Homeಮುಖಪುಟಬಿಜೆಪಿ ಆಗ ಬ್ರಿಟಿಷರ, ಈಗ ಕಾರ್ಪೊರೇಟ್‌ಗಳ ಗುಲಾಮಿ ಪಕ್ಷ: ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್

ಬಿಜೆಪಿ ಆಗ ಬ್ರಿಟಿಷರ, ಈಗ ಕಾರ್ಪೊರೇಟ್‌ಗಳ ಗುಲಾಮಿ ಪಕ್ಷ: ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್

ಬಿಜೆಪಿ ಪರಿವಾರದ ಒಂದು ನಾಯಿ ಕೂಡ ದೇಶಕ್ಕಾಗಿ ಹುತಾತ್ಮರಾದ ಚರಿತ್ರೆ ಇಲ್ಲ. ಈ ಪಾಪಪ್ರಜ್ಞೆಯಿಂದ ಹೊರಗೆ ಬರಲಾರದ ಆತ್ಮವಂಚನೆ ಅವರದು...

- Advertisement -
- Advertisement -

‘ಕಾಂಗ್ರೆಸ್ ಗುಲಾಮಗಿರಿ ಪಕ್ಷ’ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾತಿಗೆ ಕಾಂಗ್ರೆಸ್ ವಕ್ತಾರ ಮತ್ತು ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಆಕ್ರೋಶ ವ್ಯಕ್ತಪಡಿಸಿದ್ದು, “ಬಿಜೆಪಿ ಆಗ ಬ್ರೀಟಿಷರ, ಈಗ ಕಾರ್ಪೊರೇಟ್‌ಗಳ ಗುಲಾಮಿ ಪಕ್ಷ” ಎಂದು ಕಿಡಿಕಾರಿದ್ದಾರೆ.

ಸೆಪ್ಟಂಬರ್ 27 ರಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ “ಬಿಜೆಪಿ ತಾಲಿಬಾನ್ ಇದ್ದ ಹಾಗೆ” ಎಂಬ ಮಾತಿಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ್ದ ಸಿಎಂ ಬೊಮ್ಮಾಯಿ, “ಕಾಂಗ್ರೆಸ್ ಗುಲಾಮಗಿರಿ ಪಕ್ಷ, ನಮ್ಮ ಬಿಜೆಪಿ ದೇಶಭಕ್ತ ಪಕ್ಷ” ಎಂದು ಹೇಳಿದ್ದರು. ಈ ಕುರಿತು ಚರ್ಚೆಗೆ ಬನ್ನಿ ಎಂದು ಪ್ರಕಾಶ್ ರಾಥೋಡ್ ಆಹ್ವಾನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಸ್ವಾತಂತ್ರ್ಯ ಹೋರಾಟಗಾರರನ್ನು ಬ್ರಿಟಿಷರಿಗೆ ಹಿಡಿದುಕೊಟ್ಟ, ಬ್ರಿಟಿಷರಿಗೆ ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟ ಇತಿಹಾಸ ಇರುವ ಬಿಜೆಪಿ ಪರಿವಾರ ಬಳಿಕ ನಾಜಿಗಳ ಗುಲಾಮಗಿರಿ ಮಾಡಿ ಈಗ ವರ್ತಮಾನದಲ್ಲೂ ಅಂಬಾನಿ ಅದಾನಿ ಕಾರ್ಪೋರೇಟ್ ಶಾಹಿಯ ಗುಲಾಮಗಿರಿ ಮಾಡುತ್ತಿದೆ” ಎಂದಿದ್ದಾರೆ.

ಆತ್ಮವಂಚನೆಗೂ ಒಂದು ಮಿತಿ ಇರಬೇಕು ಮುಖ್ಯಮಂತ್ರಿಗಳೇ… ಸಂಘ ಪರಿವಾರ ವಿರೋಧಿ ಜನತಾ ಪರಿವಾರದ ಮೂಲಕ ರಾಜಕಾರಣಕ್ಕೆ ಬಂದ ನೀವು ದೇಶಭಕ್ತಿಯ ಚರಿತ್ರೆ, ಇತಿಹಾಸವೇ ಇಲ್ಲದ ಬಿಜೆಪಿಯನ್ನು ದೇಶಭಕ್ತಿಯ ಪಕ್ಷ ಎಂದು ಕರೆಯುತ್ತಿರುವುದು ಆತ್ಮವಂಚನೆ ಅಲ್ಲವೇ ? ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೇ, ಕ್ವಿಟ್ ಚಳವಳಿಯಲ್ಲಿ ಭಾವಹಿಸಿದ ಸ್ವಾತಂತ್ರ್ಯ ವೀರರನ್ನು ಬ್ರಿಟಿಷರಿಗೆ ಹಿಡಿದುಕೊಟ್ಟ ಬಿಜೆಪಿ ನಾಯಕರ ಚರಿತ್ರೆಯನ್ನು ನೀವು ಮುಖ್ಯಮಂತ್ರಿ ಆದ ಎರಡು ತಿಂಗಳಲ್ಲೇ ಮರೆತುಬಿಟ್ಟಿರಾ ಎಂದು ರಾಥೋಡ್ ಪ್ರಶ್ನಿಸಿದ್ದಾರೆ.

