Homeಮುಖಪುಟಬಿಜೆಪಿ ಆಗ ಬ್ರಿಟಿಷರ, ಈಗ ಕಾರ್ಪೊರೇಟ್‌ಗಳ ಗುಲಾಮಿ ಪಕ್ಷ: ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್

ಬಿಜೆಪಿ ಆಗ ಬ್ರಿಟಿಷರ, ಈಗ ಕಾರ್ಪೊರೇಟ್‌ಗಳ ಗುಲಾಮಿ ಪಕ್ಷ: ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್

ಬಿಜೆಪಿ ಪರಿವಾರದ ಒಂದು ನಾಯಿ ಕೂಡ ದೇಶಕ್ಕಾಗಿ ಹುತಾತ್ಮರಾದ ಚರಿತ್ರೆ ಇಲ್ಲ. ಈ ಪಾಪಪ್ರಜ್ಞೆಯಿಂದ ಹೊರಗೆ ಬರಲಾರದ ಆತ್ಮವಂಚನೆ ಅವರದು...

- Advertisement -
- Advertisement -

‘ಕಾಂಗ್ರೆಸ್ ಗುಲಾಮಗಿರಿ ಪಕ್ಷ’ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾತಿಗೆ ಕಾಂಗ್ರೆಸ್ ವಕ್ತಾರ ಮತ್ತು ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಆಕ್ರೋಶ ವ್ಯಕ್ತಪಡಿಸಿದ್ದು, “ಬಿಜೆಪಿ ಆಗ ಬ್ರೀಟಿಷರ, ಈಗ ಕಾರ್ಪೊರೇಟ್‌ಗಳ ಗುಲಾಮಿ ಪಕ್ಷ” ಎಂದು ಕಿಡಿಕಾರಿದ್ದಾರೆ.

ಸೆಪ್ಟಂಬರ್ 27 ರಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ “ಬಿಜೆಪಿ ತಾಲಿಬಾನ್ ಇದ್ದ ಹಾಗೆ” ಎಂಬ ಮಾತಿಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ್ದ ಸಿಎಂ ಬೊಮ್ಮಾಯಿ, “ಕಾಂಗ್ರೆಸ್ ಗುಲಾಮಗಿರಿ ಪಕ್ಷ, ನಮ್ಮ ಬಿಜೆಪಿ ದೇಶಭಕ್ತ ಪಕ್ಷ” ಎಂದು ಹೇಳಿದ್ದರು. ಈ ಕುರಿತು ಚರ್ಚೆಗೆ ಬನ್ನಿ ಎಂದು ಪ್ರಕಾಶ್ ರಾಥೋಡ್ ಆಹ್ವಾನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಸ್ವಾತಂತ್ರ್ಯ ಹೋರಾಟಗಾರರನ್ನು ಬ್ರಿಟಿಷರಿಗೆ ಹಿಡಿದುಕೊಟ್ಟ, ಬ್ರಿಟಿಷರಿಗೆ ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟ ಇತಿಹಾಸ ಇರುವ ಬಿಜೆಪಿ ಪರಿವಾರ ಬಳಿಕ ನಾಜಿಗಳ ಗುಲಾಮಗಿರಿ ಮಾಡಿ ಈಗ ವರ್ತಮಾನದಲ್ಲೂ ಅಂಬಾನಿ ಅದಾನಿ ಕಾರ್ಪೋರೇಟ್ ಶಾಹಿಯ ಗುಲಾಮಗಿರಿ ಮಾಡುತ್ತಿದೆ” ಎಂದಿದ್ದಾರೆ.

ಆತ್ಮವಂಚನೆಗೂ ಒಂದು ಮಿತಿ ಇರಬೇಕು ಮುಖ್ಯಮಂತ್ರಿಗಳೇ… ಸಂಘ ಪರಿವಾರ ವಿರೋಧಿ ಜನತಾ ಪರಿವಾರದ ಮೂಲಕ ರಾಜಕಾರಣಕ್ಕೆ ಬಂದ ನೀವು ದೇಶಭಕ್ತಿಯ ಚರಿತ್ರೆ, ಇತಿಹಾಸವೇ ಇಲ್ಲದ ಬಿಜೆಪಿಯನ್ನು ದೇಶಭಕ್ತಿಯ ಪಕ್ಷ ಎಂದು ಕರೆಯುತ್ತಿರುವುದು ಆತ್ಮವಂಚನೆ ಅಲ್ಲವೇ ? ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೇ, ಕ್ವಿಟ್ ಚಳವಳಿಯಲ್ಲಿ ಭಾವಹಿಸಿದ ಸ್ವಾತಂತ್ರ್ಯ ವೀರರನ್ನು ಬ್ರಿಟಿಷರಿಗೆ ಹಿಡಿದುಕೊಟ್ಟ ಬಿಜೆಪಿ ನಾಯಕರ ಚರಿತ್ರೆಯನ್ನು ನೀವು ಮುಖ್ಯಮಂತ್ರಿ ಆದ ಎರಡು ತಿಂಗಳಲ್ಲೇ ಮರೆತುಬಿಟ್ಟಿರಾ ಎಂದು ರಾಥೋಡ್ ಪ್ರಶ್ನಿಸಿದ್ದಾರೆ.

