Homeಮುಖಪುಟ'ಬಿಜೆಪಿ' ನಿಜವಾದ ತುಕ್ಡೇ-ತುಕ್ಡೇ ಗ್ಯಾಂಗ್: ಸುಖ್‌ಬೀರ್ ಸಿಂಗ್ ಬಾದಲ್ ಆಕ್ರೋಶ

‘ಬಿಜೆಪಿ’ ನಿಜವಾದ ತುಕ್ಡೇ-ತುಕ್ಡೇ ಗ್ಯಾಂಗ್: ಸುಖ್‌ಬೀರ್ ಸಿಂಗ್ ಬಾದಲ್ ಆಕ್ರೋಶ

"ರೈತರ ಪ್ರತಿಭಟನೆಯನ್ನು ದಿಕ್ಕುತಪ್ಪಿಸುವುದಕ್ಕಾಗಿ ಹಿಂದೂ-ಸಿಖ್ಖರ ನಡುವೆ ಕೋಮುದ್ವೇಷವನ್ನು ಹರಡಲಾಗುತ್ತಿದೆ. ರೈತರ ಆಂದೋಲನವನ್ನು ಸಿಖ್-ಹಿಂದೂ ಸಂಘರ್ಷವನ್ನಾಗಿಸಲು ಈ ಪ್ರಯತ್ನಗಳು ನಡೆಯುತ್ತಿವೆ"

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರೊಂದಿಗೆ ಸೇರಿಕೊಂಡ ಶಿರೋಮಣಿ ಅಕಾಲಿ ದಳದ ಅಧ್ಯಕ್ಷ ಸುಖ್‌ಬೀರ್ ಸಿಂಗ್ ಬಾದಲ್, “ಬಿಜೆಪಿಯೇ ನಿಜವಾದ ತುಕ್ಡೆ-ತುಕ್ಡೆ ಗ್ಯಾಂಗ್. ಈ ಪಕ್ಷ ಪಂಜಾಬ್ ಅ‌ನ್ನು ವಿಭಜಿಸಲು ಯತ್ನಿಸುತ್ತಿದೆ” ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಮಣಿಕರ್ಣಿಕಾ ವಿವಾದ: ಕಂಗನಾ ಕಾರಣಕ್ಕೆ ನಾನು ಜಗತ್ತಿಗೆ ಅಪರಿಚಿತನಾಗಿರಬಹುದು- ನಿರ್ದೇಶಕ

“ರಾಜಕೀಯ ಲಾಭಕ್ಕಾಗಿ, ದುರುದ್ದೇಶದಿಂದ ದೇಶ ಭಕ್ತಿಗೆ ಹೆಸರಾದ ಪಂಜಾಬ್ ಅನ್ನು ಕೋಮುಜ್ವಾಲೆಗೆ ತಳ್ಳುವ ಮೂಲಕ ರಾಷ್ಟ್ರೀಯ ಐಕ್ಯತೆಯನ್ನು ನಾಶಪಡಿಸುತ್ತಿದೆ. ಬಿಜೆಪಿ ನಾಚಿಕೆ ಇಲ್ಲದೆ ಮುಸ್ಲಿಮರ ವಿರುದ್ಧ ಹಿಂದೂಗಳನ್ನು ಪ್ರಚೋದಿಸುತ್ತದೆ. ಈಗ ಹತಾಶರಾಗಿ ಶಾಂತಿಪ್ರಿಯ ಪಂಜಾಬಿ ಹಿಂದೂಗಳನ್ನು ಸಿಖ್ ಸಹೋದರರ ವಿರುದ್ಧ, ವಿಶೇಷವಾಗಿ ರೈತರ ವಿರುದ್ಧ ಎತ್ತಿಕಟ್ಟುತ್ತಿದೆ” ಎಂದು ಸುಖ್‌ಬೀರ್ ಸಿಂಗ್ ಹೇಳಿದರು.

ಇತ್ತೀಚೆಗೆ ಬಿಹಾರದಲ್ಲಿ ಕೇಂದ್ರದ ಕೃಷಿ ಕಾನೂನುಗಳನ್ನು ಬೆಂಬಲಿಸಿ ಮಾತನಾಡಿದ್ದ ಕೇಂದ್ರ ಕಾನೂನು ಸಚಿವ ರವಿ ಶಂಕರ್ ಪ್ರಸಾದ್, “ತುಕ್ಡೆ-ತುಕ್ಡೆ ಗ್ಯಾಂಗ್‌ನವರು ರೈತರ ಪ್ರತಿಭಟನೆಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ” ಎಂದು ಹೇಳಿದ್ದರು.

