Homeಮುಖಪುಟ'ಬಿಜೆಪಿ' ನಿಜವಾದ ತುಕ್ಡೇ-ತುಕ್ಡೇ ಗ್ಯಾಂಗ್: ಸುಖ್‌ಬೀರ್ ಸಿಂಗ್ ಬಾದಲ್ ಆಕ್ರೋಶ

‘ಬಿಜೆಪಿ’ ನಿಜವಾದ ತುಕ್ಡೇ-ತುಕ್ಡೇ ಗ್ಯಾಂಗ್: ಸುಖ್‌ಬೀರ್ ಸಿಂಗ್ ಬಾದಲ್ ಆಕ್ರೋಶ

"ರೈತರ ಪ್ರತಿಭಟನೆಯನ್ನು ದಿಕ್ಕುತಪ್ಪಿಸುವುದಕ್ಕಾಗಿ ಹಿಂದೂ-ಸಿಖ್ಖರ ನಡುವೆ ಕೋಮುದ್ವೇಷವನ್ನು ಹರಡಲಾಗುತ್ತಿದೆ. ರೈತರ ಆಂದೋಲನವನ್ನು ಸಿಖ್-ಹಿಂದೂ ಸಂಘರ್ಷವನ್ನಾಗಿಸಲು ಈ ಪ್ರಯತ್ನಗಳು ನಡೆಯುತ್ತಿವೆ"

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರೊಂದಿಗೆ ಸೇರಿಕೊಂಡ ಶಿರೋಮಣಿ ಅಕಾಲಿ ದಳದ ಅಧ್ಯಕ್ಷ ಸುಖ್‌ಬೀರ್ ಸಿಂಗ್ ಬಾದಲ್, “ಬಿಜೆಪಿಯೇ ನಿಜವಾದ ತುಕ್ಡೆ-ತುಕ್ಡೆ ಗ್ಯಾಂಗ್. ಈ ಪಕ್ಷ ಪಂಜಾಬ್ ಅ‌ನ್ನು ವಿಭಜಿಸಲು ಯತ್ನಿಸುತ್ತಿದೆ” ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಮಣಿಕರ್ಣಿಕಾ ವಿವಾದ: ಕಂಗನಾ ಕಾರಣಕ್ಕೆ ನಾನು ಜಗತ್ತಿಗೆ ಅಪರಿಚಿತನಾಗಿರಬಹುದು- ನಿರ್ದೇಶಕ

“ರಾಜಕೀಯ ಲಾಭಕ್ಕಾಗಿ, ದುರುದ್ದೇಶದಿಂದ ದೇಶ ಭಕ್ತಿಗೆ ಹೆಸರಾದ ಪಂಜಾಬ್ ಅನ್ನು ಕೋಮುಜ್ವಾಲೆಗೆ ತಳ್ಳುವ ಮೂಲಕ ರಾಷ್ಟ್ರೀಯ ಐಕ್ಯತೆಯನ್ನು ನಾಶಪಡಿಸುತ್ತಿದೆ. ಬಿಜೆಪಿ ನಾಚಿಕೆ ಇಲ್ಲದೆ ಮುಸ್ಲಿಮರ ವಿರುದ್ಧ ಹಿಂದೂಗಳನ್ನು ಪ್ರಚೋದಿಸುತ್ತದೆ. ಈಗ ಹತಾಶರಾಗಿ ಶಾಂತಿಪ್ರಿಯ ಪಂಜಾಬಿ ಹಿಂದೂಗಳನ್ನು ಸಿಖ್ ಸಹೋದರರ ವಿರುದ್ಧ, ವಿಶೇಷವಾಗಿ ರೈತರ ವಿರುದ್ಧ ಎತ್ತಿಕಟ್ಟುತ್ತಿದೆ” ಎಂದು ಸುಖ್‌ಬೀರ್ ಸಿಂಗ್ ಹೇಳಿದರು.

ಇತ್ತೀಚೆಗೆ ಬಿಹಾರದಲ್ಲಿ ಕೇಂದ್ರದ ಕೃಷಿ ಕಾನೂನುಗಳನ್ನು ಬೆಂಬಲಿಸಿ ಮಾತನಾಡಿದ್ದ ಕೇಂದ್ರ ಕಾನೂನು ಸಚಿವ ರವಿ ಶಂಕರ್ ಪ್ರಸಾದ್, “ತುಕ್ಡೆ-ತುಕ್ಡೆ ಗ್ಯಾಂಗ್‌ನವರು ರೈತರ ಪ್ರತಿಭಟನೆಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ” ಎಂದು ಹೇಳಿದ್ದರು.