ಬಸವರಾಜ್ ಬೊಮ್ಮಾಯಿಯವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಥೋಡ್‌ರವರು ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. “ಸ್ವಾತಂತ್ರ್ಯ ಹೋರಾಟಕ್ಕಾಗಿಯೇ ಹುಟ್ಟಿಕೊಂಡ, ಸ್ವಾತಂತ್ರ್ಯ ಚಳವಳಿ ಮೂಲಕವೇ ದೇಶದ ಜನಮಾನಸದಲ್ಲಿ ಬೇರು ಬಿಟ್ಟ ಕಾಂಗ್ರೆಸ್ಸನ್ನು ಗುಲಾಮಗಿರಿ ಪಕ್ಷ ಎಂದು ಕರೆದಿದ್ದೀರಿ. ಬ್ರಿಟಿಷರ ವಿರುದ್ಧ ಹೋರಾಡಿ, ಹುತಾತ್ಮರಾಗಿ, ಜೈಲು ಸೇರಿ, ತಮ್ಮ ಆಸ್ತಿ ಪಾಸ್ತಿಯನ್ನೆಲ್ಲಾ ದೇಶಕ್ಕೆ ಬಿಟ್ಟುಕೊಟ್ಟ ಲಕ್ಷಾಂತರ ಮಂದಿ ಕಾಂಗ್ರೆಸ್ಸಿನವರು. ಈ ಚರಿತ್ರೆ ಬಿಜೆಪಿಗೆ ಇದೆಯೇ? ಬ್ರಿಟಿಷರ ಗುಲಾಮಗಿರಿ ಮಾಡಿಕೊಂಡಿದ್ದ ಬಿಜೆಪಿಯ ಚರಿತ್ರೆ ನಿಮಗೆ ಮುಖ್ಯಮಂತ್ರಿ ಕುರ್ಚಿ ಸಿಕ್ಕ ತಕ್ಷಣ ಅಳಿಸಿ ಹೋಗುತ್ತದೆಯೇ” ಎಂದಿದ್ದಾರೆ.

