಬಹುದು- ನಿರ್ದೇಶಕ

“ರಾಜಕೀಯ ಲಾಭಕ್ಕಾಗಿ, ದುರುದ್ದೇಶದಿಂದ ದೇಶ ಭಕ್ತಿಗೆ ಹೆಸರಾದ ಪಂಜಾಬ್ ಅನ್ನು ಕೋಮುಜ್ವಾಲೆಗೆ ತಳ್ಳುವ ಮೂಲಕ ರಾಷ್ಟ್ರೀಯ ಐಕ್ಯತೆಯನ್ನು ನಾಶಪಡಿಸುತ್ತಿದೆ. ಬಿಜೆಪಿ ನಾಚಿಕೆ ಇಲ್ಲದೆ ಮುಸ್ಲಿಮರ ವಿರುದ್ಧ ಹಿಂದೂಗಳನ್ನು ಪ್ರಚೋದಿಸುತ್ತದೆ. ಈಗ ಹತಾಶರಾಗಿ ಶಾಂತಿಪ್ರಿಯ ಪಂಜಾಬಿ ಹಿಂದೂಗಳನ್ನು ಸಿಖ್ ಸಹೋದರರ ವಿರುದ್ಧ, ವಿಶೇಷವಾಗಿ ರೈತರ ವಿರುದ್ಧ ಎತ್ತಿಕಟ್ಟುತ್ತಿದೆ” ಎಂದು ಸುಖ್‌ಬೀರ್ ಸಿಂಗ್ ಹೇಳಿದರು.

ಇತ್ತೀಚೆಗೆ ಬಿಹಾರದಲ್ಲಿ ಕೇಂದ್ರದ ಕೃಷಿ ಕಾನೂನುಗಳನ್ನು ಬೆಂಬಲಿಸಿ ಮಾತನಾಡಿದ್ದ ಕೇಂದ್ರ ಕಾನೂನು ಸಚಿವ ರವಿ ಶಂಕರ್ ಪ್ರಸಾದ್, “ತುಕ್ಡೆ-ತುಕ್ಡೆ ಗ್ಯಾಂಗ್‌ನವರು ರೈತರ ಪ್ರತಿಭಟನೆಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ” ಎಂದು ಹೇಳಿದ್ದರು.

ಇದನ್ನೂ ಓದಿ: ಜಪಾನ್‌ನ ’ಟ್ವಿಟರ್ ಕಿಲ್ಲರ್’ಗೆ ಮರಣದಂಡನೆ ವಿಧಿಸಿದ ಟೋಕಿಯೊ ನ್ಯಾಯಾಲಯ

“ರೈತರ ಪ್ರತಿಭಟನೆಯನ್ನು ದಿಕ್ಕುತಪ್ಪಿಸುವುದಕ್ಕಾಗಿ ಹಿಂದೂ-ಸಿಖ್ಖರ ನಡುವೆ ಕೋಮುದ್ವೇಷವನ್ನು ಹರಡಲಾಗುತ್ತಿದೆ. ರೈತರ ಆಂದೋಲನವನ್ನು ಸಿಖ್-ಹಿಂದೂ ಸಂಘರ್ಷವನ್ನಾಗಿಸಲು ಈ ಪ್ರಯತ್ನಗಳು ನಡೆಯುತ್ತಿವೆ. ಇದು ಈಗಾಗಲೇ ದೆಹಲಿಯಲ್ಲಿ ಪ್ರಾರಂಭವಾಗಿದೆ. ಈಗ ಇದನ್ನು ಪಂಜಾಬ್‌ನಲ್ಲಿ ಪುನರಾವರ್ತಿಸಲು ಬಯಸುತ್ತಿವೆ. ಅಕಾಲಿ ದಳವು ಶಾಂತಿ ಮತ್ತು ಕೋಮು ಸಹೋದರತ್ವವನ್ನು ಕಾಪಾಡಿಕೊಳ್ಳಲು ಬದ್ಧವಾಗಿದೆ” ಎಂದು ಅಮೃತಸರದಲ್ಲಿ ನಡೆಯುತ್ತಿರುವ ಧರಣಿಯಲ್ಲಿ ಸುಖ್‌ಬೀರ್ ಸಿಂಗ್ ಹೇಳಿದ್ದರು.