ಇದನ್ನೂ ಓದಿ: ಜಪಾನ್‌ನ ’ಟ್ವಿಟರ್ ಕಿಲ್ಲರ್’ಗೆ ಮರಣದಂಡನೆ ವಿಧಿಸಿದ ಟೋಕಿಯೊ ನ್ಯಾಯಾಲಯ

“ರೈತರ ಪ್ರತಿಭಟನೆಯನ್ನು ದಿಕ್ಕುತಪ್ಪಿಸುವುದಕ್ಕಾಗಿ ಹಿಂದೂ-ಸಿಖ್ಖರ ನಡುವೆ ಕೋಮುದ್ವೇಷವನ್ನು ಹರಡಲಾಗುತ್ತಿದೆ. ರೈತರ ಆಂದೋಲನವನ್ನು ಸಿಖ್-ಹಿಂದೂ ಸಂಘರ್ಷವನ್ನಾಗಿಸಲು ಈ ಪ್ರಯತ್ನಗಳು ನಡೆಯುತ್ತಿವೆ. ಇದು ಈಗಾಗಲೇ ದೆಹಲಿಯಲ್ಲಿ ಪ್ರಾರಂಭವಾಗಿದೆ. ಈಗ ಇದನ್ನು ಪಂಜಾಬ್‌ನಲ್ಲಿ ಪುನರಾವರ್ತಿಸಲು ಬಯಸುತ್ತಿವೆ. ಅಕಾಲಿ ದಳವು ಶಾಂತಿ ಮತ್ತು ಕೋಮು ಸಹೋದರತ್ವವನ್ನು ಕಾಪಾಡಿಕೊಳ್ಳಲು ಬದ್ಧವಾಗಿದೆ” ಎಂದು ಅಮೃತಸರದಲ್ಲಿ ನಡೆಯುತ್ತಿರುವ ಧರಣಿಯಲ್ಲಿ ಸುಖ್‌ಬೀರ್ ಸಿಂಗ್ ಹೇಳಿದ್ದರು.

ಕೇಂದ್ರ ಸರಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಅಕಾಲಿ ದಳವು ಬಿಜೆಪಿ ನೇತೃತ್ವದ ಎನ್‌ಡಿಎಯಿಂದ ಇತ್ತೀಚೆಗೆ ಹೊರ ಬಂದಿತ್ತು ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ತಬ್ಲೀಘಿ ಜಮಾತ್‌ನ 36 ವಿದೇಶಿಗರೂ ದೋಷಮುಕ್ತ ಎಂದ ಹೈಕೋರ್ಟ್: ಬಿಜೆಪಿಗೆ ಮುಖಭಂಗ

“ಎನ್‌ಡಿಎ ಸರ್ಕಾರವು ಫೆಡರಲಿಸಂ ಅನ್ನು ಮಾತ್ರವಲ್ಲದೆ ಪ್ರತಿಭಟಿಸುವ ಸ್ವಾತಂತ್ರ್ಯವನ್ನೂ ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಇವರ ಪರವಾಗಿರುವವರನ್ನು ದೇಶಭಕ್ತರು ಎಂಬಂತೆ, ವಿರುದ್ಧವಾಗಿರುವವರು ದೇಶ ದ್ರೋಹಿಗಳು ಎಂಬಂತೆ ಬಿಂಬಿಸಲಾಗುತ್ತಿದೆ” ಎಂದು ಆರೋಪಿಸಿದರು.

“ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಕೇಂದ್ರ ಸಚಿವಾಲಯಕ್ಕೆ ರಾಜೀನಾಮೆ ನೀಡಿದ ಹರ್ಸಿಮ್ರತ್ ಕೌರ್ ಬಾದಲ್ ದೇಶ ದ್ರೋಹಿಯೇ? ತನ್ನ ಪದ್ಮವಿಭೂಷಣ ಪ್ರಶಸ್ತಿಯನ್ನು ಹಿಂದಿರುಗಿಸಿದ ಪ್ರಕಾಶ್ ಸಿಂಗ್ ಬಾದಲ್ ದೇಶದ್ರೋಹಿಯೇ? ಇವರನ್ನು ದೇಶದ್ರೋಹಿ ಎಂದು ಯಾರಾದರೂ ಹೇಳಬಹುದೇ?” ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಏಮ್ಸ್ ನರ್ಸಿಂಗ್ ನೌಕರರ ಪ್ರತಿಭಟನೆಗೆ ಹೈಕೋರ್ಟ್ ತಡೆ: ಪ್ರತಿಭಟನಾಕಾರರಿಗೆ ನೋಟಿಸ್

“ಕೃಷಿ ಕಾನೂನುಗಳ ಬಗ್ಗೆ ಕೇಂದ್ರ ಸರ್ಕಾರ ನೀಡಿದ ಸಮರ್ಥನೆಯನ್ನು ರೈತರು ಒಪ್ಪದ ಕಾರಣ ಅವರನ್ನು ಉಗ್ರಗಾಮಿಗಳು ಎಂದು ಬಿಂಬಿಸಲಾಯಿತು. ಅಕಾಲಿ ದಳವು ಒಕ್ಕೂಟ ವ್ಯವಸ್ಥೆಯ ಬಗ್ಗೆ ದನಿಯೆತ್ತಿದಾಗ ಪ್ರತ್ಯೇಕತಾವಾದಿಗಳು ಎಂದು ಬ್ರಾಂಡ್ ಮಾಡಲಾಯಿತು” ಎಂದು ಸುಖ್‌ಬೀರ್ ಸಿಂಗ್ ಹೇಳಿದರು.

ಅದೇ ಸ್ಥಳದಲ್ಲಿದ್ದ ಹರ್ಸಿಮ್ರತ್ ಕೌರ್ ಬಾದಲ್ ಮಾತನಾಡಿ, “ಸರ್ಕಾರದ ಪ್ರಸ್ತಾವಗಳಿಗೆ ಒಪ್ಪದ ಕಾರಣ ರೈತರನ್ನು ನಕ್ಸಲೈಟ್ ಮತ್ತು ಭಯೋತ್ಪಾದಕರು ಎಂದು ಕರೆಯುತ್ತಿರುವುದು ದುರದೃಷ್ಟಕರ. ಇಂತಹ ತಂತ್ರಗಳು ಕೇಂದ್ರಕ್ಕೆ ಸಹಾಯ ಮಾಡುವುದಿಲ್ಲ” ಎಂದು ಹೇಳಿದರು.


ಇದನ್ನೂ ಓದಿ: ರಾಮ ಸಮಾಜವಾದಿ ಪಕ್ಷಕ್ಕೆ ಸೇರಿದವ, ನಾವು ರಾಮ ಭಕ್ತರು: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...