Homeಮುಖಪುಟ2019-20ರ ಅಂಕಿ-ಅಂಶಗಳ ಪ್ರಕಾರ ಬಿಜೆಪಿ ಅತ್ಯಂತ ಶ್ರೀಮಂತ ಪಕ್ಷ: ವರದಿ

2019-20ರ ಅಂಕಿ-ಅಂಶಗಳ ಪ್ರಕಾರ ಬಿಜೆಪಿ ಅತ್ಯಂತ ಶ್ರೀಮಂತ ಪಕ್ಷ: ವರದಿ

- Advertisement -
- Advertisement -

ನವದೆಹಲಿ: 2019-20ರ ಹಣಕಾಸು ವರ್ಷದಲ್ಲಿ ಬಿಜೆಪಿ 4,847.78 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿದೆ. ಈ ಮೌಲ್ಯವು ಇತರ ಎಲ್ಲಾ ರಾಜಕೀಯ ಪಕ್ಷಗಳಿಗೆ ಹೋಲಿಸಿದರೆ ಅತ್ಯಧಿಕವಾಗಿದೆ ಎಂದು ವರದಿಯಾಗಿದೆ.

ಬಿಜೆಪಿ ನಂತರದ ಸ್ಥಾನದಲ್ಲಿ ಬಿಎಸ್‌ಪಿ 698.33 ಕೋಟಿ ರೂ., ಕಾಂಗ್ರೆಸ್ 588.16 ಕೋಟಿ ರೂ. ಹೊಂದಿರುವುದಾಗಿ ಚುನಾವಣಾ ಸುಧಾರಣೆಗಳ ವಕೀಲರ ಗುಂಪಾದ ಎಡಿಆರ್ (ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್) ತಿಳಿಸಿದೆ.

2019-20ರಲ್ಲಿ ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳ ಆಸ್ತಿ, ಹೊಣೆಗಾರಿಕೆಗಳ ವಿಶ್ಲೇಷಣೆಯ ಆಧಾರದ ಮೇಲೆ ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ತನ್ನ ವರದಿಯನ್ನು ಸಿದ್ಧಪಡಿಸಿದೆ.

ವಿಶ್ಲೇಷಣೆಯ ಪ್ರಕಾರ, 2019-20ರಲ್ಲಿ ಏಳು ರಾಷ್ಟ್ರೀಯ ಮತ್ತು 44 ಪ್ರಾದೇಶಿಕ ಪಕ್ಷಗಳು ಘೋಷಿಸಿದ ಒಟ್ಟು ಆಸ್ತಿ ಕ್ರಮವಾಗಿ 6,988.57 ಕೋಟಿ ರೂ. ಮತ್ತು 2,129.38 ರೂ. ಕೋಟಿ ಆಗಿದೆ.

ಏಳು ರಾಷ್ಟ್ರೀಯ ಪಕ್ಷಗಳ ಪೈಕಿ, ಅತಿ ಹೆಚ್ಚು ಆಸ್ತಿಯನ್ನು ಬಿಜೆಪಿ (ರೂ. 4847.78 ಕೋಟಿ ಅಥವಾ ಶೇ. 69.37) ಹೊಂದಿದೆ. ನಂತರದ ಸ್ಥಾನದಲ್ಲಿ ಬಿಎಸ್‌ಪಿ (ರೂ. 698.33 ಕೋಟಿ ಅಥವಾ ಶೇ. 9.99), ಕಾಂಗ್ರೆಸ್ (588.16 ಕೋಟಿ ಅಥವಾ ಶೇ. 8.42) ಇರುವುದಾಗಿ ಎಡಿಆರ್‌ ಹೇಳಿದೆ.

44 ಪ್ರಾದೇಶಿಕ ಪಕ್ಷಗಳ ಪೈಕಿ ಅಗ್ರ 10 ಪಕ್ಷಗಳ ಆಸ್ತಿ ಮೌಲ್ಯ 2028.715 ಕೋಟಿ ರೂ. ಅಥವಾ ಒಟ್ಟು ಮೌಲ್ಯದ ಪೈಕಿ ಶೇ.95.27ರಷ್ಟು ಪಾಲು ಎನ್ನಲಾಗಿದೆ.

2019-20 ರಲ್ಲಿ ಪ್ರಾದೇಶಿಕ ಪಕ್ಷಗಳ ಪೈಕಿ ಸಮಾಜವಾದಿ ಪಕ್ಷವು 563.47 ಕೋಟಿ ರೂ. (ಶೇ. 26.46), ಟಿಆರ್‌ಎಸ್ 301.47 ಕೋಟಿ ರೂ. ಮತ್ತು ಎಐಎಡಿಎಂಕೆ 267.61 ಕೋಟಿ ರೂ. ಹೊಂದಿವೆ.

ಆರ್ಥಿಕ ವರ್ಷ 2019-20 ರಲ್ಲಿ ಪ್ರಾದೇಶಿಕ ಪಕ್ಷಗಳು ಘೋಷಿಸಿದ ಒಟ್ಟು ಆಸ್ತಿಯಲ್ಲಿ 1,639.51 ಕೋಟಿ ರೂ. (ಶೇ. 76.99)ಗಳಷ್ಟು ದೊಡ್ಡ ಪಾಲನ್ನು ಫಿಕ್ಸೆಡ್ ಡೆಪಾಸಿಟ್‌ಗಳು/ಎಫ್‌ಡಿಆರ್ ಹೊಂದಿದೆ.

ಎಫ್‌ಡಿಆರ್/ನಿಶ್ಚಿತ ಠೇವಣಿಗಳ ವರ್ಗದಲ್ಲಿ, ಬಿಜೆಪಿ 3,253.00 ಕೋಟಿ ರೂ., ಬಿಎಸ್‌ಪಿ 618.86 ಕೋಟಿ ರೂ.ಗಳನ್ನು ಘೋಷಿಸಿವೆ. ಕಾಂಗ್ರೆಸ್ ₹ 240.90 ಕೋಟಿ ಘೋಷಿಸಿವೆ.

ಪ್ರಾದೇಶಿಕ ಪಕ್ಷಗಳ ಪೈಕಿ ಎಸ್‌ಪಿ- 434.219 ಕೋಟಿ ರೂ., ಟಿಆರ್‌ಎಸ್- 256.01 ಕೋಟಿ ರೂ., ಎಐಎಡಿಎಂಕೆ- ರೂ. 246.90 ಕೋಟಿ, ಡಿಎಂಕೆ- 62.425 ಕೋಟಿ ರೂ., ಶಿವಸೇನೆ- 148.46 ಕೋಟಿ ರೂ., ಬಿಜೆಡಿ- 118.425 ಕೋಟಿ ರೂ.ಗಳನ್ನಿ ಎಫ್‌ಡಿಆರ್‌‌/ನಿಶ್ಚಿತ ಠೇವಣಿಗಳ ವಿಭಾಗದಲ್ಲಿ ಆಸ್ತಿಯನ್ನು ಘೋಷಿಸಿವೆ.


ಇದನ್ನೂ ಓದಿರಿ: ಭಯೋತ್ಪಾದಕ ‘ಗೋಡ್ಸೆ’ ಕುರಿತ ಸಿನಿಮಾ ಬಿಡುಗಡೆ ತಡೆಗಾಗಿ ಸುಪ್ರೀಂಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...