ಗೋಡ್ಸೆಯಿಂದ ಕೊಲೆಯಾದ ಮಹಾತ್ಮಗಾಂಧಿ, ಅಖಂಡ ಭಾರತಕ್ಕಾಗಿ ಖಲಿಸ್ತಾನ ಉಗ್ರರನ್ನು ಸದೆ ಬಡಿದು ಅವರ ಗುಂಡಿಗೆ ಬಲಿಯಾಗಿ ಹುತಾತ್ಮರಾದ ಇಂದಿರಾಗಾಂಧಿ, LTTEಗೆ ಹುತಾತ್ಮರಾದ ರಾಜೀವ್ ಗಾಂಧಿ ಯಾರಿಗಾಗಿ ಹುತಾತ್ಮರಾದರು? ಅಂಬಾನಿ- ಅದಾನಿಯ ಗುಲಾಮಗಿರಿ ಮಾಡಿಕೊಂಡಿರುವ ನಿಮ್ಮ ಪರಿವಾರದ ನಾಯಕರಿಗೆ ಕೇಳಿ ಹೇಳಿ ಮುಖ್ಯಮಂತ್ರಿಗಳೇ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಪರಿವಾರದ ಒಂದು ನಾಯಿ ಕೂಡ ದೇಶಕ್ಕಾಗಿ ಹುತಾತ್ಮರಾದ ಚರಿತ್ರೆ ಇಲ್ಲ. ಈ ಪಾಪಪ್ರಜ್ಞೆಯಿಂದ ಹೊರಗೆ ಬರಲಾರದ ಆತ್ಮವಂಚನೆ ಮತ್ತು ದೇಶದ್ರೋಹವನ್ನೇ ಆಚರಿಸುತ್ತಿರುವ ಬಿಜೆಪಿ ಪರಿವಾರ ಸ್ವಾತಂತ್ರ್ಯ ಬಂದ ನಂತರವಾದರೂ ದೇಶಭಕ್ತಿ ರೂಢಿಸಿಕೊಂಡ, ದೇಶಭಕ್ತಿ ಆಚರಿಸಿದ ಉದಾಹರಣೆ ಇಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗುತ್ತಿದ್ದರೂ ನಿಮ್ಮ ಸಂಘ ಪರಿವಾರದ ಕಚೇರಿ ಮೇಲೆ ಸ್ವಾತಂತ್ರ್ಯ ದಿನಾಚರಣೆಯ ದಿನದಂದೂ ದೇಶದ ತ್ರಿವರ್ಣ ಬಾವುಟ ಹಾರಿಸುವುದಿಲ್ಲ. ಇದಕ್ಕಿಂತ ದೇಶದ್ರೋಹ ಬೇರೆ ಇದೆಯೇ ? ನೀವೇಕೆ ಭಾರತದ ಧ್ವಜ ಹಾರಿಸದೆ ಏಕಿನ್ನೂ ಬ್ರಿಟಿಷರ ಗುಲಾಮಗಿರಿ ಮನಸ್ಥಿಯಿಂದ ಹೊರಗೆ ಬಂದಿಲ್ಲ ಎಂದು ನಿಮ್ಮ ಪರಿವಾರದ ನಾಯಕರನ್ನು ಪ್ರಶ್ನಿಸಿದ್ದೀರಾ? ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಕಾಲದಲ್ಲಿ ಕಟ್ಟಿದ ವಿಮಾನ-ರೈಲು ನಿಲ್ದಾಣಗಳು, ಬಂದರುಗಳು, ಟೆಲಿಕಾಂ, ಹೆದ್ದಾರಿಗಳು, ಕೃಷಿ ಮಾರುಕಟ್ಟೆಗಳನ್ನು ಖಾಸಗಿ ಕಾರ್ಪೋರೇಟ್ ಗಳಿಗೆ ಮಾರಾಟ ಮಾಡುವುದೇ ದೇಶಭಕ್ತಿ ಎಂದು ನಿಮಗೆ ಹೇಳಿಕೊಟ್ಟಿದ್ದು ನಿಮ್ಮ ಪರಿವಾರದ ನಾಯಕರೇ? ಅಂಬಾನಿ, ಅದಾನಿ ಹಾಗೂ ನಿಮ್ಮ ನಾಲ್ಕೈದು ಮಂದಿ ಕಾರ್ಪೋರೇಟ್ ಸ್ನೇಹಿತರ 10 ಲಕ್ಷ ಕೋಟಿ ಸಾಲ ಮನ್ನಾ ಮಾಡುವುದು ದೇಶಭಕ್ತಿಯೇ? ಮೋದಿ ಅವರು ಪ್ರಧಾನಿ ಆಗುವ ಮೊದಲು ಭಾರತದ ಸಾಲ ಇದ್ದದ್ದು 53.11 ಲಕ್ಷ ಕೋಟಿ. ಮೋದಿ ದರ್ಬಾರಿನ 7 ವರ್ಷಗಳಲ್ಲಿ ದೇಶದ ಸಾಲ 135 ಲಕ್ಷ ಕೋಟಿಗೆ ಏರಿಸಿದ್ದೀರಿ. ದೇಶದ ಪ್ರತಿಯೊಬ್ಬ ಪ್ರಜೆ ತಾನು ದುಡಿದ 100 ರೂಪಾಯಿಯಲ್ಲಿ 35-45 ರೂಪಾಯಿಯನ್ನು ಪ್ರತ್ಯಕ್ಷ- ಪರೋಕ್ಷ ತೆರಿಗೆ ಕಟ್ಟುತ್ತಿದ್ದಾನೆ. ಪ್ರತಿಯೊಬ್ಬ ಭಾರತೀಯನನ್ನು ಇಂಚಿಂಚಾಗಿ ಸುಲಿಯುತ್ತಾ ರಕ್ತ ಹೀರುತ್ತಿರುವುದು ದೇಶಭಕ್ತಿಯೇ ಎಂದು ಪ್ರಶ್ನಿಸಿದ್ದಾರೆ.

ಭಾರತದ ಸ್ವಾತಂತ್ರ್ಯ ಹೋರಾಟಗಾರರನ್ನು ಬ್ರಿಟಿಷರಿಗೆ ಹಿಡಿದು ಕೊಟ್ಟು/ಬ್ರಿಟಿಷರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಬ್ರಿಟಿಷರ ಗುಲಾಮರಾದಿರಿ. ನಿಮ್ಮ ಪರಿವಾರದ ಸಿದ್ದಾಂತ ಜರ್ಮನಿಯ ನಾಜಿಗಳದ್ದು. ಸೈದ್ಧಾಂತಿಕವಾಗಿಯೂ ನೀವು ನಾಜಿ ಗುಲಾಮರು. ಸ್ವಾತಂತ್ರ್ಯಾ ನಂತರದಲ್ಲಿ ಅಂಬಾನಿ ಮತ್ತು ಅದಾನಿ ಗ್ಯಾಂಗಿನ ಗುಲಾಮಗಿರಿ ಮಾಡುತ್ತಿರುವವರು ನೀವು ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಮೈಸೂರು ದೇವಾಲಯ ಧ್ವಂಸ – ತಹಶೀಲ್ದಾರ್‌ ತಲೆದಂಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...