ಬಸವರಾಜ್ ಬೊಮ್ಮಾಯಿಯವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಥೋಡ್‌ರವರು ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. “ಸ್ವಾತಂತ್ರ್ಯ ಹೋರಾಟಕ್ಕಾಗಿಯೇ ಹುಟ್ಟಿಕೊಂಡ, ಸ್ವಾತಂತ್ರ್ಯ ಚಳವಳಿ ಮೂಲಕವೇ ದೇಶದ ಜನಮಾನಸದಲ್ಲಿ ಬೇರು ಬಿಟ್ಟ ಕಾಂಗ್ರೆಸ್ಸನ್ನು ಗುಲಾಮಗಿರಿ ಪಕ್ಷ ಎಂದು ಕರೆದಿದ್ದೀರಿ. ಬ್ರಿಟಿಷರ ವಿರುದ್ಧ ಹೋರಾಡಿ, ಹುತಾತ್ಮರಾಗಿ, ಜೈಲು ಸೇರಿ, ತಮ್ಮ ಆಸ್ತಿ ಪಾಸ್ತಿಯನ್ನೆಲ್ಲಾ ದೇಶಕ್ಕೆ ಬಿಟ್ಟುಕೊಟ್ಟ ಲಕ್ಷಾಂತರ ಮಂದಿ ಕಾಂಗ್ರೆಸ್ಸಿನವರು. ಈ ಚರಿತ್ರೆ ಬಿಜೆಪಿಗೆ ಇದೆಯೇ? ಬ್ರಿಟಿಷರ ಗುಲಾಮಗಿರಿ ಮಾಡಿಕೊಂಡಿದ್ದ ಬಿಜೆಪಿಯ ಚರಿತ್ರೆ ನಿಮಗೆ ಮುಖ್ಯಮಂತ್ರಿ ಕುರ್ಚಿ ಸಿಕ್ಕ ತಕ್ಷಣ ಅಳಿಸಿ ಹೋಗುತ್ತದೆಯೇ” ಎಂದಿದ್ದಾರೆ.