ಕೇಂದ್ರ ಸರಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಅಕಾಲಿ ದಳವು ಬಿಜೆಪಿ ನೇತೃತ್ವದ ಎನ್‌ಡಿಎಯಿಂದ ಇತ್ತೀಚೆಗೆ ಹೊರ ಬಂದಿತ್ತು ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ತಬ್ಲೀಘಿ ಜಮಾತ್‌ನ 36 ವಿದೇಶಿಗರೂ ದೋಷಮುಕ್ತ ಎಂದ ಹೈಕೋರ್ಟ್: ಬಿಜೆಪಿಗೆ ಮುಖಭಂಗ

“ಎನ್‌ಡಿಎ ಸರ್ಕಾರವು ಫೆಡರಲಿಸಂ ಅನ್ನು ಮಾತ್ರವಲ್ಲದೆ ಪ್ರತಿಭಟಿಸುವ ಸ್ವಾತಂತ್ರ್ಯವನ್ನೂ ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಇವರ ಪರವಾಗಿರುವವರನ್ನು ದೇಶಭಕ್ತರು ಎಂಬಂತೆ, ವಿರುದ್ಧವಾಗಿರುವವರು ದೇಶ ದ್ರೋಹಿಗಳು ಎಂಬಂತೆ ಬಿಂಬಿಸಲಾಗುತ್ತಿದೆ” ಎಂದು ಆರೋಪಿಸಿದರು.

“ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಕೇಂದ್ರ ಸಚಿವಾಲಯಕ್ಕೆ ರಾಜೀನಾಮೆ ನೀಡಿದ ಹರ್ಸಿಮ್ರತ್ ಕೌರ್ ಬಾದಲ್ ದೇಶ ದ್ರೋಹಿಯೇ? ತನ್ನ ಪದ್ಮವಿಭೂಷಣ ಪ್ರಶಸ್ತಿಯನ್ನು ಹಿಂದಿರುಗಿಸಿದ ಪ್ರಕಾಶ್ ಸಿಂಗ್ ಬಾದಲ್ ದೇಶದ್ರೋಹಿಯೇ? ಇವರನ್ನು ದೇಶದ್ರೋಹಿ ಎಂದು ಯಾರಾದರೂ ಹೇಳಬಹುದೇ?” ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಏಮ್ಸ್ ನರ್ಸಿಂಗ್ ನೌಕರರ ಪ್ರತಿಭಟನೆಗೆ ಹೈಕೋರ್ಟ್ ತಡೆ: ಪ್ರತಿಭಟನಾಕಾರರಿಗೆ ನೋಟಿಸ್

“ಕೃಷಿ ಕಾನೂನುಗಳ ಬಗ್ಗೆ ಕೇಂದ್ರ ಸರ್ಕಾರ ನೀಡಿದ ಸಮರ್ಥನೆಯನ್ನು ರೈತರು ಒಪ್ಪದ ಕಾರಣ ಅವರನ್ನು ಉಗ್ರಗಾಮಿಗಳು ಎಂದು ಬಿಂಬಿಸಲಾಯಿತು. ಅಕಾಲಿ ದಳವು ಒಕ್ಕೂಟ ವ್ಯವಸ್ಥೆಯ ಬಗ್ಗೆ ದನಿಯೆತ್ತಿದಾಗ ಪ್ರತ್ಯೇಕತಾವಾದಿಗಳು ಎಂದು ಬ್ರಾಂಡ್ ಮಾಡಲಾಯಿತು” ಎಂದು ಸುಖ್‌ಬೀರ್ ಸಿಂಗ್ ಹೇಳಿದರು.

ಅದೇ ಸ್ಥಳದಲ್ಲಿದ್ದ ಹರ್ಸಿಮ್ರತ್ ಕೌರ್ ಬಾದಲ್ ಮಾತನಾಡಿ, “ಸರ್ಕಾರದ ಪ್ರಸ್ತಾವಗಳಿಗೆ ಒಪ್ಪದ ಕಾರಣ ರೈತರನ್ನು ನಕ್ಸಲೈಟ್ ಮತ್ತು ಭಯೋತ್ಪಾದಕರು ಎಂದು ಕರೆಯುತ್ತಿರುವುದು ದುರದೃಷ್ಟಕರ. ಇಂತಹ ತಂತ್ರಗಳು ಕೇಂದ್ರಕ್ಕೆ ಸಹಾಯ ಮಾಡುವುದಿಲ್ಲ” ಎಂದು ಹೇಳಿದರು.


ಇದನ್ನೂ ಓದಿ: ರಾಮ ಸಮಾಜವಾದಿ ಪಕ್ಷಕ್ಕೆ ಸೇರಿದವ, ನಾವು ರಾಮ ಭಕ್ತರು: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...