ಇದನ್ನೂ ಓದಿ: ಜಪಾನ್‌ನ ’ಟ್ವಿಟರ್ ಕಿಲ್ಲರ್’ಗೆ ಮರಣದಂಡನೆ ವಿಧಿಸಿದ ಟೋಕಿಯೊ ನ್ಯಾಯಾಲಯ

“ರೈತರ ಪ್ರತಿಭಟನೆಯನ್ನು ದಿಕ್ಕುತಪ್ಪಿಸುವುದಕ್ಕಾಗಿ ಹಿಂದೂ-ಸಿಖ್ಖರ ನಡುವೆ ಕೋಮುದ್ವೇಷವನ್ನು ಹರಡಲಾಗುತ್ತಿದೆ. ರೈತರ ಆಂದೋಲನವನ್ನು ಸಿಖ್-ಹಿಂದೂ ಸಂಘರ್ಷವನ್ನಾಗಿಸಲು ಈ ಪ್ರಯತ್ನಗಳು ನಡೆಯುತ್ತಿವೆ. ಇದು ಈಗಾಗಲೇ ದೆಹಲಿಯಲ್ಲಿ ಪ್ರಾರಂಭವಾಗಿದೆ. ಈಗ ಇದನ್ನು ಪಂಜಾಬ್‌ನಲ್ಲಿ ಪುನರಾವರ್ತಿಸಲು ಬಯಸುತ್ತಿವೆ. ಅಕಾಲಿ ದಳವು ಶಾಂತಿ ಮತ್ತು ಕೋಮು ಸಹೋದರತ್ವವನ್ನು ಕಾಪಾಡಿಕೊಳ್ಳಲು ಬದ್ಧವಾಗಿದೆ” ಎಂದು ಅಮೃತಸರದಲ್ಲಿ ನಡೆಯುತ್ತಿರುವ ಧರಣಿಯಲ್ಲಿ ಸುಖ್‌ಬೀರ್ ಸಿಂಗ್ ಹೇಳಿದ್ದರು.

ಕೇಂದ್ರ ಸರಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಅಕಾಲಿ ದಳವು ಬಿಜೆಪಿ ನೇತೃತ್ವದ ಎನ್‌ಡಿಎಯಿಂದ ಇತ್ತೀಚೆಗೆ ಹೊರ ಬಂದಿತ್ತು ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ತಬ್ಲೀಘಿ ಜಮಾತ್‌ನ 36 ವಿದೇಶಿಗರೂ ದೋಷಮುಕ್ತ ಎಂದ ಹೈಕೋರ್ಟ್: ಬಿಜೆಪಿಗೆ ಮುಖಭಂಗ

“ಎನ್‌ಡಿಎ ಸರ್ಕಾರವು ಫೆಡರಲಿಸಂ ಅನ್ನು ಮಾತ್ರವಲ್ಲದೆ ಪ್ರತಿಭಟಿಸುವ ಸ್ವಾತಂತ್ರ್ಯವನ್ನೂ ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಇವರ ಪರವಾಗಿರುವವರನ್ನು ದೇಶಭಕ್ತರು ಎಂಬಂತೆ, ವಿರುದ್ಧವಾಗಿರುವವರು ದೇಶ ದ್ರೋಹಿಗಳು ಎಂಬಂತೆ ಬಿಂಬಿಸಲಾಗುತ್ತಿದೆ” ಎಂದು ಆರೋಪಿಸಿದರು.

“ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಕೇಂದ್ರ ಸಚಿವಾಲಯಕ್ಕೆ ರಾಜೀನಾಮೆ ನೀಡಿದ ಹರ್ಸಿಮ್ರತ್ ಕೌರ್ ಬಾದಲ್ ದೇಶ ದ್ರೋಹಿಯೇ? ತನ್ನ ಪದ್ಮವಿಭೂಷಣ ಪ್ರಶಸ್ತಿಯನ್ನು ಹಿಂದಿರುಗಿಸಿದ ಪ್ರಕಾಶ್ ಸಿಂಗ್ ಬಾದಲ್ ದೇಶದ್ರೋಹಿಯೇ? ಇವರನ್ನು ದೇಶದ್ರೋಹಿ ಎಂದು ಯಾರಾದರೂ ಹೇಳಬಹುದೇ?” ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಏಮ್ಸ್ ನರ್ಸಿಂಗ್ ನೌಕರರ ಪ್ರತಿಭಟನೆಗೆ ಹೈಕೋರ್ಟ್ ತಡೆ: ಪ್ರತಿಭಟನಾಕಾರರಿಗೆ ನೋಟಿಸ್

“ಕೃಷಿ ಕಾನೂನುಗಳ ಬಗ್ಗೆ ಕೇಂದ್ರ ಸರ್ಕಾರ ನೀಡಿದ ಸಮರ್ಥನೆಯನ್ನು ರೈತರು ಒಪ್ಪದ ಕಾರಣ ಅವರನ್ನು ಉಗ್ರಗಾಮಿಗಳು ಎಂದು ಬಿಂಬಿಸಲಾಯಿತು. ಅಕಾಲಿ ದಳವು ಒಕ್ಕೂಟ ವ್ಯವಸ್ಥೆಯ ಬಗ್ಗೆ ದನಿಯೆತ್ತಿದಾಗ ಪ್ರತ್ಯೇಕತಾವಾದಿಗಳು ಎಂದು ಬ್ರಾಂಡ್ ಮಾಡಲಾಯಿತು” ಎಂದು ಸುಖ್‌ಬೀರ್ ಸಿಂಗ್ ಹೇಳಿದರು.

ಅದೇ ಸ್ಥಳದಲ್ಲಿದ್ದ ಹರ್ಸಿಮ್ರತ್ ಕೌರ್ ಬಾದಲ್ ಮಾತನಾಡಿ, “ಸರ್ಕಾರದ ಪ್ರಸ್ತಾವಗಳಿಗೆ ಒಪ್ಪದ ಕಾರಣ ರೈತರನ್ನು ನಕ್ಸಲೈಟ್ ಮತ್ತು ಭಯೋತ್ಪಾದಕರು ಎಂದು ಕರೆಯುತ್ತಿರುವುದು ದುರದೃಷ್ಟಕರ. ಇಂತಹ ತಂತ್ರಗಳು ಕೇಂದ್ರಕ್ಕೆ ಸಹಾಯ ಮಾಡುವುದಿಲ್ಲ” ಎಂದು ಹೇಳಿದರು.


ಇದನ್ನೂ ಓದಿ: ರಾಮ ಸಮಾಜವಾದಿ ಪಕ್ಷಕ್ಕೆ ಸೇರಿದವ, ನಾವು ರಾಮ ಭಕ್ತರು: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...