ಗೋಡ್ಸೆಯಿಂದ ಕೊಲೆಯಾದ ಮಹಾತ್ಮಗಾಂಧಿ, ಅಖಂಡ ಭಾರತಕ್ಕಾಗಿ ಖಲಿಸ್ತಾನ ಉಗ್ರರನ್ನು ಸದೆ ಬಡಿದು ಅವರ ಗುಂಡಿಗೆ ಬಲಿಯಾಗಿ ಹುತಾತ್ಮರಾದ ಇಂದಿರಾಗಾಂಧಿ, LTTEಗೆ ಹುತಾತ್ಮರಾದ ರಾಜೀವ್ ಗಾಂಧಿ ಯಾರಿಗಾಗಿ ಹುತಾತ್ಮರಾದರು? ಅಂಬಾನಿ- ಅದಾನಿಯ ಗುಲಾಮಗಿರಿ ಮಾಡಿಕೊಂಡಿರುವ ನಿಮ್ಮ ಪರಿವಾರದ ನಾಯಕರಿಗೆ ಕೇಳಿ ಹೇಳಿ ಮುಖ್ಯಮಂತ್ರಿಗಳೇ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಪರಿವಾರದ ಒಂದು ನಾಯಿ ಕೂಡ ದೇಶಕ್ಕಾಗಿ ಹುತಾತ್ಮರಾದ ಚರಿತ್ರೆ ಇಲ್ಲ. ಈ ಪಾಪಪ್ರಜ್ಞೆಯಿಂದ ಹೊರಗೆ ಬರಲಾರದ ಆತ್ಮವಂಚನೆ ಮತ್ತು ದೇಶದ್ರೋಹವನ್ನೇ ಆಚರಿಸುತ್ತಿರುವ ಬಿಜೆಪಿ ಪರಿವಾರ ಸ್ವಾತಂತ್ರ್ಯ ಬಂದ ನಂತರವಾದರೂ ದೇಶಭಕ್ತಿ ರೂಢಿಸಿಕೊಂಡ, ದೇಶಭಕ್ತಿ ಆಚರಿಸಿದ ಉದಾಹರಣೆ ಇಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗುತ್ತಿದ್ದರೂ ನಿಮ್ಮ ಸಂಘ ಪರಿವಾರದ ಕಚೇರಿ ಮೇಲೆ ಸ್ವಾತಂತ್ರ್ಯ ದಿನಾಚರಣೆಯ ದಿನದಂದೂ ದೇಶದ ತ್ರಿವರ್ಣ ಬಾವುಟ ಹಾರಿಸುವುದಿಲ್ಲ. ಇದಕ್ಕಿಂತ ದೇಶದ್ರೋಹ ಬೇರೆ ಇದೆಯೇ ? ನೀವೇಕೆ ಭಾರತದ ಧ್ವಜ ಹಾರಿಸದೆ ಏಕಿನ್ನೂ ಬ್ರಿಟಿಷರ ಗುಲಾಮಗಿರಿ ಮನಸ್ಥಿಯಿಂದ ಹೊರಗೆ ಬಂದಿಲ್ಲ ಎಂದು ನಿಮ್ಮ ಪರಿವಾರದ ನಾಯಕರನ್ನು ಪ್ರಶ್ನಿಸಿದ್ದೀರಾ? ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಕಾಲದಲ್ಲಿ ಕಟ್ಟಿದ ವಿಮಾನ-ರೈಲು ನಿಲ್ದಾಣಗಳು, ಬಂದರುಗಳು, ಟೆಲಿಕಾಂ, ಹೆದ್ದಾರಿಗಳು, ಕೃಷಿ ಮಾರುಕಟ್ಟೆಗಳನ್ನು ಖಾಸಗಿ ಕಾರ್ಪೋರೇಟ್ ಗಳಿಗೆ ಮಾರಾಟ ಮಾಡುವುದೇ ದೇಶಭಕ್ತಿ ಎಂದು ನಿಮಗೆ ಹೇಳಿಕೊಟ್ಟಿದ್ದು ನಿಮ್ಮ ಪರಿವಾರದ ನಾಯಕರೇ? ಅಂಬಾನಿ, ಅದಾನಿ ಹಾಗೂ ನಿಮ್ಮ ನಾಲ್ಕೈದು ಮಂದಿ ಕಾರ್ಪೋರೇಟ್ ಸ್ನೇಹಿತರ 10 ಲಕ್ಷ ಕೋಟಿ ಸಾಲ ಮನ್ನಾ ಮಾಡುವುದು ದೇಶಭಕ್ತಿಯೇ? ಮೋದಿ ಅವರು ಪ್ರಧಾನಿ ಆಗುವ ಮೊದಲು ಭಾರತದ ಸಾಲ ಇದ್ದದ್ದು 53.11 ಲಕ್ಷ ಕೋಟಿ. ಮೋದಿ ದರ್ಬಾರಿನ 7 ವರ್ಷಗಳಲ್ಲಿ ದೇಶದ ಸಾಲ 135 ಲಕ್ಷ ಕೋಟಿಗೆ ಏರಿಸಿದ್ದೀರಿ. ದೇಶದ ಪ್ರತಿಯೊಬ್ಬ ಪ್ರಜೆ ತಾನು ದುಡಿದ 100 ರೂಪಾಯಿಯಲ್ಲಿ 35-45 ರೂಪಾಯಿಯನ್ನು ಪ್ರತ್ಯಕ್ಷ- ಪರೋಕ್ಷ ತೆರಿಗೆ ಕಟ್ಟುತ್ತಿದ್ದಾನೆ. ಪ್ರತಿಯೊಬ್ಬ ಭಾರತೀಯನನ್ನು ಇಂಚಿಂಚಾಗಿ ಸುಲಿಯುತ್ತಾ ರಕ್ತ ಹೀರುತ್ತಿರುವುದು ದೇಶಭಕ್ತಿಯೇ ಎಂದು ಪ್ರಶ್ನಿಸಿದ್ದಾರೆ.

ಭಾರತದ ಸ್ವಾತಂತ್ರ್ಯ ಹೋರಾಟಗಾರರನ್ನು ಬ್ರಿಟಿಷರಿಗೆ ಹಿಡಿದು ಕೊಟ್ಟು/ಬ್ರಿಟಿಷರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಬ್ರಿಟಿಷರ ಗುಲಾಮರಾದಿರಿ. ನಿಮ್ಮ ಪರಿವಾರದ ಸಿದ್ದಾಂತ ಜರ್ಮನಿಯ ನಾಜಿಗಳದ್ದು. ಸೈದ್ಧಾಂತಿಕವಾಗಿಯೂ ನೀವು ನಾಜಿ ಗುಲಾಮರು. ಸ್ವಾತಂತ್ರ್ಯಾ ನಂತರದಲ್ಲಿ ಅಂಬಾನಿ ಮತ್ತು ಅದಾನಿ ಗ್ಯಾಂಗಿನ ಗುಲಾಮಗಿರಿ ಮಾಡುತ್ತಿರುವವರು ನೀವು ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಮೈಸೂರು ದೇವಾಲಯ ಧ್ವಂಸ – ತಹಶೀಲ್ದಾರ್‌ ತಲೆದಂಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...